Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 21:7 - ಪರಿಶುದ್ದ ಬೈಬಲ್‌

7 ನಮ್ಮ ಹೆಣ್ಣುಮಕ್ಕಳು ಬೆನ್ಯಾಮೀನ್ಯರನ್ನು ಮದುವೆಯಾಗಲು ಬಿಡುವುದಿಲ್ಲವೆಂದು ನಾವು ಯೆಹೋವನ ಎದುರಿಗೆ ಪ್ರತಿಜ್ಞೆ ಮಾಡಿದ್ದೇವೆ. ಇನ್ನು ಮುಂದೆ ಬೆನ್ಯಾಮೀನ್ಯರಿಗೆ ಹೆಂಡಂದಿರನ್ನು ದೊರಕಿಸುವುದು ಹೇಗೆ?” ಎಂದು ಅವರು ಯೋಚಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಜೀವದಿಂದುಳಿದವರಿಗೆ ಹೆಂಡತಿಯರನ್ನು ದೊರಕಿಸಿಕೊಡುವುದು ಹೇಗೆ? ನಮ್ಮ ಹೆಣ್ಣುಗಳನ್ನು ಅವರಿಗೆ ಕೊಡುವುದಿಲ್ಲವೆಂದು ಯೆಹೋವನ ಹೆಸರಿನಲ್ಲಿ ಆಣೆಯಿಟ್ಟಿದ್ದೇವಲ್ಲಾ” ಎಂದು ಗೋಳಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಜೀವದಿಂದುಳಿದವರಿಗೆ ಹೆಂಡತಿಯರನ್ನು ದೊರಕಿಸಿಕೊಡುವುದು ಹೇಗೆ? ನಮ್ಮ ಹೆಣ್ಣುಗಳನ್ನು ಅವರಿಗೆ ಕೊಡುವುದಿಲ್ಲವೆಂದು ಸರ್ವೇಶ್ವರನ ಹೆಸರಿನಲ್ಲಿ ಆಣೆಯಿಟ್ಟೆವಲ್ಲಾ,” ಎಂದು ಗೋಳಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಜೀವದಿಂದುಳಿದವರಿಗೆ ಹೆಂಡತಿಯರನ್ನು ದೊರಕಿಸಿಕೊಡುವದು ಹೇಗೆ? ನಮ್ಮ ಹೆಣ್ಣುಗಳನ್ನು ಅವರಿಗೆ ಕೊಡುವದಿಲ್ಲವೆಂದು ಯೆಹೋವನ ಹೆಸರಿನಲ್ಲಿ ಆಣೆಯಿಟ್ಟೆವಲ್ಲಾ ಎಂದು ಗೋಳಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಾವು ನಮ್ಮ ಪುತ್ರಿಯರಲ್ಲಿ ಒಬ್ಬಳನ್ನಾದರೂ ಅವರಿಗೆ ಕೊಡುವುದಿಲ್ಲ, ಎಂದು ನಾವು ಯೆಹೋವ ದೇವರ ಮೇಲೆ ಆಣೆ ಇಟ್ಟುಕೊಂಡದ್ದರಿಂದ ಉಳಿದವರಿಗೆ ಹೆಂಡರು ದೊರಕುವಂತೆ ನಾವು ಅವರಿಗೋಸ್ಕರ ಏನು ಮಾಡೋಣ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 21:7
7 ತಿಳಿವುಗಳ ಹೋಲಿಕೆ  

ಮಿಚ್ಛೆಯಲ್ಲಿ ಇಸ್ರೇಲಿನ ಜನರು ಒಂದು ಪ್ರತಿಜ್ಞೆಯನ್ನು ಮಾಡಿದ್ದರು. “ನಮ್ಮಲ್ಲಿ ಯಾರೂ ನಮ್ಮ ಹೆಣ್ಣುಮಕ್ಕಳನ್ನು ಬೆನ್ಯಾಮೀನ್ಯರಿಗೆ ಮದುವೆ ಮಾಡಿಕೊಡುವುದಿಲ್ಲ” ಎಂಬುದೇ ಆ ಪ್ರತಿಜ್ಞೆ.


ಆದರೆ ಸೈನಿಕರು ಸೌಲನಿಗೆ, “ಈ ದಿನ ಇಸ್ರೇಲರನ್ನು ಮುನ್ನಡೆಸಿ ಮಹಾವಿಜಯವನ್ನು ಉಂಟುಮಾಡಿದ ಯೋನಾತಾನನು ಸಾಯಬೇಕೋ? ಇಲ್ಲ! ಜೀವಸ್ವರೂಪನಾದ ಯೆಹೋವನಾಣೆ, ಯೋನಾತಾನನ ತಲೆಕೂದಲುಗಳಲ್ಲಿ ಒಂದಾದರೂ ನೆಲಕ್ಕೆ ಬೀಳಲು ನಾವು ಬಿಡುವುದಿಲ್ಲ. ಇಂದು ಫಿಲಿಷ್ಟಿಯರ ವಿರುದ್ಧ ಹೋರಾಡಲು ದೇವರು ಯೋನಾತಾನನಿಗೆ ಸಹಾಯಮಾಡಿದ್ದಾನೆ” ಎಂದು ಹೇಳಿದರು. ಹೀಗೆ ಜನರು ಯೋನಾತಾನನನ್ನು ರಕ್ಷಿಸಿದರು. ಅವನನ್ನು ಸಾಯಿಸಲಿಲ್ಲ.


ಆದರೆ ನಾವೂ ನಮ್ಮ ಹೆಣ್ಣುಮಕ್ಕಳೂ ಬೆನ್ಯಾಮೀನ್ಯರೊಂದಿಗೆ ಮದುವೆಯಾಗಲು ಒಪ್ಪುವಂತಿಲ್ಲ. ಏಕೆಂದರೆ ‘ಬೆನ್ಯಾಮೀನ್ಯರಿಗೆ ಯಾರಾದರೂ ಹೆಣ್ಣನ್ನು ಕೊಟ್ಟರೆ ಅವರು ಶಾಪಗ್ರಸ್ತರಾಗುತ್ತಾರೆ’ ಎಂದು ನಾವೇ ಆಣೆ ಇಟ್ಟಿದ್ದೇವೆ.


ಆಗ ಇಸ್ರೇಲರು ತಮ್ಮ ಬಂಧುಗಳಾದ ಬೆನ್ಯಾಮೀನ್ಯರ ಬಗ್ಗೆ ವ್ಯಥೆಪಟ್ಟರು. ಅವರು, “ಇಂದು ಇಸ್ರೇಲರಿಂದ ಒಂದು ಕುಲವು ಇಲ್ಲವಾಯಿತು.


ಆಗ ಇಸ್ರೇಲರು, “ಇಲ್ಲಿ ಮಿಚ್ಛೆಗೆ ಇಸ್ರೇಲರಲ್ಲಿ ಬರದಿರುವವರು ಯಾರಾದರೂ ಇರುವರೇ?” ಎಂದು ವಿಚಾರ ಮಾಡಿದರು. ಆಗ ಯಾಬೇಷ್ ಗಿಲ್ಯಾದ್ ನಗರದವರಲ್ಲಿ ಯಾರೂ ಬಂದಿಲ್ಲವೆಂದು ಗೊತ್ತಾಯಿತು.


ಆ ಯುವತಿಯರ ತಂದೆಗಳಾಗಲಿ ಸಹೋದರರಾಗಲಿ ನಮ್ಮಲ್ಲಿಗೆ ಬಂದು ದೂರು ಹೇಳುತ್ತಾರೆ. ಆಗ ನಾವು ಅವರಿಗೆ, ‘ಬೆನ್ಯಾಮೀನ್ಯರ ಗಂಡಸರಿಗೆ ದಯೆತೋರಿಸಿರಿ; ಅವರು ಆ ಸ್ತ್ರೀಯರನ್ನು ಮದುವೆಯಾಗಲಿ. ಅವರು ನಿಮ್ಮಿಂದ ನಿಮ್ಮ ಹೆಣ್ಣುಮಕ್ಕಳನ್ನು ತೆಗೆದುಕೊಂಡು ಹೋಗಿರುವರೇ ಹೊರತು ಯುದ್ಧವೇನೂ ಮಾಡಿಲ್ಲ. ಅವರು ಕನ್ಯೆಯರನ್ನು ತೆಗೆದುಕೊಂಡು ಹೋದದ್ದರಿಂದ ನೀವು ದೇವರೆದುರಿಗೆ ಮಾಡಿದ ಪ್ರತಿಜ್ಞೆಯನ್ನು ಮುರಿದಂತಾಗುವುದಿಲ್ಲ. ನಿಮ್ಮ ಕನ್ಯೆಯರನ್ನು ಅವರಿಗೆ ಕೊಡುವುದಿಲ್ಲವೆಂದು ನೀವು ಪ್ರತಿಜ್ಞೆ ಮಾಡಿದ್ದೀರಿ. ನೀವು ಬೆನ್ಯಾಮೀನ್ಯರಿಗೆ ನಿಮ್ಮ ಕನ್ಯೆಯರನ್ನು ಕೊಟ್ಟಿಲ್ಲ. ಆದರೆ ಅವರು ನಿಮ್ಮ ಕನ್ಯೆಯರನ್ನು ತೆಗೆದುಕೊಂಡು ಹೋದರು. ಆದ್ದರಿಂದ ನೀವು ನಿಮ್ಮ ಪ್ರತಿಜ್ಞೆಯನ್ನು ಮುರಿಯಲಿಲ್ಲ’ ಎಂದು ಹೇಳುತ್ತೇವೆ” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು