Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 4:11 - ಪರಿಶುದ್ದ ಬೈಬಲ್‌

11 ಹೆಬೆರನೆಂಬ ಒಬ್ಬ ಮನುಷ್ಯನಿದ್ದನು. ಅವನು ಕೇನ್ಯರ ಕುಲದವನಾಗಿದ್ದನು. ಅವನು ಉಳಿದ ಕೇನ್ಯರನ್ನು ಬಿಟ್ಟು ಚಾನನ್ನೀಮ್ ಎಂಬ ಊರಲ್ಲಿ ಓಕ್ ವೃಕ್ಷದ ಬಳಿ ಮನೆ ಮಾಡಿಕೊಂಡಿದ್ದನು. (ಕೇನ್ಯರು ಹೋಬಾಬನ ಸಂತತಿಯವರಾಗಿದ್ದರು. ಹೋಬಾಬನು ಮೋಶೆಯ ಮಾವನಾಗಿದ್ದನು.) ಚಾನನ್ನೀಮ್ ಕೆದೆಷ್ ನಗರದ ಸಮೀಪದಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 (ಕೇನ್ಯನಾದ) ಹೆಬೆರನು ಉಳಿದ ಕೇನ್ಯರಿಂದ ತನ್ನನ್ನು ಪ್ರತ್ಯೇಕಿಸಿಕೊಂಡನು. ಕೇನ್ಯರು ಮೋಶೆಯ ಮಾವನಾದ ಹೋಬಾಬನ ವಂಶದವರು. ಹೆಬೆರನು ಕೆದೆಷಿನ ಹತ್ತಿರ ಇರುವ ಚಾನನ್ನೀಮೆಂಬ ಊರಿನ ಏಲೋನ್ ವೃಕ್ಷದ ವರೆಗೆ ಬಂದು ಅಲ್ಲಿ ಗುಡಾರ ಹಾಕಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಕೇನ್ಯನಾದ ಹೆಬೆರನು ಮೋಶೆಯ ಮಾವ ಹೋಬಾಬನ ವಂಶದ ಉಳಿದ ಕೇನ್ಯರನ್ನು ಬಿಟ್ಟು ಕೆದೆಷಿನ ಹತ್ತಿರ ಇರುವ ‘ಚಾನನ್ನೀಮ್’ ಎಂಬ ಊರಿನ ಏಲೋನ್ ವೃಕ್ಷದವರೆಗೆ ಬಂದು ಅಲ್ಲಿ ಗುಡಾರ ಹಾಕಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 (ಕೇನ್ಯನಾದ ಹೆಬೆರನು ಮೋಶೆಯ ಮಾವನಾದ ಹೋಬಾಬನ ವಂಶದ ಉಳಿದ ಕೇನ್ಯರನ್ನು ಅಗಲಿ ಕೆದೆಷಿನ ಹತ್ತಿರ ಇರುವ ಚಾನನ್ನೀಮೆಂಬ ಊರಿನ ಏಲೋನ್ ವೃಕ್ಷದವರೆಗೆ ಬಂದು ಅಲ್ಲಿ ಗುಡಾರಹಾಕಿಕೊಂಡಿದ್ದನು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಮೋಶೆಯ ಅಳಿಯನಾದ ಹೊಬಾಬನ ಮಕ್ಕಳಲ್ಲಿ ಸೇರಿದ ಕೇನ್ಯನಾದ ಹೆಬೆರನು ಕೇನ್ಯರನ್ನು ಬಿಟ್ಟು, ತನ್ನನ್ನು ಪ್ರತ್ಯೇಕಿಸಿ, ಕೆದೆಷಿನ ಬಳಿಯಲ್ಲಿರುವ ಚಾನನ್ನೀಮ್ ಎಂಬ ಊರಲ್ಲಿ ಅಲ್ಲೋನ್ ಮರದ ಬಳಿ ತನ್ನ ಗುಡಾರವನ್ನು ಹಾಕಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 4:11
13 ತಿಳಿವುಗಳ ಹೋಲಿಕೆ  

ಕೇನ್ಯರು (ಕೇನ್ಯರು ಮೋಶೆಯ ಮಾವನ ಗೋತ್ರದವರಾಗಿದ್ದರು.) ಖರ್ಜೂರ ನಗರವನ್ನು (ಜೆರಿಕೊವನ್ನು) ಬಿಟ್ಟು ಯೆಹೂದ್ಯರ ಸಂಗಡ ಹೋದರು. ಅವರು ನೆಗೆವಿನಲ್ಲಿ ಅರಾದ್ ನಗರದ ಹತ್ತಿರವಿದ್ದ ಯೆಹೂದ ಅರಣ್ಯಕ್ಕೆ ಬಂದು ಅಲ್ಲಿನ ಜನರ ಸಂಗಡ ವಾಸ ಮಾಡಿದರು.


ಅವರ ಭೂಮಿಯ ಮೇರೆಯು ಚಾನನ್ನೀಮಿನ ಹತ್ತಿರ ಇರುವ ದೊಡ್ಡ ಮರದಿಂದ ಆರಂಭವಾಗುತ್ತದೆ. ಇದು ಹೇಲೆಫಿನ ಹತ್ತಿರ ಇದೆ. ಬಳಿಕ ಆ ಮೇರೆಯು ಅದಾಮೀನೆಕೆಬ್ ಮತ್ತು ಯಬ್ನೆಯೇಲ್ ಇವುಗಳ ಮೂಲಕ ಲಕ್ಕೂಮಿಗೆ ಹೋಗಿ, ಜೋರ್ಡನ್ ನದಿಯ ತೀರದಲ್ಲಿ ಮುಕ್ತಾಯಗೊಂಡಿತು.


ಹೋಬಾಬನು ಮಿದ್ಯಾನ್ಯನಾದ ರೆಗೂವೇಲನ ಮಗನು. ರೆಗೂವೇಲನು ಮೋಶೆಯ ಮಾವ. ಮೋಶೆಯು ಹೋಬಾಬನಿಗೆ, “ದೇವರು ನಮಗೆ ಕೊಡುತ್ತೇನೆಂದು ವಾಗ್ದಾನ ಮಾಡಿದ ದೇಶಕ್ಕೆ ನಾವು ಪ್ರಯಾಣ ಮಾಡುತ್ತಿದ್ದೇವೆ. ನಮ್ಮೊಂದಿಗೆ ಬಾ. ನೀನು ನಮ್ಮೊಂದಿಗೆ ಉದ್ದಾರವಾಗುವೆ; ಯಾಕೆಂದರೆ ಯೆಹೋವನು ಇಸ್ರೇಲರಿಗೆ ಒಳ್ಳೆಯವುಗಳನ್ನು ವಾಗ್ದಾನ ಮಾಡಿದ್ದಾನೆ.”


ಕೆದೆಷ್, ಎದ್ರೈ, ಏನ್‌ಹಾಚೋರ್,


ಮೋಶೆಯ ಮಾವನ ಹೆಸರು ಇತ್ರೋನನು. ಇತ್ರೋನನು ಮಿದ್ಯಾನಿನ ಯಾಜಕನಾಗಿದ್ದನು. ಮೋಶೆಯು ಇತ್ರೋನನ ಕುರಿಗಳಿಗೆ ಕುರುಬನಾಗಿದ್ದನು. ಒಂದು ದಿನ, ಮೋಶೆಯು ಕುರಿಗಳನ್ನು ಮರುಭೂಮಿಯ ಪಶ್ಚಿಮಭಾಗಕ್ಕೆ ನಡೆಸಿಕೊಂಡು ದೇವರ ಬೆಟ್ಟವೆಂದು ಕರೆಯಲ್ಪಡುವ ಸೀನಾಯಿ ಎಂಬ ಹೋರೇಬ್ ಬೆಟ್ಟಕ್ಕೆ ಹೋದನು.


ದೆಬೋರಳು ತನ್ನನ್ನು ಬಂದು ಕಾಣಬೇಕೆಂದು ಬಾರಾಕನೆಂಬ ವ್ಯಕ್ತಿಗೆ ಹೇಳಿ ಕಳುಹಿಸಿದಳು. ಬಾರಾಕನು ಅಬೀನೋವಮನ ಮಗ. ಬಾರಾಕನು ನಫ್ತಾಲಿ ಪ್ರದೇಶದ ಕೆದೆಷ್ ಎಂಬ ಊರಲ್ಲಿ ವಾಸಮಾಡುತ್ತಿದ್ದನು. ದೆಬೋರಳು ಬಾರಾಕನಿಗೆ, “ಇಸ್ರೇಲಿನ ದೇವರಾದ ಯೆಹೋವನು, ‘ನೀನು ಹೋಗಿ ನಫ್ತಾಲಿ ಮತ್ತು ಜೆಬುಲೂನ್ ಕುಲಗಳವರ ಹತ್ತು ಸಾವಿರ ಜನರನ್ನು ಸೇರಿಸಿ ಅವರನ್ನು ತಾಬೋರ್ ಬೆಟ್ಟಕ್ಕೆ ಕರೆದುಕೊಂಡು ಹೋಗು.


ಆಗ ಬಿಳಾಮನು ಕೇನ್ಯರನ್ನು ನೋಡಿ ಹೀಗೆಂದನು: “ನಿಮ್ಮ ಮನೆಯು ಬೆಟ್ಟದ ತುದಿಯಲ್ಲಿರುವ ಪಕ್ಷಿಯ ಗೂಡಿನಂತೆ ಸುರಕ್ಷಿತವಾಗಿದೆಯೆಂದು ನೀವು ನಂಬುತ್ತೀರಿ.


ಮೋಶೆಯ ಮಾವನಾದ ಇತ್ರೋನನು ಮಿದ್ಯಾನಿನಲ್ಲಿ ಯಾಜಕನಾಗಿದ್ದನು. ಮೋಶೆಗೆ ಮತ್ತು ಇಸ್ರೇಲರಿಗೆ ದೇವರು ಅನೇಕ ರೀತಿಗಳಲ್ಲಿ ಸಹಾಯ ಮಾಡಿದ್ದರ ಬಗ್ಗೆ, ಯೆಹೋವನು ಇಸ್ರೇಲರನ್ನು ಈಜಿಪ್ಟಿನಿಂದ ಹೊರಗೆ ನಡಿಸಿದ್ದರ ಬಗ್ಗೆ ಇತ್ರೋನನು ಕೇಳಿದನು.


ಬಳಿಕ ಅವರು ತಮ್ಮ ತಂದೆಯಾದ ರೆಗೂವೇಲನ ಬಳಿಗೆ ಮರಳಿಹೋದರು. ಅವರ ತಂದೆ, “ಈ ದಿನ ನೀವು ಬಹುಬೇಗನೆ ಮನೆಗೆ ಬಂದಿದ್ದೀರಲ್ಲಾ!” ಎಂದು ಕೇಳಿದನು.


ಅಬೀನೋವಮನ ಮಗನಾದ ಬಾರಾಕನು ತಾಬೋರ್ ಬೆಟ್ಟಕ್ಕೆ ಬಂದಿದ್ದಾನೆಂಬ ಸಮಾಚಾರ ಸೀಸೆರನಿಗೆ ತಿಳಿಯಿತು.


ಸೌಲನು ಕೇನ್ಯದ ಜನರಿಗೆ, “ಅಮಾಲೇಕ್ಯರನ್ನು ತ್ಯಜಿಸಿ ಹೊರಗೆ ಹೋಗಿ, ಆಗ ನಿಮ್ಮನ್ನು ಅಮಾಲೇಕ್ಯರೊಂದಿಗೆ ನಾಶಗೊಳಿಸುವುದಿಲ್ಲ. ಇಸ್ರೇಲರು ಈಜಿಪ್ಟಿನಿಂದ ಹೊರ ಬಂದಾಗ ನೀವು ಅವರಿಗೆ ಅನುಕಂಪ ತೋರಿದ್ದೀರಿ” ಎಂದು ಹೇಳಿದನು. ಆದ್ದರಿಂದ ಕೇನ್ಯರು ಅಮಾಲೇಕ್ಯರನ್ನು ಬಿಟ್ಟುಹೋದರು.


ದಾವೀದನು ಅನೇಕ ಸಲ ಹೀಗೆ ಮಾಡಿದನು. ಪ್ರತಿಸಲವೂ ಆಕೀಷನು ದಾವೀದನನ್ನು, “ನೀನು ಎಲ್ಲಿ ಯುದ್ಧಮಾಡಿದೆ ಮತ್ತು ಇವುಗಳನ್ನು ಎಲ್ಲಿಂದ ತಂದೆ” ಎಂದು ಕೇಳುತ್ತಿದ್ದನು. ದಾವೀದನು, “ನಾನು ಯೆಹೂದ ದೇಶದ ದಕ್ಷಿಣ ಭಾಗದ ವಿರುದ್ಧ ಯುದ್ಧಮಾಡಿದೆ” ಎಂದಾಗಲಿ, “ನಾನು ಎರಹ್ಮೇಲ್ಯರ ದಕ್ಷಿಣಭಾಗದ ವಿರುದ್ಧ ಯುದ್ಧಮಾಡಿದೆ” ಎಂದಾಗಲೀ “ನಾನು ಕೇನ್ಯರ ದಕ್ಷಿಣ ಭಾಗದ ವಿರುದ್ಧ ಯುದ್ಧಮಾಡಿದೆ” ಎಂದಾಗಲೀ ಹೇಳುತ್ತಿದ್ದನು.


ನೀನು ನಮ್ಮೊಂದಿಗೆ ಬಂದರೆ, ಯೆಹೋವನು ನಮಗೆ ಕೊಡುವ ಎಲ್ಲಾ ಒಳ್ಳೆಯ ವಸ್ತುಗಳಲ್ಲಿ ನಿನಗೆ ಪಾಲು ಕೊಡುವೆವು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು