Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 7:11 - ಪರಿಶುದ್ದ ಬೈಬಲ್‌

11 ಮಿದ್ಯಾನ್ಯರ ಶಿಬಿರದ ಒಳಗಡೆ ಹೋಗಿ ಅವರ ಮಾತುಗಳನ್ನು ಕೇಳಿಸಿಕೋ. ಆಗ ನೀನು ಅವರ ಮೇಲೆ ಧಾಳಿಮಾಡುವುದಕ್ಕೆ ಹೆದರುವುದಿಲ್ಲ” ಎಂದನು. ಗಿದ್ಯೋನನು ಮತ್ತು ಅವನ ಸೇವಕನಾದ ಪುರನು ಇಬ್ಬರೂ ಶತ್ರುಗಳ ಪಾಳೆಯದ ಗಡಿಯವರೆಗೂ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗ ಅವರ ಮೇಲೆ ಬೀಳುವುದಕ್ಕೆ ನಿನಗೆ ಧೈರ್ಯಬರುವುದು” ಅಂದನು. ಗಿದ್ಯೋನನು ಅದರಂತೆಯೇ ತನ್ನ ಸೇವಕನಾದ ಪುರನ ಸಂಗಡ ಶತ್ರುಸೈನಿಕರ ಪಾಳೆಯದ ಕಡೇ ಭಾಗಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆಗ ಅವರ ಮೇಲೆ ಬೀಳುವುದಕ್ಕೆ ನಿನಗೆ ಧೈರ್ಯ ಬರುವುದು,” ಎಂದರು. ಗಿದ್ಯೋನನು ಅದರಂತೆಯೇ ತನ್ನ ಸೇವಕನಾದ ಪುರನ ಸಂಗಡ ಶತ್ರು ಸೈನಿಕರ ಪಾಳೆಯದ ಕಡೇ ಭಾಗಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಗ ಅವರ ಮೇಲೆ ಬೀಳುವದಕ್ಕೆ ನಿನಗೆ ಧೈರ್ಯ ಬರುವದು ಅಂದನು. ಗಿದ್ಯೋನನು ಅದರಂತೆಯೇ ತನ್ನ ಸೇವಕನಾದ ಪುರನ ಸಂಗಡ ಶತ್ರುಸೈನಿಕರ ಪಾಳೆಯದ ಕಡೇ ಭಾಗಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವರು ಮಾತನಾಡುವುದನ್ನು ಕೇಳು. ತರುವಾಯ ಪಾಳೆಯಲ್ಲಿ ಇಳಿದು ಹೋಗುವುದಕ್ಕೆ ನಿನ್ನ ಕೈಗಳು ಬಲಗೊಳ್ಳುವುವು,” ಎಂದರು. ಹಾಗೆಯೇ ಅವನು ತನ್ನ ಸೇವಕನಾದ ಪುರನ ಸಂಗಡ ಪಾಳೆಯ ಹೊರಗಿರುವ ಸೈನಿಕರ ಬಳಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 7:11
15 ತಿಳಿವುಗಳ ಹೋಲಿಕೆ  

ಕಡೇ ಮಾತೇನೆಂದರೆ, ಪ್ರಭುವಿನಲ್ಲಿಯೂ ಆತನ ಮಹಾಶಕ್ತಿಯಲ್ಲಿಯೂ ಬಲವಾಗಿರಿ.


ಕ್ರಿಸ್ತನ ಮೂಲಕ ನಾನು ಎಲ್ಲಾ ಕಾರ್ಯಗಳನ್ನು ಮಾಡಬಲ್ಲೆನು. ಏಕೆಂದರೆ ಆತನು ನನ್ನನ್ನು ಬಲಪಡಿಸುತ್ತಾನೆ.


ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಅವರು ಏಳು ದಿನಗಳ ತನಕ ಸಂತಸದಿಂದ ಆಚರಿಸಿದರು. ಯಾಕೆಂದರೆ ಅಶ್ಶೂರದ ಅರಸನ ಮನಸ್ಸನ್ನು ಮಾರ್ಪಡಿಸುವುದರ ಮೂಲಕ ಯೆಹೋವನು ಯೆಹೂದ್ಯರನ್ನು ಬಹಳ ಸಂತೋಷಗೊಳಿಸಿದ್ದನು. ಇಸ್ರೇಲ್ ದೇವರ ಆಲಯದ ಕಟ್ಟಡವು ಪೂರ್ಣಗೊಳ್ಳಲು ಅಶ್ಶೂರದ ಅರಸನು ಸಹಾಯ ಮಾಡಿದನು.


ಆದರೆ ಸೌಲನ ಮಗನಾದ ಯೋನಾತಾನನು ಹೋರೆಷಿಗೆ ಹೋಗಿ ದಾವೀದನನ್ನು ಸಂಧಿಸಿ ದೇವರಲ್ಲಿ ಹೆಚ್ಚು ನಂಬಿಕೆಯನ್ನಿಡುವಂತೆ ಅವನನ್ನು ಪ್ರೋತ್ಸಾಹಿಸಿ,


ಆದ್ದರಿಂದ ಯೆಹೋವನು ಅವರನ್ನು ಕೆಂಪು ಸಮುದ್ರದ ಅರಣ್ಯದ ಮೂಲಕ ನಡೆಸಿದನು. ಇಸ್ರೇಲರು ಈಜಿಪ್ಟನ್ನು ಬಿಟ್ಟಾಗ ಯುದ್ಧವಸ್ತ್ರಗಳನ್ನು ಧರಿಸಿಕೊಂಡಿದ್ದರು.


ಇಸಾಕನಿಗೆ ಯೋಗ್ಯಳಾದ ಕನ್ಯೆಯನ್ನು ಕಂಡುಕೊಳ್ಳಲು ನಾನು ಒಬ್ಬಳಿಗೆ, ‘ದಯವಿಟ್ಟು ನಿನ್ನ ಕೊಡವನ್ನು ಕೆಳಗಿಳಿಸಿ ಕುಡಿಯಲು ನೀರು ಕೊಡು’ ಎನ್ನುವೆ. ಆಕೆ ನನಗೆ, ‘ನೀನೂ ಕುಡಿ, ನಿನ್ನ ಒಂಟೆಗಳಿಗೂ ನೀರು ಕೊಡುತ್ತೇನೆ’ ಎಂದರೆ ಆಕೆಯೇ ನಿನ್ನಿಂದ ಆಯ್ಕೆಗೊಂಡ ಯೋಗ್ಯ ಕನ್ಯೆಯೆಂದೂ ನೀನು ನನ್ನ ಒಡೆಯನಿಗೆ ಕರುಣೆ ತೋರಿದೆಯೆಂದೂ ನಾನು ತಿಳಿದುಕೊಳ್ಳುವೆ” ಎಂದು ಪ್ರಾರ್ಥಿಸಿದನು.


ನೀವು ನಿಮ್ಮ ಆತ್ಮಗಳಲ್ಲಿ ಬಲವಾಗಿರಲು ಅಗತ್ಯವಾದ ಶಕ್ತಿಯನ್ನು ತನ್ನ ಮಹಿಮಾತಿಶಯದ ಪ್ರಕಾರ ಕೊಡಬೇಕೆಂದು ತಂದೆಯನ್ನು ಕೇಳಿಕೊಳ್ಳುತ್ತೇನೆ. ಆತನು ತನ್ನ ಆತ್ಮನ ಮೂಲಕವಾಗಿ ನಿಮಗೆ ಆ ಶಕ್ತಿಯನ್ನು ಕೊಡುತ್ತಾನೆ.


ನಾವು ಹೆದರಿಹೋಗಬೇಕೆಂದು ನಮ್ಮ ವೈರಿಗಳ ಕುತಂತ್ರವಿದೆ. “ಯೆಹೂದ್ಯರು ಭಯಗೊಂಡು ಬಲಹೀನರಾಗುವುದರಿಂದ ಅವರ ಕೆಲಸವನ್ನು ಮುಂದುವರಿಸಲು ಆಗುವುದಿಲ್ಲ, ಗೋಡೆಯೂ ಪೂರ್ಣಗೊಳ್ಳುವುದಿಲ್ಲ” ಎಂದು ಅವರು ಯೋಚಿಸಿಕೊಂಡಿದ್ದಾರೆ. ಆದರೆ ನಾನು, “ದೇವರೇ, ನನ್ನನ್ನು ಬಲಗೊಳಿಸು” ಎಂದು ಪ್ರಾರ್ಥಿಸಿದೆನು.


ಆ ಕೋಟೆಯಲ್ಲಿದ್ದ ಫಿಲಿಷ್ಟಿಯರು ಯೋನಾತಾನ ಮತ್ತು ಅವನ ಸಹಾಯಕನಿಗೆ, “ನಮ್ಮ ಹತ್ತಿರಕ್ಕೆ ಬನ್ನಿ. ನಾವು ನಿಮಗೆ ಒಂದು ಪಾಠ ಕಲಿಸುತ್ತೇವೆ” ಎಂದು ಕೂಗಿ ಹೇಳಿದರು. ಯೋನಾತಾನನು ತನ್ನ ಸಹಾಯಕನಿಗೆ, “ಬೆಟ್ಟದ ಮೇಲಿನವರೆಗೆ ನನ್ನನ್ನು ಹಿಂಬಾಲಿಸು. ಯೆಹೋವನು ಇಸ್ರೇಲರ ವಶಕ್ಕೆ ಫಿಲಿಷ್ಟಿಯರನ್ನು ಒಪ್ಪಿಸಿದ್ದಾನೆ” ಎಂದು ಹೇಳಿದನು.


ಒಬ್ಬನೇ ಹೋಗಲು ನಿನಗೆ ಹೆದರಿಕೆಯಾದರೆ ನಿನ್ನ ಸೇವಕನಾದ ಪುರನನ್ನು ಜೊತೆಗೆ ಕರೆದುಕೊಂಡು ಹೋಗು.


ದಾವೀದನು ಹಿತ್ತಿಯನಾದ ಅಹೀಮೆಲೆಕನ ಮತ್ತು ಚೆರೂಯಳ ಮಗನೂ ಯೋವಾಬನ ಸಹೋದರನೂ ಆದ ಅಬೀಷೈರೊಡನೆ ಮಾತನಾಡಿದನು. ಅವನು ಅವರಿಗೆ, “ನನ್ನೊಡನೆ ಸೌಲನ ಪಾಳೆಯಕ್ಕೆ ಯಾರು ಬರುತ್ತೀರಿ?” ಎಂದು ಕೇಳಿದನು. “ನಾನು ಬರುತ್ತೇನೆ” ಎಂದು ಅಬೀಷೈ ಉತ್ತರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು