Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 5:2 - ಪರಿಶುದ್ದ ಬೈಬಲ್‌

2 “ಇಸ್ರೇಲರು ಯುದ್ಧ ಸನ್ನದ್ಧರಾಗುತ್ತಿದ್ದಾರೆ; ಜನರು ಸ್ವಇಚ್ಛೆಯಿಂದ ಯುದ್ಧಕ್ಕೆ ಹೋಗಲು ಒಪ್ಪಿದ್ದಾರೆ; ಯೆಹೋವನಿಗೆ ಸ್ತೋತ್ರವಾಗಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಇಸ್ರಾಯೇಲರಲ್ಲಿ ಸೇನಾ ನಾಯಕರು ಎದ್ದಿದ್ದಾರೆ; ಜನರು ಸ್ವಇಚ್ಛೆಯಿಂದ ಸೈನ್ಯದಲ್ಲಿ ಸೇರಿದ್ದಾರೆ, ಯೆಹೋವನನ್ನು ಕೊಂಡಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಪಣತೊಟ್ಟಿದ್ದರು ಇಸ್ರಯೇಲಿನ ವೀರರು ಸೈನ್ಯಸೇರಿದ್ದಾರೆ ಸ್ವೇಚ್ಛೆಯಿಂದಾ ಜನರು ಮಾಡಿರಿ ನೀವು ಸರ್ವೇಶ್ವರನಾ ಗುಣಗಾನವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇಸ್ರಾಯೇಲ್ಯರಲ್ಲಿ ಸೇನಾನಾಯಕರು ಎದ್ದಿದ್ದಾರೆ; ಜನರು ಸ್ವೇಚ್ಫೆಯಿಂದ ಸೈನ್ಯದಲ್ಲಿ ಸೇರಿದ್ದಾರೆ, ಯೆಹೋವನನ್ನು ಕೊಂಡಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಇಸ್ರಾಯೇಲಿನ ನಾಯಕರು ಮುನ್ನಡೆದಾಗ, ಜನರು ಸ್ವಇಚ್ಛೆಯಿಂದ ಅವರನ್ನು ಹಿಂಬಾಲಿಸಿದಾಗ ಯೆಹೋವ ದೇವರನ್ನು ಸ್ತುತಿಸಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 5:2
23 ತಿಳಿವುಗಳ ಹೋಲಿಕೆ  

“ನನ್ನ ಹೃದಯವು ಇಸ್ರೇಲಿನ ಸೇನಾಧಿಪತಿಗಳ ಸಂಗಡವಿದೆ. ಈ ಸೇನಾಧಿಪತಿಗಳು ಇಸ್ರೇಲಿಗಾಗಿ ಯುದ್ಧಮಾಡಲು ಸ್ವಇಚ್ಛೆಯಿಂದ ಬಂದರು. ಯೆಹೋವನಿಗೆ ಸ್ತೋತ್ರವಾಗಲಿ.


ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ ಜನರು ತಾವಾಗಿಯೇ ನಿನ್ನ ಸೈನ್ಯವನ್ನು ಸೇರಿಕೊಳ್ಳುವರು. ಅವರು ಸಮವಸ್ತ್ರಗಳನ್ನು ಧರಿಸಿಕೊಂಡು ಪ್ರತಿ ಮುಂಜಾನೆ ಸೇರಿಬರುವರು. ಆ ಯುವಕರು ನಿನಗೆ ಉದಯಕಾಲದ ಇಬ್ಬನಿಯಂತಿರುವರು.


ಅಮಸ್ಯನು ಎರಡು ಲಕ್ಷ ಸೈನಿಕರಿಗೆ ಸೇನಾಪತಿಯಾಗಿದ್ದನು. ಅಮಸ್ಯನು ಜಿಕ್ರಿಯ ಮಗ. ಯೆಹೋವನ ಸೇವೆಮಾಡುವದಕ್ಕೆ ಅವನು ತನ್ನನ್ನು ಒಪ್ಪಿಸಿಕೊಟ್ಟಿದ್ದನು.


ಹೌದು, ಆತನಿಗೆ ಮೆಚ್ಚಿಕೆಕರವಾದ ಕಾರ್ಯಗಳನ್ನು ಮಾಡಬೇಕೆಂಬ ಅಪೇಕ್ಷೆಯನ್ನು ಆತನೇ ನಿಮ್ಮಲ್ಲಿ ಹುಟ್ಟಿಸುತ್ತಾನೆ ಅಲ್ಲದೆ ಅವುಗಳನ್ನು ಮಾಡಲು ಆತನೇ ನಿಮಗೆ ಶಕ್ತಿಯನ್ನು ಕೊಡುತ್ತಾನೆ.


ಆತನ ತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ. ನಮ್ಮ ದೇವರು ವೇಶ್ಯೆಯನ್ನು ದಂಡಿಸಿದನು. ಅವಳ ಲೈಂಗಿಕ ಪಾಪದಿಂದಲೇ ಲೋಕವು ಕೆಟ್ಟುಹೋಯಿತು. ಆತನು ತನ್ನ ಸೇವಕರ ರಕ್ತಕ್ಕೆ ಪ್ರತಿಯಾಗಿ ಆ ವೇಶ್ಯೆಯನ್ನು ದಂಡಿಸಿದನು.”


ಪರಲೋಕವೇ, ಇದರಿಂದ ನೀನೂ ಸಂತೋಷಪಡು! ದೇವರ ಪರಿಶುದ್ಧ ಜನರೇ, ಅಪೊಸ್ತಲರೇ, ಪ್ರವಾದಿಗಳೇ, ನೀವೂ ಸಂತೋಷಪಡಿರಿ! ಅವಳು ನಿಮಗೆ ಮಾಡಿದ ಕೇಡುಗಳಿಗಾಗಿ ದೇವರು ಅವಳನ್ನು ದಂಡಿಸಿದನು.’”


ಆದರೆ ಈ ವಿಷಯದಲ್ಲಿ ನಿನ್ನ ಒಪ್ಪಿಗೆ ಪಡೆಯದೆ ನಿರ್ಧಾರ ತೆಗೆದುಕೊಳ್ಳಲು ನನಗೆ ಇಷ್ಟವಿಲ್ಲ. ಏಕೆಂದರೆ ನೀನು ಮಾಡುವ ಒಳ್ಳೆಕಾರ್ಯವು ಮನಃ ಪೂರ್ವಕವಾಗಿರಬೇಕೇ ಹೊರತು ಬಲತ್ಕಾರದಿಂದಾಗಕೂಡದು.


ಪ್ರತಿಯೊಬ್ಬ ವ್ಯಕ್ತಿಯು ತನ್ನ ಹೃದಯದಲ್ಲಿ ಎಷ್ಟನ್ನು ನಿರ್ಧರಿಸಿಕೊಂಡಿದ್ದಾನೋ ಅಷ್ಟನ್ನೇ ಕೊಡಬೇಕು. ಯಾವನೂ ದುಃಖದಿಂದ ಕೊಡಬಾರದು. ಅಲ್ಲದೆ ಯಾವನೂ ಒತ್ತಾಯದ ದೆಸೆಯಿಂದ ಕೊಡಬಾರದು. ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿಸುತ್ತಾನೆ.


ನೀವು ಕೊಡಬೇಕೆಂದು ಕೊಟ್ಟರೆ ನಿಮ್ಮ ದಾನವು ಸ್ವೀಕೃತವಾಗುವುದು. ನಿಮ್ಮ ದಾನದ ಮೌಲ್ಯಮಾಪನವು ನೀವು ಏನನ್ನು ಹೊಂದಿದ್ದೀರಿ ಎಂಬುದರ ಮೇಲೆಯೇ ಹೊರತು ನೀವು ಏನನ್ನು ಹೊಂದಿಲ್ಲ ಎಂಬುದರ ಮೇಲೆ ಆಧಾರಗೊಂಡಿಲ್ಲ.


ನಾನು ನನ್ನ ಸ್ವಂತ ಇಷ್ಟದಿಂದ ಸುವಾರ್ತೆಯನ್ನು ಬೋಧಿಸುವುದಾಗಿದ್ದರೆ, ಬಹುಮಾನಕ್ಕೆ ಅರ್ಹನಾಗಿದ್ದೇನೆ. ಆದರೆ ಬೇರೊಂದನ್ನು ಆರಿಸಿಕೊಳ್ಳಲು ನನಗೆ ಅವಕಾಶವೇ ಇಲ್ಲ. ನಾನು ಸುವಾರ್ತೆಯನ್ನು ಸಾರಲೇಬೇಕು. ಇದು ನನಗೆ ಕೊಡಲ್ಪಟ್ಟಿರುವ ಕರ್ತವ್ಯವಷ್ಟೆ.


ಆತನು ಫರೋಹನನ್ನೂ ಅವನ ಸೈನ್ಯವನ್ನೂ ಕೆಂಪು ಸಮುದ್ರದಲ್ಲಿ ಮುಳುಗಿಸಿದನು. ಆತನ ಪ್ರೀತಿ ಶಾಶ್ವತವಾದದ್ದು.


ಚೀಯೋನೇ, ಕೇಳಿ ಸಂತೋಷಪಡು! ಯೆಹೂದದ ಪಟ್ಟಣಗಳೇ, ಆನಂದಿಸಿರಿ. ಯಾಕೆಂದರೆ ಯೆಹೋವನ ತೀರ್ಪುಗಳು ನ್ಯಾಯವಾಗಿವೆ.


ಯೆಹೋವನೇ, ನೀನು ಸೇಡು ತೀರಿಸಿಕೊಳ್ಳುವ ದೇವರು! ಸೇಡು ತೀರಿಸಿಕೊಳ್ಳುವ ದೇವರೇ ಪ್ರತ್ಯಕ್ಷನಾಗು!


ನಿನ್ನ ನ್ಯಾಯನಿರ್ಣಯಗಳಿಂದ ಚೀಯೋನ್ ಪರ್ವತವು ಹರ್ಷಿಸಲಿ; ಯೆಹೂದದ ಊರುಗಳು ಉಲ್ಲಾಸಿಸಲಿ.


ದೇವರು ನನ್ನ ವೈರಿಗಳನ್ನು ದಂಡಿಸಿ ಅವರನ್ನು ನನಗೆ ಅಧೀನಪಡಿಸಿದ್ದಾನೆ.


ಕೆಲವರು ಜೆರುಸಲೇಮಿನಲ್ಲಿ ವಾಸಿಸುವುದಕ್ಕೆ ತಾವೇ ಮುಂದೆ ಬಂದರು. ಉಳಿದವರು ತಾವಾಗಿಯೇ ಮುಂದೆ ಬಂದವರನ್ನು ವಂದಿಸಿ ಆಶೀರ್ವದಿಸಿದರು.


“ಭೂಲೋಕವೆಲ್ಲಾ ದೇವಜನರಿಗಾಗಿ ಸಂತೋಷಿಸುವದು; ಯಾಕೆಂದರೆ ಆತನು ಅವರನ್ನು ಸಾಯಿಸುವನು; ತನ್ನ ಸೇವಕರನ್ನು ಸಂಹರಿಸುವವರನ್ನು ಶಿಕ್ಷಿಸುವನು; ತನ್ನ ವೈರಿಗಳಿಗೆ ತಕ್ಕ ದಂಡನೆ ಕೊಡುವನು. ತನ್ನ ದೇಶವನ್ನೂ ತನ್ನ ಜನರನ್ನೂ ಶುದ್ಧಿ ಮಾಡುವನು.”


ಅದರ ಒಳ್ಳೆಯ ಭಾಗವನ್ನು ತನಗೆ ಆರಿಸಿಕೊಳ್ಳುವನು. ರಾಜನ ಭಾಗವನ್ನು ತಾನಿಟ್ಟುಕೊಳ್ಳುವನು. ಜನರ ನಾಯಕರು ಆತನ ಬಳಿಗೆ ಬರುವರು. ಯೆಹೋವನು ಒಳ್ಳೆಯದೆಂದು ಹೇಳುವ ಕಾರ್ಯಗಳನ್ನು ಮಾಡುವನು. ಇಸ್ರೇಲ್ ಜನರಿಗೆ ಸರಿಯಾದ ಕಾರ್ಯವನ್ನೇ ಮಾಡುವನು.”


ನನ್ನ ಆತ್ಮವೇ, ಯೆಹೋವನನ್ನು ಕೊಂಡಾಡು! ಆತನ ಉಪಕಾರಗಳಲ್ಲಿ ಒಂದನ್ನೂ ಮರೆಯಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು