Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 8:26 - ಪರಿಶುದ್ದ ಬೈಬಲ್‌

26 ಆ ಮುರುವುಗಳನ್ನು ಒಟ್ಟುಗೂಡಿಸಿ ತೂಕ ಹಾಕಿದಾಗ ಅವುಗಳ ತೂಕ ನಲವತ್ತಮೂರು ಪೌಂಡಿನಷ್ಟಿತ್ತು. ಗಿದ್ಯೋನನಿಗೆ ಇಸ್ರೇಲರು ಕೊಟ್ಟ ಬೇರೆ ಕಾಣಿಕೆಗಳು ಇದರಲ್ಲಿ ಸೇರಿಲ್ಲ. ಅವರು ಅರ್ಧಚಂದ್ರಾಕಾರದ ಮತ್ತು ಕಣ್ಣೀರಿನಾಕಾರದ ಆಭರಣಗಳನ್ನು ಸಹ ಕೊಟ್ಟಿದ್ದರು. ಅವರು ಅವನಿಗೆ ನೇರಳೆ ಬಣ್ಣದ ನಿಲುವಂಗಿಗಳನ್ನು ಕೊಟ್ಟಿದ್ದರು. ಈ ವಸ್ತ್ರಗಳನ್ನು ಮಿದ್ಯಾನ್ಯರ ಅರಸರು ಧರಿಸುತ್ತಿದ್ದರು. ಅವರು ಮಿದ್ಯಾನ್ಯರ ಒಂಟೆಗಳ ಸರಗಳನ್ನು ಸಹ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಗಿದ್ಯೋನನಿಗೆ ಮೊದಲೇ ದೊರಕಿದ್ದ ಅರ್ಧಚಂದ್ರಾಕಾರದ ಆಭರಣ, ಕುಂಡಲ, ಮಿದ್ಯಾನ್ ರಾಜರು ಹೊದ್ದುಕೊಂಡಿದ್ದ ರಕ್ತಾಂಬರ, ಅವರ ಒಂಟೆಗಳ ಕಂಠಮಾಲೆ, ಇವುಗಳ ಹೊರತಾಗಿ ಅವನು ಇಸ್ರಾಯೇಲ್ಯರಿಂದ ಕೇಳಿ ತೆಗೆದುಕೊಂಡ ಓಲೆಗಳ ಬಂಗಾರವೇ ಸಾವಿರದ ಏಳುನೂರು ತೊಲೆ ತೂಕವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಗಿದ್ಯೋನನಿಗೆ ಮೊದಲೇ ದೊರಕಿದ್ದ ಅರ್ಧಚಂದ್ರಾಕಾರದ ಆಭರಣ, ಕುಂಡಲ, ಮಿದ್ಯಾನ್ ರಾಜರು ಹೊದ್ದುಕೊಂಡಿದ್ದ ರಕ್ತಾಂಬರ, ಅವರ ಒಂಟೆಗಳ ಕಂಠಮಾಲೆ ಇವುಗಳ ಹೊರತಾಗಿ ಅವನು ಇಸ್ರಯೇಲರಿಂದ ಕೇಳಿ ತೆಗೆದುಕೊಂಡ ಮುರುವುಗಳ ಬಂಗಾರವೇ 20 ಕಿಲೋಗ್ರಾಂ ತೂಕವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಗಿದ್ಯೋನನಿಗೆ ಮೊದಲೇ ದೊರಕಿದ್ದ ಅರ್ಧಚಂದ್ರಾಕಾರದ ಆಭರಣ, ಕುಂಡಲ, ವಿುದ್ಯಾನ್ ರಾಜರು ಹೊದ್ದುಕೊಂಡಿದ್ದ ರಕ್ತಾಂಬರ, ಅವರ ಒಂಟೆಗಳ ಕಂಠಮಾಲೆ ಇವುಗಳ ಹೊರತಾಗಿ ಅವನು ಇಸ್ರಾಯೇಲ್ಯರಿಂದ ಕೇಳಿ ತೆಗೆದುಕೊಂಡ ಮುರುವುಗಳ ಬಂಗಾರವೇ ಸಾವಿರದ ಏಳುನೂರು ತೊಲೆ ತೂಕವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆಭರಣಗಳೂ, ಕಂಠಮಾಲೆಗಳೂ, ಮಿದ್ಯಾನರ ಅರಸರು ಹೊದ್ದುಕೊಂಡಿದ್ದ ರಕ್ತಾಂಬರ ವಸ್ತ್ರಗಳೂ, ಅವರ ಒಂಟೆಗಳ ಕೊರಳೊಳಗೆ ಇದ್ದ ಸರಪಣಿಗಳೂ ಹೊರತು ಅವನು ಕೇಳಿ ತೆಗೆದುಕೊಂಡ ಬಂಗಾರದ ಓಲೆಗಳ ತೂಕವು ಇಪ್ಪತ್ತು ಕಿಲೋಗ್ರಾಂ ತೂಕವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 8:26
14 ತಿಳಿವುಗಳ ಹೋಲಿಕೆ  

ಅವರು ದುಃಖದಿಂದ ಗೋಳಾಡುತ್ತಾ ಹೀಗೆನ್ನುವರು: ‘ಅಯ್ಯೋ, ಅಯ್ಯೋ, ಮಹಾನಗರಿಯೇ! ಅವಳು ನಯವಾದ ನಾರುಮಡಿಯನ್ನು, ಧೂಮ್ರವರ್ಣದ ಉಡುಪನ್ನು ಮತ್ತು ರಕ್ತಾಂಬರಗಳನ್ನು ಧರಿಸಿದ್ದಳು. ಅವಳು ಚಿನ್ನ, ರತ್ನ, ಮುತ್ತುಗಳಿಂದ ಶೋಭಿಸುತ್ತಿದ್ದಳು!


ಅವರು ಚಿನ್ನ, ಬೆಳ್ಳಿ, ರತ್ನ, ಮುತ್ತು, ನಯವಾದ ನಾರುಮಡಿ, ಧೂಮ್ರ ವರ್ಣದ ವಸ್ತ್ರ, ರೇಷ್ಮೆ, ರಕ್ತಾಂಬರ, ಸಕಲ ವಿಧವಾದ ಅಗಿಲುಮರ, ದಂತದಿಂದ ಮಾಡಿದ ನಾನಾ ಬಗೆಯ ವಸ್ತುಗಳು, ಬಹು ಬೆಲೆಬಾಳುವ ಮರ, ತಾಮ್ರ, ಕಬ್ಬಿಣ ಮತ್ತು ಚಂದ್ರಕಾಂತ ಶಿಲೆ ಇವುಗಳನ್ನು ಮಾರುತ್ತಾರೆ.


ಆಗ ಯೇಸು ಹೊರಗೆ ಬಂದನು. ಆತನ ತಲೆಯ ಮೇಲೆ ಮುಳ್ಳಿನ ಕಿರೀಟವನ್ನು ಇಟ್ಟಿದ್ದರು ಮತ್ತು ಕೆಂಪು ಅಂಗಿಯನ್ನು ಆತನಿಗೆ ತೊಡಿಸಿದ್ದರು. ಪಿಲಾತನು ಯೆಹೂದ್ಯರಿಗೆ, “ಇಗೋ, ಈ ಮನುಷ್ಯನು!” ಎಂದು ಹೇಳಿದನು.


ಸೈನಿಕರು ಮುಳ್ಳುಬಳ್ಳಿಗಳಿಂದ ಒಂದು ಕಿರೀಟವನ್ನು ಮಾಡಿ ಯೇಸುವಿನ ತಲೆಯ ಮೇಲೆ ಇಟ್ಟರು. ಬಳಿಕ ಸೈನಿಕರು ಯೇಸುವಿಗೆ ಕಡುಕೆಂಪಾದ ಅಂಗಿಯನ್ನು ತೊಡಿಸಿದರು.


ಅವರು ತಾರ್ಷೀಷ್ ನಗರದ ಬೆಳ್ಳಿಯಿಂದಲೂ ಧಿಫಜ್ ನಗರದ ಬಂಗಾರದಿಂದಲೂ ತಮ್ಮ ವಿಗ್ರಹಗಳನ್ನು ಮಾಡುತ್ತಾರೆ. ಆ ವಿಗ್ರಹಗಳನ್ನು ಬಡಗಿಗಳು, ಕಮ್ಮಾರರು ಮತ್ತು ಅಕ್ಕಸಾಲಿಗರು ಮಾಡುತ್ತಾರೆ; ಅವರು ನೀಲಿ ಮತ್ತು ಕಂದು ಬಣ್ಣದ ಬಟ್ಟೆಗಳನ್ನು ಆ ವಿಗ್ರಹಗಳಿಗೆ ತೊಡಿಸುತ್ತಾರೆ. ಅವು ಕುಶಲರ ಕೌಶಲ್ಯವಾಗಿವೆ.


ರಾಜಸನ್ನಿಧಿಯಿಂದ ಮೊರ್ದೆಕೈ ಹೊರಟಾಗ, ಅರಸನು ಕೊಟ್ಟ ವಿಶೇಷ ವಸ್ತ್ರಗಳನ್ನು ಮೊರ್ದೆಕೈಯು ಧರಿಸಿದ್ದನು. ಅದು ನೀಲಿ ಮತ್ತು ಬಿಳಿ ಬಣ್ಣದಾಗಿತ್ತು. ತಲೆಗೆ ಬಂಗಾರದ ಕಿರೀಟವನ್ನು ತೊಟ್ಟಿದ್ದನು. ಅಲ್ಲದೆ ನೇರಳೇ ಬಣ್ಣದ ವಸ್ತ್ರವೂ ಕೂಡಾ ಅವನಲ್ಲಿದ್ದವು. ರಾಜಧಾನಿಯಾದ ಶೂಷನ್ ನಗರದಲ್ಲಿ ವಿಶೇಷ ಸಮಾರಂಭವಿತ್ತು. ಜನರು ಸಂತೋಷದಿಂದ ನಲಿದಾಡಿದರು.


ಆ ಸ್ತ್ರೀಯು ಧೂಮ್ರ ವರ್ಣದ ಮತ್ತು ಕೆಂಪು ಬಣ್ಣದ ಬಟ್ಟೆಗಳನ್ನು ಧರಿಸಿದ್ದಳು. ಅವಳು ತಾನು ತೊಟ್ಟಿದ್ದ ಚಿನ್ನ, ರತ್ನ, ಮುತ್ತು, ಮುಂತಾದವುಗಳಿಂದ ಪ್ರಕಾಶಿಸುತ್ತಿದ್ದಳು. ಅವಳು ತನ್ನ ಕೈಯಲ್ಲಿ ಚಿನ್ನದ ಬಟ್ಟಲನ್ನು ಹಿಡಿದಿದ್ದಳು. ಆ ಬಟ್ಟಲು ಅಸಹ್ಯವಾದವುಗಳಿಂದ ಮತ್ತು ಅವಳ ಲೈಂಗಿಕ ಪಾಪಗಳ ಅಶುದ್ಧತೆಯಿಂದ ತುಂಬಿಹೋಗಿತ್ತು.


ಈಜಿಪ್ಟಿನಲ್ಲಿ ತಯಾರಿಸಿದ ಬಣ್ಣದ ನಾರುಮಡಿಯನ್ನು ನಿನ್ನ ಹಾಯಿಗಳಿಗಾಗಿ ಉಪಯೋಗಿಸಿದರು. ಆ ಹಾಯಿಯು ನಿನ್ನ ಧ್ವಜವಾಯಿತು. ನಿನ್ನ ಮೇಲ್ಮಾಳಿಗೆಯ ಹೊದಿಕೆಯು ನೀಲ ಮತ್ತು ಧೂಮ್ರ ವರ್ಣದವುಗಳಾಗಿದ್ದವು. ಅವು ಸೈಪ್ರಸ್ ದ್ವೀಪದಿಂದ ಬಂದವುಗಳಾಗಿದ್ದವು.


ಯೇಸು ಹೀಗೆಂದನು: “ಒಬ್ಬ ಐಶ್ವರ್ಯವಂತನಿದ್ದನು. ಅವನು ಯಾವಾಗಲೂ ಉತ್ತಮವಾದ ಉಡುಪುಗಳನ್ನು ಧರಿಸುತ್ತಿದ್ದನು. ಅವನು ಬಹಳ ಐಶ್ವರ್ಯವಂತನಾಗಿದ್ದುದರಿಂದ ಪ್ರತಿದಿನವೂ ವೈಭವದೊಡನೆ ಊಟಮಾಡುತ್ತಾ ಸಂತೋಷಪಡುತ್ತಿದ್ದನು.


ಆಗ ಜೆಬಹ ಮತ್ತು ಚಲ್ಮುನ್ನರು ಗಿದ್ಯೋನನಿಗೆ, “ನೀನೇ ನಮ್ಮನ್ನು ಕೊಲ್ಲು. ನೀನು ಈ ಕೆಲಸವನ್ನು ಮಾಡುವುದಕ್ಕೆ ಯೋಗ್ಯವಯಸ್ಸಿನವನೂ ಗಟ್ಟಿಗನೂ ಆಗಿರುವೆ” ಎಂದರು. ಗಿದ್ಯೋನನು ಎದ್ದು ಜೆಬಹ ಮತ್ತು ಚಲ್ಮುನ್ನರನ್ನು ಕೊಂದುಹಾಕಿದನು. ಆಮೇಲೆ ಗಿದ್ಯೋನನು ಅವರ ಒಂಟೆಗಳ ಕೊರಳಲ್ಲಿದ್ದ ಅರ್ಧಚಂದ್ರಾಕಾರದ ಆಭರಣಗಳನ್ನು ತೆಗೆದುಕೊಂಡನು.


ಇಸ್ರೇಲರು, “ನೀನು ಕೇಳಿದ್ದನ್ನು ಸಂತೋಷದಿಂದ ಕೊಡುತ್ತೇವೆ” ಎಂದು ಹೇಳಿ ನೆಲದ ಮೇಲೆ ಒಂದು ಮೇಲಂಗಿಯನ್ನು ಹಾಸಿದರು. ಪ್ರತಿಯೊಬ್ಬನು ಒಂದೊಂದು ಮುರುವನ್ನು ಆ ಅಂಗಿಯ ಮೇಲೆ ಎಸೆದನು.


ಗಿದ್ಯೋನನು ಈ ಚಿನ್ನವನ್ನು ಒಂದು ಏಫೋದ್ ಮಾಡುವುದಕ್ಕೆ ಬಳಸಿದನು. ಆ ಏಫೋದನ್ನು ತನ್ನ ಊರಾದ ಒಫ್ರದಲ್ಲಿಟ್ಟನು. ಇಸ್ರೇಲರು ಈ ಏಫೋದನ್ನು ಆರಾಧಿಸಿದರು. ಹೀಗಾಗಿ ಇಸ್ರೇಲರು ಯೆಹೋವನಿಗೆ ನಂಬಿಗಸ್ತರಾಗಿರಲಿಲ್ಲ. ಗಿದ್ಯೋನನನ್ನು ಮತ್ತು ಅವನ ಕುಟುಂಬದವರನ್ನು ಪಾಪಮಾರ್ಗಕ್ಕೆ ಎಳೆಯಲು ಏಫೋದ್ ಒಂದು ಉರುಲಾಗಿ ಪರಿಣಮಿಸಿತು.


ಆಕೆ ಹೊದಿಕೆಗಳನ್ನು ತಯಾರಿಸುವಳು. ಆಕೆಯು ಶ್ರೇಷ್ಠವಾದ ನಾರಗಸೆಯ ದಾರದಿಂದ ಮಾಡಿದ ಬಟ್ಟೆಗಳನ್ನು ಧರಿಸಿಕೊಳ್ಳುವಳು.


ಆ ಸಮಯದಲ್ಲಿ ಆತನು ಅವರ ಎಲ್ಲಾ ವಸ್ತುಗಳನ್ನು ಅವರಿಂದ ತೆಗೆದುಬಿಡುವನು. ಅವರ ಕಾಲುಸರಗಳನ್ನು, ಸೂರ್ಯಚಂದ್ರಾಕಾರದ ಕೊರಳಿನ ಸರಗಳನ್ನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು