Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:20 - ಪರಿಶುದ್ದ ಬೈಬಲ್‌

20 ದೇವದೂತನು ಗಿದ್ಯೋನನಿಗೆ, “ಆ ಮಾಂಸವನ್ನೂ ಹುಳಿಯಿಲ್ಲದ ಆ ರೊಟ್ಟಿಯನ್ನೂ ಆ ಕಲ್ಲಿನ ಮೇಲೆ ಇಡು. ಆಮೇಲೆ ಆ ನೀರನ್ನು ಅದರ ಮೇಲೆ ಸುರಿ” ಎಂದನು. ದೇವದೂತನು ಹೇಳಿದಂತೆಯೇ ಗಿದ್ಯೋನನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಗ ದೇವದೂತನು ಅವನಿಗೆ, “ಮಾಂಸವನ್ನೂ, ರೊಟ್ಟಿಗಳನ್ನೂ ಆ ಬಂಡೆಯ ಮೇಲಿಟ್ಟು ರಸವನ್ನು ಅದರ ಮೇಲೆ ಹೊಯ್ಯಿ” ಅನ್ನಲು ಅವನು ಹಾಗೆಯೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆಗ ದೇವದೂತನು ಅವನಿಗೆ, “ಮಾಂಸವನ್ನೂ ರೊಟ್ಟಿಗಳನ್ನೂ ಆ ಬಂಡೆಯ ಮೇಲಿಟ್ಟು ರಸವನ್ನು ಹೊಯ್ಯಿ” ಎನ್ನಲು ಅವನು ಹಾಗೆಯೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆಗ ದೇವದೂತನು ಅವನಿಗೆ - ಮಾಂಸವನ್ನೂ ರೊಟ್ಟಿಗಳನ್ನೂ ಆ ಬಂಡೆಯ ಮೇಲಿಟ್ಟು ರಸವನ್ನು ಹೊಯ್ಯಿ ಅನ್ನಲು ಅವನು ಹಾಗೆಯೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ದೇವದೂತನು ಅವನಿಗೆ, “ನೀನು ಮಾಂಸವನ್ನೂ, ಹುಳಿಯಿಲ್ಲದ ರೊಟ್ಟಿಗಳನ್ನೂ ತೆಗೆದುಕೊಂಡು ಈ ಬಂಡೆಯ ಮೇಲೆ ಇಟ್ಟು, ರಸವನ್ನು ಸುರಿ,” ಎಂದನು. ಅವನು ಹಾಗೆಯೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:20
7 ತಿಳಿವುಗಳ ಹೋಲಿಕೆ  

ಮಾನೋಹನು ಒಂದು ಮರಿಹೋತವನ್ನೂ ಧಾನ್ಯದ್ರವ್ಯವನ್ನೂ ತಂದು ಬಂಡೆಯ ಮೇಲಿಟ್ಟು ಯೆಹೋವನಿಗೆ ಸಮರ್ಪಿಸಿದನು.


ಗಿದ್ಯೋನನು ಒಳಗೆ ಹೋಗಿ ಒಂದು ಆಡಿನ ಮರಿಯನ್ನು ಬೇಯಿಸಿದನು. ಅವನು ಸುಮಾರು ಇಪ್ಪತ್ತು ಸೇರಿನಷ್ಟು ಹಿಟ್ಟನ್ನು ತೆಗೆದುಕೊಂಡು ಹುಳಿಯಿಲ್ಲದ ರೊಟ್ಟಿಯನ್ನು ಮಾಡಿದನು. ತರುವಾಯ ಗಿದ್ಯೋನನು ಆ ಮಾಂಸವನ್ನು ಒಂದು ಬುಟ್ಟಿಯಲ್ಲಿಟ್ಟನು, ಮಾಂಸ ಬೇಯಿಸಿದ ನೀರನ್ನು ಒಂದು ಪಾತ್ರೆಯಲ್ಲಿ ಹಾಕಿದನು. ಗಿದ್ಯೋನನು ಆ ಮಾಂಸವನ್ನೂ ಮಾಂಸ ಬೇಯಿಸಿದ ನೀರನ್ನೂ ಹುಳಿಯಿಲ್ಲದ ರೊಟ್ಟಿಯನ್ನೂ ತೆಗೆದುಕೊಂಡು ಬಂದನು. ಗಿದ್ಯೋನನು ಏಲಾ ಮರದ ಕೆಳಗೆ ಯೆಹೋವನಿಗೆ ಆಹಾರವನ್ನು ಕೊಟ್ಟನು.


ಯೆಹೋವನ ದೂತನ ಕೈಯಲ್ಲಿ ಒಂದು ಕೋಲಿತ್ತು. ಯೆಹೋವನ ದೂತನು ತನ್ನ ಕೋಲಿನ ತುದಿಯಿಂದ ಮಾಂಸವನ್ನು ಮತ್ತು ರೊಟ್ಟಿಯನ್ನು ಮುಟ್ಟಿದನು. ಆಗ ಆ ಕಲ್ಲಿನಿಂದ ಬೆಂಕಿಯ ಜ್ವಾಲೆಯು ಎದ್ದಿತು! ಮಾಂಸ ಮತ್ತು ರೊಟ್ಟಿ ಸಂಪೂರ್ಣವಾಗಿ ಸುಟ್ಟುಹೋದವು! ಆಮೇಲೆ ಯೆಹೋವನ ದೂತನು ಅದೃಶ್ಯನಾದನು.


ಆಗ ಯೆಹೋವನ ದೂತನು ಮಾನೋಹನಿಗೆ, “ನೀನು ನನ್ನನ್ನು ಹೋಗದಂತೆ ನಿಲ್ಲಿಸಿಕೊಂಡರೂ ಸಹ ನಾನು ನಿಮ್ಮ ಆಹಾರವನ್ನು ಊಟ ಮಾಡುವುದಿಲ್ಲ. ಏನಾದರೂ ಕೊಡಬೇಕೆಂದು ನಿನಗೆ ಮನಸ್ಸಿದ್ದರೆ ಅದನ್ನು ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸು” ಅಂದನು. (ಅವನು ಯೆಹೋವನ ದೂತನೆಂಬುದು ಮಾನೋಹನಿಗೆ ಗೊತ್ತಿರಲಿಲ್ಲ.)


“ಸ್ವಾಮಿಗಳೇ, ನಿಮ್ಮ ಸೇವಕನಾದ ನನ್ನ ಜೊತೆಯಲ್ಲಿ ಸ್ವಲ್ಪ ಸಮಯವಿರಿ.


ಆಗ ಮಾನೋಹನು ಯೆಹೋವನ ದೂತನಿಗೆ, “ನೀನು ಸ್ವಲ್ಪಹೊತ್ತು ಇಲ್ಲಿಯೇ ಇರಬೇಕೆಂಬುದು ನಮ್ಮ ಇಚ್ಛೆ. ನಾವು ನಿನ್ನ ಊಟಕ್ಕಾಗಿ ಒಂದು ಮರಿಹೋತವನ್ನು ಬೇಯಿಸಿ ಬಡಿಸುತ್ತೇವೆ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು