Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 7:23 - ಪರಿಶುದ್ದ ಬೈಬಲ್‌

23 ಆಗ ನಫ್ತಾಲಿ, ಆಶೇರ ಮತ್ತು ಮನಸ್ಸೆ ಕುಲಗಳ ಎಲ್ಲ ಸೈನಿಕರಿಗೆ ಮಿದ್ಯಾನ್ಯರನ್ನು ಬೆನ್ನಟ್ಟಲು ಹೇಳಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಇಸ್ರಾಯೇಲ್ಯರಾದ ನಫ್ತಾಲಿ, ಆಶೇರ್ ಕುಲಗಳವರೂ, ಮನಸ್ಸೆ ಕುಲದ ಎಲ್ಲಾ ಜನರೂ ಕೂಡಿ ಬಂದು ಮಿದ್ಯಾನ್ಯರನ್ನು ಹಿಂದಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಇಸ್ರಯೇಲರಾದ ನಫ್ತಾಲಿ, ಆಶೇರ್ ಕುಲಗಳವರೂ ಮನಸ್ಸೆಕುಲದ ಜನರೆಲ್ಲರೂ ಕೂಡಿಬಂದು ಮಿದ್ಯಾನ್ಯರನ್ನು ಹಿಂದಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಇಸ್ರಾಯೇಲ್ಯರಾದ ನಫ್ತಾಲಿ ಆಶೇರ್ ಕುಲಗಳವರೂ ಮನಸ್ಸೆಕುಲದ ಎಲ್ಲಾ ಜನರೂ ಕೂಡಿ ಬಂದು ವಿುದ್ಯಾನ್ಯರನ್ನು ಹಿಂದಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಇಸ್ರಾಯೇಲರು ನಫ್ತಾಲಿಯಿಂದಲೂ, ಆಶೇರನಿಂದಲೂ, ಸಮಸ್ತ ಮನಸ್ಸೆಯವರೆಲ್ಲರೂ ಕೂಡಿಬಂದು ಮಿದ್ಯಾನ್ಯರನ್ನು ಹಿಂದಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 7:23
6 ತಿಳಿವುಗಳ ಹೋಲಿಕೆ  

ಮನಸ್ಸೆ ಕುಲದ ಜನರೆಲ್ಲರನ್ನು ಕರೆಯುವುದಕ್ಕಾಗಿ ಗಿದ್ಯೋನನು ದೂತರನ್ನು ಕಳುಹಿಸಿದನು. ಆ ದೂತರು ಮನಸ್ಸೆ ಕುಲದ ಜನರಿಗೆ ತಮ್ಮ ಆಯುಧಗಳನ್ನು ತೆಗೆದುಕೊಂಡು ಯುದ್ಧಕ್ಕೆ ಸಿದ್ಧರಾಗಬೇಕೆಂದು ತಿಳಿಸಿದರು. ಗಿದ್ಯೋನನು ಆಶೇರ್, ಜೆಬುಲೂನ್ ಮತ್ತು ನಫ್ತಾಲಿ ಕುಲದವರ ಹತ್ತಿರವೂ ಸಹ ದೂತರನ್ನು ಕಳುಹಿಸಿದನು. ಆ ದೂತರು ಸಹ ಅದೇ ಸಂದೇಶವನ್ನು ತಿಳಿಸಿದರು. ಆದ್ದರಿಂದ ಆ ಕುಲಗಳವರು ಸಹ ಗಿದ್ಯೋನನನ್ನು ಮತ್ತು ಅವನ ಜನರನ್ನು ಸೇರಿಕೊಳ್ಳಲು ಹೋದರು.


ಹುಷಾಮನು ಸತ್ತಮೇಲೆ, ಹದದನು ಆ ದೇಶವನ್ನು ಆಳಿದನು. ಹದದನು ಬೆದದನ ಮಗನು. (ಮೊವಾಬ್ಯರನ್ನು ಮಿದ್ಯಾನರ ದೇಶದಲ್ಲಿ ಸೋಲಿಸಿದವನೇ ಬೆದದನು.) ಹದದನು ಅವೀತ್ ಪಟ್ಟಣದವನು.


“ನೀವು ನಿಮ್ಮ ವೈರಿಗಳನ್ನು ಸೋಲಿಸಿ ಓಡಿಸಿಬಿಡುವಿರಿ. ನಿಮ್ಮ ಕತ್ತಿಗಳಿಂದ ಅವರನ್ನು ಕೊಲ್ಲುವಿರಿ.


ಆದರೆ ಇಸ್ರೇಲಿನ ಪ್ರತಿಯೊಬ್ಬನೂ ತನ್ನ ಮೇಲೆ ಬಿದ್ದವನನ್ನು ಕೊಂದುಹಾಕುತ್ತಿದ್ದನು. ಅರಾಮ್ಯದ ಜನರು ಓಡಿಹೋಗಲು ಆರಂಭಿಸಿದರು. ಇಸ್ರೇಲಿನ ಸೈನ್ಯವು ಅವರನ್ನು ಅಟ್ಟಿಸಿಕೊಂಡು ಹೋಯಿತು. ರಾಜನಾದ ಬೆನ್ಹದದನು ಅಶ್ವಸೇನೆಯ ಕುದುರೆಯೊಂದರ ಮೇಲೆ ಕುಳಿತು ತಪ್ಪಿಸಿಕೊಂಡನು.


ರಾಜನಾದ ಅಹಾಬನು ತನ್ನ ಸೈನ್ಯವನ್ನು ಮುನ್ನಡೆಸಿ, ಅರಾಮ್ಯರ ಸೇನೆಯಿಂದ ರಥಗಳನ್ನೂ ಅಶ್ವಸೇನೆಯನ್ನೂ ಸೋಲಿಸಿದನು. ಅರಾಮ್ಯರ ಸೇನೆಯ ಮಹಾ ಅಪಜಯಕ್ಕೆ ರಾಜನಾದ ಅಹಾಬನು ಕಾರಣನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು