Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 5:13 - ಪರಿಶುದ್ದ ಬೈಬಲ್‌

13 “ಆಗ ಬದುಕಿಕೊಂಡಿದ್ದವರು ನಾಯಕರ ಬಳಿಗೆ ಹೋದರು. ಯೆಹೋವನ ಜನರೇ, ನನ್ನೊಂದಿಗೂ ಸೈನಿಕರೊಂದಿಗೂ ಬನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 “ಆಗ ಚದರಿಹೋದವರು ನಾಯಕರ ಬಳಿಗೆ ಕೂಡಿಬಂದರು. ಯೆಹೋವನ ಜನರು ವೀರರಾಗಿ ನನ್ನ ಸಹಾಯಕ್ಕೆ ನೆರೆದು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಚದರಿಹೋದವರು ಕೂಡಿಬಂದರು ನಾಯಕರ ಬಳಿಗೆ ಸರ್ವೇಶ್ವರನ ಶೂರಜನರು ವೀರರಂತೆ ನೆರೆದುಬಂದರು ನನ್ನ ಸಹಾಯಕ್ಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ಚದರಿಹೋದವರು ನಾಯಕರ ಬಳಿಗೆ ಕೂಡಿಬಂದರು; ಯೆಹೋವನ ಜನರು ವೀರರಾಗಿ ನನ್ನ ಸಹಾಯಕ್ಕೆ ನೆರೆದು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ಆಗ ಉಳಿದವನನ್ನು ಅವರು ಜನರಲ್ಲಿ ಶ್ರೇಷ್ಠರಾದವರ ಮೇಲೆ ಆಳುವಂತೆ ಮಾಡಿದರು. ಯೆಹೋವ ದೇವರ ಜನರು ನನ್ನ ಸಹಾಯಕ್ಕಾಗಿ ಬಂದು, ಪರಾಕ್ರಮಶಾಲಿಗಳ ವಿರುದ್ಧ ಯುದ್ಧಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 5:13
11 ತಿಳಿವುಗಳ ಹೋಲಿಕೆ  

ಆಲಿಸು! ಅಲ್ಲಿ ಸೈತಾನನ ಗುಂಪಿಗೆ ಸೇರಿದವರಿದ್ದಾರೆ. ಆ ಜನರು ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುತ್ತಾರೆ. ಆದರೆ ಅದು ಸುಳ್ಳು. ಅವರು ನಿಜವಾದ ಯೆಹೂದ್ಯರಲ್ಲ. ಆ ಜನರು ನಿನ್ನ ಮುಂದೆ ಬಂದು ನಿನ್ನ ಪಾದಗಳಿಗೆ ಅಡ್ಡಬಿದ್ದು ನಮಸ್ಕರಿಸುವಂತೆ ಮಾಡುತ್ತೇನೆ. ನಾನು ಪ್ರೀತಿಸಿದ ಜನರು ನೀವೇ ಎಂಬುದನ್ನು ಆಗ ಅವರು ತಿಳಿದುಕೊಳ್ಳುತ್ತಾರೆ.


ಆದರೆ ನಮಗೋಸ್ಕರ ತನ್ನ ಪ್ರೀತಿಯನ್ನು ತೋರಿಸಿದ ದೇವರ ಮೂಲಕವಾಗಿ ಈ ಎಲ್ಲಾ ಸಂಗತಿಗಳಲ್ಲಿ ನಮಗೆ ಪೂರ್ಣ ಜಯವಿದೆ.


“ಆಗ ಬೇರೆ ಮರಗಳಿಗೆ, ನಾನು ದೊಡ್ಡ ಮರಗಳನ್ನು ನೆಲಕ್ಕೆ ಬೀಳಿಸುವೆನೆಂತಲೂ, ಚಿಕ್ಕ ಮರಗಳನ್ನು ಉದ್ದವಾಗಿ ಬೆಳೆಯುವಂತೆ ಮಾಡುತ್ತೇನೆಂತಲೂ ಗೊತ್ತಾಗುವದು. ಹಸಿರು ಮರಗಳು ಒಣಗಿಹೋಗುವಂತೆಯೂ ಒಣಗಿಹೋದ ಮರಗಳು ಹಸಿರಾಗಿ ಬೆಳೆಯುವಂತೆಯೂ ನಾನು ಮಾಡುತ್ತೇನೆ. ನಾನೇ ಯೆಹೋವನು. ಇದನ್ನು ನಾನೇ ಹೇಳಿದ್ದೇನೆ; ಮತ್ತು ನಾನೇ ಇದನ್ನು ನೆರವೇರಿಸುವೆನು.”


ನ್ಯಾಯಾಧಿಪತಿಯು ದೇವರೇ. ಯಾರನ್ನು ಉದ್ಧಾರಮಾಡಬೇಕು ಎಂಬ ನಿರ್ಣಯವನ್ನು ತೆಗೆದುಕೊಳ್ಳುವಾತನು ದೇವರೇ. ದೇವರು ಒಬ್ಬನನ್ನು ಉನ್ನತಿಗೇರಿಸುವನು; ಮತ್ತೊಬ್ಬನನ್ನು ಅವನತಿಗಿಳಿಸುವನು.


ಅವರು ಕುರಿಗಳಂತಿದ್ದಾರೆ. ಸಮಾಧಿಯೇ ಅವರ ಕೊಟ್ಟಿಗೆ. ಮರಣವೇ ಅವರ ಕುರುಬ. ಒಂದು ಮುಂಜಾನೆ, ಅವರ ದೇಹಗಳು ಅವರ ಮನೆಗಳಿಂದ ದೂರವಾಗಿ ಸಮಾಧಿಯಲ್ಲಿ ಕೊಳೆಯುತ್ತಿರಲು, ನೀತಿವಂತರು ಜಯಶಾಲಿಗಳಾಗಿರುವರು.


“ಏಳು, ಏಳು ದೆಬೋರಳೇ! ಏಳು, ಎದ್ದೇಳು, ಒಂದು ಗೀತೆಯನ್ನು ಹಾಡು! ಬಾರಾಕನೇ, ಏಳು! ಅಬೀನೋವಮನ ಮಗನೇ, ಹೋಗು; ನಿನ್ನ ಶತ್ರುಗಳನ್ನು ಸೆರೆ ಹಿಡಿದುಕೊ!


“ಅಮಾಲೇಕ್ ಪರ್ವತ ಪ್ರದೇಶದಲ್ಲಿ ವಾಸಮಾಡುತ್ತಿದ್ದ ಎಫ್ರಾಯೀಮ್ಯರು ಬಂದರು; ನಿನ್ನನ್ನೂ ನಿನ್ನ ಜನರನ್ನೂ ಅನುಸರಿಸುತ್ತಿದ್ದ ಬೆನ್ಯಾಮೀನ್ಯರೂ ಬಂದರು; ಮಾಕೀರನ ಕುಲದಿಂದ ನಾಯಕರು ಬಂದರು; ಜೆಬುಲೂನ್ ಕುಲದಿಂದ ನಾಯಕರು ಕಂಚಿನ ದೊಣ್ಣೆಗಳೊಡನೆ ಬಂದರು.


“ಮೇರೋಜ್ ಊರಿಗೆ ಶಾಪಹಾಕಿರಿ; ಅಲ್ಲಿಯ ಜನರಿಗೆ ಶಾಪಹಾಕಿರಿ; ಏಕೆಂದರೆ ಅವರು ಯೆಹೋವನ ಸಹಾಯಕ್ಕೆ ತಮ್ಮ ಸೈನ್ಯದೊಂದಿಗೆ ಬರಲಿಲ್ಲ” ಎಂದನು ಯೆಹೋವನ ದೂತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು