28 ಏಹೂದನು ಇಸ್ರೇಲರಿಗೆ, “ನನ್ನನ್ನು ಹಿಂಬಾಲಿಸಿರಿ, ನಮ್ಮ ಶತ್ರುಗಳಾದ ಮೋವಾಬ್ಯರನ್ನು ಸೋಲಿಸಲು ಯೆಹೋವನು ನಮಗೆ ಸಹಾಯ ಮಾಡಿದ್ದಾನೆ” ಎಂದನು. ಇಸ್ರೇಲರು ಏಹೂದನನ್ನು ಹಿಂಬಾಲಿಸಿದರು. ಅವರು ಜೋರ್ಡನ್ ನದಿಯ ಹಾಯಗಡಗಳನ್ನೆಲ್ಲಾ ವಶಪಡಿಸಿಕೊಂಡರು. ಆ ಸ್ಥಳಗಳು ಮೋವಾಬಿಗೆ ಹೋಗುವ ದಾರಿಯಲ್ಲಿದ್ದವು. ಜೋರ್ಡನ್ ನದಿಯನ್ನು ದಾಟಿಹೋಗಲು ಇಸ್ರೇಲರು ಯಾರಿಗೂ ಅವಕಾಶ ಕೊಡಲಿಲ್ಲ.
28 ಅವನು ಅವರ ನಾಯಕನಾಗಿ, “ನನ್ನನ್ನು ಹಿಂಬಾಲಿಸಿರಿ; ಯೆಹೋವನು ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ” ಎಂದು ಹೇಳಲು, ಅವರು ಅವನನ್ನು ಹಿಂಬಾಲಿಸಿ ಮೋವಾಬಿಗೆ ಹೋಗುವ ಹಾಯಗಡಗಳನ್ನೆಲ್ಲಾ (ನದಿಯಲ್ಲಿ ಹಾದು ಹೋಗಬಹುದಾದ ಸ್ಥಳಗಳು) ಹಿಡಿದರು; ಯಾರನ್ನೂ ದಾಟಗೊಡಲಿಲ್ಲ.
28 ಏಹೂದನು ಅವರಿಗೆ ನಾಯಕನಾಗಿ, “ನನ್ನನ್ನು ಹಿಂಬಾಲಿಸಿ ಬನ್ನಿ; ಸರ್ವೇಶ್ವರ ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಗೊಪ್ಪಿಸಿದ್ದಾರೆ,” ಎಂದನು. ಅಂತೆಯೇ ಅವರು ಅವನನ್ನು ಹಿಂಬಾಲಿಸಿ ಮೋವಾಬಿಗೆ ಹೋಗುವ ಹಾಯಗಡಗಳನ್ನೆಲ್ಲ ಹಿಡಿದುಕೊಂಡು ಯಾರನ್ನೂ ದಾಟಗೊಡಲಿಲ್ಲ.
28 ಅವನು ಅವರ ನಾಯಕನಾಗಿ - ನನ್ನನ್ನು ಹಿಂಬಾಲಿಸಿರಿ; ಯೆಹೋವನು ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆಂದು ಹೇಳಲು ಅವರು ಅವನನ್ನು ಹಿಂಬಾಲಿಸಿ ಮೋವಾಬಿಗೆ ಹೋಗುವ ಹಾಯಗಡಗಳನ್ನೆಲ್ಲಾ ಹಿಡಿದರು; ಯಾರನ್ನೂ ದಾಟಗೊಡಲಿಲ್ಲ.
28 ಅವರಿಗೆ, “ನೀವು ನನ್ನ ಹಿಂದೆ ಬನ್ನಿರಿ. ಏಕೆಂದರೆ ಯೆಹೋವ ದೇವರು ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟರು,” ಎಂದನು. ಅವರು ಅವನ ಹಿಂದೆ ಬಂದು, ಮೋವಾಬ್ಯರಿಗೆ ಎದುರಾದ ಯೊರ್ದನ್ ನದಿ ರೇವುಗಳನ್ನು ಹಿಡಿದು, ಒಬ್ಬರನ್ನಾದರೂ ದಾಟಗೊಡದೆ,
ಗಿಲ್ಯಾದಿನ ಜನರು ಜೋರ್ಡನ್ ನದಿಯನ್ನು ದಾಟಲು ಅನುಕೂಲವಾದ ಸ್ಥಳಗಳನ್ನೆಲ್ಲಾ ವಶಪಡಿಸಿಕೊಂಡರು. ಅವು ಎಫ್ರಾಯೀಮ್ ಪ್ರದೇಶದೊಳಕ್ಕೆ ಹೋಗುವ ಮಾರ್ಗದಲ್ಲಿಯೇ ಇದ್ದವು. ಯಾವಾಗಲಾದರೂ ಎಫ್ರಾಯೀಮ್ ಕುಲದವರಲ್ಲಿ ಅಳಿದುಳಿದವನೊಬ್ಬ ಅಲ್ಲಿಗೆ ಬಂದು, “ನನ್ನನ್ನು ದಾಟಗೊಡಿರಿ” ಎಂದು ಕೇಳಿದರೆ ಗಿಲ್ಯಾದಿನವರು, “ನೀನು ಎಫ್ರಾಯೀಮಿನವನೇ?” ಎಂದು ಕೇಳುತ್ತಿದ್ದರು. ಅವನು “ಅಲ್ಲ” ಎಂದು ಉತ್ತರಿಸಿದರೆ,
ಕನಸಿನ ಬಗ್ಗೆ ಮತ್ತು ಅದರ ಅರ್ಥದ ಬಗ್ಗೆ ಅವರು ಮಾತನಾಡುವುದನ್ನು ಕೇಳಿದ ಗಿದ್ಯೋನನು ಯೆಹೋವನಿಗೆ ತಲೆಬಾಗಿ ನಮಸ್ಕರಿಸಿದನು. ಆಮೇಲೆ ಗಿದ್ಯೋನನು ಇಸ್ರೇಲರ ಪಾಳೆಯಕ್ಕೆ ಹಿಂದಿರುಗಿದನು. ಗಿದ್ಯೋನನು ಜನರನ್ನು, “ಏಳಿರಿ! ಯೆಹೋವನು ಮಿದ್ಯಾನ್ಯರನ್ನು ಸೋಲಿಸಲು ನಮಗೆ ಸಹಾಯ ಮಾಡುತ್ತಾನೆ” ಎಂದು ಕೂಗಿಕರೆದನು.
ರಾಜಭಟರು ನಗರದ ಹೊರಗೆ ಹೋಗಿ ನಗರದ ದ್ವಾರಗಳನ್ನು ಮುಚ್ಚಿ ಇಸ್ರೇಲಿನಿಂದ ಬಂದ ಆ ಇಬ್ಬರನ್ನು ಹುಡುಕಿಕೊಂಡು ಹೋದರು. ಅವರು ಜೋರ್ಡನ್ ನದಿಯವರೆಗೆ ಹೋಗಿ ಜನರು ನದಿದಾಟುವ ಎಲ್ಲ ಸ್ಥಳಗಳಲ್ಲಿ ಹುಡುಕಿದರು.
ಜನರನ್ನು ರಕ್ಷಿಸಲು ಯೆಹೋವನಿಗೆ ಕತ್ತಿ ಮತ್ತು ಈಟಿಗಳ ಅಗತ್ಯವಿಲ್ಲ ಎಂಬುದು ಇಲ್ಲಿ ಸೇರಿರುವ ಜನರಿಗೆಲ್ಲ ತಿಳಿಯುತ್ತದೆ. ಇದು ಯೆಹೋವನ ಯುದ್ಧ. ಫಿಲಿಷ್ಟಿಯರನ್ನೆಲ್ಲ ಸೋಲಿಸಲು ಯೆಹೋವನು ನಮಗೆ ಸಹಾಯ ಮಾಡುತ್ತಾನೆ” ಎಂದು ಹೇಳಿದನು.
ಗಿದ್ಯೋನನು ಎಫ್ರಾಯೀಮ್ ಬೆಟ್ಟಪ್ರದೇಶಗಳಿಗೆ ದೂತರನ್ನು ಕಳುಹಿಸಿದನು. ಆ ದೂತರು, “ಬನ್ನಿ, ಮಿದ್ಯಾನ್ಯರ ಮೇಲೆ ಧಾಳಿ ಮಾಡಿರಿ. ಬೇತ್ಬಾರದವರೆಗಿನ ನದಿಯ ಮತ್ತು ಜೋರ್ಡನ್ ನದಿಯ ಪ್ರದೇಶವನ್ನು ಹಿಡಿದುಕೊಳ್ಳಿರಿ. ಮಿದ್ಯಾನ್ಯರು ಅಲ್ಲಿಗೆ ಬರುವ ಮೊದಲೇ ಈ ಕೆಲಸವನ್ನು ಮಾಡಿರಿ” ಎಂದು ತಿಳಿಸಿದರು. ಅವರು ಎಫ್ರಾಯೀಮ್ ಕುಲದ ಎಲ್ಲ ಜನರನ್ನು ಕರೆದರು. ಅವರು ಬೇತ್ಬಾರಾದವರೆಗೆ ನದಿಯ ಪ್ರದೇಶವನ್ನು ಹಿಡಿದುಕೊಂಡರು.
ಗಿದ್ಯೋನನು ಅವರಿಗೆ, “ನನ್ನನ್ನು ಗಮನಿಸುತ್ತಾ ನಾನು ಮಾಡಿದಂತೆ ಮಾಡಿರಿ. ಶತ್ರುಗಳ ಪಾಳೆಯದ ಸೀಮೆಯವರೆಗೆ ನನ್ನನ್ನು ಹಿಂಬಾಲಿಸಿ ಬನ್ನಿ. ನಾನು ಪಾಳೆಯದ ಗಡಿಯನ್ನು ಮುಟ್ಟಿದ ಮೇಲೆ ನಾನು ಮಾಡಿದಂತೆಯೇ ಮಾಡಿರಿ.
ಕೆದೆಷ್ ನಗರದಲ್ಲಿ ಬಾರಾಕನು ಜೆಬುಲೂನ್ ಮತ್ತು ನಫ್ತಾಲಿ ಕುಲದವರನ್ನು ಒಟ್ಟಿಗೆ ಸೇರಿಸಿ ಆ ಕುಲಗಳಿಂದ ಹತ್ತು ಸಾವಿರ ಜನರನ್ನು ತನ್ನೊಂದಿಗೆ ಬರುವಂತೆ ಮಾಡಿದನು. ದೆಬೋರಳು ಸಹ ಬಾರಾಕನ ಸಂಗಡ ಹೋದಳು.
ಆ ಮನುಷ್ಯನ ಸ್ನೇಹಿತನು ಕನಸಿನ ಅರ್ಥವನ್ನು ತಿಳಿದುಕೊಂಡು ಅವನಿಗೆ, “ನಿನ್ನ ಕನಸು ಇಸ್ರೇಲಿನ ಯೋವಾಷನ ಮಗನಾದ ಗಿದ್ಯೋನನ ಕುರಿತಾಗಿದೆ. ಗಿದ್ಯೋನನು ಮಿದ್ಯಾನ್ಯರ ಇಡೀ ಸೈನ್ಯವನ್ನು ಸೋಲಿಸುವಂತೆ ದೇವರು ಮಾಡುತ್ತಾನೆ” ಎಂದನು.