Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 4:5 - ಪರಿಶುದ್ದ ಬೈಬಲ್‌

5 ಒಂದು ದಿನ, ಆಕೆ ದೆಬೋರಳ ಖರ್ಜೂರದ ಮರವೆಂದು ಪ್ರಸಿದ್ಧವಾದ ಮರದ ಕೆಳಗೆ ಕುಳಿತಿದ್ದಳು. ಆಗ ಇಸ್ರೇಲಿನ ಜನರು ಆಕೆಯ ಹತ್ತಿರ ಬಂದು, “ಸೀಸೆರನ ಬಗ್ಗೆ ಏನು ಮಾಡಬೇಕು?” ಎಂದು ಕೇಳಿದರು. ದೆಬೋರಳ ಖರ್ಜೂರಮರವು ಎಫ್ರಾಯೀಮ್ ಬೆಟ್ಟಪ್ರದೇಶದ ರಾಮಕ್ಕೂ ಬೇತೇಲಿಗೂ ಮಧ್ಯದಲ್ಲಿ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಕೆ ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿ ರಾಮಕ್ಕೂ ಬೇತೇಲಿಗೂ ಮಧ್ಯದಲ್ಲಿರುವ ದೆಬೋರಳ ಖರ್ಜೂರ ವೃಕ್ಷವೆಂದು ಹೆಸರುಗೊಂಡ ಮರದ ಕೆಳಗೆ ಕುಳಿತುಕೊಂಡಿರುತ್ತಿದ್ದಳು. ಇಸ್ರಾಯೇಲರು ನ್ಯಾಯತೀರ್ಪಿಗಾಗಿ ಆಕೆಯ ಬಳಿಗೆ ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಕೆ ಎಫ್ರಯಿಮ್ ಬೆಟ್ಟದ ಸೀಮೆಯಲ್ಲಿ ರಾಮಕ್ಕೂ ಬೇತೇಲಿಗೂ ಮಧ್ಯದಲ್ಲಿರುವ ‘ದೆಬೋರಳ ಖರ್ಜೂರ ವೃಕ್ಷ’ವೆಂದು ಹೆಸರುಗೊಂಡ ಮರದ ಕೆಳಗೆ ಆಸೀನಳಾಗಿರುತ್ತಿದ್ದಳು. ಇಸ್ರಯೇಲರು ನ್ಯಾಯತೀರ್ಪಿಗಾಗಿ ಆಕೆಯ ಬಳಿಗೆ ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಕೆಯು ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿ ರಾಮಕ್ಕೂ ಬೇತೇಲಿಗೂ ಮಧ್ಯದಲ್ಲಿರುವ ದೆಬೋರಳ ಖರ್ಜೂರವೃಕ್ಷವೆಂದು ಹೆಸರುಗೊಂಡ ಮರದ ಕೆಳಗೆ ಆಸೀನಳಾಗಿರುವಲ್ಲಿ ಇಸ್ರಾಯೇಲ್ಯರು ನ್ಯಾಯ ನಿರ್ಣಯಕ್ಕೋಸ್ಕರ ಆಕೆಯ ಬಳಿಗೆ ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ದೆಬೋರಳು ರಾಮಕ್ಕೂ ಬೇತೇಲಿಗೂ ಮಧ್ಯದಲ್ಲಿ ಎಫ್ರಾಯೀಮ್ ಬೆಟ್ಟದಲ್ಲಿ ಖರ್ಜೂರದ ಮರದ ಕೆಳಗೆ ವಾಸಿಸುತ್ತಿದ್ದಳು. ಇಸ್ರಾಯೇಲರು ಅವಳ ಬಳಿಗೆ ನ್ಯಾಯಕ್ಕಾಗಿ ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 4:5
18 ತಿಳಿವುಗಳ ಹೋಲಿಕೆ  

ಯೆಹೋವನು ಹೀಗೆನ್ನುತ್ತಾನೆ: “ರಾಮದಲ್ಲಿ ಅತಿ ದುಃಖದಿಂದ ಗೋಳಾಡುವ ಒಂದು ಧ್ವನಿಯು ಕೇಳಿಬರುತ್ತದೆ. ರಾಹೇಲಳು ತನ್ನ ಮಕ್ಕಳಿಗಾಗಿ ಗೋಳಾಡುವಳು. ಅವಳ ಮಕ್ಕಳು ಸತ್ತುಹೋದುದರಿಂದ ರಾಹೇಲಳು ಸಮಾಧಾನ ಹೊಂದುವದಕ್ಕೆ ಒಪ್ಪಲಾರಳು.”


ಎಲ್ಕಾನ ಎಂಬ ಒಬ್ಬ ಮನುಷ್ಯನಿದ್ದನು. ಅವನು ಎಫ್ರಾಯೀಮ್ ಬೆಟ್ಟದ ಸೀಮೆಯ ರಾಮಾತಯಿಮ್ ಎಂಬ ಊರಿನವನು. ಅವನು ಚೋಫೀಮ್ ಕುಟುಂಬದವನೂ ಯೆರೋಹಾಮನ ಮಗನೂ ಆಗಿದ್ದನು. ಯೆರೋಹಾಮನು ಎಲೀಹುವಿನ ಮಗ. ಎಲೀಹುವನು ತೋಹುವನ ಮಗ. ತೋಹುವನು ಚೂಫನ ಮಗ. ಇವರೆಲ್ಲ ಎಫ್ರಾಯೀಮ್ ಕುಲದವರು.


ಬೆನ್ಯಾಮೀನ್ ಗೋತ್ರದವರು ಹದಿನಾಲ್ಕು ಊರುಗಳನ್ನು ಮತ್ತು ಅವುಗಳ ಸುತ್ತಮುತ್ತಲಿನ ಎಲ್ಲಾ ಹೊಲಗದ್ದೆಗಳನ್ನು ಪಡೆದುಕೊಂಡರು. ಆ ಊರುಗಳು ಇಂತಿವೆ: ಗಿಬ್ಯೋನ್, ರಾಮಾ, ಬೇರೋತ್,


ಬೇತ್‌ಅರಾಬಾ, ಚೆಮಾರಯಿಮ್, ಬೇತೇಲ್,


ಲೂಜ್ ಎಂದು ಕರೆಯುವ ಬೇತೇಲಿನಿಂದ ಅಟಾರೋತಿನಲ್ಲಿ ಅರ್ಕೀಯರ ಸೀಮೆಗೆ ಹೋಗುತ್ತದೆ.


ಈ ಅಧಿಕಾರಿಗಳು ಜನರ ನ್ಯಾಯಾಧಿಪತಿಗಳಾಗಿದ್ದರು. ಜನರು ತಮ್ಮ ವ್ಯಾಜ್ಯಗಳನ್ನು ಈ ಅಧಿಕಾರಿಗಳ ಬಳಿಗೆ ಯಾವಾಗಲೂ ತರಬಹುದಾಗಿತ್ತು. ಮೋಶೆಯು ಬಹು ಪ್ರಾಮುಖ್ಯವಾದ ವ್ಯಾಜ್ಯಗಳನ್ನು ಮಾತ್ರ ತೀರ್ಮಾನಿಸುತ್ತಿದ್ದನು.


ಕೇಳು, ನಾನು ನಿನಗೆ ಕೆಲವು ಸಲಹೆಗಳನ್ನು ಕೊಡುವೆನು. ಯೆಹೋವನು ನಿನ್ನೊಡನೆ ಇರಲಿ ಎಂದು ನಾನು ಪ್ರಾರ್ಥಿಸುತ್ತೇನೆ. ನೀನು ಮಾಡಬೇಕಾದದ್ದು ಇವೇ: ಜನರ ವ್ಯಾಜ್ಯಗಳನ್ನು ನೀನು ಕೇಳುವುದನ್ನು ಮುಂದುವರಿಸಬೇಕು; ಈ ಸಂಗತಿಗಳ ಬಗ್ಗೆ ನೀನು ದೇವರೊಂದಿಗೆ ಮಾತಾಡುವುದನ್ನೂ ಮುಂದುವರಿಸಬೇಕು;


ಮರುದಿನ ಮೋಶೆಯು ಜನರಿಗೆ ನ್ಯಾಯನಿರ್ಣಯ ಮಾಡಲು ತನ್ನ ಆಸನದ ಮೇಲೆ ಕುಳಿತುಕೊಂಡನು. ಅಲ್ಲಿ ಬಹಳ ಜನರಿದ್ದರು, ಆದ್ದರಿಂದ ಅವರು ಮುಂಜಾನೆಯಿಂದ ಸಾಯಂಕಾಲದವರೆಗೆ ಅವನ ಸುತ್ತಲೂ ನಿಂತುಕೊಂಡಿದ್ದರು.


ರೆಬೆಕ್ಕಳ ದಾಸಿಯಾದ ದೆಬೋರಳು ಅಲ್ಲಿ ಸತ್ತುಹೋದಳು. ಆದ್ದರಿಂದ ಅವರು ಆಕೆಯನ್ನು ಬೇತೇಲಿನ ಬಳಿಯಲ್ಲಿರುವ ಏಲಾವೃಕ್ಷದ ಬುಡದಲ್ಲಿ ಸಮಾಧಿ ಮಾಡಿದರು. ಆ ಸ್ಥಳಕ್ಕೆ “ಅಲ್ಲೋನ್ ಬಾಕೂತ್” ಎಂದು ಹೆಸರಿಟ್ಟರು.


ಸಮುವೇಲನು ಮರಣಹೊಂದಿದನು. ಇಸ್ರೇಲರೆಲ್ಲರೂ ಒಟ್ಟಾಗಿ ಸೇರಿ ಸಮುವೇಲನ ಮರಣಕ್ಕಾಗಿ ಗೋಳಾಡಿದರು. ಅವರು ಸಮುವೇಲನನ್ನು ಅವನ ನಿವಾಸವಿದ್ದ ರಾಮದಲ್ಲಿ ಸಮಾಧಿಮಾಡಿದರು. ನಂತರ ದಾವೀದನು ಪಾರಾನ್ ಮರಳುಗಾಡಿಗೆ ಹೋದನು.


ಎಲ್ಕಾನನ ಕುಟುಂಬದವರು ಮರುದಿನ ಬೆಳಿಗ್ಗೆ ಎದ್ದು ಯೆಹೋವನನ್ನು ಆರಾಧಿಸಿ, ರಾಮಾತಯಿಮಿನಲ್ಲಿದ್ದ ತಮ್ಮ ಮನೆಗೆ ಹಿಂದಿರುಗಿದರು. ಎಲ್ಕಾನನು ಹನ್ನಳನ್ನು ಕೂಡಿದನು. ಯೆಹೋವನು ಹನ್ನಳನ್ನು ಜ್ಞಾಪಿಸಿಕೊಂಡನು.


ಅವರೊಳಗೆ ವ್ಯಾಜ್ಯವಿದ್ದರೆ ಅವರು ನನ್ನ ಬಳಿಗೆ ಬರುತ್ತಾರೆ. ಯಾವನು ನ್ಯಾಯವಂತನೆಂದು ನಾನು ತೀರ್ಮಾನಿಸುತ್ತೇನೆ. ಈ ರೀತಿಯಾಗಿ ನಾನು ದೇವರ ಕಟ್ಟಳೆಗಳನ್ನು ಮತ್ತು ಬೋಧನೆಗಳನ್ನು ಜನರಿಗೆ ಬೋಧಿಸುತ್ತೇನೆ” ಅಂದನು.


ಆಗ ದೆಬೋರಳೆಂಬ ಒಬ್ಬ ಪ್ರವಾದಿನಿ ಇದ್ದಳು. ಅವಳು ಲಪ್ಪೀದೋತ್ ಎಂಬವನ ಪತ್ನಿಯಾಗಿದ್ದಳು. ಅವಳು ಆಗ ಇಸ್ರೇಲಿನ ನ್ಯಾಯಾಧೀಶೆಯಾಗಿದ್ದಳು.


ದಾವೀದನ ಮತ್ತು ಅವನ ಜನರ ಬಗ್ಗೆ ಜನರು ತಿಳಿದಿದ್ದಾರೆಂಬುದು ಸೌಲನಿಗೆ ಗೊತ್ತಾಯಿತು. ಗಿಬೆಯ ಬೆಟ್ಟದ ಮೇಲಿನ ಮರದ ಕೆಳಗೆ ಸೌಲನು ಕುಳಿತಿದ್ದನು. ಸೌಲನ ಕೈಯಲ್ಲಿ ಭರ್ಜಿಯಿತ್ತು. ಸೌಲನ ಅಧಿಕಾರಿಗಳೆಲ್ಲ ಅವನ ಸುತ್ತಲೂ ನಿಂತಿದ್ದರು.


ಆದರೆ ಸಮುವೇಲನ ಮನೆಯು ರಾಮದಲ್ಲಿತ್ತು. ಆದ್ದರಿಂದ ಸಮುವೇಲನು ಯಾವಾಗಲೂ ರಾಮಕ್ಕೆ ಹಿಂತಿರುಗುತ್ತಿದ್ದನು. ಸಮುವೇಲನು ರಾಮದಿಂದ ಇಸ್ರೇಲರಿಗೆ ನ್ಯಾಯತೀರ್ಪು ನೀಡುತ್ತಾ ಆಳಿದನು; ರಾಮದಲ್ಲಿ ಯೆಹೋವನಿಗಾಗಿ ಯಜ್ಞವೇದಿಕೆಯೊಂದನ್ನು ನಿರ್ಮಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು