Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:23 - ಪರಿಶುದ್ದ ಬೈಬಲ್‌

23-24 ಅಬೀಮೆಲೆಕನು ಯೆರುಬ್ಬಾಳನ ಎಪ್ಪತ್ತು ಮಕ್ಕಳನ್ನು ಕೊಂದಿದ್ದನು. ಅವರು ಅವನ ಸ್ವಂತ ಸಹೋದರರಾಗಿದ್ದರು. ಶೆಕೆಮಿನ ಹಿರಿಯರು ಈ ದುಷ್ಕೃತ್ಯದಲ್ಲಿ ಅವನಿಗೆ ಬೆಂಬಲ ಕೊಟ್ಟಿದ್ದರು. ಆದ್ದರಿಂದ ಯೆಹೋವನು ಅಬೀಮೆಲೆಕನ ಮತ್ತು ಶೆಕೆಮಿನ ಹಿರಿಯರ ಮಧ್ಯೆ ಮನಸ್ತಾಪ ಹುಟ್ಟುವಂತೆ ಮಾಡಿದನು. ಶೆಕೆಮಿನ ಹಿರಿಯರು ಅಬೀಮೆಲೆಕನಿಗೆ ಕಷ್ಟ ಕೊಡಲು ಯೋಚಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯೆಹೋವನು ಅವನಿಗೂ ಶೆಕೆಮಿನ ಹಿರಿಯರಿಗೂ ವೈಮನಸ್ಸು ಹುಟ್ಟುವಂತೆ ಮಾಡಿದನು. ಅವರು ಅವನಿಗೆ ದ್ರೋಹಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಸರ್ವೇಶ್ವರಸ್ವಾಮಿ ಅವನಿಗೂ ಶೆಕೆಮಿನ ಹಿರಿಯರಿಗೂ ವೈಮನಸ್ಸು ಹುಟ್ಟುವಂತೆ ದುಷ್ಟ ಆತ್ಮವನ್ನು ಕಳುಹಿಸಿದರು. ಈ ಶೆಕೆಮಿನವರು ಅಬೀಮೆಲೆಕನಿಗೆ ದ್ರೋಹ ಎಸಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಯೆಹೋವನು ಅವನಿಗೂ ಶೆಕೆವಿುನ ಹಿರಿಯರಿಗೂ ವೈಮನಸ್ಯ ಹುಟ್ಟುವಂತೆ ಮಾಡಿದನು. ಅವರು ಅವನಿಗೆ ದ್ರೋಹಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ದೇವರು ಅಬೀಮೆಲೆಕ ಮತ್ತು ಶೆಕೆಮಿನ ಹಿರಿಯರ ನಡುವೆ ಒಂದು ದುರಾತ್ಮನನ್ನು ಕಳುಹಿಸಿದರು. ಆಗ ಶೆಕೆಮಿನವರು ಅಬೀಮೆಲೆಕನಿಗೆ ದ್ರೋಹಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:23
15 ತಿಳಿವುಗಳ ಹೋಲಿಕೆ  

ನೀವು ಯುದ್ಧಮಾಡಿ ಇತರರಿಂದ ಸುಲಿದುಕೊಳ್ಳುತ್ತೀರಿ. ಆದರೆ ಅವರು ನಿಮ್ಮಿಂದ ಏನೂ ಕದ್ದುಕೊಳ್ಳಲಿಲ್ಲ. ನೀವು ಜನರಿಗೆ ವಿರುದ್ಧವಾಗಿ ತಿರುಗುತ್ತೀರಿ. ಆದರೆ ಅವರು ನಿಮಗೆ ವಿರುದ್ಧವಾಗಲಿಲ್ಲ. ಆದ್ದರಿಂದ ನೀವು ಕದ್ದುಕೊಳ್ಳುವದನ್ನು ಬಿಟ್ಟಾಗ ಇತರರು ನಿಮ್ಮದನ್ನು ಕದ್ದುಕೊಳ್ಳುತ್ತಾರೆ. ನೀವು ಇತರರಿಗೆ ಹಾನಿ ಮಾಡುವದನ್ನು ನಿಲ್ಲಿಸಿದಾಗ ಇತರರು ನಿಮಗೆ ಹಾನಿ ಮಾಡುವರು. ಆಗ ನೀವು ಹೀಗೆ ಹೇಳುವಿರಿ:


ಯೆಹೋವನು ಆ ನಾಯಕರನ್ನು ಗಲಿಬಿಲಿಪಡಿಸಿದನು. ಅವರು ಈಜಿಪ್ಟನ್ನು ತಪ್ಪಾದ ದಾರಿಯಲ್ಲಿ ನಡೆಸಿದರು. ಅವರು ಮಾಡುವ ಪ್ರತಿಯೊಂದು ಕಾರ್ಯವೂ ತಪ್ಪಾದದ್ದೇ. ಅವರು ಕುಡಿದು ಮತ್ತರಾದವರಂತೆ ನೆಲದ ಮೇಲೆ ಬಿದ್ದು ಹೊರಳಾಡುತ್ತಾರೆ.


ದೇವರು ಹೇಳುವುದೇನೆಂದರೆ: “ನಾನು ಈಜಿಪ್ಟಿನ ಜನರಲ್ಲಿ ಒಳಜಗಳವನ್ನು ಹುಟ್ಟಿಸುವೆನು. ಜನರು ತಮ್ಮ ಸಹೋದರರೊಂದಿಗೆ ಜಗಳವಾಡುವರು. ನೆರೆಹೊರೆಯವರು ಪರಸ್ಪರ ಜಗಳವಾಡುವರು. ನಗರವು ನಗರದೊಂದಿಗೆ ಯುದ್ಧ ಮಾಡುವದು. ಒಂದು ರಾಷ್ಟ್ರವು ಇನ್ನೊಂದು ರಾಷ್ಟ್ರದೊಂದಿಗೆ ಯುದ್ಧಮಾಡುವದು.


ನೀವು ಬೇರೆಯವರಿಗೆ ತೀರ್ಪು ಮಾಡಿದರೆ, ಅದೇ ಪ್ರಕಾರ ನಿಮಗೂ ತೀರ್ಪಾಗುವುದು. ನೀವು ಬೇರೆಯವರನ್ನು ಕ್ಷಮಿಸಿದರೆ ನಿಮಗೂ ಕ್ಷಮೆ ದೊರೆಯುವುದು.


ಹೀಗೆ ರೆಹಬ್ಬಾಮನು ಜನರ ಬೇಡಿಕೆಯನ್ನು ಕೇಳಲಿಲ್ಲ. ಯಾಕೆಂದರೆ ಇದು ದೇವರ ಚಿತ್ತವಾಗಿತ್ತು. ದೇವರು ಅಹೀಯನ ಮುಖಾಂತರ ಯಾರೊಬ್ಬಾಮನಿಗೆ ಹೇಳಿದ ಮಾತು ನೆರವೇರುವಂತೆ ಹೀಗಾಯಿತು. ಅಹೀಯನು ಶೀಲೋವಿನವನಾಗಿದ್ದನು. ಯಾರೊಬ್ಬಾಮನು ನೆಬಾಟನ ಮಗನಾಗಿದ್ದನು.


ರಾಜನು ಜನರ ಅಪೇಕ್ಷೆಯನ್ನು ನೆರವೇರಿಸಲಿಲ್ಲ. ನೆಬಾಟನ ಮಗನಾದ ಯಾರೊಬ್ಬಾಮನಿಗೆ ತಾನು ಮಾಡಿದ್ದ ವಾಗ್ದಾನವನ್ನು ಈಡೇರಿಸಲು ಯೆಹೋವನೇ ಹೀಗೆ ಮಾಡಿದನು. ಯೆಹೋವನು ಪ್ರವಾದಿಯಾದ ಅಹೀಯನ ಮೂಲಕ ಈ ವಾಗ್ದಾನವನ್ನು ಮಾಡಿದ್ದನು. ಅಹೀಯನು ಶೀಲೋವಿನವನು.


ಆದರೆ ನೀವು ಮಾಡಿದ್ದು ಸರಿಯಾಗಿರದ ಪಕ್ಷದಲ್ಲಿ ಶೆಕೆಮಿನ ಹಿರಿಯರಾದ ನಿಮ್ಮನ್ನೂ ಮಿಲ್ಲೋ ಕೋಟೆಯವರನ್ನೂ ಅಬೀಮೆಲೆಕನು ನಾಶಮಾಡಲಿ. ಅಬೀಮೆಲೆಕನು ಕೂಡ ನಾಶಹೊಂದಲಿ” ಎಂದನು.


ಅಬೀಮೆಲೆಕನು ಇಸ್ರೇಲರನ್ನು ಮೂರು ವರ್ಷ ಆಳಿದನು.


ತನ್ನ ವಿರುದ್ಧವಾಗಿ ತಾನೇ ಹೋರಾಡುವ ರಾಜ್ಯ ಉಳಿಯುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು