Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:8 - ಪರಿಶುದ್ದ ಬೈಬಲ್‌

8 ಆದ್ದರಿಂದ ಯೆಹೋವನು ಅವರ ಹತ್ತಿರಕ್ಕೆ ಒಬ್ಬ ಪ್ರವಾದಿಯನ್ನು ಕಳುಹಿಸಿದನು. ಆ ಪ್ರವಾದಿಯು ಇಸ್ರೇಲರಿಗೆ ಹೀಗೆ ಹೇಳಿದನು: “ಇಸ್ರೇಲರ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಿರಿ. ನಾನು ನಿಮ್ಮನ್ನು ಸ್ವತಂತ್ರರನ್ನಾಗಿ ಮಾಡಿ ಅಲ್ಲಿಂದ ಹೊರಗೆ ತಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆತನು ಅವರ ಬಳಿಗೆ ಒಬ್ಬ ಪ್ರವಾದಿಯನ್ನು ಕಳುಹಿಸಿದನು. ಅವನು ಬಂದು ಅವರಿಗೆ, “ಇಸ್ರಾಯೇಲರ ದೇವರಾದ ಯೆಹೋವನ ಮಾತನ್ನು ಕೇಳಿರಿ; ಆತನು ಹೇಳುವುದೇನೆಂದರೆ ‘ನೀವು ದಾಸತ್ವದಲ್ಲಿದ್ದ ಐಗುಪ್ತದಿಂದ ನಿಮ್ಮನ್ನು ಕರೆತಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವನು ಬಂದು ಇಸ್ರಯೇಲರಿಗೆ ಹೀಗೆಂದನು: “ನಿಮ್ಮ ದೇವರಾದ ಸರ್ವೇಶ್ವರ ಹೇಳುವ ಈ ಮಾತುಗಳನ್ನು ಗಮನಿಸಿರಿ: ‘ನೀವು ದಾಸತ್ವದಲ್ಲಿದ್ದಾಗ ನಿಮ್ಮನ್ನು ಈಜಿಪ್ಟಿನಿಂದ ಕರೆತಂದವನು ನಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆತನು ಅವರ ಬಳಿಗೆ ಒಬ್ಬ ಪ್ರವಾದಿಯನ್ನು ಕಳುಹಿಸಿದನು. ಅವನು ಬಂದು ಅವರಿಗೆ - ಇಸ್ರಾಯೇಲ್ಯರ ದೇವರಾದ ಯೆಹೋವನ ಮಾತನ್ನು ಕೇಳಿರಿ; ಆತನು ಹೇಳುವದೇನಂದರೆ - ನೀವು ದಾಸತ್ವದಲ್ಲಿದ್ದ ಐಗುಪ್ತದಿಂದ ನಿಮ್ಮನ್ನು ಕರತಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರು ಒಬ್ಬ ಪ್ರವಾದಿಯನ್ನು ಇಸ್ರಾಯೇಲರ ಬಳಿಗೆ ಕಳುಹಿಸಿದರು. ಅವನು ಅವರಿಗೆ, ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, “ನೀವು ದಾಸತ್ವದಲ್ಲಿದ್ದ ನಿಮ್ಮನ್ನು ನಾನು ಈಜಿಪ್ಟಿನಿಂದ ಬರಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:8
12 ತಿಳಿವುಗಳ ಹೋಲಿಕೆ  

ಮಿದ್ಯಾನ್ಯರು ಕೆಟ್ಟದ್ದನ್ನೆಲ್ಲಾ ಮಾಡಿದರು. ಅದಕ್ಕಾಗಿ ಇಸ್ರೇಲರು ಸಹಾಯಕೋರಿ ಯೆಹೋವನಲ್ಲಿ ಮೊರೆಯಿಟ್ಟರು.


ನಾನು ನಿಮ್ಮನ್ನು ಬಲಶಾಲಿಗಳಾದ ಈಜಿಪ್ಟಿನ ಜನರಿಂದ ರಕ್ಷಿಸಿದೆ. ತರುವಾಯ ಕಾನಾನ್ಯರು ನಿಮ್ಮನ್ನು ಪೀಡಿಸಿದರು. ಆಗ ಮತ್ತೊಮ್ಮೆ ನಾನು ನಿಮ್ಮನ್ನು ರಕ್ಷಿಸಿದೆ. ನಾನು ಅವರನ್ನು ಅವರ ಪ್ರದೇಶದಿಂದ ಓಡಿಸಿ ಅದನ್ನು ನಿಮಗೆ ಕೊಟ್ಟೆ’


ಸಮುವೇಲನು ಅವರಿಗೆ, “ಇಸ್ರೇಲರ ದೇವರಾದ ಯೆಹೋವನು ಹೇಳುವುದೇನೆಂದರೆ, ‘ನಾನು ಇಸ್ರೇಲರನ್ನು ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದೆನು. ನಾನು ಈಜಿಪ್ಟಿನವರ ಆಳ್ವಿಕೆಯಿಂದ ಮತ್ತು ನಿಮಗೆ ಹಾನಿಮಾಡಲು ಪ್ರಯತ್ನಿಸಿದ ಇತರ ರಾಜ್ಯಗಳಿಂದ ರಕ್ಷಿಸಿದೆನು’ ಎನ್ನುತ್ತಾನೆ.


ಮೋಶೆಯು ಜನರಿಗೆ, “ನೀವು ಈಜಿಪ್ಟಿನ ಗುಲಾಮತನದಿಂದ ಬಿಡುಗಡೆಯಾದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಆದರೆ ಈ ದಿನದಲ್ಲಿ ಯೆಹೋವನು ತನ್ನ ಮಹಾಶಕ್ತಿಯಿಂದ ನಿಮ್ಮನ್ನು ಸ್ವತಂತ್ರರನ್ನಾಗಿ ಮಾಡಿದನು. ನೀವು ಹುಳಿಯಿರುವ ರೊಟ್ಟಿಯನ್ನು ತಿನ್ನಬಾರದು.


“ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು, ‘ನೀವು ಹೀಗೇಕೆ ಮಾಡುತ್ತೀರಿ?’ ಎಂದು ಕೇಳುವಾಗ ನೀವು, ‘ಯೆಹೋವನು ನಮ್ಮನ್ನು ಈಜಿಪ್ಟಿನಿಂದ ತನ್ನ ಮಹಾಶಕ್ತಿಯಿಂದ ರಕ್ಷಿಸಿದನು. ನಾವು ಅಲ್ಲಿ ಗುಲಾಮರಾಗಿದ್ದೆವು, ಆದರೆ ಯೆಹೋವನು ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದನು.


ಇಸ್ರೇಲ್ ಮತ್ತು ಯೆಹೂದಗಳನ್ನು ಎಚ್ಚರಿಸಲು ಯೆಹೋವನು ಪ್ರತಿಯೊಬ್ಬ ಪ್ರವಾದಿಯನ್ನು ಮತ್ತು ದೇವದರ್ಶಿಯನ್ನು ಬಳಸಿಕೊಂಡನು. ಯೆಹೋವನು, “ನಿಮ್ಮ ಕೆಟ್ಟಕಾರ್ಯಗಳಿಂದ ದೂರವಾಗಿ! ನನ್ನ ಆಜ್ಞೆಗಳಿಗೆ ಮತ್ತು ಧರ್ಮಶಾಸ್ತ್ರಗಳಿಗೆ ವಿಧೇಯತೆಯಿಂದಿರಿ. ನಿಮ್ಮ ಪೂರ್ವಿಕರಿಗೆ ನಾನು ನೀಡಿದ ಕಟ್ಟಳೆಗಳನ್ನೆಲ್ಲಾ ಅನುಸರಿಸಿ. ನಾನು ನನ್ನ ಸೇವಕರಾದ ಪ್ರವಾದಿಗಳ ಮೂಲಕ ಇವುಗಳನ್ನು ನೀಡಿದ್ದೇನೆ” ಎಂದು ಹೇಳಿದ್ದನು.


ಆದರೆ ಅವರು ಆಪತ್ತಿನಲ್ಲಿದ್ದಾಗಲೆಲ್ಲಾ ದೇವರಿಗೆ ಮೊರೆಯಿಟ್ಟರು; ಆತನು ಅವರ ಪ್ರಾರ್ಥನೆಗಳಿಗೆ ಸದುತ್ತರವನ್ನು ದಯಪಾಲಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು