Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 8:5 - ಪರಿಶುದ್ದ ಬೈಬಲ್‌

5 ಗಿದ್ಯೋನನು ಸುಖೋತ್ ನಗರದ ಜನರಿಗೆ, “ನನ್ನ ಸೈನಿಕರಿಗೆ ತಿನ್ನಲು ಏನಾದರೂ ಕೊಡಿ; ಅವರು ಬಹಳ ದಣಿದು ಹೋಗಿದ್ದಾರೆ. ನಾವು ಮಿದ್ಯಾನ್ಯರ ಅರಸನಾದ ಜೆಬಹನನ್ನೂ ಚಲ್ಮುನ್ನನನ್ನೂ ಬೆನ್ನಟ್ಟಿಕೊಂಡು ಹೋಗುತ್ತಿದ್ದೇವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಗಿದ್ಯೋನನು ಸುಖೋತಿನವರಿಗೆ, “ದಯವಿಟ್ಟು ನನ್ನ ಜೊತೆಯಲ್ಲಿ ಬಂದಿರುವವರಿಗೆ ಕೆಲವು ರೊಟ್ಟಿಗಳನ್ನು ಕೊಡಿರಿ, ಅವರು ಬಹಳ ದಣಿದಿದ್ದಾರೆ; ನಾನು ಮಿದ್ಯಾನ್ಯರ ಅರಸರಾದ ಜೆಬಹ, ಚಲ್ಮುನ್ನರನ್ನು ಹಿಂದಟ್ಟುತ್ತಾ ಇದ್ದೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಗಿದ್ಯೋನನು ಸುಖೋತಿನವರಿಗೆ, “ದಯವಿಟ್ಟು ನನ್ನ ಜೊತೆಯಲ್ಲಿ ಬಂದಿರುವವರಿಗೆ ಸ್ವಲ್ಪ ರೊಟ್ಟಿ ಕೊಡಿ. ಅವರು ಬಹಳ ದಣಿದಿದ್ದಾರೆ; ನಾನು ಮಿದ್ಯಾನ್ಯರ ಅರಸರಾದ ಜೆಬಹ ಮತ್ತು ಚಲ್ಮುನ್ನ ಎಂಬವರನ್ನು ಹಿಂದಟ್ಟುತ್ತಾ ಇದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಗಿದ್ಯೋನನು ಸುಖೋತಿನವರಿಗೆ - ದಯವಿಟ್ಟು ನನ್ನ ಜೊತೆಯಲ್ಲಿ ಬಂದಿರುವವರಿಗೆ ಕೆಲವು ರೊಟ್ಟಿಗಳನ್ನು ಕೊಡಿರಿ, ಅವರು ಬಹಳ ದಣಿದಿದ್ದಾರೆ; ನಾನು ವಿುದ್ಯಾನ್ಯರ ಅರಸರಾದ ಜೆಬಹ, ಚಲ್ಮುನ್ನ ಎಂಬವರನ್ನು ಹಿಂದಟ್ಟುತ್ತಾ ಇದ್ದೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವನು ಸುಕ್ಕೋತನವರಿಗೆ, “ದಯಮಾಡಿ ನನ್ನ ಕೂಡ ಇರುವ ಜನರಿಗೆ ಕೆಲವು ರೊಟ್ಟಿಗಳನ್ನು ಕೊಡಿರಿ. ಏಕೆಂದರೆ ಅವರು ದಣಿದಿದ್ದಾರೆ. ನಾನು ಮಿದ್ಯಾನ್ಯರ ಅರಸುಗಳಾದ ಜೆಬಹನನ್ನೂ, ಚಲ್ಮುನ್ನನನ್ನೂ ಹಿಂದಟ್ಟುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 8:5
11 ತಿಳಿವುಗಳ ಹೋಲಿಕೆ  

ಆದರೆ ಯಾಕೋಬನು ಸುಕ್ಕೋತಿಗೆ ಹೋದನು. ಆ ಸ್ಥಳದಲ್ಲಿ ಅವನು ತನಗಾಗಿ ಒಂದು ಮನೆಯನ್ನೂ ತನ್ನ ದನಕುರಿಗಳಿಗಾಗಿ ಚಿಕ್ಕ ಕೊಟ್ಟಿಗೆಗಳನ್ನೂ ಕಟ್ಟಿಸಿದನು. ಆದ್ದರಿಂದ ಆ ಸ್ಥಳಕ್ಕೆ “ಸುಕ್ಕೋತ್” ಎಂದು ಹೆಸರಾಯಿತು.


ದೇವರು ತನ್ನ ಆಲಯದೊಳಗೆ ಹೀಗೆಂದನು: “ನಾನು ಅವರಿಗೆ ಶೆಕೆಮನ್ನು ಕೊಡುವೆನು; ಸುಕ್ಕೋತ್ ಕಣಿವೆಯನ್ನೂ ಅವರಿಗೆ ಕೊಡುವೆನು.


ಅಬೀಗೈಲಳು ಇನ್ನೂರು ರೊಟ್ಟಿಗಳನ್ನೂ ಎರಡು ದ್ರಾಕ್ಷಾರಸದ ಚೀಲಗಳನ್ನೂ ಐದು ಕುರಿಗಳ ಬೇಯಿಸಿದ ಮಾಂಸವನ್ನೂ ಹದಿನೇಳು ಕಿಲೋಗ್ರಾಂ ಬೇಯಿಸಿದ ಕಾಳನ್ನೂ ನೂರುಗೊಂಚಲು ಒಣದ್ರಾಕ್ಷಿಯನ್ನೂ ಅಂಜೂರ ಹಣ್ಣಿನ ಇನ್ನೂರು ಉಂಡೆಗಳನ್ನೂ ತ್ವರಿತವಾಗಿ ತೆಗೆದುಕೊಂಡಳು. ಅವಳು ಅವುಗಳನ್ನು ಕತ್ತೆಗಳ ಮೇಲೆ ಹೇರಿದಳು.


ಯಾಕೆಂದರೆ ಇಸ್ರೇಲರು ಈಜಿಪ್ಟಿನಿಂದ ಹೊರಟುಬಂದು ಪ್ರಯಾಣದಲ್ಲಿದ್ದಾಗ ಅವರಿಗೆ ರೊಟ್ಟಿಯನ್ನಾಗಲಿ ನೀರನ್ನಾಗಲಿ ಕೊಡಲು ಅವರು ನಿರಾಕರಿಸಿದ್ದರು. ಅವರು ಮೆಸಪೊಟೋಮಿಯದಿಂದ ಬಿಳಾಮನನ್ನು ಕರೆಸಿ ಇಸ್ರೇಲರನ್ನು ಶಪಿಸುವಂತೆ ಬಲವಂತಪಡಿಸಿದರು.


ಸಾಲೇಮಿನ ರಾಜನಾದ ಮೆಲ್ಕೀಚೆದೆಕನು ಸಹ ಅಬ್ರಾಮನನ್ನು ಭೇಟಿಯಾಗಲು ಹೋದನು. ಮಹೋನ್ನತನಾದ ದೇವರ ಯಾಜಕನಾಗಿದ್ದ ಅವನು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಂಡು ಬಂದು,


ಜೆಬಹ ಮತ್ತು ಚಲ್ಮುನ್ನ ಮತ್ತು ಅವರ ಸೈನಿಕರು ಕರ್ಕೋರ ಎಂಬ ನಗರದಲ್ಲಿದ್ದರು. ಅವರ ಸೈನ್ಯದಲ್ಲಿ ಹದಿನೈದು ಸಾವಿರ ಸೈನಿಕರಿದ್ದರು. ಪೂರ್ವದೇಶದವರ ಸೈನ್ಯದಲ್ಲಿ ಉಳಿದವರು ಇಷ್ಟೇ ಜನ. ಆ ಸೈನ್ಯದ ಒಂದು ಲಕ್ಷದ ಇಪ್ಪತ್ತು ಸಾವಿರ ಜನರು ಈಗಾಗಲೇ ಯುದ್ಧದಲ್ಲಿ ಸತ್ತಿದ್ದರು.


ಮಿದ್ಯಾನ್ಯರ ಅರಸರಾದ ಜೆಬಹನೂ ಚಲ್ಮುನ್ನನೂ ಓಡಿಹೋದರು. ಆದರೆ ಗಿದ್ಯೋನನು ಬೆನ್ನಟ್ಟಿ ಆ ಅರಸರನ್ನು ಹಿಡಿದುಕೊಂಡನು. ಗಿದ್ಯೋನ ಮತ್ತು ಅವನ ಸೈನಿಕರು ಶತ್ರುಸೈನ್ಯವನ್ನು ಸೋಲಿಸಿದರು.


ಗಿದ್ಯೋನನು ಸುಖೋತ್ ನಗರಕ್ಕೆ ಬಂದು ಆ ನಗರದ ಜನರಿಗೆ, “ನೋಡಿರಿ, ಜೆಬಹ ಮತ್ತು ಚಲ್ಮುನ್ನ ಇಲ್ಲಿದ್ದಾರೆ. ‘ಜೆಬಹ ಮತ್ತು ಚಲ್ಮುನ್ನರನ್ನು ನೀವು ಇನ್ನೂ ಸೆರೆಹಿಡಿದಿಲ್ಲ. ನಿಮ್ಮ ದಣಿದ ಸೈನಿಕರಿಗೆ ಆಹಾರವನ್ನು ನಾವೇಕೆ ಕೊಡಬೇಕು?’ ಎಂದು ನನ್ನನ್ನು ತಮಾಷೆ ಮಾಡಿದಿರಿ” ಎಂದನು.


“ಮೇರೋಜ್ ಊರಿಗೆ ಶಾಪಹಾಕಿರಿ; ಅಲ್ಲಿಯ ಜನರಿಗೆ ಶಾಪಹಾಕಿರಿ; ಏಕೆಂದರೆ ಅವರು ಯೆಹೋವನ ಸಹಾಯಕ್ಕೆ ತಮ್ಮ ಸೈನ್ಯದೊಂದಿಗೆ ಬರಲಿಲ್ಲ” ಎಂದನು ಯೆಹೋವನ ದೂತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು