Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 8:21 - ಪರಿಶುದ್ದ ಬೈಬಲ್‌

21 ಆಗ ಜೆಬಹ ಮತ್ತು ಚಲ್ಮುನ್ನರು ಗಿದ್ಯೋನನಿಗೆ, “ನೀನೇ ನಮ್ಮನ್ನು ಕೊಲ್ಲು. ನೀನು ಈ ಕೆಲಸವನ್ನು ಮಾಡುವುದಕ್ಕೆ ಯೋಗ್ಯವಯಸ್ಸಿನವನೂ ಗಟ್ಟಿಗನೂ ಆಗಿರುವೆ” ಎಂದರು. ಗಿದ್ಯೋನನು ಎದ್ದು ಜೆಬಹ ಮತ್ತು ಚಲ್ಮುನ್ನರನ್ನು ಕೊಂದುಹಾಕಿದನು. ಆಮೇಲೆ ಗಿದ್ಯೋನನು ಅವರ ಒಂಟೆಗಳ ಕೊರಳಲ್ಲಿದ್ದ ಅರ್ಧಚಂದ್ರಾಕಾರದ ಆಭರಣಗಳನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆಗ ಜೆಬಹನೂ ಮತ್ತು ಚಲ್ಮುನ್ನನೂ ಗಿದ್ಯೋನನಿಗೆ, “ನೀನೇ ಎದ್ದು ಬಂದು ನಮ್ಮನ್ನು ಕೊಂದುಹಾಕು; ಪ್ರಾಯಕ್ಕೆ ತಕ್ಕಂತೆ ಪುರುಷನಿಗೆ ಬಲವಿರುತ್ತದಲ್ಲಾ” ಅನ್ನಲು ಅವನೆದ್ದು ಜೆಬಹ, ಚಲ್ಮುನ್ನರನ್ನು ಕೊಂದುಹಾಕಿ, ಅವರ ಒಂಟೆಗಳ ಕೊರಳಿನಲ್ಲಿದ್ದ ಅರ್ಧಚಂದ್ರಾಕಾರದ ಆಭರಣಗಳನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆಗ ಜೆಬಹನು ಹಾಗು ಚಲ್ಮುನ್ನನು ಗಿದ್ಯೋನನಿಗೆ, “ನೀನೇ ಎದ್ದು ಬಂದು ನಮ್ಮ ಮೇಲೆ ಬೀಳು; ಪ್ರಾಯಕ್ಕೆ ತಕ್ಕಂತೆ ಪುರುಷನಿಗೆ ಬಲವಿರುತ್ತದೆ ಅಲ್ಲವೆ?” ಎನ್ನಲು ಅವನೆದ್ದು ಜೆಬಹ ಮತ್ತು ಚಲ್ಮುನ್ನ ಎಂಬವರನ್ನು ಕೊಂದುಹಾಕಿ ಅವರ ಒಂಟೆಗಳ ಕೊರಳಲ್ಲಿದ್ದ ಅರ್ಧಚಂದ್ರಾಕಾರದ ಆಭರಣಗಳನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆಗ ಜೆಬಹನೂ ಚಲ್ಮುನ್ನನೂ ಗಿದ್ಯೋನನಿಗೆ - ನೀನೇ ಎದ್ದು ಬಂದು ನಮ್ಮ ಮೇಲೆ ಬೀಳು; ಪ್ರಾಯಕ್ಕೆ ತಕ್ಕಂತೆ ಪುರುಷನಿಗೆ ಬಲವಿರುತ್ತದಲ್ಲಾ ಅನ್ನಲು ಅವನೆದ್ದು ಜೆಬಹ, ಚಲ್ಮುನ್ನ ಎಂಬವರನ್ನು ಕೊಂದುಹಾಕಿ, ಅವರ ಒಂಟೆಗಳ ಕೊರಳಲ್ಲಿದ್ದ ಅರ್ಧಚಂದ್ರಾಕಾರದ ಆಭರಣಗಳನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆಗ ಜೆಬಹನೂ, ಚಲ್ಮುನ್ನನೂ, “ನೀನು ಎದ್ದು ನಮ್ಮ ಮೇಲೆ ಬೀಳು. ಏಕೆಂದರೆ ಮನುಷ್ಯನು ಹೇಗೋ ಹಾಗೆಯೇ ಅವನ ಬಲವು ಇರುವುದು,” ಎಂದರು. ಗಿದ್ಯೋನನು ಎದ್ದು ಜೆಬಹನನ್ನೂ, ಚೆಲ್ಮುನ್ನನನ್ನೂ ಕೊಂದುಹಾಕಿ, ಅವರ ಒಂಟೆಗಳ ಕುತ್ತಿಗೆಗಳಲ್ಲಿ ಇದ್ದ ಆಭರಣಗಳನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 8:21
13 ತಿಳಿವುಗಳ ಹೋಲಿಕೆ  

ದೇವರೇ, ಶತ್ರುಗಳ ನಾಯಕರುಗಳನ್ನು ಸೋಲಿಸು. ನೀನು ಓರೇಬ್ ಮತ್ತು ಜೇಬ್ ಪ್ರಾಂತ್ಯಗಳಿಗೆ ಮಾಡಿದಂತೆಯೇ ಅವರಿಗೆ ಮಾಡು. ನೀನು ಜೇಬಹ ಮತ್ತು ಚಲ್ಮುನ್ನ ಪ್ರಾಂತ್ಯಗಳಿಗೆ ಮಾಡಿದಂತೆಯೇ ಅವರಿಗೆ ಮಾಡು.


ಆ ಸಮಯದಲ್ಲಿ ಆತನು ಅವರ ಎಲ್ಲಾ ವಸ್ತುಗಳನ್ನು ಅವರಿಂದ ತೆಗೆದುಬಿಡುವನು. ಅವರ ಕಾಲುಸರಗಳನ್ನು, ಸೂರ್ಯಚಂದ್ರಾಕಾರದ ಕೊರಳಿನ ಸರಗಳನ್ನು,


ಆ ಮುರುವುಗಳನ್ನು ಒಟ್ಟುಗೂಡಿಸಿ ತೂಕ ಹಾಕಿದಾಗ ಅವುಗಳ ತೂಕ ನಲವತ್ತಮೂರು ಪೌಂಡಿನಷ್ಟಿತ್ತು. ಗಿದ್ಯೋನನಿಗೆ ಇಸ್ರೇಲರು ಕೊಟ್ಟ ಬೇರೆ ಕಾಣಿಕೆಗಳು ಇದರಲ್ಲಿ ಸೇರಿಲ್ಲ. ಅವರು ಅರ್ಧಚಂದ್ರಾಕಾರದ ಮತ್ತು ಕಣ್ಣೀರಿನಾಕಾರದ ಆಭರಣಗಳನ್ನು ಸಹ ಕೊಟ್ಟಿದ್ದರು. ಅವರು ಅವನಿಗೆ ನೇರಳೆ ಬಣ್ಣದ ನಿಲುವಂಗಿಗಳನ್ನು ಕೊಟ್ಟಿದ್ದರು. ಈ ವಸ್ತ್ರಗಳನ್ನು ಮಿದ್ಯಾನ್ಯರ ಅರಸರು ಧರಿಸುತ್ತಿದ್ದರು. ಅವರು ಮಿದ್ಯಾನ್ಯರ ಒಂಟೆಗಳ ಸರಗಳನ್ನು ಸಹ ಕೊಟ್ಟರು.


ಆ ದಿನಗಳಲ್ಲಿ ಜನರು ಸಾಯುವುದಕ್ಕೆ ಮಾರ್ಗವನ್ನು ಹುಡುಕಿದರೂ ಅವರಿಗೆ ಸಿಕ್ಕುವುದಿಲ್ಲ. ಅವರು ಮರಣವನ್ನು ಬಯಸಿದರೂ ಮರಣವು ಅವರಿಗೆ ಮರೆಯಾಗುತ್ತದೆ.


ದೇವರೇ, ಸುಮ್ಮನಿರಬೇಡ! ನಿನ್ನ ಕಣ್ಣುಗಳನ್ನು ಮುಚ್ಚಿಕೊಳ್ಳಬೇಡ. ದೇವರೇ, ದಯವಿಟ್ಟು ಮಾತನಾಡು.


ಸೌಲನು ಸತ್ತುಹೋದದ್ದನ್ನು ಕಂಡ ಆಯುಧವಾಹಕನೂ ತನ್ನ ಖಡ್ಗದಿಂದ ತಾನೂ ಆತ್ಮಹತ್ಯೆ ಮಾಡಿಕೊಂಡನು. ಅವನು ಸೌಲನೊಂದಿಗೆ ಅಲ್ಲಿಯೇ ಸತ್ತುಹೋದನು.


ಸೌಲನ ವಿರುದ್ಧವಾದ ಈ ಯುದ್ಧವು ಬಹಳ ಘೋರವಾಗಿತ್ತು. ಬಿಲ್ಲುಗಾರರು ಸೌಲನ ಮೇಲೆ ಬಾಣಗಳನ್ನು ಬಿಟ್ಟಿದ್ದರಿಂದ ಸೌಲನು ಬಹಳವಾಗಿ ಗಾಯಗೊಂಡನು.


ಕೂಡಲೆ ಅಬೀಮೆಲೆಕನು ತನ್ನ ಆಯುಧವಾಹಕನಿಗೆ, “ನಿನ್ನ ಖಡ್ಗವನ್ನು ಹೊರತೆಗೆದು ನನ್ನನ್ನು ಕೊಂದುಬಿಡು. ‘ಒಬ್ಬ ಹೆಂಗಸು ಅಬೀಮೆಲೆಕನನ್ನು ಕೊಂದಳು’ ಎಂದು ಜನರು ಹೇಳಬಾರದು. ಅದಕ್ಕಾಗಿ ನೀನು ನನ್ನನ್ನು ಕೊಲ್ಲಬೇಕೆಂದು ನನ್ನ ಇಚ್ಛೆ” ಎಂದನು. ಆದ್ದರಿಂದ ಆ ಸೇವಕನು ಅಬೀಮೆಲೆಕನನ್ನು ತನ್ನ ಕತ್ತಿಯಿಂದ ಇರಿದನು; ಅಬೀಮೆಲೆಕನು ಸತ್ತನು.


ಗಿದ್ಯೋನನು ಎತೆರನ ಕಡೆಗೆ ತಿರುಗಿದನು. ಎತೆರನು ಗಿದ್ಯೋನನ ಹಿರಿಯ ಮಗ. ಗಿದ್ಯೋನನು ಅವನಿಗೆ, “ಈ ಅರಸರನ್ನು ಕೊಲ್ಲು” ಎಂದು ಹೇಳಿದನು. ಆದರೆ ಎತೆರನು ಇನ್ನೂ ಹುಡುಗನಾಗಿದ್ದುದರಿಂದ ಭಯಪಟ್ಟನು. ಅವನು ತನ್ನ ಕತ್ತಿಯನ್ನು ಹೊರ ತೆಗೆಯಲಿಲ್ಲ.


ಇಸ್ರೇಲಿಯರು ಗಿದ್ಯೋನನಿಗೆ, “ನೀನು ನಮ್ಮನ್ನು ಮಿದ್ಯಾನ್ಯರಿಂದ ರಕ್ಷಿಸಿರುವೆ. ಅದಕ್ಕಾಗಿ ಈಗ ನಮ್ಮ ಮೇಲೆ ಆಳ್ವಿಕೆ ಮಾಡು. ನೀನೂ ನಿನ್ನ ಮಗನೂ ನಿನ್ನ ಮೊಮ್ಮಗನೂ ನಮ್ಮನ್ನು ಆಳಬೇಕೆಂಬುದು ನಮ್ಮ ಆಶೆ” ಎಂದು ಹೇಳಿದರು.


ಆಮೇಲೆ ಯೆಹೋಶುವನು ಆ ಐದು ಮಂದಿ ಅರಸರನ್ನು ಕೊಂದುಹಾಕಿದನು. ಅವರ ದೇಹಗಳನ್ನು ಐದು ಮರಗಳಿಗೆ ಸಾಯಂಕಾಲದವರೆಗೂ ನೇತುಹಾಕಿದನು.


ಆಗ ಅವರು ಸಂಸೋನನಿಗೆ, “ನಾವು ನಿನ್ನನ್ನು ಬಂಧಿಸಲು ಬಂದಿದ್ದೇವೆ. ನಾವು ನಿನ್ನನ್ನು ಫಿಲಿಷ್ಟಿಯರಿಗೆ ಕೊಡುತ್ತೇವೆ” ಎಂದರು. ಸಂಸೋನನು ಯೆಹೂದ್ಯರಿಗೆ, “ನೀವು ನನ್ನನ್ನು ಕೊಲ್ಲುವುದಿಲ್ಲವೆಂದು ಆಣೆಮಾಡಿರಿ” ಅಂದನು.


ನನ್ನ ದೇವರೇ, ಅವರು ನಿನ್ನ ನಾಡಿನಿಂದ ನಮ್ಮನ್ನು ಹೊರಗಟ್ಟಬೇಕೆಂದಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು