Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 3:27 - ಪರಿಶುದ್ದ ಬೈಬಲ್‌

27 ಸೆಯೀರಾ ಎಂಬ ಸ್ಥಳಕ್ಕೆ ಬಂದನು. ಅಲ್ಲಿ ಎಫ್ರಾಯೀಮ್ ಬೆಟ್ಟಪ್ರದೇಶದಲ್ಲಿ ಅವನು ತುತ್ತೂರಿಯನ್ನು ಊದಿದನು. ಇಸ್ರೇಲರು ತುತ್ತೂರಿಯ ಧ್ವನಿಯನ್ನು ಕೇಳಿ ಬೆಟ್ಟದಿಂದ ಇಳಿದು ಏಹೂದನನ್ನು ಹಿಂಬಾಲಿಸಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಎಫ್ರಾಯೀಮ್ ಪರ್ವತಪ್ರದೇಶದಲ್ಲಿ ಕೊಂಬನ್ನು ಊದಿದನು. ಆಗ ಇಸ್ರಾಯೇಲರು ಅವನ ಬಳಿಗೆ ಬಂದು, ಗಟ್ಟಾ ಇಳಿದು ಅವನ ಸಂಗಡ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಸೆಯೀರಾ ಎಂಬಲ್ಲಿಗೆ ಬಂದು ಎಫ್ರಯಿಮ್ ಪರ್ವತಪ್ರದೇಶದಲ್ಲಿ ಕಹಳೆಯನ್ನು ಊದಿದನು. ಕೂಡಲೆ ಇಸ್ರಯೇಲರು ಅವನ ಬಳಿಗೆ ಬಂದು, ಗುಡ್ಡದಿಂದ ಇಳಿದು ಅವನ ಸಂಗಡ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಎಫ್ರಾಯೀಮ್ ಪರ್ವತಪ್ರದೇಶದಲ್ಲಿ ಕೊಂಬನ್ನು ಊದಿದನು. ಆಗ ಇಸ್ರಾಯೇಲ್ಯರು ಅವನ ಬಳಿಗೆ ಬಂದು ಗಟ್ಟಾ ಇಳಿದು ಅವನ ಸಂಗಡ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅವನು ಅಲ್ಲಿ ಬಂದಾಗ, ಎಫ್ರಾಯೀಮನ ಬೆಟ್ಟದಲ್ಲಿ ತುತೂರಿಯನ್ನು ಊದಿದನು. ಆಗ ಇಸ್ರಾಯೇಲರು ಅವನ ಸಂಗಡ ಬೆಟ್ಟದಿಂದ ಇಳಿದರು. ಅವನು ಇವರ ಮುಂದೆ ನಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 3:27
13 ತಿಳಿವುಗಳ ಹೋಲಿಕೆ  

ಯೋನಾತಾನನು ಫಿಲಿಷ್ಟಿಯರನ್ನು ಅವರ ಶಿಬಿರವಿದ್ದ ಗೆಬದಲ್ಲಿ ಸೋಲಿಸಿದನು. ಫಿಲಿಷ್ಟಿಯರು ಈ ವಿಚಾರವನ್ನು ಕೇಳಿ, “ಇಬ್ರಿಯರು ದಂಗೆ ಎದ್ದಿದ್ದಾರೆ” ಎಂದು ಹೇಳಿದರು. ಸೌಲನು, “ಏನು ನಡೆಯಿತೆಂಬುದು ಇಬ್ರಿಯರಿಗೆ ತಿಳಿಯಲಿ” ಎಂದು ಹೇಳಿದನು. ಆದ್ದರಿಂದ ಸೌಲನು ಇಸ್ರೇಲ್ ದೇಶದಲ್ಲೆಲ್ಲಾ ಕೊಂಬೂದಿಸಬೇಕೆಂದು ಜನರಿಗೆ ಹೇಳಿದನು.


ಗಿದ್ಯೋನನ ಮೇಲೆ ಯೆಹೋವನ ಆತ್ಮವು ಬಂದಿತು; ಅವನಿಗೆ ಹೆಚ್ಚಿನ ಶಕ್ತಿಯನ್ನು ಕೊಟ್ಟಿತು. ಅಬೀಯೇಜೆರನ ಗೋತ್ರದವರನ್ನು ತನ್ನನ್ನು ಹಿಂಬಾಲಿಸಲು ಕರೆಯುವುದಕ್ಕಾಗಿ ಗಿದ್ಯೋನನು ತುತ್ತೂರಿಯನ್ನು ಊದಿದನು.


ಆಗ ಪ್ರತಿಯೊಬ್ಬ ಅಧಿಕಾರಿಯೂ ತಮ್ಮತಮ್ಮ ನಿಲುವಂಗಿಗಳನ್ನು ತೆಗೆದು, ಅವುಗಳನ್ನು ಮೆಟ್ಟಿಲುಗಳ ಮೇಲೆ, ಯೇಹುವಿನ ಮುಂದೆ ಇಟ್ಟರು. ಅನಂತರ ಅವರು ತುತ್ತೂರಿಯನ್ನೂದಿ, “ಯೇಹು ರಾಜನು!” ಎಂದು ಘೋಷಿಸಿದರು.


ನಂತರ ಅವಳು ನಗರದ ಎಲ್ಲ ಜನರೊಂದಿಗೆ ಬಹಳ ಜಾಣತನದಿಂದ ಮಾತನಾಡಿದಳು. ಆಗ ಜನರು ಬಿಕ್ರೀಯ ಮಗನಾದ ಶೆಬನ ತಲೆಯನ್ನು ಕತ್ತರಿಸಿಹಾಕಿ ಅದನ್ನು ನಗರದ ಗೋಡೆಯಿಂದಾಚೆಗೆ ಯೋವಾಬನ ಕಡೆಗೆ ಎಸೆದರು. ಆ ಕೂಡಲೇ ಯೋವಾಬನು ತುತ್ತೂರಿಯನ್ನು ಊದಿಸಿದನು. ಸೈನ್ಯವು ನಗರವನ್ನು ಬಿಟ್ಟುಹೋಯಿತು. ಪ್ರತಿಯೊಬ್ಬರೂ ತಮ್ಮತಮ್ಮ ಮನೆಗಳಿಗೆ ಹಿಂತಿರುಗಿದರು. ಯೋವಾಬನು ಜೆರುಸಲೇಮಿನಲ್ಲಿದ್ದ ರಾಜನ ಬಳಿಗೆ ಹಿಂದಿರುಗಿ ಹೋದನು.


ಆಗಿನ ಕಾಲದಲ್ಲಿ ಇಸ್ರೇಲರಿಗೆ ಅರಸನಿರಲಿಲ್ಲ. ಎಫ್ರಾಯೀಮ್ ಬೆಟ್ಟಪ್ರದೇಶದ ಒಂದು ಮೂಲೆಯಲ್ಲಿ ಒಬ್ಬ ಲೇವಿಯು ವಾಸಮಾಡುತ್ತಿದ್ದನು. ಆ ಮನುಷ್ಯನಿಗೆ ಒಬ್ಬ ಉಪಪತ್ನಿ ಇದ್ದಳು. ಅವಳು ಯೆಹೂದದ ಬೆತ್ಲೆಹೇಮಿನವಳಾಗಿದ್ದಳು.


ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿ ಮೀಕ ಎಂಬ ಮನುಷ್ಯನಿದ್ದನು.


ಗಿದ್ಯೋನನು ಎಫ್ರಾಯೀಮ್ ಬೆಟ್ಟಪ್ರದೇಶಗಳಿಗೆ ದೂತರನ್ನು ಕಳುಹಿಸಿದನು. ಆ ದೂತರು, “ಬನ್ನಿ, ಮಿದ್ಯಾನ್ಯರ ಮೇಲೆ ಧಾಳಿ ಮಾಡಿರಿ. ಬೇತ್‌ಬಾರದವರೆಗಿನ ನದಿಯ ಮತ್ತು ಜೋರ್ಡನ್ ನದಿಯ ಪ್ರದೇಶವನ್ನು ಹಿಡಿದುಕೊಳ್ಳಿರಿ. ಮಿದ್ಯಾನ್ಯರು ಅಲ್ಲಿಗೆ ಬರುವ ಮೊದಲೇ ಈ ಕೆಲಸವನ್ನು ಮಾಡಿರಿ” ಎಂದು ತಿಳಿಸಿದರು. ಅವರು ಎಫ್ರಾಯೀಮ್ ಕುಲದ ಎಲ್ಲ ಜನರನ್ನು ಕರೆದರು. ಅವರು ಬೇತ್‌ಬಾರಾದವರೆಗೆ ನದಿಯ ಪ್ರದೇಶವನ್ನು ಹಿಡಿದುಕೊಂಡರು.


“ಅಮಾಲೇಕ್ ಪರ್ವತ ಪ್ರದೇಶದಲ್ಲಿ ವಾಸಮಾಡುತ್ತಿದ್ದ ಎಫ್ರಾಯೀಮ್ಯರು ಬಂದರು; ನಿನ್ನನ್ನೂ ನಿನ್ನ ಜನರನ್ನೂ ಅನುಸರಿಸುತ್ತಿದ್ದ ಬೆನ್ಯಾಮೀನ್ಯರೂ ಬಂದರು; ಮಾಕೀರನ ಕುಲದಿಂದ ನಾಯಕರು ಬಂದರು; ಜೆಬುಲೂನ್ ಕುಲದಿಂದ ನಾಯಕರು ಕಂಚಿನ ದೊಣ್ಣೆಗಳೊಡನೆ ಬಂದರು.


ನೀವು ಬೆಟ್ಟಪ್ರದೇಶವನ್ನು ತೆಗೆದುಕೊಳ್ಳಿರಿ. ಅದೊಂದು ಕಾಡು. ಆದರೆ ನೀವು ಆ ಮರಗಳನ್ನು ಕಡಿದುಹಾಕಿ ಅದನ್ನು ವಾಸಿಸಲು ಒಳ್ಳೆಯ ಸ್ಥಳವನ್ನಾಗಿ ಮಾಡಿಕೊಳ್ಳಬಹುದು. ನೀವು ಆ ಪ್ರದೇಶವನ್ನೆಲ್ಲಾ ನಿಮ್ಮ ಸ್ವತ್ತನ್ನಾಗಿ ಮಾಡಿಕೊಳ್ಳಿರಿ. ಆ ಪ್ರದೇಶವನ್ನು ಬಿಟ್ಟುಹೋಗುವಂತೆ ಕಾನಾನ್ಯರನ್ನು ಒತ್ತಾಯಿಸಿರಿ. ಅವರು ಶಕ್ತಿಯುತರಾಗಿದ್ದರೂ ಅವರ ಬಳಿ ಬಲವಾದ ಆಯುಧಗಳಿದ್ದರೂ ನೀವು ಅವರನ್ನು ಸೋಲಿಸುವಿರಿ” ಎಂದು ಹೇಳಿದನು.


ಯೆಹೋಶುವನು, “ನಿಮ್ಮಲ್ಲಿ ಬಹಳ ಜನರಿದ್ದರೆ ಬೆಟ್ಟಪ್ರದೇಶಕ್ಕೆ ಹೋಗಿ ಆ ಭೂಮಿಯನ್ನು ತೆಗೆದುಕೊಳ್ಳಿರಿ. ಆ ಭೂಮಿಯು ಈಗ ಪೆರಿಜ್ಜೀಯರ ಮತ್ತು ರೆಫಾಯರ ಸ್ವತ್ತಾಗಿದೆ. ನಿಮಗೆ ಕೊಟ್ಟಿರುವ ಎಫ್ರಾಯೀಮ್ ಬೆಟ್ಟಪ್ರದೇಶವು ಚಿಕ್ಕದೆನಿಸಿದರೆ ಹೋಗಿ ಆ ಭೂಮಿಯನ್ನು ತೆಗೆದುಕೊಳ್ಳಿರಿ” ಎಂದನು.


ಸೇವಕರು ಅರಸನಿಗಾಗಿ ಕಾಯುತ್ತಾ ನಿಂತಿರುವಾಗ ತಪ್ಪಿಸಿಕೊಂಡು ಹೋಗುವುದಕ್ಕೆ ಏಹೂದನಿಗೆ ಅವಕಾಶ ಸಿಕ್ಕಿತು. ಏಹೂದನು ವಿಗ್ರಹಗಳ ಪಕ್ಕದಿಂದ ಹಾದು ಹೊಳೆದಾಟಿ


ಅಬೀಮೆಲೆಕನು ಸತ್ತ ತರುವಾಯ ಇಸ್ರೇಲರನ್ನು ರಕ್ಷಿಸಲು ಯೆಹೋವನು ಮತ್ತೊಬ್ಬ ನ್ಯಾಯಾಧೀಶನನ್ನು ಕಳುಹಿಸಿದನು. ಅವನ ಹೆಸರು ತೋಲ. ತೋಲನು ಪೂವನ ಮಗನು. ಪೂವನು ದೋದೋ ಎಂಬವನ ಮಗನು. ತೋಲನು ಇಸ್ಸಾಕಾರ್ ಕುಲಕ್ಕೆ ಸೇರಿದವನೂ ಶಾಮೀರ ನಗರದ ವಾಸಿಯೂ ಆಗಿದ್ದನು. ಶಾಮೀರ ನಗರವು ಎಫ್ರಾಯೀಮ್ ಬೆಟ್ಟಪ್ರದೇಶದಲ್ಲಿತ್ತು.


ನಮಗೆದುರಾಗಿ ಬಂದಿದ್ದ ಪರಿಸ್ಥಿತಿಯನ್ನು ನಾನು ಚೆನ್ನಾಗಿ ಅವಲೋಕಿಸಿ ನಮ್ಮ ಜನರೊಂದಿಗೆ ಕುಟುಂಬ ಕುಟುಂಬವಾಗಿ, ಅಧಿಕಾರಿಗಳಿಗೆ ಮತ್ತು ಉಳಿದ ಜನರಿಗೆ ಹೀಗೆ ಹೇಳಿದೆನು: “ನಮ್ಮ ವೈರಿಗಳ ಬಗ್ಗೆ ನೀವು ಏನೂ ಹೆದರಬೇಡಿರಿ. ನಮ್ಮ ದೇವರನ್ನು ನೆನಪುಮಾಡಿರಿ. ಯೆಹೋವನು ಬಲಶಾಲಿಯೂ ಸರ್ವಶಕ್ತನೂ ಆಗಿದ್ದಾನೆ. ನೀವು ನಿಮ್ಮ ಸಹೋದರರಿಗಾಗಿ, ನಿಮ್ಮ ಗಂಡುಹೆಣ್ಣು ಮಕ್ಕಳಿಗಾಗಿ ನಿಮ್ಮನಿಮ್ಮ ಹೆಂಡತಿಯರಿಗಾಗಿ ಮತ್ತು ಮನೆಗಳಿಗಾಗಿ ಹೋರಾಡಿರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು