Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 2:12 - ಪರಿಶುದ್ದ ಬೈಬಲ್‌

12 ಭೂಮಿಯ ಮೇಲೆ ಹೂವುಗಳು ಕಾಣುತ್ತವೆ; ಪಕ್ಷಿಗಳು ಹಾಡುವ ಸಮಯವು ಬಂದಿದೆ. ದೇಶದಲ್ಲಿ ಪಾರಿವಾಳದ ಸ್ವರವು ಕೇಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಭೂಮಿಯಲ್ಲೆಲ್ಲಾ ಹೂವುಗಳು ಕಾಣುತ್ತವೆ, ಕುಡಿ ಸವರುವ ಕಾಲ ಬಂತು, ಬೆಳವಕ್ಕಿಯ ಕೂಗು ದೇಶದಲ್ಲಿ ಕೇಳಿಸುತ್ತದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಧರೆಯಲ್ಲೆಲ್ಲ ಹೂಗಳು ಅರಳಿವೆ ನಲಿದು ಹಾಡುವ ಕಾಲ ಬಂದಿದೆ ಬೆಳವಕ್ಕಿಯ ಕೂಗು ನಾಡಿನಲ್ಲಿ ಕೇಳಿಸುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಭೂವಿುಯಲ್ಲೆಲ್ಲಾ ಹೂವುಗಳು ಕಾಣುತ್ತವೆ, ಕುಡಿ ಸವರುವ ಕಾಲ ಬಂತು, ಬೆಳವಕ್ಕಿಯ ಕೂಗು ದೇಶದಲ್ಲಿ ಕೇಳಿಸುತ್ತದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಪುಷ್ಪಗಳು ಭೂಮಿಯ ಮೇಲೆ ಕಾಣಿಸುತ್ತಿವೆ. ಪಕ್ಷಿಗಳು ಹಾಡುವ ಕಾಲ ಬಂತು. ಪಾರಿವಾಳಗಳ ಸ್ವರ ನಮ್ಮ ಊರಲ್ಲಿ ಕೇಳಿಸುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 2:12
17 ತಿಳಿವುಗಳ ಹೋಲಿಕೆ  

“ಆದ್ದರಿಂದ ನೀವು ಸಂತೋಷದಿಂದ ಹೊರಡುವಿರಿ ಮತ್ತು ಸಮಾಧಾನದಿಂದ ಮೆರವಣಿಗೆಯಾಗಿ ಬರುವಿರಿ. ಪರ್ವತಗಳೂ ಬೆಟ್ಟಗಳೂ ಸಂತೋಷದಿಂದ ನಿಮ್ಮ ಮುಂದೆ ಕುಣಿದಾಡುವವು. ಭೂಮಿಯ ಮೇಲಿರುವ ಮರಗಳೆಲ್ಲಾ ಚಪ್ಪಾಳೆ ತಟ್ಟುವವು.


ಕ್ರಿಸ್ತನ ಉಪದೇಶವು ನಿಮ್ಮ ಅಂತರಂಗದಲ್ಲಿ ಸಮೃದ್ಧವಾಗಿ ನೆಲಸಿರಲಿ. ನೀವು ದೇವರಿಂದ ಕಲಿತುಕೊಂಡದ್ದನ್ನು ಉಪದೇಶಿಸುವುದಕ್ಕೂ ಒಬ್ಬರನ್ನೊಬ್ಬರು ಬಲಪಡಿಸುವುದಕ್ಕೂ ಉಪಯೋಗಿಸಿರಿ. ನಿಮ್ಮ ಹೃದಯದಲ್ಲಿ ದೇವರಿಗೆ ಕೃತಜ್ಞರಾಗಿದ್ದು ಹಾಡುಗಳನ್ನು, ಕೀರ್ತನೆಗಳನ್ನು, ಸಂಗೀತಗಳನ್ನು ಹಾಡಿರಿ.


ಆಕಾಶದಲ್ಲಿ ಹಾರಾಡುವ ಬಕಪಕ್ಷಿಗಳಿಗೂ ಸಹ ಆಯಾ ಕೆಲಸ ಮಾಡುವ ಸರಿಯಾದ ಸಮಯ ಗೊತ್ತಿದೆ. ಬೆಳವಕ್ಕಿಯೂ ಬಾನಕ್ಕಿಯೂ ಕೊಕ್ಕರೆಯೂ ಹೊಸ ಮನೆಗೆ ಹೋಗಬೇಕಾದ ಕಾಲವನ್ನು ಬಲ್ಲವು. ಆದರೆ ನನ್ನ ಜನರಿಗೆ ತಮ್ಮ ಯೆಹೋವನು ಅವರಿಂದ ಏನನ್ನು ಬಯಸುತ್ತಾನೆ ಎಂಬುದು ಗೊತ್ತಿಲ್ಲ.


ಯೆಹೋವನೇ, ನಿನ್ನ ಸದ್ಭಕ್ತರು ನಿಜವಾಗಿಯೂ ಸಂತೋಷವಾಗಿದ್ದಾರೆ. ಅವರು ನಿನ್ನ ಕರುಣೆಯ ಬೆಳಕಿನಲ್ಲಿ ವಾಸಿಸುತ್ತಿದ್ದಾರೆ.


ಕಣಿವೆಯ ಸಸ್ಯಗಳು ಹಣ್ಣುಬಿಟ್ಟಿವೆಯೋ ದ್ರಾಕ್ಷಿಬಳ್ಳಿಗಳು ಚಿಗುರಿದೆಯೋ ದಾಳಿಂಬರಗಳು ಹೂ ಬಿಟ್ಟಿವೆಯೋ ಎಂದು ನೋಡಲು ಬಾದಾಮಿ ಮರಗಳ ತೋಟಕ್ಕೆ ಹೋದೆನು.


ನನ್ನ ಪ್ರಿಯನು ತನ್ನ ತೋಟದಲ್ಲಿರುವ ಸುಗಂಧಸಸ್ಯಗಳ ದಿಬ್ಬಗಳಿಗೆ ಹೋಗಿದ್ದಾನೆ; ತೋಟಗಳಲ್ಲಿ ಮಂದೆಯನ್ನು ಮೇಯಿಸುವುದಕ್ಕೂ ನೆಲದಾವರೆಗಳನ್ನು ಕೊಯ್ಯುವುದಕ್ಕೂ ಹೋಗಿದ್ದಾನೆ.


ದೇವರು ಅಬ್ರಾಮನಿಗೆ, “ನಾವು ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳೋಣ. ಮೂರು ವರ್ಷದ ಒಂದು ಹಸುವನ್ನೂ ಮೂರು ವರ್ಷದ ಒಂದು ಆಡನ್ನೂ ಮತ್ತು ಮೂರು ವರ್ಷದ ಒಂದು ಟಗರನ್ನೂ ತೆಗೆದುಕೊಂಡು ಬಾ. ಇದಲ್ಲದೆ ಒಂದು ಬೆಳವಕ್ಕಿಯನ್ನೂ ಒಂದು ಪಾರಿವಾಳವನ್ನೂ ತೆಗೆದುಕೊಂಡು ಬಾ” ಎಂದು ಹೇಳಿದನು.


ದೇವರೇ, ನಿನ್ನ ಪಾರಿವಾಳವನ್ನು ಆ ದುಷ್ಟ ಪ್ರಾಣಿಗಳು ತೆಗೆದುಕೊಳ್ಳದಿರಲಿ. ನಿನ್ನ ಬಡಜನರನ್ನು ಮರೆತುಬಿಡಬೇಡ.


ಇಗೋ, ಚಳಿಗಾಲ ಕಳೆಯಿತು; ಮಳೆಗಾಲ ಮುಗಿದುಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು