Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 21:25 - ಪರಿಶುದ್ದ ಬೈಬಲ್‌

25 ಆ ಕಾಲದಲ್ಲಿ ಇಸ್ರೇಲರಿಗೆ ಅರಸನಿರಲಿಲ್ಲ. ಪ್ರತಿಯೊಬ್ಬನೂ ತನಗೆ ಸರಿತೋರಿದಂತೆ ಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆ ಕಾಲದಲ್ಲಿ ಇಸ್ರಾಯೇಲರೊಳಗೆ ಅರಸನಿರಲಿಲ್ಲ; ಪ್ರತಿಯೊಬ್ಬನೂ ತನ್ನ ಮನಸ್ಸಿಗೆ ಬಂದಂತೆ ನಡೆಯುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆ ಕಾಲದಲ್ಲಿ ಇಸ್ರಯೇಲರಲ್ಲಿ ಅರಸನಿರಲಿಲ್ಲ; ಪ್ರತಿಯೊಬ್ಬನು ತನ್ನ ಮನಸ್ಸಿಗೆ ಬಂದಂತೆ ನಡೆಯುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆ ಕಾಲದಲ್ಲಿ ಇಸ್ರಾಯೇಲ್ಯರೊಳಗೆ ಅರಸನಿರಲಿಲ್ಲ; ಪ್ರತಿಯೊಬ್ಬನೂ ತನ್ನ ಮನಸ್ಸಿಗೆ ಬಂದಂತೆ ನಡೆಯುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆ ದಿವಸಗಳಲ್ಲಿ ಇಸ್ರಾಯೇಲಿನಲ್ಲಿ ಅರಸನು ಇರಲಿಲ್ಲ. ಒಬ್ಬೊಬ್ಬನು ತನ್ನ ದೃಷ್ಟಿಗೆ ಸರಿಯಾಗಿ ತೋಚಿದ್ದನ್ನು ಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 21:25
13 ತಿಳಿವುಗಳ ಹೋಲಿಕೆ  

“ನೀವು ಇನ್ನೂ ವಾಗ್ದಾನದ ದೇಶವನ್ನು ಪ್ರವೇಶಿಸಲಿಲ್ಲದ ಕಾರಣ ನೀವು ಯೆಹೋವನಿಗೆ ನಿಮ್ಮ ಇಷ್ಟಾನುಸಾರವಾಗಿ ಆರಾಧನೆ ಮಾಡುತ್ತಿದ್ದೀರಿ. ಆದರೆ ಇದನ್ನೇ ಮುಂದುವರಿಸಬೇಡಿ.


(ಆ ಕಾಲದಲ್ಲಿ ಇಸ್ರೇಲರಿಗೆ ಅರಸನಿರಲಿಲ್ಲ. ಪ್ರತಿಯೊಬ್ಬರೂ ತಮಗೆ ಸರಿ ತೋರಿದಂತೆ ನಡೆದುಕೊಳ್ಳುತ್ತಿದ್ದರು.)


ಯೆಹೋವನಲ್ಲಿ ಸಂಪೂರ್ಣವಾಗಿ ಭರವಸೆ ಇಡು. ನಿನ್ನ ಸ್ವಂತ ಜ್ಞಾನವನ್ನು ಅವಲಂಬಿಸಬೇಡ.


ಆದ್ದರಿಂದ ಯೌವನಸ್ಥರೇ, ನಿಮ್ಮ ಯೌವನ ಕಾಲದಲ್ಲಿ ಆನಂದಿಸಿರಿ! ಸಂತೋಷವಾಗಿರಿ! ನಿಮ್ಮ ಹೃದಯವು ನಿಮ್ಮನ್ನು ನಡೆಸಿದಂತೆ ಮಾಡಿರಿ. ನೀವು ಬಯಸುವುದನ್ನೆಲ್ಲಾ ಮಾಡಿರಿ. ಆದರೆ ನೀವು ಮಾಡುವ ಪ್ರತಿಯೊಂದಕ್ಕೂ ದೇವರು ನಿಮಗೆ ನ್ಯಾಯತೀರಿಸುವನು ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಿರಿ.


ಒಳ್ಳೆಯದೆಂದು ಜನರು ಭಾವಿಸಿಕೊಂಡಿರುವ ಮಾರ್ಗವೊಂದುಂಟು. ಆದರೆ ಅದರ ಅಂತ್ಯ ಮರಣವೇ.


ಆಗಿನ ಕಾಲದಲ್ಲಿ ಇಸ್ರೇಲರಿಗೆ ಅರಸನಿರಲಿಲ್ಲ. ಎಫ್ರಾಯೀಮ್ ಬೆಟ್ಟಪ್ರದೇಶದ ಒಂದು ಮೂಲೆಯಲ್ಲಿ ಒಬ್ಬ ಲೇವಿಯು ವಾಸಮಾಡುತ್ತಿದ್ದನು. ಆ ಮನುಷ್ಯನಿಗೆ ಒಬ್ಬ ಉಪಪತ್ನಿ ಇದ್ದಳು. ಅವಳು ಯೆಹೂದದ ಬೆತ್ಲೆಹೇಮಿನವಳಾಗಿದ್ದಳು.


ಆ ಕಾಲದಲ್ಲಿ ಇಸ್ರೇಲರಿಗೆ ಅರಸನಿರಲಿಲ್ಲ. ಆ ಸಮಯದಲ್ಲಿ ದಾನ್ ಕುಲದವರು ಇನ್ನೂ ತಮ್ಮ ವಾಸಕ್ಕಾಗಿ ಒಂದು ಸ್ಥಳವನ್ನು ಹುಡುಕುತ್ತಿದ್ದರು. ಇನ್ನೂ ಅವರಿಗೆ ತಮ್ಮದೇ ಆದ ಒಂದು ಪ್ರದೇಶವೂ ಇರಲಿಲ್ಲ. ಇಸ್ರೇಲಿನ ಬೇರೆ ಕುಲಗಳಿಗೆ ತಮ್ಮದೇ ಆದ ಪ್ರದೇಶ ಇತ್ತು. ಆದರೆ ದಾನ್ ಕುಲದವರು ಮಾತ್ರ ಇನ್ನೂ ತಮ್ಮ ಪ್ರದೇಶವನ್ನು ಹೊಂದಿಕೊಂಡಿರಲಿಲ್ಲ.


“ನಾವು ಪ್ರಮುಖರಾಗಲು ನಮ್ಮ ಸುಳ್ಳುಗಳೇ ನಮಗೆ ಆಧಾರ. ನಮ್ಮ ನಾಲಿಗೆಗಳು ಇರುವಾಗ ನಮಗೆ ಒಡೆಯರಾಗಲು ಯಾರಿಗೆ ಸಾಧ್ಯ?” ಎಂದು ಅವರು ಹೇಳುತ್ತಾರೆ.


ಆ ಐದು ಜನರು ಹೊರಟರು. ಅವರು ಲಯಿಷ್ ನಗರಕ್ಕೆ ಬಂದರು. ಅಲ್ಲಿಯ ಜನರು ಸುರಕ್ಷಿತವಾಗಿರುವುದನ್ನು ಅವರು ನೋಡಿದರು. ಚೀದೋನ್ಯರು ಅವರನ್ನು ಆಳುತ್ತಿದ್ದರು. ಎಲ್ಲವೂ ಶಾಂತವಾಗಿತ್ತು; ಸಮಾಧಾನಕರವಾಗಿತ್ತು; ಸುಖಕರವಾಗಿತ್ತು. ಸಮೀಪದಲ್ಲಿ ಅವರನ್ನು ಪೀಡಿಸುವ ಶತ್ರುಗಳು ಇರಲಿಲ್ಲ. ಅವರು ಚೀದೋನ್ ನಗರದಿಂದ ಬಹಳ ದೂರ ಇದ್ದರು. ಅವರು ಆರಾಮಿನ ಜನರೊಡನೆ ಯಾವ ಒಪ್ಪಂದವನ್ನೂ ಇಟ್ಟುಕೊಂಡಿರಲಿಲ್ಲ.


ಅನಂತರ ಇಸ್ರೇಲರು ತಮ್ಮತಮ್ಮ ಕುಲಗೋತ್ರಗಳವರಿಗೆ ಸ್ವಾಸ್ತ್ಯವಾಗಿ ಸಿಕ್ಕಿದ ಪ್ರದೇಶಗಳಿಗೆ ಹಿಂತಿರುಗಿಹೋದರು.


ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ತೊಳಲಾಡಿದೆವು. ನಮ್ಮ ಸ್ವಂತ ದಾರಿಯಲ್ಲಿ ನಾವು ಹೋದೆವು. ನಮ್ಮ ಅಪರಾಧಗಳಿಂದ ನಾವು ವಿಮುಕ್ತರಾಗುವಂತೆ ಯೆಹೋವನು ನಮ್ಮ ಅಪರಾಧಗಳನ್ನು ಆತನ ಮೇಲೆ ಹಾಕಿದನು.


ಕೆಲವರು ಒಂದು ಕಡೆಯಲ್ಲಿ ಹೋರಿಯನ್ನು ಯಜ್ಞಮಾಡುವರು. ಇನ್ನೊಂದು ಕಡೆಯಲ್ಲಿ ಜನರಿಗೆ ಹಿಂಸೆ ಕೊಡುವರು. ಅವರು ಬಲಿಯರ್ಪಿಸಲು ಕುರಿಗಳನ್ನು ಕೊಯ್ಯುವರು, ಅದೇ ಸಮಯದಲ್ಲಿ ನಾಯಿಗಳ ಕುತ್ತಿಗೆಗಳನ್ನು ಮುರಿಯುವರು. ಅವರು ನನಗೆ ಹಂದಿಗಳ ರಕ್ತವನ್ನು ಅರ್ಪಿಸುವರು. ನನಗೆ ಧೂಪವನ್ನು ಹಾಕಲು ಯಾವಾಗಲೂ ತಯಾರಿರುವರು. ಅದೇ ಸಮಯದಲ್ಲಿ ಅಯೋಗ್ಯವಾದ ತಮ್ಮ ವಿಗ್ರಹಗಳನ್ನು ಪ್ರೀತಿಸುವರು. ಅವರು ನನ್ನ ಮಾರ್ಗವನ್ನು ಅನುಸರಿಸದೆ ತಮ್ಮ ಮಾರ್ಗವನ್ನು ಆರಿಸಿಕೊಳ್ಳುತ್ತಾರೆ. ಅವರು ತಮ್ಮ ಭಯಂಕರವಾದ ವಿಗ್ರಹಗಳನ್ನು ಪೂಜಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು