Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:45 - ಪರಿಶುದ್ದ ಬೈಬಲ್‌

45 ಆ ಇಡೀ ದಿವಸ ಅಬೀಮೆಲೆಕ ಮತ್ತು ಅವನ ಜನರು ಶೆಕೆಮಿನ ಜನರೊಂದಿಗೆ ಯುದ್ಧ ಮಾಡಿದರು. ಅಬೀಮೆಲೆಕ ಮತ್ತು ಅವನ ಜನರು ಶೆಕೆಮ್ ನಗರವನ್ನು ಸ್ವಾಧೀನಪಡಿಸಿಕೊಂಡರು; ಆ ನಗರದ ಜನರನ್ನು ಕೊಂದುಹಾಕಿದರು. ಅಬೀಮೆಲೆಕನು ಊರನ್ನು ಕೆಡವಿ ಹಾಕಿ ಉಪ್ಪನ್ನು ಚೆಲ್ಲಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಅಬೀಮೆಲೆಕನು ಆ ದಿನವೆಲ್ಲಾ ಯುದ್ಧಮಾಡಿ, ಪಟ್ಟಣವನ್ನು ಸ್ವಾಧೀನಮಾಡಿಕೊಂಡು, ಅದರ ಜನರನ್ನೆಲ್ಲಾ ಸಂಹರಿಸಿ, ಊರನ್ನು ಕೆಡವಿಬಿಟ್ಟು, ಅಲ್ಲಿ ಉಪ್ಪನ್ನು ಎರಚಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಅಬೀಮೆಲೆಕನು ಆ ದಿನವೆಲ್ಲಾ ಯುದ್ಧಮಾಡಿ ಪಟ್ಟಣವನ್ನು ಸ್ವಾಧೀನಮಾಡಿಕೊಂಡು ಅದರ ಜನರನ್ನೆಲ್ಲಾ ಸದೆಬಡಿದು ಊರನ್ನು ಕೆಡವಿ ಅಲ್ಲಿ ಉಪ್ಪನ್ನು ಎರಚಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಅಬೀಮೆಲೆಕನು ಆ ದಿವಸವೆಲ್ಲಾ ಯುದ್ಧಮಾಡಿ ಪಟ್ಟಣವನ್ನು ಸ್ವಾಧೀನಮಾಡಿಕೊಂಡು ಅದರ ಜನರನ್ನೆಲ್ಲಾ ಸಂಹರಿಸಿ ಊರನ್ನು ಕೆಡವಿಬಿಟ್ಟು ಅಲ್ಲಿ ಉಪ್ಪನ್ನು ಎರಚಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಅಬೀಮೆಲೆಕನು ಆ ದಿನವೆಲ್ಲಾ ಪಟ್ಟಣದ ಮೇಲೆ ಯುದ್ಧಮಾಡಿ, ಪಟ್ಟಣವನ್ನು ಹಿಡಿದು, ಅದರಲ್ಲಿದ್ದ ಜನರನ್ನು ಕೊಂದು, ಪಟ್ಟಣವನ್ನು ಕೆಡವಿಬಿಟ್ಟು, ಅದರಲ್ಲಿ ಉಪ್ಪು ಎರಚಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:45
8 ತಿಳಿವುಗಳ ಹೋಲಿಕೆ  

ಇಸ್ರೇಲರು ನಗರಗಳನ್ನು ಕೆಡವಿಹಾಕಿದರು. ಅವರು ಮೋವಾಬಿನ ಪ್ರತಿಯೊಂದು ಉತ್ತಮ ತೋಟದ ಕಡೆಗೆ ಕಲ್ಲುಗಳನ್ನೆಸೆದರು. ಅವರು ನೀರಿನ ಬುಗ್ಗೆಗಳನ್ನೆಲ್ಲ ನಿಲ್ಲಿಸಿದರು. ಅವರು ಉತ್ತಮವಾದ ಮರಗಳನ್ನು ಕಡಿದು ಉರುಳಿಸಿದರು. ಇಸ್ರೇಲರು ಕೀರ್ಹರೆಷೆತ್‌ನ ಮಾರ್ಗದುದ್ದಕ್ಕೂ ಹೋರಾಟ ಮಾಡಿದರು. ಸೈನಿಕರು ಕೀರ್ಹರೆಷೆತನ್ನು ಸುತ್ತುವರಿದು ಅದಕ್ಕೂ ಮುತ್ತಿಗೆ ಹಾಕಿದರು.


ನಿಮ್ಮ ದೇಶವೆಲ್ಲಾ ನಿಷ್ಪ್ರಯೋಜಕವಾಗಿರುವುದು. ಅದರ ಮೇಲೆ ಉಪ್ಪೂ ಗಂಧಕವೂ ತುಂಬಿರುವುದು. ಅದರ ಮೇಲೆ ಯಾವ ಸಸಿಯೂ ಬೆಳೆಯಲಾರದು; ಕೂಳೆಯೂ ಬೆಳೆಯುವುದಿಲ್ಲ. ಸೊದೋಮ್, ಗೊಮೋರ, ಅದ್ಮಾ ಮತ್ತು ಚೆಬೋಯೀಮ್ ಎಂಬ ಪಟ್ಟಣಗಳು ಯೆಹೋವನ ಕೋಪದ ನಿಮಿತ್ತ ನಾಶವಾದಂತೆ ನಿಮ್ಮ ದೇಶವೂ ನಾಶವಾಗುವುದು.


ಹೌದು, ಇತರರಿಗೆ ನೀವು ಕರುಣೆ ತೋರಬೇಕು. ಇಲ್ಲವಾದರೆ ದೇವರು ತೀರ್ಪು ನೀಡುವಾಗ ನಿಮಗೂ ಕರುಣೆ ತೋರನು. ಕರುಣೆ ತೋರುವವನು ದೇವರ ನ್ಯಾಯತೀರ್ಪಿನಲ್ಲಿ ಭಯವಿಲ್ಲದೆ ಇರುವನು.


ನನ್ನ ಜೀವದಾಣೆ, ಮೋವಾಬ್ಯರೂ ಅಮ್ಮೋನ್ಯರೂ ಸೊದೋಮ್ ಗೊಮೋರದವರಂತೆ ನಾಶವಾಗುವರು. ನಾನು ಸರ್ವಶಕ್ತನಾದ ಇಸ್ರೇಲರ ದೇವರಾಗಿರುವೆನು. ನಾನು ವಾಗ್ದಾನ ಮಾಡುವದೇನೆಂದರೆ, ಆ ರಾಜ್ಯಗಳು ಸಂಪೂರ್ಣವಾಗಿ ನಾಶವಾಗುವವು. ಅವರ ಭೂಮಿಯು ಕಳೆಗಳಿಂದ ತುಂಬಿಹೋಗುವದು. ಅದು ಮೃತ್ಯುಸಮುದ್ರದ ಉಪ್ಪಿನಿಂದ ತುಂಬಿಹೋದಂತಿರುವದು. ನನ್ನ ಜನರಲ್ಲಿ ಉಳಿದವರು ಅವರ ದೇಶವನ್ನೂ ಅಲ್ಲಿ ಉಳಿದಿರುವ ವಸ್ತುಗಳನ್ನೂ ತಮ್ಮ ವಶಮಾಡಿಕೊಳ್ಳುವರು.”


ಆದರೆ ಜವುಗು ನೆಲಗಳೂ ಸವುಳು ನೆಲಗಳೂ ಸಿಹಿಯಾಗುವದಿಲ್ಲ. ಅವು ಉಪ್ಪು ತಯಾರಿಸುವದಕ್ಕಾಗಿ ಉಪಯೋಗಿಸಲ್ಪಡುವವು.


ಆತನು ಫಲವತ್ತಾದ ಭೂಮಿಯನ್ನು ಉಪಯೋಗವಿಲ್ಲದ ಉಪ್ಪುಭೂಮಿಯನ್ನಾಗಿ ಪರಿವರ್ತಿಸಿದನು, ಯಾಕೆಂದರೆ ಅಲ್ಲಿ ಕೆಟ್ಟಜನರು ನೆಲೆಸಿದ್ದರು.


ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿ ಶೆಕೆಮ್ ನಗರವಿತ್ತು. ಯಾರೊಬ್ಬಾಮನು ಶೆಕೆಮನ್ನು ಒಂದು ಬಲಾಢ್ಯ ನಗರವನ್ನಾಗಿಸಿಕೊಂಡು ಅಲ್ಲಿ ನೆಲೆಸಿದನು. ತರುವಾಯ ಅವನು ಪೆನೂವೇಲ್ ನಗರಕ್ಕೆ ಹೋಗಿ ಅದನ್ನು ಬಲಪಡಿಸಿದನು.


ಅಬೀಮೆಲೆಕ ಮತ್ತು ಅವನ ಗುಂಪಿನವರು ಓಡಿಕೊಂಡು ಶೆಕೆಮ್ ನಗರದ ಬಾಗಿಲಿನ ಹತ್ತಿರ ಒಂದು ಸ್ಥಳಕ್ಕೆ ಬಂದರು. ಉಳಿದ ಎರಡು ಗುಂಪಿನವರು ಹೊಲಗಳಲ್ಲಿದ್ದ ಜನರ ಕಡೆಗೆ ಓಡಿಹೋಗಿ ಅವರನ್ನು ಕೊಂದುಹಾಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು