Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:15 - ಪರಿಶುದ್ದ ಬೈಬಲ್‌

15 “ಆ ಮುಳ್ಳುಪೊದೆಯು, ‘ನೀವು ನಿಜವಾಗಿಯೂ ನನ್ನನ್ನು ನಿಮ್ಮ ಅರಸನನ್ನಾಗಿ ಮಾಡಬೇಕೆಂದು ಇಚ್ಛೆಪಟ್ಟರೆ, ನೀವು ಬಂದು ನನ್ನ ನೆರಳಿನಲ್ಲಿ ಆಶ್ರಯಪಡೆಯಿರಿ; ನೀವು ಹೀಗೆ ಮಾಡಲು ಒಪ್ಪದಿದ್ದರೆ ನನ್ನಿಂದ ಬೆಂಕಿ ಹೊರಡಲಿ. ಆ ಬೆಂಕಿಯು ಲೆಬನೋನಿನ ದೇವದಾರು ವೃಕ್ಷಗಳನ್ನು ದಹಿಸಿಬಿಡಲಿ’ ಎಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅದು, ‘ನೀವು ಯಥಾರ್ಥಮನಸ್ಸಿನಿಂದ ನನಗೆ ರಾಜ್ಯಾಭಿಷೇಕ ಮಾಡಬೇಕೆಂದಿರುವುದಾದರೆ ಬಂದು ನನ್ನ ನೆರಳನ್ನು ಆಶ್ರಯಿಸಿಕೊಳ್ಳಿರಿ; ಇಲ್ಲವಾದರೆ ನನ್ನಿಂದ ಬೆಂಕಿಹೊರಟು ಲೆಬನೋನಿನ ದೇವದಾರು ವೃಕ್ಷಗಳನ್ನು ದಹಿಸಿಬಿಡುವುದು’ ಎಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅದಕ್ಕೆ ಆ ಪೊದೆ, ‘ನೀವು ನಿಜವಾದ ಮನಸ್ಸಿನಿಂದ ನನಗೆ ರಾಜ್ಯಾಭಿಷೇಕ ಮಾಡಬೇಕೆಂದಿರುವುದಾದರೆ, ಬನ್ನಿ, ಬಂದು ನನ್ನಿಂದ ಬೆಂಕಿಹೊರಟು ಲೆಬನೋನಿನ ದೇವದಾರುವೃಕ್ಷಗಳನ್ನು ಸುಟ್ಟುಬಿಡುವುದು,’ ಎಂದುಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅದು - ನೀವು ಯಥಾರ್ಥಮನಸ್ಸಿನಿಂದ ನನಗೆ ರಾಜ್ಯಾಭಿಷೇಕ ಮಾಡಬೇಕೆಂದಿರುವದಾದರೆ ಬಂದು ನನ್ನ ನೆರಳನ್ನು ಆಶ್ರಯಿಸಿಕೊಳ್ಳಿರಿ; ಇಲ್ಲವಾದರೆ ನನ್ನಿಂದ ಬೆಂಕಿಹೊರಟು ಲೆಬನೋನಿನ ದೇವದಾರುವೃಕ್ಷಗಳನ್ನು ದಹಸಿಬಿಡುವದು ಎಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ಮುಳ್ಳಿನ ಗಿಡವು ಮರಗಳಿಗೆ, ‘ನೀವು ನನ್ನನ್ನು ಅರಸನನ್ನಾಗಿ ಅಭಿಷೇಕ ಮಾಡುವುದು ಸತ್ಯವಾದರೆ, ನನ್ನ ನೆರಳಲ್ಲಿ ಬಂದು ಆಶ್ರಯಿಸಿಕೊಳ್ಳಿರಿ; ಇಲ್ಲದಿದ್ದರೆ ಮುಳ್ಳಿನ ಗಿಡದಿಂದ ಬೆಂಕಿ ಹೊರಟು, ಲೆಬನೋನಿನ ದೇವದಾರುಗಳು ದಹಿಸಿಬಿಡಲಿ,’ ಎಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:15
19 ತಿಳಿವುಗಳ ಹೋಲಿಕೆ  

ಈ ಮಕ್ಕಳು ಈಜಿಪ್ಟಿಗೆ ಸಹಾಯಕ್ಕಾಗಿ ಹೋಗುತ್ತಾರೆ, ಆದರೆ ಅವರು ಹಾಗೆ ಮಾಡುವದು ಸರಿಯೋ ಎಂದು ನನ್ನ ಹತ್ತಿರ ಕೇಳುವದಿಲ್ಲ. ಫರೋಹನು ತಮ್ಮನ್ನು ರಕ್ಷಿಸುತ್ತಾನೆಂದು ಅವರು ತಿಳಿದಿದ್ದಾರೆ. ಈಜಿಪ್ಟೇ ತಮ್ಮನ್ನು ಕಾಪಾಡಬೇಕು ಎಂಬುದು ಅವರ ಇಷ್ಟ.


ಇಸ್ರೇಲಿನ ಜನರು ಮತ್ತೆ ನನ್ನ ಆಶ್ರಯದಲ್ಲಿ ವಾಸಿಸುವರು. ಧಾನ್ಯದ ಸಸಿಗಳಂತೆ ಬೆಳೆಯುವರು, ದ್ರಾಕ್ಷಾಲತೆಯಿಂದ ಚಿಗುರುವರು. ಲೆಬನೋನಿನ ದ್ರಾಕ್ಷಿಬಳ್ಳಿಯಂತೆ ಅವರು ಇರುವರು.”


ಆ ಅಹಂಕಾರದ ಜನರು ಲೆಬನೋನಿನ ದೇವದಾರು ಮರಗಳಂತಿರುವರು. ಬಾಷಾನಿನ ಮಹಾದೇವದಾರು ಮರಗಳಂತಿರುವರು. ಆದರೆ ಯೆಹೋವನು ಅವರನ್ನು ಶಿಕ್ಷಿಸುವನು.


ಆದರೆ ನೀವು ಮಾಡಿದ್ದು ಸರಿಯಾಗಿರದ ಪಕ್ಷದಲ್ಲಿ ಶೆಕೆಮಿನ ಹಿರಿಯರಾದ ನಿಮ್ಮನ್ನೂ ಮಿಲ್ಲೋ ಕೋಟೆಯವರನ್ನೂ ಅಬೀಮೆಲೆಕನು ನಾಶಮಾಡಲಿ. ಅಬೀಮೆಲೆಕನು ಕೂಡ ನಾಶಹೊಂದಲಿ” ಎಂದನು.


ಆ ಮರದ ಎಲೆಗಳು ಸುಂದರವಾಗಿದ್ದವು. ಅದು ತುಂಬ ಒಳ್ಳೆಯ ಹಣ್ಣುಗಳನ್ನು ಫಲಿಸಿತ್ತು. ಆ ಮರದಲ್ಲಿ ಪ್ರತಿಯೊಬ್ಬರಿಗೂ ಸಾಕಾಗುವಷ್ಟು ಆಹಾರವಿತ್ತು. ಕಾಡುಪ್ರಾಣಿಗಳೂ ಆ ಮರದ ಕೆಳಗೆ ಆಶ್ರಯವನ್ನು ಪಡೆದಿದ್ದವು. ಅದರ ಕೊಂಬೆಗಳಲ್ಲಿ ಪಕ್ಷಿಗಳು ವಾಸಮಾಡಿಕೊಂಡಿದ್ದವು. ಪ್ರತಿಯೊಂದು ಪ್ರಾಣಿಗೂ ಆ ಮರದಿಂದ ಆಹಾರ ಸಿಕ್ಕುತ್ತಿತ್ತು.


ಅದರ ಸ್ವಂತ ಕಾಂಡದಿಂದಲೇ ಬೆಂಕಿಯು ಹೊರಟುಬಂದು ಅದರ ಚಿಕ್ಕ ಕೊಂಬೆಗಳನ್ನು ಮತ್ತು ಫಲಗಳನ್ನು ನಾಶಮಾಡಿತು. ಈಗ ಬಲವಾದ ಕಾಂಡ ಅದರಲ್ಲಿಲ್ಲ. ಆಳುವದಕ್ಕೆ ರಾಜದಂಡವೂ ಅದರಲ್ಲಿಲ್ಲ.’ ಇದು ಮರಣದ ಶೋಕಗೀತೆ. ಇದನ್ನು ಶೋಕಗೀತೆಯನ್ನಾಗಿಯೇ ಬಳಸಲಾಗುತ್ತಿದೆ.”


ನನ್ನ ಒಡೆಯನಾದ ಯೆಹೋವನನ್ನು ತುಚ್ಛೀಕರಿಸಲಿಕ್ಕೆ ನೀನು ನಿನ್ನ ಅಧಿಕಾರಿಯನ್ನು ಕಳುಹಿಸಿದೆ. “ನನ್ನಲ್ಲಿ ಬಲ ಸಾಮರ್ಥ್ಯಗಳಿವೆ; ನನ್ನಲ್ಲಿ ಅನೇಕಾನೇಕ ರಥಗಳಿವೆ. ನನ್ನ ಬಲದಿಂದ ನಾನು ಲೆಬನೋನನ್ನು ಸೋಲಿಸಿದೆ. ಲೆಬನೋನಿನ ಉನ್ನತ ಶಿಖರಗಳನ್ನು ನಾನು ಏರಿದೆನು. ಲೆಬನೋನಿನ ಎತ್ತರವಾದ ದೇವದಾರು ಮರಗಳನ್ನೂ ಶ್ರೇಷ್ಠವಾದ ತುರಾಯಿ ಮರಗಳನ್ನೂ (ಸೈನ್ಯ) ನಾನು ಕಡಿದುಹಾಕಿದೆನು. ನಾನು ಅತ್ಯುನ್ನತ ಶಿಖರಕ್ಕೂ ದಟ್ಟವಾದ ಕಾಡಿನೊಳಗೂ ಹೋಗಿದ್ದೇನೆ.


ಲೆಬನೋನಿನ ದೇವದಾರು ವೃಕ್ಷಗಳು ಯೆಹೋವನವೇ, ಅವುಗಳನ್ನು ನೆಟ್ಟಾತನು ಯೆಹೋವನೇ. ಆತನೇ ಅವುಗಳಿಗೆ ಬೇಕಾದ ನೀರನ್ನು ಒದಗಿಸುವನು.


ಇಸ್ರೇಲಿನ ರಾಜನಾದ ಯೋವಾಷನು ಯೆಹೂದದ ರಾಜನಾದ ಅಮಚ್ಯನಿಗೆ, “ಲೆಬನೋನಿನ ಒಂದು ಮುಳ್ಳುಗಿಡವು ಲೆಬನೋನಿನ ದೇವದಾರುಮರಕ್ಕೆ ಒಂದು ಸಂದೇಶವನ್ನು ಕಳುಹಿಸಿತು. ಅದು, ‘ನನ್ನ ಮಗನಿಗೆ ನಿನ್ನ ಮಗಳನ್ನು ಕೊಟ್ಟು ಮದುವೆ ಮಾಡು’ ಎಂದಿತು. ಆದರೆ ಲೆಬನೋನಿನ ಒಂದು ಕಾಡುಮೃಗವು ಆ ದಾರಿಯಲ್ಲಿ ಹೋಗುವಾಗ, ಮುಳ್ಳುಗಿಡದ ಮೇಲೆ ಹಾದುಹೋಯಿತು.


ಹೆಷ್ಬೋನಿನಲ್ಲಿ ಬೆಂಕಿಯುಂಟಾಯಿತು. ಆ ಬೆಂಕಿ ಸೀಹೋನನ ಪಟ್ಟಣದಲ್ಲಿ ಉಂಟಾಯಿತು. ಆ ಬೆಂಕಿಯು ಮೋವಾಬಿನಲ್ಲಿರುವ ‘ಆರ್’ ಪಟ್ಟಣವನ್ನು ನಾಶಮಾಡಿತು. ಅದು ಅರ್ನೋನ್ ನದಿಯ ಬಳಿಯಲ್ಲಿರುವ ಬೆಟ್ಟಗಳನ್ನು ಸುಟ್ಟುಹಾಕಿತು.


ಅದು ಎಲ್ಲಾ ಬೀಜಗಳಿಗಿಂತಲೂ ಸಣ್ಣ ಬೀಜವಾಗಿದೆ. ಆದರೆ ಅದು ಬೆಳೆದಾಗ ತೋಟದ ಗಿಡಗಳಿಗಿಂತಲೂ ದೊಡ್ಡದಾಗಿರುವುದು. ಅದು ಮರವಾದಾಗ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ಗೂಡು ಮಾಡಿಕೊಳ್ಳುವಷ್ಟು ದೊಡ್ಡದಾಗಿರುತ್ತದೆ.”


ಅಶ್ಶೂರವು ಲೆಬನೋನಿನಲ್ಲಿರುವ ದೇವದಾರು ಮರದಂತೆ ಎತ್ತರವಾಗಿ, ಸುಂದರವಾದ ಕೊಂಬೆಗಳಿಂದಲೂ ಕಾಡಿನ ನೆರಳಿನಲ್ಲಿಯೂ ಶೋಭಿಸುತ್ತದೆ. ಅದರ ಮೇಲಿನ ತುದಿಯು ಮುಗಿಲನ್ನು ಮುಟ್ಟುವದು.


ಬಲಿಷ್ಠರು ಸಣ್ಣಗಿರುವ ಒಣಮರದ ತುಂಡಿನಂತಿರುವರು. ಆ ಜನರು ಮಾಡುವ ಕಾರ್ಯಗಳು ಬೆಂಕಿಯನ್ನು ಪ್ರಾರಂಭಿಸುವ ಕಿಡಿಯಂತಿರುವವು. ಅವರ ಕಾರ್ಯಗಳೆಲ್ಲಾ ಸುಟ್ಟುಹೋಗುವವು; ಆ ಬೆಂಕಿಯನ್ನು ಯಾರೂ ನಿಲ್ಲಿಸಲಾರರು.


ಆದ್ದರಿಂದ ಅವರೆಲ್ಲರೂ ಕೊಂಬೆಗಳನ್ನು ಕಡಿದುಕೊಂಡು ಅವನನ್ನು ಹಿಂಬಾಲಿಸಿದರು. ಅವರು ಏಲ್‌ಬೆರೀತ್ ದೇವರಗುಡಿಯ ಅತೀ ಸುರಕ್ಷಿತವಾದ ಕೋಣೆಯ ಸುತ್ತಲೂ ಆ ಕೊಂಬೆಗಳನ್ನು ಇಟ್ಟರು. ತರುವಾಯ ಆ ಕೊಂಬೆಗಳಿಗೆ ಬೆಂಕಿ ಹಚ್ಚಿ ಆ ಕೋಣೆಯಲ್ಲಿದ್ದ ಎಲ್ಲರನ್ನು ಸುಟ್ಟುಬಿಟ್ಟರು. ಶೆಕೆಮಿನ ಬುರುಜಿನಲ್ಲಿದ್ದ ಒಂದು ಸಾವಿರ ಗಂಡಸರು ಮತ್ತು ಹೆಂಗಸರು ಸತ್ತುಹೋದರು.


“ಕೊನೆಗೆ ಎಲ್ಲ ಮರಗಳು ಮುಳ್ಳುಪೊದೆಗೆ, ‘ನೀನು ಬಂದು ನಮ್ಮ ಅರಸನಾಗು’ ಎಂದು ಕೇಳಿದವು.


“ನೀವು ಅಬೀಮೆಲೆಕನನ್ನು ಅರಸನನ್ನಾಗಿ ಮಾಡುವಾಗ ಪ್ರಾಮಾಣಿಕರಾಗಿದ್ದರೆ, ಅವನ ಸಂಗಡ ಸಂತೋಷದಿಂದಿರಿ. ನೀವು ಯೆರುಬ್ಬಾಳ ಮತ್ತು ಅವನ ಕುಟುಂಬದವರೊಡನೆ ನ್ಯಾಯದಿಂದ ನಡೆದುಕೊಂಡಿದ್ದರೆ ಒಳ್ಳೆಯದೇ ಸರಿ. ನೀವು ಯೆರುಬ್ಬಾಳನಿಗೋಸ್ಕರ ಏನು ಮಾಡಬೇಕಿತ್ತೋ ಅದನ್ನು ಮಾಡಿದ್ದರೆ ಒಳ್ಳೆಯದು.


ಯೆಹೋವನ ಸ್ವರವು ದೇವದಾರು ವೃಕ್ಷಗಳನ್ನು ತುಂಡುತುಂಡು ಮಾಡುತ್ತದೆ. ಯೆಹೋವನು ಲೆಬನೋನಿನ ದೇವದಾರು ವೃಕ್ಷಗಳನ್ನೂ ಮುರಿದುಹಾಕುವನು.


ಅಬೀಮೆಲೆಕ ಮತ್ತು ಅವನ ಗುಂಪಿನವರು ಓಡಿಕೊಂಡು ಶೆಕೆಮ್ ನಗರದ ಬಾಗಿಲಿನ ಹತ್ತಿರ ಒಂದು ಸ್ಥಳಕ್ಕೆ ಬಂದರು. ಉಳಿದ ಎರಡು ಗುಂಪಿನವರು ಹೊಲಗಳಲ್ಲಿದ್ದ ಜನರ ಕಡೆಗೆ ಓಡಿಹೋಗಿ ಅವರನ್ನು ಕೊಂದುಹಾಕಿದರು.


ನಮಗೆ ರಾಜನು ಬಹಳ ಮುಖ್ಯವಾಗಿದ್ದನು. ಅವನು ನಮಗೆ ಉಸಿರಿನಷ್ಟೇ ಅಮೂಲ್ಯವಾಗಿದ್ದನು. ಆದರೆ ಅವರು ರಾಜನನ್ನೇ ಸೆರೆಹಿಡಿದರು. ಯೆಹೋವನೇ, ಆ ರಾಜನನ್ನು ಆರಿಸಿಕೊಂಡಿದ್ದನು. “ನಾವು ಅವನ ನೆರಳಿನಲ್ಲಿ ಬದುಕುತ್ತೇವೆ. ಅವನು ನಮ್ಮನ್ನು ಜನಾಂಗಗಳವರಿಂದ ಸಂರಕ್ಷಿಸುವನು” ಎಂದು ನಾವು ರಾಜನ ಬಗ್ಗೆ ಹೇಳಿಕೊಂಡಿದ್ದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು