Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 8:20 - ಪರಿಶುದ್ದ ಬೈಬಲ್‌

20 ಗಿದ್ಯೋನನು ಎತೆರನ ಕಡೆಗೆ ತಿರುಗಿದನು. ಎತೆರನು ಗಿದ್ಯೋನನ ಹಿರಿಯ ಮಗ. ಗಿದ್ಯೋನನು ಅವನಿಗೆ, “ಈ ಅರಸರನ್ನು ಕೊಲ್ಲು” ಎಂದು ಹೇಳಿದನು. ಆದರೆ ಎತೆರನು ಇನ್ನೂ ಹುಡುಗನಾಗಿದ್ದುದರಿಂದ ಭಯಪಟ್ಟನು. ಅವನು ತನ್ನ ಕತ್ತಿಯನ್ನು ಹೊರ ತೆಗೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ತನ್ನ ಹಿರೀ ಮಗನಾದ ಎತೆರನಿಗೆ, “ನೀನೆದ್ದು ಇವರನ್ನು ಕೊಂದುಹಾಕು” ಅಂದನು. ಆದರೆ ಅವನು ಇನ್ನೂ ಹುಡುಗನಾಗಿದ್ದರಿಂದ ಭಯಪಟ್ಟು ಕತ್ತಿಯನ್ನು ಹಿರಿಯಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ತನ್ನ ಹಿರಿಯ ಮಗನಾದ ಎತೆರನಿಗೆ, “ನೀನೆದ್ದು ಇವರನ್ನು ಕೊಂದುಹಾಕು,” ಎಂದನು. ಆದರೆ ಅವನು ಇನ್ನೂ ಹುಡುಗನಾಗಿದ್ದುದರಿಂದ ಭಯಪಟ್ಟು ಕತ್ತಿಯನ್ನು ಹಿರಿಯಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ತನ್ನ ಹಿರೀ ಮಗನಾದ ಎತೆರನಿಗೆ - ನೀನೆದ್ದು ಇವರನ್ನು ಕೊಂದುಹಾಕು ಅಂದನು. ಆದರೆ ಅವನು ಇನ್ನೂ ಹುಡುಗನಾಗಿದ್ದದರಿಂದ ಭಯಪಟ್ಟು ಕತ್ತಿಯನ್ನು ಹಿರಿಯಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ತನ್ನ ಚೊಚ್ಚಲಮಗನಾದ ಎತೆರನಿಗೆ, “ನೀನೆದ್ದು ಅವರನ್ನು ಕೊಂದುಹಾಕು,” ಎಂದನು. ಆದರೆ ಆ ಯುವಕನು ತನ್ನ ಖಡ್ಗವನ್ನು ಬಿಚ್ಚದೆ ಹೋದನು. ಏಕೆಂದರೆ ಅವನು ಇನ್ನೂ ಹುಡುಗನಾದ್ದರಿಂದ ಭಯಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 8:20
5 ತಿಳಿವುಗಳ ಹೋಲಿಕೆ  

ಆತನ ಆಜ್ಞೆಗನುಸಾರವಾಗಿ ಆತನ ಭಕ್ತರು ತಮ್ಮ ಶತ್ರಗಳನ್ನು ದಂಡಿಸುವರು. ಆತನು ತನ್ನ ಭಕ್ತರಿಗೆ ಒಳ್ಳೆಯವನಾಗಿದ್ದಾನೆ. ಯೆಹೋವನಿಗೆ ಸ್ತೋತ್ರವಾಗಲಿ.


ಆದರೆ ಸಮುವೇಲನು ಅಗಾಗನಿಗೆ, “ನಿನ್ನ ಕತ್ತಿಯು ಅನೇಕ ತಾಯಂದಿರಿಗೆ ಮಕ್ಕಳಿಲ್ಲದಂತೆ ಮಾಡಿದೆ. ಆದ್ದರಿಂದ ಈಗ ನಿನ್ನ ತಾಯಿಗೆ ಮಕ್ಕಳಿಲ್ಲದಂತಾಯಿತು” ಎಂದು ಹೇಳಿ ಅಗಾಗನನ್ನು ಗಿಲ್ಗಾಲಿನ ಯೆಹೋವನ ಸನ್ನಿಧಿಯಲ್ಲೇ ಕಡಿದುಹಾಕಿದನು.


ಅವರು ಆ ಐದು ಮಂದಿ ಅರಸರನ್ನು ಯೆಹೋಶುವನಲ್ಲಿಗೆ ತಂದರು. ಯೆಹೋಶುವನು ಇಸ್ರೇಲರನ್ನೆಲ್ಲ ಆ ಸ್ಥಳಕ್ಕೆ ಕರೆಸಿ ತನ್ನ ಸೈನ್ಯದ ಅಧಿಕಾರಿಗಳಿಗೆ “ಇಲ್ಲಿಗೆ ಬನ್ನಿ, ನಿಮ್ಮ ಪಾದಗಳನ್ನು ಈ ಅರಸರ ಕುತ್ತಿಗೆಗಳ ಮೇಲೆ ಇಡಿ” ಎಂದು ಹೇಳಿದನು. ಯೆಹೋಶುವನ ಸೈನ್ಯಾಧಿಕಾರಿಗಳು ಹತ್ತಿರಕ್ಕೆ ಬಂದು ತಮ್ಮ ಪಾದಗಳನ್ನು ಆ ಅರಸರ ಕುತ್ತಿಗೆಗಳ ಮೇಲೆ ಇಟ್ಟರು.


ಗಿದ್ಯೋನನು, “ಆ ಜನರು ನನ್ನ ಸಹೋದರರಾಗಿದ್ದರು. ಅವರು ನನ್ನ ತಾಯಿಯ ಮಕ್ಕಳು! ಯೆಹೋವನ ಮೇಲೆ ಆಣೆಮಾಡಿ ಹೇಳುತ್ತೇನೆ, ನೀವು ಅವರನ್ನು ಕೊಲ್ಲದೆ ಇದಿದ್ದರೆ ನಾನು ಈಗ ನಿಮ್ಮನ್ನು ಕೊಲ್ಲುತ್ತಿರಲಿಲ್ಲ” ಎಂದು ಹೇಳಿದನು.


ಆಗ ಜೆಬಹ ಮತ್ತು ಚಲ್ಮುನ್ನರು ಗಿದ್ಯೋನನಿಗೆ, “ನೀನೇ ನಮ್ಮನ್ನು ಕೊಲ್ಲು. ನೀನು ಈ ಕೆಲಸವನ್ನು ಮಾಡುವುದಕ್ಕೆ ಯೋಗ್ಯವಯಸ್ಸಿನವನೂ ಗಟ್ಟಿಗನೂ ಆಗಿರುವೆ” ಎಂದರು. ಗಿದ್ಯೋನನು ಎದ್ದು ಜೆಬಹ ಮತ್ತು ಚಲ್ಮುನ್ನರನ್ನು ಕೊಂದುಹಾಕಿದನು. ಆಮೇಲೆ ಗಿದ್ಯೋನನು ಅವರ ಒಂಟೆಗಳ ಕೊರಳಲ್ಲಿದ್ದ ಅರ್ಧಚಂದ್ರಾಕಾರದ ಆಭರಣಗಳನ್ನು ತೆಗೆದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು