Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 5:28 - ಪರಿಶುದ್ದ ಬೈಬಲ್‌

28 “ಸೀಸೆರನ ತಾಯಿ ಕಿಟಿಕಿಯ ಮೂಲಕ ನೋಡಿದಳು; ಆಕೆಯು ತೆರೆಯ ಮೂಲಕ ನೋಡಿ ಕೂಗಿದಳು. ‘ಸೀಸೆರನ ರಥಾಗಮನಕ್ಕೆ ಇಷ್ಟು ತಡವೇಕೆ? ಅವನ ರಥದ ಕುದುರೆಗಳ ಧ್ವನಿ ಬರಲು ಇಷ್ಟು ತಡವೇಕೆ?’ ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 “ಸೀಸೆರನ ತಾಯಿಯು ಕಿಟಿಕಿಯಿಂದ ನೋಡಿದಳು; ಸೀಸೆರನ ತಾಯಿಯು ಕಿಟಿಕಿಯ ಜಾಲರಿಗಳಿಂದ ಕೂಗಿದಳು. ‘ಅವನ ರಥವು ಬರುವುದಕ್ಕೆ ಏಕೆ ಇಷ್ಟುಹೊತ್ತಾಯಿತು! ಅವನ ಕುದುರೆಗಳ ಗೊರಸುಗಳಿಗೆ ಇಷ್ಟು ಸಾವಕಾಶವೇಕೆ’ ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಸೀಸೆರನ ತಾಯಿ ಇಣುಕಿ ನೋಡಿದಳು ಕಿಟಕಿಯಿಂದ ಕೂಗಿದಳು ಆ ಕಿಟಕಿಯ ಜಾಲರಿಗಳಿಂದ; ‘ಇಷ್ಟು ಹೊತ್ತಾಗಬೇಕೆ ರಥ ಬರುವುದಕ್ಕೆ? ಕುದುರೆಗಳ ಕಾಲುಗಳಿಗೆ ಇಷ್ಟು ಸಾವಕಾಶವೇಕೆ?’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಸೀಸೆರನ ತಾಯಿಯು ಕಿಟಿಕಿಯಿಂದ ನೋಡಿದಳು; ಸೀಸೆರನ ತಾಯಿಯು ಕಿಟಿಕಿಯ ಜಾಲರಿಗಳಿಂದ ಕೂಗಿದಳು. ಅವನ ರಥವು ಬರುವದಕ್ಕೆ ಇಷ್ಟು ಹೊತ್ತೇಕಾಯಿತು! ಅವನ ಕುದುರೆಗಳ ಕಾಲುಗಳಿಗೆ ಇಷ್ಟು ಸಾವಕಾಶವೇಕೆ ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 “ಸೀಸೆರನ ತಾಯಿ ಕಿಟಿಕಿಯಿಂದ ನೋಡಿದಳು, ಕಿಂಡಿಯಿಂದ ಕೂಗಿದಳು, ‘ಅವನ ರಥವು ಬರುವುದಕ್ಕೆ ಇಷ್ಟು ತಡವಾದದ್ದೇನು? ಅವನ ರಥಗಳ ಗಾಲಿಗಳು ಹಿಂದುಳಿದಿರುವುದೇನು?’

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 5:28
8 ತಿಳಿವುಗಳ ಹೋಲಿಕೆ  

ಸಹೋದರ ಸಹೋದರಿಯರೇ, ತಾಳ್ಮೆಯಿಂದಿರಿ, ಪ್ರಭುವಾದ ಯೇಸು ಪ್ರತ್ಯಕ್ಷನಾಗುತ್ತಾನೆ. ಆದ್ದರಿಂದ ಅಲ್ಲಿಯವರೆಗೆ ತಾಳ್ಮೆಯಿಂದಿರಿ. ತನ್ನ ಅಮೂಲ್ಯ ಬೆಳೆಯು ಭೂಮಿಯಿಂದ ಬರುವ ತನಕ ರೈತನು ತಾಳ್ಮೆಯಿಂದ ಕಾಯುತ್ತಾನೆ. ಮೊದಲ ಹಾಗೂ ಕೊನೆಯ ಮಳೆಯು ತನ್ನ ಬೆಳೆಯ ಮೇಲೆ ಸುರಿಯುವ ತನಕ ರೈತನು ತಾಳ್ಮೆಯಿಂದ ಕಾದಿರುತ್ತಾನೆ.


ನನ್ನ ಪ್ರಿಯನೇ, ತ್ವರೆಪಡು. ಸುಗಂಧಸಸ್ಯ ಪರ್ವತಗಳ ಮೇಲೆ ಸಾರಂಗದಂತೆಯೂ ಪ್ರಾಯದ ಜಿಂಕೆಯಂತೆಯೂ ಇರು.


ನನ್ನ ಪ್ರಿಯನು ಸಾರಂಗದಂತೆಯೂ ಪ್ರಾಯದ ಜಿಂಕೆಯಂತೆಯೂ ಇದ್ದಾನೆ. ಅಗೋ, ಅವನು ನಮ್ಮ ಗೋಡೆಯ ಆಚೆ ನಿಂತಿದ್ದಾನೆ; ತಡಕೆಗಳಿಂದ ಇಣಿಕಿಹಾಕುತ್ತಿದ್ದಾನೆ; ಕಿಟಕಿಗಳಿಂದ ನೋಡುತ್ತಿದ್ದಾನೆ.


ಒಂದು ದಿನ ನಾನು ನನ್ನ ಮನೆಯ ಕಿಟಿಕಿಯಿಂದ ನೋಡಿದಾಗ


ಒಂದು ದಿನ, ಅಹಜ್ಯನು ಸಮಾರ್ಯದ ತನ್ನ ಮನೆಯ ಮಾಳಿಗೆಯ ಮೇಲಿದ್ದನು. ಅಹಜ್ಯನು ಮನೆಯ ಮೇಲಿನ ಮರದ ಕಂಬಗಳ ಮೂಲಕ ಕೆಳಕ್ಕೆ ಬಿದ್ದನು. ಅವನಿಗೆ ಬಹಳ ಗಾಯಗಳಾದವು. ಅಹಜ್ಯನು ಸಂದೇಶಕರನ್ನು ಕರೆದು ಅವರಿಗೆ, “ಎಕ್ರೋನಿನ ದೇವರಾದ ಬಾಳ್ಜೆಬೂಬನ ಅರ್ಚಕರ ಬಳಿಗೆ ಹೋಗಿ, ನನ್ನ ಗಾಯಗಳು ಗುಣವಾಗುತ್ತವೆಯೇ ಎಂಬುದನ್ನು ಅವರಿಂದ ತಿಳಿದುಕೊಳ್ಳಿ” ಎಂದು ಹೇಳಿದನು.


ಬಾರಾಕ ಮತ್ತು ಅವನ ಜನರು ಸೀಸೆರನ ಮೇಲೆ ಧಾಳಿ ಮಾಡಿದರು. ಯೆಹೋವನು ಸೀಸೆರನಲ್ಲಿ ಮತ್ತು ಅವನ ಸೈನ್ಯದಲ್ಲಿ ಮತ್ತು ಅವನ ರಥಗಳಲ್ಲಿ ಗಲಿಬಿಲಿ ಉಂಟುಮಾಡಿದನು. ಏನು ಮಾಡಬೇಕೆಂದು ಅವರಿಗೆ ತಿಳಿಯಲಿಲ್ಲ. ಬಾರಾಕ ಮತ್ತು ಅವನ ಸೈನಿಕರು ಸೀಸೆರನ ಸೈನ್ಯವನ್ನು ಸೋಲಿಸಿದರು. ಆದರೆ ಸೀಸೆರನು ತನ್ನ ರಥವನ್ನು ಬಿಟ್ಟು ಓಡಿಹೋದನು.


ಅವನು ಯಾಯೇಲಳ ಪಾದಗಳ ಬಳಿಯಲ್ಲಿ ಬಗ್ಗಿಕೊಂಡು ಉರುಳಿಬಿದ್ದನು; ಅವನು ಅವಳ ಪಾದಗಳ ಬಳಿಯಲ್ಲಿ ಕುಸಿದುಬಿದ್ದನು. ಸೀಸೆರನು ಕುಸಿದುಬಿದ್ದಲ್ಲಿಯೇ ಸತ್ತನು.


“ಅವಳ ಸೇವಕಿಯರಲ್ಲಿ ಅತಿಬುದ್ಧಿವಂತಳು ಹೀಗೆ ಉತ್ತರಿಸಿದಳು. ಹೌದು, ಸೇವಕಿಯು ಉತ್ತರಿಸಿದಳು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು