Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 7:13 - ಪರಿಶುದ್ದ ಬೈಬಲ್‌

13 ಗಿದ್ಯೋನನು ಶತ್ರುಗಳ ಪಾಳೆಯಕ್ಕೆ ಬಂದಾಗ ಒಬ್ಬನ ಮಾತನ್ನು ಕೇಳಿಸಿಕೊಂಡನು. ಆ ಮನುಷ್ಯನು ತಾನು ಕಂಡ ಒಂದು ಕನಸಿನ ಬಗ್ಗೆ ತನ್ನ ಮಿತ್ರನಿಗೆ ಹೇಳುತ್ತಿದ್ದನು. “ನಾನು ಕನಸಿನಲ್ಲಿ ಒಂದು ದುಂಡಾದ ರೊಟ್ಟಿಯು ಉರುಳಿಕೊಂಡು ಮಿದ್ಯಾನ್ಯರ ಪಾಳೆಯದಲ್ಲಿ ಬರುವುದನ್ನು ಕಂಡೆ. ಆ ರೊಟ್ಟಿಯು ರಭಸದಿಂದ ಬಂದು ಒಂದು ಗುಡಾರಕ್ಕೆ ಅಪ್ಪಳಿಸಲು ಆ ಗುಡಾರವು ಕುಸಿದುಬಿತ್ತು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಗಿದ್ಯೋನನು ಬಂದಾಗ ಅವರಲ್ಲೊಬ್ಬನು ತನ್ನ ಜೊತೆಗಾರನಿಗೆ ಒಂದು ಕನಸನ್ನು ತಿಳಿಸುತ್ತಿದ್ದನು. ಅವನು, “ಇಗೋ, ನಾನು ಒಂದು ಕನಸು ಕಂಡೆನು; ಅದರಲ್ಲಿ ಒಂದು ಜವೆಗೋದಿಯ ರೊಟ್ಟಿಯು ಉರುಳುತ್ತಾ ಮಿದ್ಯಾನ್ಯರ ಪಾಳೆಯದೊಳಗೆ ಬಂದು, ಒಂದು ಡೇರೆಗೆ ತಗಲಿ, ಅದನ್ನು ಬುಡಮೇಲು ಮಾಡಿ ಬೀಳಿಸಿಬಿಟ್ಟಿತು” ಎಂದು ಹೇಳಿದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಗಿದ್ಯೋನನು ಬಂದಾಗ ಅವರಲ್ಲೊಬ್ಬನು ತನ್ನ ಜೊತೆಗಾರನಿಗೆ ಒಂದು ಕನಸನ್ನು ತಿಳಿಸುತ್ತಿದ್ದನು. ಅವನು, “ಇಗೋ, ನಾನು ಒಂದು ಕನಸು ಕಂಡೆ; ಅದರಲ್ಲಿ ಒಂದು ಜವೆಗೋದಿಯ ರೊಟ್ಟಿ ಉರುಳುತ್ತಾ ಮಿದ್ಯಾನ್ಯರ ಪಾಳೆಯದೊಳಗೆ ಬಂದು ಒಂದು ಡೇರೆಗೆ ತಗಲಿ ಅದನ್ನು ಅಡಿಮೇಲು ಮಾಡಿ ಬೀಳಿಸಿಬಿಟ್ಟಿತು,” ಎಂದು ಹೇಳಿದನು. ಅವನ ಜೊತೆಗಾರನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಗಿದ್ಯೋನನು ಬಂದಾಗ ಅವರಲ್ಲೊಬ್ಬನು ತನ್ನ ಜೊತೆಗಾರನಿಗೆ ಒಂದು ಕನಸನ್ನು ತಿಳಿಸುತ್ತಿದ್ದನು. ಅವನು - ಇಗೋ, ನಾನು ಒಂದು ಕನಸು ಕಂಡೆನು; ಅದರಲ್ಲಿ ಒಂದು ಜವೆಗೋದಿಯ ರೊಟ್ಟಿಯು ಉರುಳುತ್ತಾ ವಿುದ್ಯಾನ್ಯರ ಪಾಳೆಯದೊಳಗೆ ಬಂದು ಒಂದು ಡೇರೆಗೆ ತಗಲಿ ಅದನ್ನು ಅಡಿಮೇಲು ಮಾಡಿ ಬೀಳಿಸಿ ಬಿಟ್ಟಿತು ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಗಿದ್ಯೋನನು ಬಂದಾಗ, ಒಬ್ಬನು ತನ್ನ ಜೊತೆಗಾರನಿಗೆ ತನಗಾದ ಸ್ವಪ್ನವನ್ನು ವಿವರಿಸಿ ಹೇಳಿದ್ದೇನೆಂದರೆ, “ಇಗೋ, ನಾನು ಒಂದು ಕನಸನ್ನು ಕಂಡೆನು. ಒಂದು ಜವೆಗೋಧಿಯ ರೊಟ್ಟಿಯು ಮಿದ್ಯಾನ್ಯರ ಪಾಳೆಯ ಮೇಲೆ ಹೊರಳಿ, ಒಂದು ಡೇರೆಯ ಮೇಲೆ ಬಂದು, ಅದು ಬೀಳುವ ಹಾಗೆ ಅದನ್ನು ಹೊಡೆದು, ಅದನ್ನು ಕೆಡವಿ ಹಾಕಿತು. ಆಗ ಡೇರೆಯು ಬಿದ್ದುಹೋಯಿತು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 7:13
10 ತಿಳಿವುಗಳ ಹೋಲಿಕೆ  

ಆದರೆ ದೇವರು ಈ ಲೋಕದ ಜ್ಞಾನಿಗಳನ್ನು ನಾಚಿಕೆಪಡಿಸುವುದಕ್ಕಾಗಿ ಮೂಢರನ್ನು ಆರಿಸಿಕೊಂಡಿದ್ದಾನೆ; ಬಲಿಷ್ಠರನ್ನು ನಾಚಿಕೆಪಡಿಸುವುದಕ್ಕಾಗಿ ಬಲಹೀನರನ್ನು ಆರಿಸಿಕೊಂಡಿದ್ದಾನೆ.


ಅದಕ್ಕೆ ಗಿದ್ಯೋನನು, “ಸ್ವಾಮೀ, ಮನಸ್ಸೆ ಕುಲದಲ್ಲಿ ನನ್ನ ಕುಟುಂಬವು ಕೇವಲ ಅಲ್ಪವಾದದ್ದು. ನನ್ನ ಕುಟುಂಬದಲ್ಲಿ ನಾನು ಎಲ್ಲರಿಗಿಂತ ಚಿಕ್ಕವನು. ನಾನು ಇಸ್ರೇಲರನ್ನು ರಕ್ಷಿಸಲು ಹೇಗೆ ಸಾಧ್ಯ?” ಎಂದು ಕೇಳಿದನು.


ಯಾಯೇಲಳು ಗುಡಾರದ ಗೂಟವನ್ನು ಮತ್ತು ಕೊಡತಿಯನ್ನು ತೆಗೆದುಕೊಂಡು ಶಬ್ದಮಾಡದೆ ಸೀಸೆರನ ಹತ್ತಿರ ಹೋದಳು. ಸೀಸೆರನು ಬಹಳ ದಣಿದಿದ್ದ ಕಾರಣ ಗಾಢನಿದ್ರೆ ಮಾಡುತ್ತಿದ್ದನು. ಯಾಯೇಲಳು ಗುಡಾರದ ಗೂಟವನ್ನು ಸೀಸೆರನ ತಲೆಯ ಒಂದು ಪಾರ್ಶ್ವದಲ್ಲಿ ಇಟ್ಟು ಕೊಡತಿಯಿಂದ ಬಲವಾಗಿ ಹೊಡೆದಳು. ಆ ಗುಡಾರದ ಗೂಟವು ಸೀಸೆರನ ತಲೆಯ ಮತ್ತೊಂದು ಪಾರ್ಶ್ವಕ್ಕೆ ತೂರಿಬಂದು ಭೂಮಿಯಲ್ಲಿ ಸೇರಿತು. ಸೀಸೆರನು ಸತ್ತನು.


ಅದಕ್ಕೆ ದೆಬೋರಳು, “ನಿಸ್ಸಂದೇಹವಾಗಿ ನಾನು ನಿನ್ನೊಂದಿಗೆ ಬರುತ್ತೇನೆ. ಆದರೆ ನಿನ್ನ ಈ ಮನೋಭಾವದಿಂದಾಗಿ ಸೀಸೆರನನ್ನು ಸೋಲಿಸಿದ ಗೌರವ ನಿನಗೆ ಸಲ್ಲುವುದಿಲ್ಲ. ಒಬ್ಬ ಹೆಂಗಸು ಸೀಸೆರನನ್ನು ಸೋಲಿಸುವಂತೆ ಯೆಹೋವನು ಮಾಡುತ್ತಾನೆ” ಎಂದು ಉತ್ತರಿಸಿದಳು. ದೆಬೋರಳು ಬಾರಾಕನ ಸಂಗಡ ಕೆದೆಷ್ ನಗರಕ್ಕೆ ಹೋದಳು.


ಏಹೂದನು ಇಸ್ರೇಲರನ್ನು ರಕ್ಷಿಸಿದ ತರುವಾಯ, ಇನ್ನೊಬ್ಬ ವ್ಯಕ್ತಿಯು ಇಸ್ರೇಲರನ್ನು ರಕ್ಷಿಸಿದನು. ಅವನು ಅನಾತನ ಮಗನಾದ ಶಮ್ಗರ. ಶಮ್ಗರನು ಎದ್ದು ಎತ್ತಿನ ಮುಳ್ಳುಗೋಲಿನಿಂದ ಆರುನೂರು ಮಂದಿ ಫಿಲಿಷ್ಟಿಯರನ್ನು ಕೊಂದನು.


ಜನರು ಯೆಹೋವನಿಗೆ ಮೊರೆಯಿಟ್ಟರು. ಇಸ್ರೇಲರನ್ನು ರಕ್ಷಿಸಲು ಯೆಹೋವನು ಒಬ್ಬ ಮನುಷ್ಯನನ್ನು ಕಳುಹಿಸಿದನು. ಆ ಮನುಷ್ಯನ ಹೆಸರು ಏಹೂದ. ಅವನು ಎಡಚನಾಗಿದ್ದನು. ಅವನು ಬೆನ್ಯಾಮೀನ್ ಕುಲದ ಗೇರ ಎಂಬವನ ಮಗನಾಗಿದ್ದನು. ಇಸ್ರೇಲರು ಮೋವಾಬ್ಯರ ಅರಸನಾದ ಎಗ್ಲೋನನಿಗೆ ಕಪ್ಪಕಾಣಿಕೆಯನ್ನು ಕೊಡಲು ಏಹೂದನನ್ನು ಕಳುಹಿಸಿದರು.


ಮಿದ್ಯಾನ್ಯರು, ಅಮಾಲೇಕ್ಯರು ಮತ್ತು ಪೂರ್ವದೇಶದ ಉಳಿದೆಲ್ಲ ಜನರು ಆ ತಗ್ಗಿನಲ್ಲಿ ಪಾಳೆಯ ಮಾಡಿಕೊಂಡಿದ್ದರು. ಅವರು ಅಸಂಖ್ಯಾತವಾಗಿದ್ದು ಮಿಡತೆಯ ಗುಂಪಿನಂತೆ ಕಂಡರು. ಅವರಲ್ಲಿದ್ದ ಒಂಟೆಗಳೋ ಲೆಕ್ಕವಿಲ್ಲದ ಸಮುದ್ರ ತೀರದ ಮರಳಿನಂತೆ ಎದ್ದುಕಾಣುತ್ತಿದ್ದವು.


ಆ ಮನುಷ್ಯನ ಸ್ನೇಹಿತನು ಕನಸಿನ ಅರ್ಥವನ್ನು ತಿಳಿದುಕೊಂಡು ಅವನಿಗೆ, “ನಿನ್ನ ಕನಸು ಇಸ್ರೇಲಿನ ಯೋವಾಷನ ಮಗನಾದ ಗಿದ್ಯೋನನ ಕುರಿತಾಗಿದೆ. ಗಿದ್ಯೋನನು ಮಿದ್ಯಾನ್ಯರ ಇಡೀ ಸೈನ್ಯವನ್ನು ಸೋಲಿಸುವಂತೆ ದೇವರು ಮಾಡುತ್ತಾನೆ” ಎಂದನು.


ಜೆಬಹ ಮತ್ತು ಚಲ್ಮುನ್ನ ಮತ್ತು ಅವರ ಸೈನಿಕರು ಕರ್ಕೋರ ಎಂಬ ನಗರದಲ್ಲಿದ್ದರು. ಅವರ ಸೈನ್ಯದಲ್ಲಿ ಹದಿನೈದು ಸಾವಿರ ಸೈನಿಕರಿದ್ದರು. ಪೂರ್ವದೇಶದವರ ಸೈನ್ಯದಲ್ಲಿ ಉಳಿದವರು ಇಷ್ಟೇ ಜನ. ಆ ಸೈನ್ಯದ ಒಂದು ಲಕ್ಷದ ಇಪ್ಪತ್ತು ಸಾವಿರ ಜನರು ಈಗಾಗಲೇ ಯುದ್ಧದಲ್ಲಿ ಸತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು