Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 21:18 - ಪರಿಶುದ್ದ ಬೈಬಲ್‌

18 ಆದರೆ ನಾವೂ ನಮ್ಮ ಹೆಣ್ಣುಮಕ್ಕಳೂ ಬೆನ್ಯಾಮೀನ್ಯರೊಂದಿಗೆ ಮದುವೆಯಾಗಲು ಒಪ್ಪುವಂತಿಲ್ಲ. ಏಕೆಂದರೆ ‘ಬೆನ್ಯಾಮೀನ್ಯರಿಗೆ ಯಾರಾದರೂ ಹೆಣ್ಣನ್ನು ಕೊಟ್ಟರೆ ಅವರು ಶಾಪಗ್ರಸ್ತರಾಗುತ್ತಾರೆ’ ಎಂದು ನಾವೇ ಆಣೆ ಇಟ್ಟಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಬೆನ್ಯಾಮೀನ್ಯರಿಗೆ ತಮ್ಮ ಹೆಣ್ಣುಗಳನ್ನು ಕೊಡುವ ಇಸ್ರಾಯೇಲರು ಶಾಪಗ್ರಸ್ತರಾಗಲಿ ಎಂದು ಆಣೆಯಿಟ್ಟುಕೊಂಡಿದ್ದ ಕಾರಣ ನಾವು ಅವರಿಗೆ ನಮ್ಮ ಹೆಣ್ಣುಗಳನ್ನು ಕೊಡುವುದಕ್ಕಾಗುವುದಿಲ್ಲ” ಎಂದು ಮಾತನಾಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಬೆನ್ಯಾಮೀನ್ಯರಿಗೆ ತಮ್ಮ ಹೆಣ್ಣುಗಳನ್ನು ಕೊಡುವ ಇಸ್ರಯೇಲರು ಶಾಪಗ್ರಸ್ತರಾಗಲಿ! ಎಂದು ಆಣೆಯಿಟ್ಟುಕೊಂಡಿದ್ದೇವೆ. ಇದರಿಂದ ನಾವು ಅವರಿಗೆ ನಮ್ಮ ಹೆಣ್ಣುಗಳನ್ನು ಕೊಡುವುದಕ್ಕಾಗುವುದಿಲ್ಲ,”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಬೆನ್ಯಾಮೀನ್ಯರಿಗೆ ತಮ್ಮ ಹೆಣ್ಣುಗಳನ್ನು ಕೊಡುವ ಇಸ್ರಾಯೇಲ್ಯರು ಶಾಪಗ್ರಸ್ತರಾಗಲಿ ಎಂದು ಆಣೆಯಿಟ್ಟುಕೊಂಡಿದ್ದೇವಾದದರಿಂದ ನಾವು ಅವರಿಗೆ ನಮ್ಮ ಹೆಣ್ಣುಗಳನ್ನು ಕೊಡುವದಕ್ಕಾಗುವದಿಲ್ಲ ಎಂದು ಮಾತಾಡಿಕೊಳ್ಳುತ್ತಿರುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ‘ಬೆನ್ಯಾಮೀನ್ಯರಿಗೆ ತಮ್ಮ ಹೆಣ್ಣು ಕೊಡುವ ಇಸ್ರಾಯೇಲ್ಯರು ಶಾಪಗ್ರಸ್ತರಾಗಲಿ,’ ಎಂದು ಆಣೆ ಇಟ್ಟುಕೊಂಡಿದ್ದರಿಂದ, ನಾವಾದರೋ ನಮ್ಮ ಪುತ್ರಿಯರಲ್ಲಿ ಅವರಿಗೆ ಹೆಣ್ಣು ಕೊಡಕೂಡದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 21:18
4 ತಿಳಿವುಗಳ ಹೋಲಿಕೆ  

ಮಿಚ್ಛೆಯಲ್ಲಿ ಇಸ್ರೇಲಿನ ಜನರು ಒಂದು ಪ್ರತಿಜ್ಞೆಯನ್ನು ಮಾಡಿದ್ದರು. “ನಮ್ಮಲ್ಲಿ ಯಾರೂ ನಮ್ಮ ಹೆಣ್ಣುಮಕ್ಕಳನ್ನು ಬೆನ್ಯಾಮೀನ್ಯರಿಗೆ ಮದುವೆ ಮಾಡಿಕೊಡುವುದಿಲ್ಲ” ಎಂಬುದೇ ಆ ಪ್ರತಿಜ್ಞೆ.


ತನ್ನ ಮನೆಯಿಂದ ಹೊರ ಬರುವ ಜೀವಿಗಳಲ್ಲಿ ತನ್ನ ಮಗಳೇ ಮೊದಲನೆಯವಳಾದುದನ್ನು ಕಂಡು ಯೆಫ್ತಾಹನು ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡನು. “ಅಯ್ಯೋ! ನನ್ನ ಮಗಳೇ, ನೀನು ನನ್ನನ್ನು ಹಾಳುಮಾಡಿದೆ. ನೀನು ನನಗೆ ಮಹಾಸಂಕಟವನ್ನು ಉಂಟುಮಾಡಿದೆ. ನಾನು ಯೆಹೋವನಿಗೆ ಒಂದು ಹರಕೆ ಹೊತ್ತಿದ್ದೇನೆ; ನಾನು ಅದನ್ನು ಬದಲಾಯಿಸಲು ಸಾಧ್ಯವಿಲ್ಲ” ಎಂದು ಗೋಳಾಡಿದನು.


ಜೀವಂತವಿರುವ ಬೆನ್ಯಾಮೀನ್ಯರು ತಮ್ಮ ವಂಶವನ್ನು ಮುಂದುವರಿಸುವುದಕ್ಕೆ ಮಕ್ಕಳನ್ನು ಪಡೆಯಬೇಕು. ಆಗ ಇಸ್ರೇಲರ ಒಂದು ಕುಲವು ಅಳಿಯದೆ ಉಳಿಯುವುದು.


ಆ ಯುವತಿಯರ ತಂದೆಗಳಾಗಲಿ ಸಹೋದರರಾಗಲಿ ನಮ್ಮಲ್ಲಿಗೆ ಬಂದು ದೂರು ಹೇಳುತ್ತಾರೆ. ಆಗ ನಾವು ಅವರಿಗೆ, ‘ಬೆನ್ಯಾಮೀನ್ಯರ ಗಂಡಸರಿಗೆ ದಯೆತೋರಿಸಿರಿ; ಅವರು ಆ ಸ್ತ್ರೀಯರನ್ನು ಮದುವೆಯಾಗಲಿ. ಅವರು ನಿಮ್ಮಿಂದ ನಿಮ್ಮ ಹೆಣ್ಣುಮಕ್ಕಳನ್ನು ತೆಗೆದುಕೊಂಡು ಹೋಗಿರುವರೇ ಹೊರತು ಯುದ್ಧವೇನೂ ಮಾಡಿಲ್ಲ. ಅವರು ಕನ್ಯೆಯರನ್ನು ತೆಗೆದುಕೊಂಡು ಹೋದದ್ದರಿಂದ ನೀವು ದೇವರೆದುರಿಗೆ ಮಾಡಿದ ಪ್ರತಿಜ್ಞೆಯನ್ನು ಮುರಿದಂತಾಗುವುದಿಲ್ಲ. ನಿಮ್ಮ ಕನ್ಯೆಯರನ್ನು ಅವರಿಗೆ ಕೊಡುವುದಿಲ್ಲವೆಂದು ನೀವು ಪ್ರತಿಜ್ಞೆ ಮಾಡಿದ್ದೀರಿ. ನೀವು ಬೆನ್ಯಾಮೀನ್ಯರಿಗೆ ನಿಮ್ಮ ಕನ್ಯೆಯರನ್ನು ಕೊಟ್ಟಿಲ್ಲ. ಆದರೆ ಅವರು ನಿಮ್ಮ ಕನ್ಯೆಯರನ್ನು ತೆಗೆದುಕೊಂಡು ಹೋದರು. ಆದ್ದರಿಂದ ನೀವು ನಿಮ್ಮ ಪ್ರತಿಜ್ಞೆಯನ್ನು ಮುರಿಯಲಿಲ್ಲ’ ಎಂದು ಹೇಳುತ್ತೇವೆ” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು