Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 8:2 - ಪರಿಶುದ್ದ ಬೈಬಲ್‌

2 ಗಿದ್ಯೋನನು ಎಫ್ರಾಯೀಮ್ಯರಿಗೆ, “ನೀವು ಮಾಡಿದಷ್ಟು ದೊಡ್ಡ ಕೆಲಸವನ್ನು ನಾನು ಮಾಡಿಲ್ಲ. ನನ್ನ ಅಬೀಯೆಜೆರನ ಕುಟುಂಬದವರಿಗಿಂತ ಎಫ್ರಾಯೀಮ್ಯರಾದ ನಿಮ್ಮ ಸುಗ್ಗಿಯೇ ಬಹಳ ಚೆನ್ನಾಗಿ ಆಗಿದೆಯಲ್ಲವೇ? ಸುಗ್ಗಿಯ ಕಾಲದಲ್ಲಿ ನಮ್ಮ ಕುಟುಂಬದವರು ಕೂಡಿಸುವ ದ್ರಾಕ್ಷಿಗಿಂತ ಹೆಚ್ಚು ದ್ರಾಕ್ಷಿಯನ್ನು ನೀವು ಹೊಲದಲ್ಲಿಯೇ ಬಿಟ್ಟುಬಿಡುತ್ತೀರಿ! ಇದು ನಿಜವಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಅವನು ಅವರಿಗೆ, “ನೀವು ಮಾಡಿದ ಕಾರ್ಯಕ್ಕೆ ಸಮಾನವಾಗುವಂತದ್ದು ನಾನೇನು ಮಾಡಿದೆ? ಅಬೀಯೆಜೆರನವರು ಸುಗ್ಗಿಯಲ್ಲಿ ಕೂಡಿಸಿದ್ದಕ್ಕಿಂತಲೂ, ಎಫ್ರಾಯೀಮ್ಯರು ಹಕ್ಕಲಾಯ್ದು ಕೂಡಿಸಿದ್ದು ಹೆಚ್ಚಾಗಿದೆಯಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಗ ಅವನು ಅವರಿಗೆ, “ನೀವು ಮಾಡಿದ ಕಾರ್ಯಕ್ಕೆ ಸರಿಸಮಾನ ಆದದ್ದನ್ನು ನಾನೇನು ಮಾಡಿದೆ? ಅಭೀಯಿಜೆರನವರು ಸುಗ್ಗಿಯಲ್ಲಿ ಕೂಡಿಸಿದ್ದಕ್ಕಿಂತಲೂ ಎಫ್ರಯಿಮ್ಯರು ಹಕ್ಕಲಾಯ್ದು ಕೂಡಿಸಿದ್ದು ಹೆಚ್ಚಾಗಿದೆಯಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಗ ಅವನು ಅವರಿಗೆ - ನೀವು ಮಾಡಿದ ಕಾರ್ಯಕ್ಕೆ ಸಮಾನವಾದದ್ದನ್ನು ನಾನೇನು ಮಾಡಿದೆನು? ಅಬೀಯೆಜೆರನವರು ಸುಗ್ಗಿಯಲ್ಲಿ ಕೂಡಿಸಿದ್ದಕ್ಕಿಂತಲೂ ಎಫ್ರಾಯೀಮ್ಯರು ಹಕ್ಕಲಾಯ್ದು ಕೂಡಿಸಿದ್ದು ಹೆಚ್ಚಾಗಿದೆಯಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವನು ಅವರಿಗೆ, “ನೀವು ಮಾಡಿದ್ದಕ್ಕೆ ಸಮಾನವಾಗಿ ನಾನೇನು ಮಾಡಿದೆನು? ಅಬೀಯೆಜೆರನ ದ್ರಾಕ್ಷಿ ಫಲ ಕೂಡಿಸುವುದಕ್ಕಿಂತ ಎಫ್ರಾಯೀಮನ ಉಳಿದ ದ್ರಾಕ್ಷಿಗಳನ್ನು ಸಂಗ್ರಹಿಸುವುದು ಉತ್ತಮವಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 8:2
11 ತಿಳಿವುಗಳ ಹೋಲಿಕೆ  

ಗಿದ್ಯೋನನ ಮೇಲೆ ಯೆಹೋವನ ಆತ್ಮವು ಬಂದಿತು; ಅವನಿಗೆ ಹೆಚ್ಚಿನ ಶಕ್ತಿಯನ್ನು ಕೊಟ್ಟಿತು. ಅಬೀಯೇಜೆರನ ಗೋತ್ರದವರನ್ನು ತನ್ನನ್ನು ಹಿಂಬಾಲಿಸಲು ಕರೆಯುವುದಕ್ಕಾಗಿ ಗಿದ್ಯೋನನು ತುತ್ತೂರಿಯನ್ನು ಊದಿದನು.


ಆ ಸಮಯದಲ್ಲಿ ಯೆಹೋವನ ದೂತನು ಗಿದ್ಯೋನ ಎಂಬ ವ್ಯಕ್ತಿಯ ಬಳಿಗೆ ಬಂದನು. ಯೆಹೋವನ ದೂತನು ಒಫ್ರ ಎಂಬ ಊರಲ್ಲಿ ಏಲಾ ವೃಕ್ಷದ ಕೆಳಗೆ ಕುಳಿತುಕೊಂಡನು. ಆ ಗಿಡವು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಯೋವಾಷನು ಗಿದ್ಯೋನನ ತಂದೆ. ಗಿದ್ಯೋನನು ದ್ರಾಕ್ಷಿಯ ಆಲೆಯ ಮರೆಯಲ್ಲಿ ಗೋಧಿಯನ್ನು ಬಡಿಯುತ್ತಿದ್ದನು. ಯೆಹೋವನ ದೂತನು ಗಿದ್ಯೋನನ ಹತ್ತಿರ ಕುಳಿತುಕೊಂಡನು. ಮಿದ್ಯಾನ್ಯರಿಗೆ ಗೋಧಿ ಕಾಣಬಾರದೆಂದು ಗಿದ್ಯೋನನು ಮರೆಯಾಗಿದ್ದನು.


“ಸುಗ್ಗಿಕಾಲದಲ್ಲಿ ನಿಮ್ಮ ಬೆಳೆಯನ್ನು ಕೊಯ್ಯುವಾಗ, ಹೊಲಗಳ ಮೂಲೆಗಳಲ್ಲಿರುವುದನ್ನೆಲ್ಲಾ ಕೊಯ್ಯಬೇಡಿರಿ; ಧಾನ್ಯವೇನಾದರೂ ನೆಲದ ಮೇಲೆ ಬಿದ್ದರೆ ಅದನ್ನು ಕೂಡಿಸಿಕೊಳ್ಳಬಾರದು.


ಎಫ್ರಾಯೀಮ್ಯರು ಗಿದ್ಯೋನನ ಮೇಲೆ ಕೋಪಗೊಂಡಿದ್ದರು. ಎಫ್ರಾಯೀಮ್ಯರು ಗಿದ್ಯೋನನನ್ನು ಕಂಡಾಗ, “ನೀನು ನಮ್ಮ ಸಂಗಡ ಹೀಗೇಕೆ ವರ್ತಿಸಿದೆ? ನೀನು ಮಿದ್ಯಾನ್ಯರೊಂದಿಗೆ ಯುದ್ಧಮಾಡಲು ಹೋದಾಗ ನಮ್ಮನ್ನು ಏಕೆ ಕರೆಯಲಿಲ್ಲ?” ಎಂದು ಗಿದ್ಯೋನನನ್ನು ಕೇಳಿದರು.


ಅದೇ ರೀತಿ ಈಗಲೂ ಕೂಡ ನಿಮ್ಮದೇ ದೊಡ್ಡ ರಾಶಿ. ಮಿದ್ಯಾನ್ಯರ ನಾಯಕರಾದ ಓರೇಬನನ್ನು ಮತ್ತು ಜೇಬನನ್ನು ಸೆರೆಹಿಡಿಯುವಂತೆ ದೇವರು ನಿಮಗೆ ಸಹಾಯ ಮಾಡಿದನು. ನೀವು ಮಾಡಿದ ಕೆಲಸಕ್ಕೆ ನನ್ನ ಜಯವನ್ನು ಹೋಲಿಸಲು ಹೇಗೆ ಸಾಧ್ಯ?” ಎಂದು ಹೇಳಿದನು. ಗಿದ್ಯೋನನ ಉತ್ತರವನ್ನು ಕೇಳಿದ ಮೇಲೆ ಎಫ್ರಾಯೀಮ್ಯರ ಕೋಪ ಕಡಿಮೆಯಾಯಿತು.


ಗಿಲ್ಯಾದನ ಕುಟುಂಬದವರು: ಈಯೆಜೆರನ ಕುಟುಂಬದವರಾದ ಈಯೆಜೆರ್ಯರು; ಹೇಲೆಕನ ಕುಟುಂಬದವರಾದ ಹೇಲೆಕ್ಯರು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು