Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 21:8 - ಪರಿಶುದ್ದ ಬೈಬಲ್‌

8 ಆಗ ಇಸ್ರೇಲರು, “ಇಲ್ಲಿ ಮಿಚ್ಛೆಗೆ ಇಸ್ರೇಲರಲ್ಲಿ ಬರದಿರುವವರು ಯಾರಾದರೂ ಇರುವರೇ?” ಎಂದು ವಿಚಾರ ಮಾಡಿದರು. ಆಗ ಯಾಬೇಷ್ ಗಿಲ್ಯಾದ್ ನಗರದವರಲ್ಲಿ ಯಾರೂ ಬಂದಿಲ್ಲವೆಂದು ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಮಿಚ್ಪೆಯಲ್ಲಿ ಯೆಹೋವನ ಮುಂದೆ ಸಭೆ ಸೇರಿದಾಗ, ಅದಕ್ಕೆ ಬಾರದಿದ್ದ ಇಸ್ರಾಯೇಲರು ಯಾರಾದರೂ ಇದ್ದಾರೋ ಎಂದು ವಿಚಾರಿಸಿದಾಗ ಯಾಬೇಷ್‍ ಗಿಲ್ಯಾದಿನಿಂದ ಒಬ್ಬನೂ ಬರಲಿಲ್ಲವೆಂದು ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಮಿಚ್ಫೆಯಲ್ಲಿ ಸರ್ವೇಶ್ವರನ ಮುಂದೆ ಸಭೆ ಸೇರಿದ್ದಾಗ ಅದಕ್ಕೆ ಬಾರದಿದ್ದ ಇಸ್ರಯೇಲರು ಯಾರಾದರೂ ಇದ್ದಾರೋ ಎಂದು ವಿಚಾರಿಸುವಲ್ಲಿ, ಯಾಬೇಷ್ ಗಿಲ್ಯಾದಿನಿಂದ ಒಬ್ಬನೂ ಬರಲಿಲ್ಲವೆಂದು ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ವಿುಚ್ಪೆಯಲ್ಲಿ ಯೆಹೋವನ ಮುಂದೆ ಸಭೆನೆರೆದಾಗ ಅದಕ್ಕೆ ಬಾರದಿದ್ದ ಇಸ್ರಾಯೇಲ್ಯರು ಯಾರಾದರೂ ಇದ್ದಾರೋ ಎಂದು ವಿಚಾರಿಸುವಲ್ಲಿ ಯಾಬೇಷ್ ಗಿಲ್ಯಾದಿನಿಂದ ಒಬ್ಬನೂ ಬರಲಿಲ್ಲವೆಂದು ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇಸ್ರಾಯೇಲಿನ ಗೋತ್ರಗಳಲ್ಲಿ ಮಿಚ್ಪೆಗೆ ಯೆಹೋವ ದೇವರ ಬಳಿಗೆ ಬಾರದವರು ಯಾರಾದರೂ ಒಬ್ಬರಿದ್ದಾರೋ?” ಎಂದರು. ಆಗ, ಯಾಬೇಷ್ ಗಿಲ್ಯಾದಿನವರಲ್ಲಿ ಒಬ್ಬನಾದರೂ ಸಭೆಯ ಬಳಿಗೆ ಪಾಳೆಯಕ್ಕೆ ಬಂದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 21:8
9 ತಿಳಿವುಗಳ ಹೋಲಿಕೆ  

ನಮ್ಮ ಹೆಣ್ಣುಮಕ್ಕಳು ಬೆನ್ಯಾಮೀನ್ಯರನ್ನು ಮದುವೆಯಾಗಲು ಬಿಡುವುದಿಲ್ಲವೆಂದು ನಾವು ಯೆಹೋವನ ಎದುರಿಗೆ ಪ್ರತಿಜ್ಞೆ ಮಾಡಿದ್ದೇವೆ. ಇನ್ನು ಮುಂದೆ ಬೆನ್ಯಾಮೀನ್ಯರಿಗೆ ಹೆಂಡಂದಿರನ್ನು ದೊರಕಿಸುವುದು ಹೇಗೆ?” ಎಂದು ಅವರು ಯೋಚಿಸಿದರು.


ಇಸ್ರೇಲರಲ್ಲಿ ಯಾರು ಅಲ್ಲಿದ್ದಾರೆ, ಯಾರು ಅಲ್ಲಿಲ್ಲ ಎಂಬುದನ್ನು ಲೆಕ್ಕಹಾಕಿ ನೋಡಿದರು. ಯಾಬೇಷ್ ಗಿಲ್ಯಾದಿನವರಲ್ಲಿ ಯಾರೂ ಬಂದಿಲ್ಲ ಎಂಬುದು ಖಚಿತವಾಯಿತು.


ಸೌಲನು ಒಂದು ಜೊತೆ ಹಸುಗಳನ್ನು ತೆಗೆದುಕೊಂಡು ಅವುಗಳನ್ನು ತುಂಡುತುಂಡಾಗಿ ಕತ್ತರಿಸಿ ಆ ತುಂಡುಗಳನ್ನು ಸಂದೇಶಕರಿಗೆ ಕೊಟ್ಟನು. “ಇಸ್ರೇಲಿನ ನಾಡಿನಲ್ಲೆಲ್ಲಾ ಈ ತುಂಡುಗಳನ್ನು ತೆಗೆದುಕೊಂಡು ಹೋಗಿ ಅವರಿಗೆ, ‘ಸೌಲನನ್ನೂ ಮತ್ತು ಸಮುವೇಲನನ್ನೂ ಹಿಂಬಾಲಿಸಿರಿ, ಸೌಲನನ್ನು ಮತ್ತು ಸಮುವೇಲನನ್ನು ಯಾರು ಹಿಂಬಾಲಿಸುವುದಿಲ್ಲವೋ, ಯಾರು ಅವರಿಗೆ ಸಹಾಯ ಮಾಡುವುದಿಲ್ಲವೋ ಅಂತಹವರ ಹಸುಗಳಿಗೂ ಇದೇ ಗತಿಯಾಗುತ್ತದೆ’ ಎಂದು ತಿಳಿಸಿರಿ” ಎಂದನು. ಯೆಹೋವನ ಮೇಲೆ ಜನರಲ್ಲಿ ಹೆಚ್ಚು ಭಯವುಂಟಾಯಿತು. ಅವರೆಲ್ಲಾ ಒಂದೇ ಮನಸ್ಸಿನಿಂದ ಒಟ್ಟಾಗಿ ಸೇರಿ ಬಂದರು.


ಫಿಲಿಷ್ಟಿಯರು ಸೌಲನಿಗೆ ಮಾಡಿದ್ದು ಯಾಬೇಷ್ ಗಿಲ್ಯಾದಿನ ಜನರಿಗೆ ತಿಳಿಯಿತು.


“ಮೇರೋಜ್ ಊರಿಗೆ ಶಾಪಹಾಕಿರಿ; ಅಲ್ಲಿಯ ಜನರಿಗೆ ಶಾಪಹಾಕಿರಿ; ಏಕೆಂದರೆ ಅವರು ಯೆಹೋವನ ಸಹಾಯಕ್ಕೆ ತಮ್ಮ ಸೈನ್ಯದೊಂದಿಗೆ ಬರಲಿಲ್ಲ” ಎಂದನು ಯೆಹೋವನ ದೂತನು.


ಸೌಲನು ಮತ್ತು ಅವನ ಸೈನಿಕರು ಯಾಬೇಷಿನ ಸಂದೇಶಕರಿಗೆ, “ಗಿಲ್ಯಾದಿನ ಯಾಬೇಷ್ ಜನರಿಗೆ ನಾಳೆ ನಡುಮಧ್ಯಾಹ್ನದೊಳಗೆ ನಿಮ್ಮನ್ನು ರಕ್ಷಿಸುತ್ತೇವೆಂದು ತಿಳಿಸಿ” ಎಂಬುದಾಗಿ ಹೇಳಿದರು. ಯಾಬೇಷಿನ ಜನರಿಗೆ ಸೌಲನ ಸಂದೇಶವನ್ನು ಸಂದೇಶಕರು ತಿಳಿಸಿದರು. ಯಾಬೇಷಿನ ಜನರು ಹರ್ಷಿತರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು