Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 4:4 - ಪರಿಶುದ್ದ ಬೈಬಲ್‌

4 ಆಗ ದೆಬೋರಳೆಂಬ ಒಬ್ಬ ಪ್ರವಾದಿನಿ ಇದ್ದಳು. ಅವಳು ಲಪ್ಪೀದೋತ್ ಎಂಬವನ ಪತ್ನಿಯಾಗಿದ್ದಳು. ಅವಳು ಆಗ ಇಸ್ರೇಲಿನ ನ್ಯಾಯಾಧೀಶೆಯಾಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆ ಕಾಲದಲ್ಲಿ ಲಪ್ಪೀದೋತನ ಹೆಂಡತಿ, ದೆಬೋರಳೆಂಬ ಪ್ರವಾದಿನಿಯು ಇಸ್ರಾಯೇಲರಲ್ಲಿ ನ್ಯಾಯತೀರ್ಪನ್ನು ಮಾಡುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆ ಕಾಲದಲ್ಲಿ ಲಪ್ಪೀದೋತನ ಹೆಂಡತಿ ದೆಬೋರಳೆಂಬ ಪ್ರವಾದಿನಿ ಇಸ್ರಯೇಲರಲ್ಲಿ ನ್ಯಾಯ ತೀರಿಸುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆ ಕಾಲದಲ್ಲಿ ಲಪ್ಪೀದೋತನ ಹೆಂಡತಿಯಾದ ದೆಬೋರಳೆಂಬ ಪ್ರವಾದಿನಿಯು ಇಸ್ರಾಯೇಲ್ಯರಲ್ಲಿ ನ್ಯಾಯತೀರಿಸುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆ ಕಾಲದಲ್ಲಿ ಲಪ್ಪೀದೋತನ ಹೆಂಡತಿಯಾದ ದೆಬೋರಳೆಂಬ ಪ್ರವಾದಿನಿ ಇಸ್ರಾಯೇಲರಿಗೆ ನ್ಯಾಯ ತೀರಿಸುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 4:4
13 ತಿಳಿವುಗಳ ಹೋಲಿಕೆ  

ದೇವಾಲಯದಲ್ಲಿ ಅನ್ನಳೆಂಬ ಒಬ್ಬ ಪ್ರವಾದಿನಿ ಇದ್ದಳು. ಆಕೆಯು ಅಸೇರನ ವಂಶದ ಫನುವೇಲನ ಕುಟುಂಬದವಳಾಗಿದ್ದಳು. ಅನ್ನಳು ಬಹಳ ಮುಪ್ಪಿನವಳಾಗಿದ್ದಳು. ಆಕೆಯು ಮದುವೆಯಾದ ಏಳು ವರ್ಷಕ್ಕೆ ಗಂಡನನ್ನು ಕಳೆದುಕೊಂಡಳು.


ಆದ್ದರಿಂದ ಯಾಜಕನಾದ ಹಿಲ್ಕೀಯ, ಅಹೀಕಾಮ್, ಅಕ್ಬೋರ್, ಶಾಫಾನ್ ಮತ್ತು ಅಸಾಯ ಎಂಬವರು ಪ್ರವಾದಿನಿಯಾದ ಹುಲ್ದಳ ಬಳಿಗೆ ಹೋದರು. ಹುಲ್ದಳು ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ಆದ ಶಲ್ಲೂಮನ ಹೆಂಡತಿ. ಅವನು ಯಾಜಕರ ವಸ್ತ್ರಗಳಿಗೆ ಮೇಲ್ವಿಚಾರಕನಾಗಿದ್ದನು. ಹುಲ್ದಳು ಜೆರುಸಲೇಮಿನ ಎರಡನೆಯ ಭಾಗದಲ್ಲಿ ವಾಸಿಸುತ್ತಿದ್ದಳು. ಅವರು ಹೋಗಿ ಹುಲ್ದಳ ಜೊತೆಯಲ್ಲಿ ಮಾತನಾಡಿದರು.


ಆರೋನನ ಅಕ್ಕ ಮಿರ್ಯಾಮಳು ಪ್ರವಾದಿನಿಯಾಗಿದ್ದು ದಮ್ಮಡಿಯನ್ನು ಕೈಯಲ್ಲಿ ತೆಗೆದುಕೊಂಡಳು. ಮಿರ್ಯಾಮಳು ಮತ್ತು ಸ್ತ್ರೀಯರು ಹಾಡುವುದಕ್ಕೂ ಕುಣಿಯುವುದಕ್ಕೂ ಪ್ರಾರಂಭಿಸಿದರು.


ಈಗ ಕ್ರಿಸ್ತನಲ್ಲಿ ಯೆಹೂದ್ಯನು, ಗ್ರೀಕನು ಎಂಬ ವ್ಯತ್ಯಾಸವಿಲ್ಲ; ಸ್ವತಂತ್ರರು ಮತ್ತು ಗುಲಾಮರು ಎಂಬ ವ್ಯತ್ಯಾಸವಿಲ್ಲ; ಸ್ತ್ರೀಯರು ಮತ್ತು ಪುರುಷರು ಎಂಬ ವ್ಯತ್ಯಾಸವಿಲ್ಲ. ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿದ್ದೀರಿ.


ಆದರೆ ಸ್ತ್ರೀಯು ಪ್ರಾರ್ಥಿಸುವಾಗ ಅಥವಾ ಪ್ರವಾದಿಸುವಾಗ ತನ್ನ ತಲೆಗೆ ಮುಸುಕನ್ನು ಹಾಕಿಕೊಂಡಿರಬೇಕು. ಆಕೆಯು ತನ್ನ ತಲೆಗೆ ಮುಸುಕು ಹಾಕಿಲ್ಲದಿದ್ದರೆ, ಅದು ಆಕೆಯ ಶಿರಸ್ಸಾದ ಪುರುಷನಿಗೆ ಅಪಮಾನಕರವಾಗಿದೆ. ಅವಳಿಗೂ ತಲೆಯನ್ನು ಬೋಳಿಸಿಕೊಂಡಿರುವ ಸ್ತ್ರೀಗೂ ಯಾವ ವ್ಯತ್ಯಾಸವಿಲ್ಲ.


ಮದುವೆಯಾಗಿಲ್ಲದ ನಾಲ್ಕುಮಂದಿ ಹೆಣ್ಣುಮಕ್ಕಳು ಅವನಿಗಿದ್ದರು. ಅವರೆಲ್ಲರಿಗೂ ಪ್ರವಾದಿಸುವ ವರವಿತ್ತು.


ನಾನು ಮಾಡಿದ್ದನ್ನು ನಿಮಗೆ ಹೇಳುತ್ತೇನೆ, ನಾನು ನಿಮ್ಮ ಬಳಿಗೆ ಮೋಶೆ, ಆರೋನ್ ಮತ್ತು ಮಿರ್ಯಾಮಳನ್ನು ಕಳುಹಿಸಿದೆನು. ನಾನು ಈಜಿಪ್ಟ್ ದೇಶದಿಂದ ನಿಮ್ಮನ್ನು ಕರೆತಂದೆನು. ಗುಲಾಮತನದಿಂದ ನಿಮ್ಮನ್ನು ಬಿಡಿಸಿ ಸ್ವತಂತ್ರರನ್ನಾಗಿ ಮಾಡಿದೆನು.


ದೇವರೇ, ಟೋಬೀಯ ಮತ್ತ ಸನ್ಬಲ್ಲಟನ ವಿಚಾರವಾಗಿ ನಿನ್ನ ಜ್ಞಾಪಕದಲ್ಲಿರಿಸು. ಅವರು ಮಾಡಿದ ಕೆಟ್ಟಕಾರ್ಯಗಳನ್ನು ನೆನಪಿನಲ್ಲಿಡು. ಅದೇ ಸಮಯದಲ್ಲಿ ಪ್ರವಾದಿನಿಯಾದ ನೋವದ್ಯಳನ್ನು, ಇತರ ಪ್ರವಾದಿಗಳನ್ನು, ನನ್ನನ್ನು ಹೆದರಿಸುವವರನ್ನು ನೆನಪು ಮಾಡಿಕೊ.


ಸೀಸೆರನ ಹತ್ತಿರ ಒಂಭೈನೂರು ಕಬ್ಬಿಣದ ರಥಗಳಿದ್ದವು. ಅವನು ಇಪ್ಪತ್ತು ವರ್ಷಗಳ ಕಾಲ ಇಸ್ರೇಲರನ್ನು ತುಂಬ ಬಾಧಿಸಿದನು. ಆದ್ದರಿಂದ ಇಸ್ರೇಲರು ಸಹಾಯಕ್ಕಾಗಿ ಯೆಹೋವನಲ್ಲಿ ಮೊರೆಯಿಟ್ಟರು.


ಒಂದು ದಿನ, ಆಕೆ ದೆಬೋರಳ ಖರ್ಜೂರದ ಮರವೆಂದು ಪ್ರಸಿದ್ಧವಾದ ಮರದ ಕೆಳಗೆ ಕುಳಿತಿದ್ದಳು. ಆಗ ಇಸ್ರೇಲಿನ ಜನರು ಆಕೆಯ ಹತ್ತಿರ ಬಂದು, “ಸೀಸೆರನ ಬಗ್ಗೆ ಏನು ಮಾಡಬೇಕು?” ಎಂದು ಕೇಳಿದರು. ದೆಬೋರಳ ಖರ್ಜೂರಮರವು ಎಫ್ರಾಯೀಮ್ ಬೆಟ್ಟಪ್ರದೇಶದ ರಾಮಕ್ಕೂ ಬೇತೇಲಿಗೂ ಮಧ್ಯದಲ್ಲಿ ಇದೆ.


ದೇವರು ಹೀಗೆ ನುಡಿದನು: “ನರಪುತ್ರನೇ, ಇಸ್ರೇಲಿನ ಪ್ರವಾದಿನಿಯರನ್ನು ನೋಡು. ಆ ಪ್ರವಾದಿನಿಯರು ನನ್ನ ಪರವಾಗಿ ಮಾತಾಡುತ್ತಿಲ್ಲ. ಅವರು ತಮ್ಮ ಇಚ್ಛೆಯ ಪ್ರಕಾರ ಮಾತನಾಡುತ್ತಾರೆ. ಆದ್ದರಿಂದ ನೀನು ನನ್ನ ಪರವಾಗಿ ಅವರ ವಿರುದ್ಧವಾಗಿ ಮಾತನಾಡಬೇಕು. ಅವರಿಗೆ ಈ ಮಾತುಗಳನ್ನು ಹೇಳಬೇಕು.


ಇಸ್ರೇಲರು ಸೀಸೆರನನ್ನು ಸೋಲಿಸಿದ ದಿನ ದೆಬೋರಳು ಮತ್ತು ಅಬೀನೋವಮನ ಮಗನಾದ ಬಾರಾಕನು ಈ ಗೀತೆಯನ್ನು ಹಾಡಿದರು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು