Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 4:7 - ಪರಿಶುದ್ದ ಬೈಬಲ್‌

7 ನಾನು ಯಾಬೀನನ ಸೇನಾಧಿಪತಿಯಾದ ಸೀಸೆರನನ್ನೂ ಅವನ ರಥಗಳನ್ನೂ ಅವನ ಸೈನ್ಯವನ್ನೂ ಕೀಷೋನ್ ನದಿಗೆ ಬರುವಂತೆ ಮಾಡುತ್ತೇನೆ. ಅಲ್ಲಿ ನೀನು ಸೀಸೆರನನ್ನು ಸೋಲಿಸುವಂತೆ ಮಾಡುತ್ತೇನೆ’ ಎಂದು ಹೇಳಿದ್ದಾನೆ” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾನು ಯಾಬೀನನ ಸೇನಾಧಿಪತಿಯಾದ ಸೀಸೆರನನ್ನೂ ಅವನ ಸೈನ್ಯರಥಗಳನ್ನೂ ನಿನ್ನ ಬಳಿಗೆ ಕೀಷೋನ್ ಹಳ್ಳಕ್ಕೆ ಎಳೆದುಕೊಂಡು ಬಂದು ನಿನ್ನ ಕೈಗೆ ಒಪ್ಪಿಸುವೆನು ಎಂದು ಆಜ್ಞಾಪಿಸಿದ್ದಾನೆ’” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಯಾಬೀನನ ಸೇನಾಪತಿ ಸೀಸೆರನನ್ನು ನಿನ್ನ ಬಳಿಗೆ ಕೀಷೋನ್ ಹಳ್ಳಕ್ಕೆ ಎಳೆದುಕೊಂಡು ಬರುವರು. ಅವನಿಗೆ ರಥಗಳೂ ಸೇನಾಪಡೆಗಳೂ ಇದ್ದರೂ ನಾನು ನಿನಗೆ ಜಯವನ್ನು ದೊರಕಿಸುವೆನು’,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಾನು ಯಾಬೀನನ ಸೇನಾಪತಿಯಾದ ಸೀಸೆರನನ್ನೂ ಅವನ ಸೈನ್ಯರಥಗಳನ್ನೂ ನಿನ್ನ ಬಳಿಗೆ ಕೀಷೋನ್ ಹಳ್ಳಕ್ಕೆ ಎಳೆದುಕೊಂಡು ಬಂದು ನಿನ್ನ ಕೈಗೆ ಒಪ್ಪಿಸುವೆನು ಎಂದು ಆಜ್ಞಾಪಿಸಿದ್ದಾನೆ ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಾನು ಯಾಬೀನನ ಸೇನಾಧಿಪತಿಯಾದ ಸೀಸೆರನನ್ನೂ, ಅವನ ರಥಗಳನ್ನೂ, ಅವನ ಸೈನ್ಯವನ್ನೂ ಕೀಷೋನ್ ಹಳ್ಳಕ್ಕೆ ಎಳೆದುಕೊಂಡು ಬಂದು, ನಿನ್ನ ಕೈಗೆ ಒಪ್ಪಿಸುವೆನು,’ ಎಂದು ಆಜ್ಞಾಪಿಸಿದನು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 4:7
17 ತಿಳಿವುಗಳ ಹೋಲಿಕೆ  

ಆಗ ಎಲೀಯನು, “ಬಾಳನ ಪ್ರವಾದಿಗಳನ್ನು ಹಿಡಿದು ತನ್ನಿ! ಅವರಲ್ಲಿ ಒಬ್ಬರಾದರೂ ತಪ್ಪಿಸಿಕೊಳ್ಳದಂತೆ ನೋಡಿಕೊಳ್ಳಿ!” ಎಂದು ಹೇಳಿದನು. ಪ್ರವಾದಿಗಳನ್ನೆಲ್ಲ ಜನರು ಹಿಡಿದುಕೊಂಡರು. ಎಲೀಯನು ಅವರನ್ನೆಲ್ಲಾ ಕೀಷೋನ್ ಬುಗ್ಗೆಗೆ ಎಳೆದುಕೊಂಡು ಹೋಗಿ ಕೊಂದು ಹಾಕಿದನು.


ಪೂರ್ವಕಾಲದಿಂದ ಪ್ರಸಿದ್ಧವಾದ ಕೀಷೋನ್ ನದಿಯು ಸೀಸೆರನ ಜನರನ್ನು ಕೊಚ್ಚಿಕೊಂಡು ಹೋಯಿತು. ನನ್ನ ಆತ್ಮವೇ, ಧೈರ್ಯದಿಂದ ಮುನ್ನುಗ್ಗು!


ನೀನು ನನಗೆ ಮಾಡಿದ ಒಳ್ಳೆಯ ಕಾರ್ಯಗಳ ಬಗ್ಗೆ ನನಗೆ ತಿಳಿಸಿರುವೆ. ಯೆಹೋವನು ನನ್ನನ್ನು ನಿನ್ನ ಬಳಿಗೆ ಕರೆದು ತಂದನು, ಆದರೆ ನೀನು ನನ್ನನ್ನು ಕೊಲ್ಲಲಿಲ್ಲ.


ನಾನು ನಿನಗೆ ಕೇಡುಮಾಡಲು ಇಚ್ಛಿಸುವುದಿಲ್ಲ! ನೀನು ಅದನ್ನು ನಿನ್ನ ಸ್ವಂತ ಕಣ್ಣುಗಳಿಂದ ನೋಡಬಹುದು! ಈ ದಿನ ಗವಿಯಲ್ಲಿ ಯೆಹೋವನು ನಿನ್ನನ್ನು ನನಗೆ ಒಪ್ಪಿಸಿದ್ದನು. ಆದರೆ ನಾನು ನಿನ್ನನ್ನು ಕೊಲ್ಲಲು ನಿರಾಕರಿಸಿದೆ. ನಾನು ನಿನಗೆ ದಯಾಳುವಾಗಿದ್ದೆ. ‘ನಾನು ನನ್ನ ಒಡೆಯನಿಗೆ ಕೇಡು ಮಾಡುವುದಿಲ್ಲ. ಸೌಲನು ಯೆಹೋವನಿಂದ ಅಭಿಷೇಕಿಸಲ್ಪಟ್ಟ ರಾಜ!’


ಆಗ ದೆಬೋರಳು ಬಾರಾಕನಿಗೆ, “ಈ ದಿನ ಯೆಹೋವನು ಸೀಸೆರನನ್ನು ಸೋಲಿಸಲು ನಿನಗೆ ಸಹಾಯ ಮಾಡುತ್ತಾನೆ. ಯೆಹೋವನು ನಿನಗಾಗಿ ದಾರಿಯನ್ನು ಸುಗಮಗೊಳಿಸಿದ್ದಾನೆಂಬುದು ನಿನಗೆ ಖಚಿತವಾಗಿ ಗೊತ್ತಿದೆ” ಎಂದು ಹೇಳಿದಳು. ಆದ್ದರಿಂದ ಬಾರಾಕನು ಹತ್ತು ಸಾವಿರ ಜನರೊಂದಿಗೆ ತಾಬೋರ್ ಬೆಟ್ಟದಿಂದ ಇಳಿದನು.


ಯೆಹೋವನು ಯೆಹೋಶುವನಿಗೆ, “ಆ ಸೈನ್ಯಗಳಿಗೆ ಹೆದರಬೇಡ, ನೀನು ಅವರನ್ನು ಸೋಲಿಸುವಂತೆ ಮಾಡುತ್ತೇನೆ. ಆ ಸೈನ್ಯದ ಯಾರೊಬ್ಬರೂ ನಿನ್ನನ್ನು ಸೋಲಿಸಲು ಸಾಧ್ಯವಿಲ್ಲ” ಎಂದು ಹೇಳಿದನು.


ನೀವು ಯಾವ ಸ್ಥಳದಲ್ಲಿ ಅಡಗಿಕೊಂಡಿದ್ದೀರೋ ಆ ಸ್ಥಳದಿಂದ ಹೊರಬಂದು ಪಟ್ಟಣವನ್ನು ಸ್ವಾಧೀನಪಡಿಸಿಕೊಳ್ಳಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಗೆಲ್ಲುವ ಸಾಮರ್ಥ್ಯವನ್ನು ದಯಪಾಲಿಸುತ್ತಾನೆ.


ಆದರೆ ಕೊಲ್ಲಬೇಕೆಂಬ ಉದ್ದೇಶವಿಲ್ಲದೆ ಹೊಡೆದಾಗ ಸತ್ತುಹೋದರೆ ಅದು ದೇವರ ಸಂಕಲ್ಪವೆಂದು ಪರಿಗಣಿಸಬೇಕು. ನಾನು ನೇಮಿಸಲಿರುವ ಆಶ್ರಯಸ್ಥಳಗಳಿಗೆ ಹೊಡೆದವನು ಓಡಿಹೋಗಿ ಸುರಕ್ಷಿತವಾಗಿ ಬದುಕಲಿ.


ನಾನು ಫರೋಹನ ಹೃದಯವನ್ನು ಕಠಿಣಪಡಿಸುವುದರಿಂದ ಅವನು ನಿಮ್ಮನ್ನು ಬೆನ್ನಟ್ಟುವನು. ಆದರೆ ನಾನು ಫರೋಹನನ್ನು ಮತ್ತು ಅವನ ಸೈನ್ಯವನ್ನು ಸೋಲಿಸುವೆನು. ಇದು ನನಗೆ ಗೌರವವನ್ನು ತರುವುದು. ಆಗ ನಾನೇ ಯೆಹೋವನೆಂದು ಈಜಿಪ್ಟಿನ ಜನರು ತಿಳಿದುಕೊಳ್ಳುವರು” ಎಂದು ಹೇಳಿದನು. ಇಸ್ರೇಲರು ದೇವರಿಗೆ ವಿಧೇಯರಾಗಿ ಆತನು ಹೇಳಿದ್ದನ್ನು ಮಾಡಿದರು.


ತಾವು ಶಕ್ತಿಶಾಲಿಗಳೆಂಬ ಭಾವನೆಯನ್ನು ಯೆಹೋವನು ಆ ಜನರಲ್ಲಿ ಹುಟ್ಟಿಸಿ ಅವರನ್ನು ಇಸ್ರೇಲರ ಮೇಲೆ ಯುದ್ಧಕ್ಕೆ ಬರಮಾಡಿದನು. ಯುದ್ಧದಲ್ಲಿ ಕರುಣೆಯಿಲ್ಲದೆ ಅವರನ್ನು ಸಂಹರಿಸಬೇಕೆಂಬುದು ಯೆಹೋವನ ಯೋಜನೆಯಾಗಿತ್ತು. ಯೆಹೋವನು ಮೋಶೆಗೆ ಹೇಳಿದ ರೀತಿಯಲ್ಲಿ ಯೆಹೋಶುವನು ಆ ಪಟ್ಟಣಗಳನ್ನು ನಾಶಮಾಡಲು ಇದರಿಂದ ಸಾಧ್ಯವಾಯಿತು.


ಆಗ ಯೆಹೋವನು ಯೆಹೋಶುವನಿಗೆ, “ಆ ಸೈನ್ಯಕ್ಕೆ ನೀನು ಹೆದರಬೇಡ; ನೀವು ಅವರನ್ನು ಸೋಲಿಸುವಂತೆ ನಾನು ಮಾಡುತ್ತೇನೆ. ನಾಳೆ ಇಷ್ಟು ಹೊತ್ತಿಗೆ ನೀವು ಅವರೆಲ್ಲರನ್ನು ಕೊಂದುಬಿಡುವಿರಿ. ನೀವು ಅವರ ಕುದುರೆಗಳ ಕಾಲುಗಳನ್ನು ಕತ್ತರಿಸುವಿರಿ; ಅವರ ರಥಗಳನ್ನು ಸುಟ್ಟುಹಾಕುವಿರಿ” ಎಂದನು.


ಆಗ ಬಾರಾಕನು ದೆಬೋರಳಿಗೆ, “ನೀನು ನನ್ನೊಂದಿಗೆ ಬಂದರೆ ನಾನು ಹೋಗುವೆನು; ನೀನು ನನ್ನೊಂದಿಗೆ ಬರದಿದ್ದರೆ ನಾನು ಹೋಗುವುದಿಲ್ಲ” ಎಂದನು.


ಇಸ್ರೇಲರು ಕ್ರಮಬದ್ಧವಾಗಿ ಹೆಜ್ಜೆಹಾಕುತ್ತಾ ಧೈರ್ಯದಿಂದ ಹೋಗುತ್ತಿದ್ದರು. ಆದರೆ ಈಜಿಪ್ಟಿನ ಅರಸನಾದ ಫರೋಹನ ಹೃದಯವನ್ನು ಯೆಹೋವನು ಕಠಿಣಗೊಳಿಸಿದ್ದರಿಂದ ಅವನು ಇಸ್ರೇಲರನ್ನು ಬೆನ್ನಟ್ಟಿದನು.


ಈಜಿಪ್ಟಿನವರು ನಿಮ್ಮನ್ನು ಬೆನ್ನಟ್ಟುವಂತೆ ನಾನು ಅವರ ಹೃದಯಗಳನ್ನು ಕಠಿಣಗೊಳಿಸುವುದರಿಂದ ನಾನು ಫರೋಹನಿಗಿಂತಲೂ ಅವನ ಎಲ್ಲಾ ರಾಹುತರುಗಳಿಗಿಂತಲೂ ರಥಗಳಿಗಿಂತಲೂ ಶಕ್ತಿಶಾಲಿ ಎಂಬುದನ್ನು ನಿಮಗೆ ತೋರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು