Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:4 - ಪರಿಶುದ್ದ ಬೈಬಲ್‌

4 ಅವರು ಈ ಪ್ರದೇಶದಲ್ಲಿ ಪಾಳೆಯಮಾಡಿಕೊಂಡು ಇಸ್ರೇಲರ ಬೆಳೆಗಳನ್ನು ನಾಶಪಡಿಸುತ್ತಿದ್ದರು. ಅವರು ಗಾಜಾ ನಗರದವರೆಗಿರುವ ಪ್ರದೇಶದಲ್ಲಿನ ಬೆಳೆಗಳನ್ನು ಹಾಳುಮಾಡಿದರು. ಅವರು ಇಸ್ರೇಲರ ಆಹಾರಕ್ಕಾಗಿ ಏನೂ ಉಳಿಸಲಿಲ್ಲ. ಅವರು ಕುರಿ, ದನ, ಕತ್ತೆಗಳನ್ನು ಸಹ ಉಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರು ಗಾಜಾ ಪ್ರಾಂತ್ಯದವರೆಗಿದ್ದ ಎಲ್ಲಾ ಭೂಮಿಯ ಹುಟ್ಟುವಳಿಯನ್ನು ಹಾಳುಮಾಡಿಬಿಡುತ್ತಿದ್ದುದರಿಂದ ಇವರಿಗೆ ದವಸಧಾನ್ಯವಾಗಲಿ, ಕುರಿ, ದನ, ಕತ್ತೆಗಳಾಗಲಿ ಉಳಿಯಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಗಾಜಾ ಪ್ರಾಂತ್ಯದವರೆಗೆ ಭೂಮಿಯ ಫಲವನ್ನೆಲ್ಲ ನಾಶ ಮಾಡುತ್ತಿದ್ದರು. ಈ ಕಾರಣ ಇಸ್ರಯೇಲರಿಗೆ ದವಸಧಾನ್ಯವಾಗಲಿ, ಕುರಿದನಕತ್ತೆಗಳಾಗಲಿ ಉಳಿಯುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಗಾಜಾ ಪ್ರಾಂತದವರೆಗಿದ್ದ ಎಲ್ಲಾ ಭೂವಿುಯ ಹುಟ್ಟುವಳಿಯನ್ನು ಹಾಳುಮಾಡಿಬಿಟ್ಟದರಿಂದ ಇವರಿಗೆ ದವಸ ಧಾನ್ಯವಾಗಲಿ ಕುರಿದನಕತ್ತೆಗಳಾಗಲಿ ಉಳಿಯಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಗಾಜದ ಪ್ರದೇಶದ ಮಟ್ಟಿಗೂ ಭೂಮಿಯ ಫಲವನ್ನು ಕೆಡಿಸಿಬಿಟ್ಟು, ಇಸ್ರಾಯೇಲಿನಲ್ಲಿ ಆಹಾರವಾದರೂ ಕುರಿ, ದನ, ಕತ್ತೆಗಳಾದರೂ ಉಳಿಯಗೊಡಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:4
12 ತಿಳಿವುಗಳ ಹೋಲಿಕೆ  

ಆಗ ನಾನು ನಿಮ್ಮ ಮಧ್ಯೆ ಭಯಂಕರ ಸಂಗತಿಗಳು ನಡೆಯುವಂತೆ ಮಾಡುವೆ. ನೀವು ವ್ಯಾಧಿಯಿಂದಲೂ ಜ್ವರದಿಂದಲೂ ನರಳುವಂತೆ ಮಾಡುವೆ. ಅವು ನಿಮ್ಮ ಕಣ್ಣುಗಳನ್ನು ನಾಶಮಾಡಿ ನಿಮ್ಮ ಪ್ರಾಣವನ್ನು ತೆಗೆದುಬಿಡುತ್ತವೆ; ನೀವು ಬೀಜ ಬಿತ್ತಿದರೂ ಅದರ ಫಲವು ದೊರೆಯುವುದಿಲ್ಲ: ನಿಮ್ಮ ವೈರಿಗಳು ನಿಮ್ಮ ಬೆಳೆಗಳನ್ನು ತಿಂದುಬಿಡುವರು!


ಅವರು ನಿಮ್ಮ ಪಶುಗಳನ್ನು ಅಟ್ಟಿಸಿಕೊಂಡು ಹೋಗುವರು; ನೀವು ಬೆಳೆದ ಬೆಳೆಯನ್ನು ಕೊಂಡೊಯ್ಯುವರು. ನಿಮ್ಮನ್ನು ನಾಶಪಡಿಸುವ ತನಕ ಅವರು ಪ್ರತಿಯೊಂದನ್ನೂ ತೆಗೆದುಕೊಂಡು ಹೋಗುವರು. ಅವರು ನಿಮಗೆ ದವಸಧಾನ್ಯವನ್ನಾಗಲಿ ದ್ರಾಕ್ಷಾರಸವನ್ನಾಗಲಿ ಎಣ್ಣೆಯನ್ನಾಗಲಿ ಹಸುಗಳನ್ನಾಗಲಿ ಕುರಿಗಳನ್ನಾಗಲಿ ಮೇಕೆಗಳನ್ನಾಗಲಿ ಬಿಟ್ಟುಹೋಗುವುದಿಲ್ಲ. ಅವರು ನಿಮ್ಮನ್ನು ನಾಶಪಡಿಸುವ ತನಕ ಪ್ರತಿಯೊಂದನ್ನೂ ತೆಗೆದುಕೊಂಡು ಹೋಗುವರು.


ನೀವು ಬೀಜ ಬಿತ್ತುವಿರಿ, ಆದರೆ ಪೈರು ಕೊಯ್ಯುವುದಿಲ್ಲ. ಆಲೀವ್ ಕಾಯಿಗಳನ್ನು ಗಾಣದಲ್ಲಿ ಹಾಕಿ ಎಣ್ಣೆ ತೆಗೆಯುವಿರಿ. ಆದರೆ ನಿಮಗೆ ಎಣ್ಣೆಯೇ ಸಿಗುವದಿಲ್ಲ. ನೀವು ದ್ರಾಕ್ಷಿಹಣ್ಣುಗಳನ್ನು ತೊಟ್ಟಿಯಲ್ಲಿ ಹಾಕಿ ತುಳಿಯುವಿರಿ, ಆದರೆ ಕುಡಿಯಲು ದ್ರಾಕ್ಷಾರಸವೇ ಸಿಗುವದಿಲ್ಲ.


“ನೀವು ಅರಿಯದಿರುವ ದೇಶದವರು ಬಂದು ನಿಮ್ಮ ಪೈರನ್ನು ಕೊಯ್ದುಕೊಂಡು ಹೋಗುವರು; ನೀವು ದುಡಿದು ಸಂಪಾದಿಸಿದವುಗಳನ್ನು ಎತ್ತಿಕೊಂಡು ಹೋಗುವರು. ಜನರು ನಿಮ್ಮನ್ನು ಕುಗ್ಗಿಸಿ ಬಲಹೀನರನ್ನಾಗಿ ಮಾಡುವರು.


ಬಡಜನರನ್ನು ದರೋಡೆಮಾಡುವ ಬಡವನು ಬೆಳೆಯನ್ನು ನಾಶಮಾಡುವ ಬಿರುಸಾದ ಮಳೆಯಂತಿರುವನು.


ಲೋಟನು ಕಣ್ಣೆತ್ತಿ ನೋಡಿದಾಗ ಜೋರ್ಡನ್ ಕಣಿವೆಯೆಲ್ಲಾ ಕಾಣಿಸಿತು. ಅಲ್ಲಿ ಬೇಕಾದಷ್ಟು ನೀರಿರುವುದನ್ನು ಲೋಟನು ನೋಡಿದನು. (ಆ ಕಾಲದಲ್ಲಿ ಸೊದೋಮ್ ಮತ್ತು ಗೊಮೋರ ಪಟ್ಟಣಗಳು ಯೆಹೋವನಿಂದ ನಾಶವಾಗಿರಲಿಲ್ಲ. ಆ ಕಾಲದಲ್ಲಿ ಜೋರ್ಡನ್ ಕಣಿವೆಯು ಚೋಗರ್ ತನಕ ಯೆಹೋವನ ತೋಟದಂತಿತ್ತು. ಅದು ಈಜಿಪ್ಟಿನ ಭೂಮಿಯಂತೆ ಫಲವತ್ತಾಗಿತ್ತು.)


ಕಾನಾನ್ಯರ ಸೀಮೆಯು ಸೀದೋನಿನ ಉತ್ತರದಿಂದಿಡಿದು ಗೆರಾರಿನ ದಕ್ಷಿಣದವರೆಗೂ, ಗಾಜಾದಿಂದ ಪೂರ್ವದ ಸೊದೋಮ್ ಗೊಮೋರ ಪಟ್ಟಣಗಳವರೆಗೂ, ಅದ್ಮಾ ಮತ್ತು ಚೆಬೋಯಿಮ್‌ಗಳಿಂದ ಲೆಷಾದವರೆಗೆ ವಿಸ್ತರಿಸಿತ್ತು.


ನೀನು ಸಂಪೂರ್ಣವಾಗಿ ನಾಶವಾಗುವೆ. ಕಳ್ಳರು ನಿನ್ನ ಬಳಿಗೆ ಬರುವರು, ದರೋಡೆಗಾರರು ರಾತ್ರಿವೇಳೆ ಬರುವರು. ಅವರು ತಮಗೆ ಇಷ್ಟಬಂದದ್ದನ್ನೆಲ್ಲಾ ದೋಚುವರು. ನಿನ್ನ ತೋಟದಲ್ಲಿ ಕೆಲಸಗಾರರು ದ್ರಾಕ್ಷೆಯನ್ನು ಕೊಯ್ಯುವಾಗ ಕೆಲವೊಂದನ್ನು ಬಿಟ್ಟುಬಿಡುವರು.


ಪೂರ್ವದಿಂದ ಮಿದ್ಯಾನ್ಯರೂ ಅಮಾಲೇಕ್ಯರೂ ಯಾವಾಗಲೂ ಬಂದು ಇವರ ಬೆಳೆಗಳನ್ನು ನಾಶಪಡಿಸುತ್ತಿದ್ದರು.


ಆ ಸೈನಿಕರು ನೀವು ಬೆಳೆದ ಬೆಳೆಯನ್ನು ತಿಂದುಬಿಡುವರು. ಅವರು ನಿಮ್ಮೆಲ್ಲ ಆಹಾರವನ್ನು ತಿಂದುಬಿಡುವರು. ಅವರು ನಿಮ್ಮ ಗಂಡುಮಕ್ಕಳನ್ನೂ ಹೆಣ್ಣುಮಕ್ಕಳನ್ನೂ ತಿಂದುಬಿಡುವರು (ನಾಶಮಾಡುವರು). ಅವರು ನಿಮ್ಮ ದನಕರುಗಳ ಹಿಂಡುಗಳನ್ನು, ಕುರಿಗಳ ಮಂದೆಗಳನ್ನು ತಿಂದುಬಿಡುವರು. ಅವರು ನಿಮ್ಮ ದ್ರಾಕ್ಷಿಗಳನ್ನೂ ನಿಮ್ಮ ಅಂಜೂರಗಳನ್ನೂ ತಿಂದುಬಿಡುವರು. ಅವರು ತಮ್ಮ ಖಡ್ಗಗಳಿಂದ ನಿಮ್ಮ ಭದ್ರವಾದ ನಗರಗಳನ್ನು ನಾಶಮಾಡುವರು. ನೀವು ನಂಬಿಕೊಂಡಿದ್ದ ನಿಮ್ಮ ಭದ್ರವಾದ ನಗರಗಳನ್ನು ಅವರು ಹಾಳುಮಾಡುತ್ತಾರೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು