Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 21:12 - ಪರಿಶುದ್ದ ಬೈಬಲ್‌

12 ಆ ಹನ್ನೆರಡು ಸಾವಿರ ಸೈನಿಕರು ಯಾಬೇಷ್ ಗಿಲ್ಯಾದಿನಲ್ಲಿ ಗಂಡಸಿನೊಂದಿಗೆ ಎಂದೂ ಲೈಂಗಿಕ ಸಂಪರ್ಕ ಹೊಂದದ ನಾನೂರು ಜನ ಯುವತಿಯರನ್ನು ಗುರುತಿಸಿದರು. ಆ ಯುವತಿಯರನ್ನು ಸೈನಿಕರು ಶೀಲೋವಿನಲ್ಲಿದ್ದ ಪಾಳೆಯಕ್ಕೆ ಕರೆತಂದರು. ಶೀಲೋವ್ ಕಾನಾನ್ ಪ್ರದೇಶದಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯಾಬೇಷ್ ಗಿಲ್ಯಾದಿನಲ್ಲಿ ಇನ್ನೂ ಮದುವೆಯಾಗದಿದ್ದ ನಾನೂರು ಮಂದಿ ಯುವತಿಯರಿದ್ದರು. ಪಟ್ಟಣವನ್ನು ಸಂಹರಿಸುವುದಕ್ಕೆ ಹೋದವರು ಇವರನ್ನು ಉಳಿಸಿ, ಕಾನಾನ್ ದೇಶದ ಶೀಲೋವಿನಲ್ಲಿದ್ದ ಪಾಳೆಯಕ್ಕೆ ತೆಗೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಯಾಬೇಷ್ ಗಿಲ್ಯಾದಿನಲ್ಲಿ ಇನ್ನೂ ಮದುವೆಯಾಗದಿದ್ದ ನಾನೂರು ಮಂದಿ ಯುವತಿಯರು ಇದ್ದರು. ಪಟ್ಟಣವನ್ನು ನಾಶಪಡಿಸುವುದಕ್ಕೆ ಹೋದವರು ಇವರನ್ನು ಉಳಿಸಿ ಕಾನಾನ್ ನಾಡಿನ ಶಿಲೋವಿನಲ್ಲಿದ್ದ ಪಾಳೆಯಕ್ಕೆ ತೆಗೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯಾಬೇಷ್ ಗಿಲ್ಯಾದಿನಲ್ಲಿ ಇನ್ನೂ ಮದುವೆಯಾಗದಿದ್ದ ನಾನೂರು ಮಂದಿ ಯುವತಿಯರಿದ್ದರು. ಪಟ್ಟಣವನ್ನು ಸಂಹರಿಸುವದಕ್ಕೆ ಹೋದವರು ಇವರನ್ನು ಉಳಿಸಿ ಕಾನಾನ್ ದೇಶದ ಶೀಲೋವಿನಲ್ಲಿದ್ದ ಪಾಳೆಯಕ್ಕೆ ತೆಗೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಹಾಗೆಯೇ ಯಾಬೇಷ್ ಗಿಲ್ಯಾದಿನ ನಿವಾಸಿಗಳಲ್ಲಿ ನಾನೂರು ಮಂದಿ ಪ್ರಾಯದ ಕನ್ನಿಕೆಯರನ್ನು ಕಂಡರು. ಅವರು ಯಾವುದೇ ಪುರುಷರೊಂದಿಗೆ ಸಂಬಂಧ ಹೊಂದಿರಲಿಲ್ಲ. ಅವರನ್ನು ಕಾನಾನ್ ದೇಶದಲ್ಲಿರುವ ಶೀಲೋವಿನಲ್ಲಿದ್ದ ಪಾಳೆಯಕ್ಕೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 21:12
8 ತಿಳಿವುಗಳ ಹೋಲಿಕೆ  

ಇಸ್ರೇಲರೆಲ್ಲರು ಶೀಲೋವಿನಲ್ಲಿ ಒಟ್ಟಾಗಿ ಸೇರಿದರು. ಆ ಸ್ಥಳದಲ್ಲಿ ಅವರು ದೇವದರ್ಶನ ಗುಡಾರವನ್ನು ನಿಲ್ಲಿಸಿದರು. ಇಸ್ರೇಲರು ಆ ದೇಶವನ್ನು ಸ್ವಾಧೀನ ಮಾಡಿಕೊಂಡಿದ್ದರು. ಅವರು ಆ ದೇಶದ ಎಲ್ಲ ಶತ್ರುಗಳನ್ನು ಸೋಲಿಸಿದ್ದರು.


“ಯೆಹೂದದ ಜನರಾದ ನೀವು ಈಗ ಶೀಲೋವಿಗೆ ಹೋಗಿರಿ. ನಾನು ಮೊದಲು ನನ್ನ ಹೆಸರಿಗಾಗಿ ಆಲಯವನ್ನು ಮಾಡಿದ ಸ್ಥಳಕ್ಕೆ ಹೋಗಿರಿ. ಇಸ್ರೇಲಿನ ಜನರು ಸಹ ದುಷ್ಕೃತ್ಯಗಳನ್ನು ಮಾಡಿದರು. ಅವರು ಮಾಡಿದ ದುಷ್ಕೃತ್ಯಗಳ ಕಾರಣ ನಾನು ಆ ಸ್ಥಳಕ್ಕೆ ಮಾಡಿರುವುದನ್ನು ಹೋಗಿ ನೋಡಿರಿ.


ಶೀಲೋವಿನಲ್ಲಿದ್ದ ತನ್ನ ಪವಿತ್ರ ಗುಡಾರವನ್ನು ಆತನು ತೊರೆದುಬಿಟ್ಟನು. ಅವರ ಮಧ್ಯದಲ್ಲಿ ಆತನು ವಾಸಮಾಡಿದ್ದು ಆ ಗುಡಾರದಲ್ಲಿಯೇ.


ಇಸ್ರೇಲಿನ ಜನರು ಬೇತೇಲಿಗೆ ಹೋದರು. ಬೇತೇಲಿನಲ್ಲಿ ಅವರು “ಯಾವ ಕುಲದವರು ಮೊದಲು ಬೆನ್ಯಾಮೀನ್ಯರ ಮೇಲೆ ಧಾಳಿಮಾಡಬೇಕು” ಎಂದು ಯೆಹೋವನನ್ನು ಕೇಳಿದರು. ಅದಕ್ಕೆ ಯೆಹೋವನು, “ಯೆಹೂದ ಕುಲದವರು ಮೊದಲು ಹೋಗಬೇಕು” ಎಂದು ಉತ್ತರಿಸಿದನು.


ಆಗ ಇಸ್ರೇಲರು, “ಇಲ್ಲಿ ಮಿಚ್ಛೆಗೆ ಇಸ್ರೇಲರಲ್ಲಿ ಬರದಿರುವವರು ಯಾರಾದರೂ ಇರುವರೇ?” ಎಂದು ವಿಚಾರ ಮಾಡಿದರು. ಆಗ ಯಾಬೇಷ್ ಗಿಲ್ಯಾದ್ ನಗರದವರಲ್ಲಿ ಯಾರೂ ಬಂದಿಲ್ಲವೆಂದು ಗೊತ್ತಾಯಿತು.


ನೀವು ಇದನ್ನು ಮಾಡಲೇಬೇಕು. ನೀವು ಯಾಬೇಷ್ ಗಿಲ್ಯಾದಿನಲ್ಲಿರುವ ಪ್ರತಿಯೊಬ್ಬ ಮನುಷ್ಯನನ್ನು ಕೊಲ್ಲಬೇಕು. ಗಂಡಸಿನೊಂದಿಗೆ ಲೈಂಗಿಕಸಂಪರ್ಕ ಹೊಂದಿದ ಪ್ರತಿಯೊಬ್ಬ ಹೆಂಗಸನ್ನೂ ನೀವು ಕೊಂದುಹಾಕಬೇಕು. ಆದರೆ ಕನ್ಯೆಯರನ್ನು ನೀವು ಕೊಲ್ಲಬಾರದು” ಎಂದು ಹೇಳಿದರು. ಆ ಸೈನಿಕರು ಹಾಗೆಯೇ ಮಾಡಿದರು.


ಇಸ್ರೇಲರು ಬೆನ್ಯಾಮೀನ್ಯರಿಗೆ ಒಂದು ಸಂದೇಶವನ್ನು ಕಳುಹಿಸಿದರು. ಅವರು ಬೆನ್ಯಾಮೀನ್ಯರೊಂದಿಗೆ ಶಾಂತಿಯ ಪ್ರಸ್ತಾಪವನ್ನು ಮಾಡಿದರು. ಬೆನ್ಯಾಮೀನ್ಯರು ರಿಮ್ಮೋನ್‌ಗಿರಿ ಎಂಬ ಸ್ಥಳದಲ್ಲಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು