Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 8:14 - ಪರಿಶುದ್ದ ಬೈಬಲ್‌

14 ಗಿದ್ಯೋನನು ಸುಖೋತ್ ನಗರದ ಒಬ್ಬ ತರುಣನನ್ನು ಹಿಡಿದುಕೊಂಡನು. ಗಿದ್ಯೋನನು ಆ ತರುಣನಿಗೆ ಕೆಲವು ಪ್ರಶ್ನೆಗಳನ್ನು ಕೇಳಿದನು. ಆ ತರುಣನು ಗಿದ್ಯೋನನಿಗಾಗಿ ಕೆಲವು ಹೆಸರುಗಳನ್ನು ಬರೆದನು. ಆ ತರುಣನು ಸುಖೋತ್ ನಗರದ ನಾಯಕರ ಮತ್ತು ಹಿರಿಯರ ಹೆಸರುಗಳನ್ನು ಬರೆದನು. ಅವನು ಎಪ್ಪತ್ತೇಳು ಜನರ ಹೆಸರುಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಸುಖೋತಿನ ಒಬ್ಬ ಯೌವನಸ್ಥನನ್ನು ಹಿಡಿದು, ಆ ಊರಿನ ಮುಖಂಡರೂ, ಹಿರಿಯರೂ ಯಾರಾರೆಂದು ವಿಚಾರಿಸಲು ಅವನು ಎಪ್ಪತ್ತೇಳು ಮಂದಿಯ ಹೆಸರುಗಳನ್ನು ಬರೆದುಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸುಖೋತಿನ ಒಬ್ಬ ಯೌವನಸ್ಥನನ್ನು ಹಿಡಿದು ಆ ಊರಿನ ಮುಖಂಡರೂ ಹಿರಿಯರೂ ಯಾರಾರೆಂದು ವಿಚಾರಿಸಿ ಎಪ್ಪತ್ತೇಳು ಮಂದಿಯ ಹೆಸರುಗಳನ್ನು ಬರೆಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಸುಖೋತಿನ ಒಬ್ಬ ಯೌವನಸ್ಥನನ್ನು ಹಿಡಿದು ಆ ಊರಿನ ಮುಖಂಡರೂ ಹಿರಿಯರೂ ಯಾರಾರೆಂದು ವಿಚಾರಿಸಿ ಎಪ್ಪತ್ತೇಳು ಮಂದಿಯ ಹೆಸರುಗಳನ್ನು ಬರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಸುಕ್ಕೋತಿನ ಮನುಷ್ಯರಲ್ಲಿ ಒಬ್ಬ ಯೌವನಸ್ಥನನ್ನು ಹಿಡಿದು ಅವನನ್ನು ಕೇಳಿದಾಗ ಅವನು, ಸುಕ್ಕೋತಿನ ಪ್ರಧಾನರೂ, ಹಿರಿಯರೂ ಆದ ಎಪ್ಪತ್ತೇಳು ಜನರ ಹೆಸರನ್ನು ಅವನು ಬರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 8:14
5 ತಿಳಿವುಗಳ ಹೋಲಿಕೆ  

ಆದರೆ ಯಾಕೋಬನು ಸುಕ್ಕೋತಿಗೆ ಹೋದನು. ಆ ಸ್ಥಳದಲ್ಲಿ ಅವನು ತನಗಾಗಿ ಒಂದು ಮನೆಯನ್ನೂ ತನ್ನ ದನಕುರಿಗಳಿಗಾಗಿ ಚಿಕ್ಕ ಕೊಟ್ಟಿಗೆಗಳನ್ನೂ ಕಟ್ಟಿಸಿದನು. ಆದ್ದರಿಂದ ಆ ಸ್ಥಳಕ್ಕೆ “ಸುಕ್ಕೋತ್” ಎಂದು ಹೆಸರಾಯಿತು.


ಯೋವಾಷನ ಮಗನಾದ ಗಿದ್ಯೋನನು ಯುದ್ಧದಿಂದ ಹಿಂದಿರುಗಿದನು. ಗಿದ್ಯೋನ ಮತ್ತು ಅವನ ಸೈನಿಕರು ಹೆರೆಸ್ ಎಂಬ ಒಂದು ಬೆಟ್ಟದ ಕಣಿವೆಯ ಮಾರ್ಗವಾಗಿ ಹಿಂದಿರುಗಿದರು.


ಗಿದ್ಯೋನನು ಸುಖೋತ್ ನಗರಕ್ಕೆ ಬಂದು ಆ ನಗರದ ಜನರಿಗೆ, “ನೋಡಿರಿ, ಜೆಬಹ ಮತ್ತು ಚಲ್ಮುನ್ನ ಇಲ್ಲಿದ್ದಾರೆ. ‘ಜೆಬಹ ಮತ್ತು ಚಲ್ಮುನ್ನರನ್ನು ನೀವು ಇನ್ನೂ ಸೆರೆಹಿಡಿದಿಲ್ಲ. ನಿಮ್ಮ ದಣಿದ ಸೈನಿಕರಿಗೆ ಆಹಾರವನ್ನು ನಾವೇಕೆ ಕೊಡಬೇಕು?’ ಎಂದು ನನ್ನನ್ನು ತಮಾಷೆ ಮಾಡಿದಿರಿ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು