Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:43 - ಪರಿಶುದ್ದ ಬೈಬಲ್‌

43 ಅಬೀಮೆಲೆಕನು ತನ್ನ ಸೈನ್ಯವನ್ನು ಮೂರು ಗುಂಪುಗಳಾಗಿ ವಿಂಗಡಿಸಿದನು. ಅವನು ಶೆಕೆಮಿನ ಜನರ ಮೇಲೆ ಹಠಾತ್ತನೆ ಧಾಳಿ ಮಾಡಬಯಸಿದ್ದನು. ಆದ್ದರಿಂದ ಅವನು ತನ್ನ ಜನರನ್ನು ಹೊಲಗಳಲ್ಲಿ ಅಡಗಿಸಿಟ್ಟನು. ನಗರದಿಂದ ಜನರು ಹೊರಗೆ ಬರುವುದನ್ನು ನೋಡಿದ ತಕ್ಷಣ ಅವನು ನೆಗೆದೆದ್ದು ಅವರ ಮೇಲೆ ಧಾಳಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಇದು ಅಬೀಮೆಲೆಕನಿಗೆ ಗೊತ್ತಿದ್ದುದರಿಂದ ಅವನು ತನ್ನ ಜನರನ್ನು ಮೂರು ಗುಂಪು ಮಾಡಿ ಅವರನ್ನು ಕರೆದುಕೊಂಡು ಬಂದು ಹೊಲಗಳಲ್ಲಿ ಹೊಂಚಿ ನೋಡುತ್ತಿದ್ದನು. ಜನರು ಪಟ್ಟಣದಿಂದ ಹೊರಟು ಬರುವುದನ್ನು ಇವನು ಕಾಣುತ್ತಲೇ, ಅಲ್ಲಿಂದ ಎದ್ದು ಅವರನ್ನು ಹೊಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಇದು ಅಬೀಮೆಲೆಕನಿಗೆ ಗೊತ್ತಿದ್ದುದರಿಂದ ಅವನು ತನ್ನ ಜನರನ್ನು ಮೂರು ಗುಂಪುಮಾಡಿ ಅವರನ್ನು ತೆಗೆದುಕೊಂಡು ಬಂದು ಹೊಲಗಳಲ್ಲಿ ಹೊಂಚುಹಾಕುತ್ತಿದ್ದನು. ಜನರು ಪಟ್ಟಣದಿಂದ ಹೊರಟು ಬರುವುದನ್ನು ಇವನು ಕಾಣುತ್ತಲೆ ಅಲ್ಲಿಂದ ಎದ್ದು ಅವರ ಮೇಲೆ ದಾಳಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಇದು ಅಬೀಮೆಲೆಕನಿಗೆ ಗೊತ್ತಿದ್ದದರಿಂದ ಅವನು ತನ್ನ ಜನರನ್ನು ಮೂರು ಗುಂಪು ಮಾಡಿ ಅವರನ್ನು ತೆಗೆದುಕೊಂಡು ಬಂದು ಹೊಲಗಳಲ್ಲಿ ಹೊಂಚಿ ನೋಡುತ್ತಿದ್ದನು. ಜನರು ಪಟ್ಟಣದಿಂದ ಹೊರಟು ಬರುವದನ್ನು ಇವನು ಕಾಣುತ್ತಲೆ ಅಲ್ಲಿಂದ ಎದ್ದು ಅವರನ್ನು ಹೊಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಅವನು ಸೈನಿಕರನ್ನು ತೆಗೆದುಕೊಂಡು, ಅವರನ್ನು ಮೂರು ಗುಂಪುಗಳಾಗಿ ಮಾಡಿ, ಹೊಲದಲ್ಲಿ ಹೊಂಚಿಹಾಕಿಕೊಂಡನು. ಆಗ ಜನರು ಪಟ್ಟಣದಿಂದ ಹೊರಗೆ ಬಂದರು. ಅವನು ಅವರ ಮೇಲೆ ಎದ್ದು ಬಂದು, ಅವರನ್ನು ಹೊಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:43
4 ತಿಳಿವುಗಳ ಹೋಲಿಕೆ  

ಮರುದಿನ ಶೆಕೆಮಿನ ಜನರು ಹೊಲಗಳಲ್ಲಿ ಕೆಲಸ ಮಾಡಲು ಹೋದರು. ಅಬೀಮೆಲೆಕನಿಗೆ ಅದು ಗೊತ್ತಾಯಿತು.


ಅಬೀಮೆಲೆಕ ಮತ್ತು ಅವನ ಗುಂಪಿನವರು ಓಡಿಕೊಂಡು ಶೆಕೆಮ್ ನಗರದ ಬಾಗಿಲಿನ ಹತ್ತಿರ ಒಂದು ಸ್ಥಳಕ್ಕೆ ಬಂದರು. ಉಳಿದ ಎರಡು ಗುಂಪಿನವರು ಹೊಲಗಳಲ್ಲಿದ್ದ ಜನರ ಕಡೆಗೆ ಓಡಿಹೋಗಿ ಅವರನ್ನು ಕೊಂದುಹಾಕಿದರು.


ಮಾರನೆಯ ದಿನ ಬೆಳಿಗ್ಗೆ ಸೌಲನು ತನ್ನ ಸೈನ್ಯವನ್ನು ಮೂರು ಗುಂಪುಗಳಾಗಿ ವಿಂಗಡಿಸಿದನು. ಸೌಲನು ಮತ್ತು ಅವನ ಸೈನಿಕರು ಬೆಳಗಿನ ಜಾವದಲ್ಲೇ ಅಮ್ಮೋನಿಯರ ಶಿಬಿರದೊಳಕ್ಕೆ ನುಗ್ಗಿದರು. ಅವರು ಆ ದಿನ ಬೆಳಗಿನ ಜಾವ ಶಿಬಿರ ರಕ್ಷಕರನ್ನು ಬದಲಾಯಿಸುತ್ತಿದ್ದಂತೆಯೇ ಸೌಲನು ಆಕ್ರಮಣ ಮಾಡಿದನು. ಸೌಲನು ಮತ್ತು ಅವನ ಸೈನಿಕರು ನಡುಮಧ್ಯಾಹ್ನದೊಳಗೆ ಅಮ್ಮೋನಿಯರನ್ನು ಸೋಲಿಸಿದರು. ಅಮ್ಮೋನಿಯ ಸೈನಿಕರೆಲ್ಲರೂ ದಿಕ್ಕುಪಾಲಾಗಿ ಓಡಿಹೋದರು; ಅವರು ಒಟ್ಟಾಗಿ ಸೇರಿಬರಲು ಸಾಧ್ಯವಾಗಲಿಲ್ಲ.


ದಾವೀದನು ತನ್ನ ಜನರನ್ನು ಮೂರು ಗುಂಪುಗಳಾಗಿ ವಿಂಗಡಿಸಿ ಅವರನ್ನು ಹೊರಗೆ ಕಳುಹಿಸಿದನು. ಯೋವಾಬನು ಮೊದಲನೆ ಗುಂಪನ್ನು, ಅಬೀಷೈ ಎರಡನೆ ಗುಂಪನ್ನು, ಗತ್‌ನ ಇತ್ತೈಯನು ಮೂರನೆ ಗುಂಪನ್ನು ನಡೆಸಿದರು. ರಾಜನಾದ ದಾವೀದನು, “ನಾನೂ ನಿಮ್ಮ ಜೊತೆಯಲ್ಲಿ ಬರುತ್ತೇನೆ” ಎಂದು ಅವರಿಗೆ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು