Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 21:3 - ಪರಿಶುದ್ದ ಬೈಬಲ್‌

3 ಅವರು ದೇವರಿಗೆ, “ಯೆಹೋವನೇ, ನೀನು ಇಸ್ರೇಲರ ದೇವರು. ನಮಗೆ ಇಂಥ ಭಯಾನಕ ಪರಿಸ್ಥಿತಿ ಏಕೆ ಉಂಟಾಯಿತು? ಇಸ್ರೇಲಿನ ಒಂದು ಕುಲವು ನಾಶವಾಯಿತಲ್ಲಾ?” ಎಂದು ಮೊರೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ಯೆಹೋವನೇ, ಇಸ್ರಾಯೇಲ್ಯರ ದೇವರೇ, ನಮ್ಮಲ್ಲಿ ಹೀಗೆ ಯಾಕೆ ಆಯಿತು? ಇಸ್ರಾಯೇಲರ ಒಂದು ಕುಲವು ಹಾಳಾಗಿ ಹೋಯಿತಲ್ಲಾ” ಎಂದು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ಸರ್ವೇಶ್ವರಾ, ಇಸ್ರಯೇಲರ ದೇವರೇ, ನಮ್ಮಲ್ಲಿ ಹೀಗೆ ಏಕಾಯಿತು? ಇಸ್ರಯೇಲರ ಒಂದು ಕುಲ ಹಾಳಾಗಿ ಹೋಯಿತಲ್ಲಾ!” ಎಂದು ಕೂಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನೇ, ಇಸ್ರಾಯೇಲ್ಯರ ದೇವರೇ, ನಮ್ಮಲ್ಲಿ ಹೀಗೆ ಯಾಕೆ ಆಯಿತು? ಇಸ್ರಾಯೇಲ್ಯರ ಒಂದು ಕುಲವು ಹಾಳಾಗಿ ಹೋಯಿತಲ್ಲಾ ಎಂದು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ಈ ಹೊತ್ತು ಇಸ್ರಾಯೇಲಿನಲ್ಲಿ ಒಂದು ಗೋತ್ರ ಕೊರತೆಯಾದದ್ದೇನು?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 21:3
9 ತಿಳಿವುಗಳ ಹೋಲಿಕೆ  

ಯೆಹೋವನೇ, ನಾನು ನಿನ್ನ ಜೊತೆ ವಾದ ಮಾಡಿದರೆ, ನೀನು ಯಾವಾಗಲೂ ನ್ಯಾಯಪರನೆಂಬುದು ರುಜುವಾತಾಗುತ್ತದೆ. ಆದರೂ ನ್ಯಾಯಪೂರ್ಣವಲ್ಲದ ಕೆಲವು ವಿಷಯಗಳ ಬಗ್ಗೆ ನಾನು ನಿನ್ನನ್ನು ಕೇಳಬಯಸುತ್ತೇನೆ. ದುಷ್ಟರು ಏಕೆ ಅಭಿವೃದ್ಧಿ ಹೊಂದುತ್ತಾರೆ? ನಿನ್ನ ವಿಶ್ವಾಸಕ್ಕೆ ಪಾತ್ರರಾಗದವರು ನೆಮ್ಮದಿಯ ಜೀವನ ನಡೆಸಲು ಹೇಗೆ ಸಾಧ್ಯ?


ಯೆಹೋವನೇ, ನೀನು ನಮ್ಮನ್ನು ನಿನ್ನಿಂದ ದೂರ ಮಾಡಿರುವೆ. ನಾವು ನಿನ್ನನ್ನು ಹಿಂಬಾಲಿಸಬೇಕೆಂದರೂ ಹಾಗೆ ಆಗದಂತೆ ಅದನ್ನೇಕೆ ಕಷ್ಟಕರವಾಗಿ ಮಾಡಿರುವೆ? ಯೆಹೋವನೇ, ನಮ್ಮ ಬಳಿಗೆ ಹಿಂದಿರುಗಿ ಬಾ. ನಾವು ನಿನ್ನ ಸೇವಕರಾಗಿದ್ದೇವೆ. ನಮ್ಮ ಬಳಿಗೆ ಬಂದು ಸಹಾಯಮಾಡು. ನಮ್ಮ ಕುಟುಂಬಗಳು ನಿನ್ನವೇ.


ಮೂಢನ ಮೂಢತನವು ಅವನ ಜೀವನವನ್ನೇ ನಾಶಪಡಿಸುತ್ತದೆ. ಆದರೆ ಅವನು ದೂಷಿಸುವುದು ಯೆಹೋವನನ್ನೇ.


ನಿನ್ನ “ದ್ರಾಕ್ಷಾಲತೆ”ಯ ಸಂರಕ್ಷಣೆಗಾಗಿ ಕಟ್ಟಿದ್ದ ಗೋಡೆಗಳನ್ನು ನೀನು ಕೆಡವಿಬಿಟ್ಟದ್ದೇಕೆ? ಈಗ ಅದರ ಸಮೀಪದಲ್ಲಿ ಹೋಗುವ ಪ್ರತಿಯೊಬ್ಬರೂ ಅದರ ಹಣ್ಣುಗಳನ್ನು ತೆಗೆದುಕೊಳ್ಳುವರು.


ದೇವರೇ, ನಮ್ಮನ್ನು ಶಾಶ್ವತವಾಗಿ ಕೈಬಿಟ್ಟಿರುವೆಯಾ? ನಿನ್ನ ಜನರ ಮೇಲೆ ಇನ್ನೂ ಕೋಪದಿಂದಿರುವೆಯಾ?


“ಇತರ ದೇಶಗಳವರು, ‘ದೇವರು ಈ ದೇಶವನ್ನು ಯಾಕೆ ನಾಶಮಾಡಿದನು? ಆತನು ಯಾಕೆ ಕೋಪಗೊಂಡನು?’ ಎಂದು ವಿಚಾರಿಸುವರು.


ಇಸ್ರೇಲರು ಬೇತೇಲ್ ನಗರಕ್ಕೆ ಹೋದರು. ಅಲ್ಲಿ ಅವರು ಸಾಯಂಕಾಲದವರೆಗೆ ದೇವರ ಮುಂದೆ ಕುಳಿತುಕೊಂಡರು. ಅಲ್ಲಿ ಕುಳಿತುಕೊಂಡು ಅವರು ಗಟ್ಟಿಯಾಗಿ ಅತ್ತರು.


ಮರುದಿನ ಬೆಳಿಗ್ಗೆ ಅವರು ಒಂದು ಯಜ್ಞವೇದಿಕೆಯನ್ನು ಕಟ್ಟಿದರು. ಅವರು ಆ ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು