Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:20 - ಪರಿಶುದ್ದ ಬೈಬಲ್‌

20 ಆದರೆ ನೀವು ಮಾಡಿದ್ದು ಸರಿಯಾಗಿರದ ಪಕ್ಷದಲ್ಲಿ ಶೆಕೆಮಿನ ಹಿರಿಯರಾದ ನಿಮ್ಮನ್ನೂ ಮಿಲ್ಲೋ ಕೋಟೆಯವರನ್ನೂ ಅಬೀಮೆಲೆಕನು ನಾಶಮಾಡಲಿ. ಅಬೀಮೆಲೆಕನು ಕೂಡ ನಾಶಹೊಂದಲಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಇಲ್ಲವಾದರೆ ಅಬೀಮೆಲೆಕನಿಂದ ಬೆಂಕಿಹೊರಟು ಶೆಕೆಮಿನವರನ್ನೂ, ಮಿಲ್ಲೋ ಕೋಟೆಯವರನ್ನೂ ದಹಿಸಿಬಿಡಲಿ; ಶೆಕೆಮಿನವರಿಂದಲೂ, ಮಿಲ್ಲೋ ಕೋಟೆಯವರಿಂದಲೂ ಬೆಂಕಿಹೊರಟು ಅಬೀಮೆಲೆಕನನ್ನು ದಹಿಸಿಬಿಡಲಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಇಲ್ಲವಾದರೆ, ಅಬೀಮೆಲೆಕನಿಂದ ಬೆಂಕಿಹೊರಟು ಶೆಕೆಮಿನವರನ್ನೂ ಮಿಲ್ಲೋ ಕೋಟೆಯವರನ್ನೂ ಸುಟ್ಟುಬಿಡಲಿ; ಶೆಕೆಮಿನವರಿಂದಲೂ ಮಿಲ್ಲೋ ಕೋಟೆಯವರಿಂದಲೂ ಬೆಂಕಿ ಹೊರಟು ಅಬೀಮೆಲೆಕನನ್ನು ಸುಟ್ಟುಬಿಡಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಇಲ್ಲವಾದರೆ ಅಬೀಮೆಲೆಕನಿಂದ ಬೆಂಕಿಹೊರಟು ಶೆಕೆವಿುನವರನ್ನೂ ವಿುಲ್ಲೋ ಕೋಟೆಯವರನ್ನೂ ದಹಿಸಿ ಬಿಡಲಿ; ಶೆಕೆವಿುನವರಿಂದಲೂ ವಿುಲ್ಲೋ ಕೋಟೆಯವರಿಂದಲೂ ಬೆಂಕಿಹೊರಟು ಅಬೀಮೆಲೆಕನನ್ನು ದಹಿಸಿ ಬಿಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಇಲ್ಲದಿದ್ದರೆ ಅಬೀಮೆಲೆಕನಿಂದ ಬೆಂಕಿ ಹೊರಟು ಶೆಕೆಮಿನ ಹಿರಿಯರನ್ನೂ, ಮಿಲ್ಲೋನಿನ ಮನೆಯವರನ್ನೂ ದಹಿಸಿಬಿಡಲಿ. ಶೆಕೆಮಿನ ಜನರಿಂದಲೂ, ಮಿಲ್ಲೋನಿನ ಮನೆಯವರಿಂದಲೂ ಬೆಂಕಿ ಹೊರಟು ಅಬೀಮೆಲೆಕನನ್ನು ದಹಿಸಿಬಿಡಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:20
14 ತಿಳಿವುಗಳ ಹೋಲಿಕೆ  

“ಆ ಮುಳ್ಳುಪೊದೆಯು, ‘ನೀವು ನಿಜವಾಗಿಯೂ ನನ್ನನ್ನು ನಿಮ್ಮ ಅರಸನನ್ನಾಗಿ ಮಾಡಬೇಕೆಂದು ಇಚ್ಛೆಪಟ್ಟರೆ, ನೀವು ಬಂದು ನನ್ನ ನೆರಳಿನಲ್ಲಿ ಆಶ್ರಯಪಡೆಯಿರಿ; ನೀವು ಹೀಗೆ ಮಾಡಲು ಒಪ್ಪದಿದ್ದರೆ ನನ್ನಿಂದ ಬೆಂಕಿ ಹೊರಡಲಿ. ಆ ಬೆಂಕಿಯು ಲೆಬನೋನಿನ ದೇವದಾರು ವೃಕ್ಷಗಳನ್ನು ದಹಿಸಿಬಿಡಲಿ’ ಎಂದಿತು.


ಅವರ ತಲೆಗಳ ಮೇಲೆ ಉರಿಯುವ ಕೆಂಡಗಳನ್ನು ಸುರಿದು ಬೆಂಕಿಯೊಳಗೆ ಎಸೆದುಬಿಡು; ಎಂದಿಗೂ ಹತ್ತಿ ಬರಲಾಗದ ಗುಂಡಿಯೊಳಗೆ ಅವರನ್ನು ಎಸೆದುಬಿಡು.


ಅವರು ನೆರೆಯವರಿಗೆ ಕೇಡುಗಳನ್ನು ಮಾಡುವರು. ಆದ್ದರಿಂದ ಅವರಿಗೇ ಕೇಡಾಗುವಂತೆ ಮಾಡು. ಅವರಿಗೆ ತಕ್ಕ ದಂಡನೆಯನ್ನು ಕೊಡು.


ಅಬೀಮೆಲೆಕನು ಯೆರುಬ್ಬಾಳನ ಎಪ್ಪತ್ತು ಮಕ್ಕಳನ್ನು ಕೊಂದಿದ್ದನು. ಅವರು ಅವನ ಸ್ವಂತ ಸಹೋದರರಾಗಿದ್ದರು. ಶೆಕೆಮಿನ ಹಿರಿಯರು ಈ ದುಷ್ಕೃತ್ಯದಲ್ಲಿ ಅವನಿಗೆ ಬೆಂಬಲ ಕೊಟ್ಟಿದ್ದರು. ಆದ್ದರಿಂದ ಯೆಹೋವನು ಅಬೀಮೆಲೆಕನ ಮತ್ತು ಶೆಕೆಮಿನ ಹಿರಿಯರ ಮಧ್ಯೆ ಮನಸ್ತಾಪ ಹುಟ್ಟುವಂತೆ ಮಾಡಿದನು. ಶೆಕೆಮಿನ ಹಿರಿಯರು ಅಬೀಮೆಲೆಕನಿಗೆ ಕಷ್ಟ ಕೊಡಲು ಯೋಚಿಸುತ್ತಿದ್ದರು.


ಗಿದ್ಯೋನನ ಮುನ್ನೂರು ಜನರು ತಮ್ಮ ತುತ್ತೂರಿಗಳನ್ನು ಊದಿದ ಕೂಡಲೆ ಮಿದ್ಯಾನ್ಯರು ತಮ್ಮತಮ್ಮಲ್ಲಿಯೇ ಒಬ್ಬರನ್ನೊಬ್ಬರು ಕತ್ತಿಯಿಂದ ಇರಿದು ಕೊಲ್ಲುವಂತೆ ಯೆಹೋವನು ಮಾಡಿದನು. ಶತ್ರುಗಳ ಸೈನ್ಯವು ಚೆರೇರದ ದಾರಿಯಲ್ಲಿರುವ ಬೇತ್‌ಷಿಟ್ಟಿನವರೆಗೂ ಓಡಿಹೋಯಿತು. ಅವರು ಟಬ್ಬಾತಿನ ಬಳಿಯಲ್ಲಿರುವ ಅಬೇಲ್ಮೆಹೋಲಾ ನಗರದವರೆಗೂ ಓಡಿಹೋದರು.


ತರುವಾಯ ಶೆಕೆಮಿನ ಎಲ್ಲ ಹಿರಿಯರೂ ಮಿಲ್ಲೋ ಕೋಟೆಯವರೂ ಒಂದೆಡೆ ಬಂದರು. ಅವರೆಲ್ಲರೂ ಶೆಕೆಮಿನಲ್ಲಿದ್ದ ಜ್ಞಾಪಕಸ್ತಂಭದ ಬಳಿ ಇರುವ ದೊಡ್ಡ ಮರದ ಕೆಳಗೆ ಸೇರಿ ಅಬೀಮೆಲೆಕನನ್ನು ತಮ್ಮ ಅರಸನನ್ನಾಗಿ ಮಾಡಿದರು.


ನೀವು ಇಂದು ಯೆರುಬ್ಬಾಳನಿಗೂ ಅವನ ಮನೆಯವರಿಗೂ ಮಾಡಿದ್ದು ನ್ಯಾಯವೂ ಧರ್ಮವೂ ಆಗಿದ್ದರೆ ನೀವು ಅಬೀಮೆಲೆಕನನ್ನು ನಿಮ್ಮ ಅರಸನೆಂದು ಒಪ್ಪಿ ಸಂತೋಷದಿಂದ ಇದ್ದುಬಿಡಿ. ಅವನೂ ನಿಮ್ಮ ಜೊತೆ ಸಂತೋಷದಿಂದ ಇರಲಿ.


ಇದನ್ನೆಲ್ಲಾ ಹೇಳಿ ಯೋತಾಮನು ಬೇರ ಎಂಬ ನಗರಕ್ಕೆ ಓಡಿಹೋದನು. ಯೋತಾಮನು ತನ್ನ ಸಹೋದರನಾದ ಅಬೀಮೆಲೆಕನಿಗೆ ಹೆದರಿ ಅದೇ ನಗರದಲ್ಲಿ ಉಳಿದುಕೊಂಡನು.


ಅಬೀಮೆಲೆಕ ಮತ್ತು ಅವನ ಗುಂಪಿನವರು ಓಡಿಕೊಂಡು ಶೆಕೆಮ್ ನಗರದ ಬಾಗಿಲಿನ ಹತ್ತಿರ ಒಂದು ಸ್ಥಳಕ್ಕೆ ಬಂದರು. ಉಳಿದ ಎರಡು ಗುಂಪಿನವರು ಹೊಲಗಳಲ್ಲಿದ್ದ ಜನರ ಕಡೆಗೆ ಓಡಿಹೋಗಿ ಅವರನ್ನು ಕೊಂದುಹಾಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು