Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 2:13 - ಪರಿಶುದ್ದ ಬೈಬಲ್‌

13 ಅಂಜೂರದ ಮರ ಕಾಯಿಗಳನ್ನು ಬಿಡುತ್ತಿದೆ; ದ್ರಾಕ್ಷಿಬಳ್ಳಿಯ ಹೂವುಗಳಿಂದ ಸುವಾಸನೆಯು ಬರುತ್ತಿದೆ. ನನ್ನ ಪ್ರಿಯಳೇ, ನನ್ನ ಸುಂದರಿಯೇ, ಎದ್ದೇಳು, ನಾವು ದೂರ ಹೋಗೋಣ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅಂಜೂರದ ಕಾಯಿಗಳು ಹಣ್ಣಾಗಿವೆ, ದ್ರಾಕ್ಷಿಯ ಬಳ್ಳಿಗಳು ಹೂಬಿಟ್ಟಿವೆ, ಅದರ ಪರಿಮಳವನ್ನು ಬೀರುತ್ತಿದೆ. ನನ್ನ ಪ್ರಿಯಳೇ, ಎನ್ನ ಸುಂದರಿಯೇ, ಎದ್ದು ನನ್ನೊಂದಿಗೆ ಬಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅಂಜೂರದ ಕಾಯಿಗಳು ಹಣ್ಣಾಗಿವೆ ದ್ರಾಕ್ಷಾಬಳ್ಳಿಗಳು ಹೂಬಿಟ್ಟಿವೆ. ಅದರ ಪರಿಮಳ ಹರಡುತ್ತಿದೆ.’ ನಲ್ಲ : ಎದ್ದು ಬಾ, ನನ್ನ ಪ್ರೇಯಸಿಯೇ ಬಾ ನನ್ನೊಂದಿಗೆ, ಸುಂದರಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅಂಜೂರದ ಮರವು ಕಾಯಿಗಳನ್ನು ಪಕ್ವಕ್ಕೆ ತರುತ್ತದೆ, ದ್ರಾಕ್ಷೆಯ ಬಳ್ಳಿಗಳು ಹೂಬಿಟ್ಟು ಪರಿಮಳವನ್ನು ಬೀರುತ್ತವೆ. ನನ್ನ ಪ್ರಿಯಳೇ, ಎನ್ನ ಸುಂದರಿಯೇ, ಎದ್ದು ಬಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅಂಜೂರದ ಕಾಯಿಗಳು ಹಣ್ಣಾಗಿವೆ. ದ್ರಾಕ್ಷಿಬಳ್ಳಿಗಳು ಹೂಬಿಟ್ಟಿವೆ. ಅದರ ಪರಿಮಳ ಹರಡುತ್ತಿದೆ. ಎದ್ದು ಬಾ, ನನ್ನ ಪ್ರಿಯಳೇ, ನನ್ನ ಸುಂದರಿಯೇ, ನನ್ನೊಂದಿಗೆ ಬಾ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 2:13
16 ತಿಳಿವುಗಳ ಹೋಲಿಕೆ  

ನನ್ನ ಪ್ರಿಯನು ನನಗೆ ಹೀಗೆಂದನು: “ನನ್ನ ಪ್ರಿಯಳೇ, ನನ್ನ ಸುಂದರಿಯೇ, ಎದ್ದೇಳು, ನಾವು ದೂರ ಹೋಗೋಣ!


ಭೂಮಿಯು ಸಸಿಗಳನ್ನು ಬೆಳೆಸುತ್ತದೆ. ಜನರು ತೋಟದಲ್ಲಿ ಬೀಜ ಬಿತ್ತುವರು. ತೋಟವು ಬೀಜವನ್ನು ಬೆಳೆಸುತ್ತದೆ. ಅದೇ ರೀತಿಯಲ್ಲಿ ಯೆಹೋವನು ಎಲ್ಲಾ ಜನಾಂಗಗಳಲ್ಲಿ ನೀತಿಯನ್ನೂ ಸ್ತೋತ್ರವನ್ನೂ ಬೆಳೆಸುತ್ತಾನೆ.


ಆದ್ದರಿಂದ ಕ್ರಿಸ್ತನ ಪರವಾಗಿ ಮಾತಾಡಲು ನಮ್ಮನ್ನು ಕಳುಹಿಸಲಾಗಿದೆ. ಇದು, ದೇವರು ನಮ್ಮ ಮೂಲಕವಾಗಿ ಜನರನ್ನು ಕರೆಯುವಂತಿದೆ. ದೇವರೊಂದಿಗೆ ಸಮಾಧಾನವಾಗಿರಿ ಎಂದು ನಾವು ನಿಮ್ಮನ್ನು ಬೇಡಿಕೊಳ್ಳುವಾಗ ಕ್ರಿಸ್ತನ ಪರವಾಗಿ ಮಾತಾಡುವವರಾಗಿದ್ದೇವೆ.


ಜೆರುಸಲೇಮಿಗೆ, “ನಿನಗೆ ಯಾವುದರಿಂದ ಸಮಾಧಾನವಾಗುತ್ತದೆ ಎಂಬುದನ್ನು ನೀನು ಇಂದೇ ತಿಳಿದುಕೊಂಡಿದ್ದರೆ ಎಷ್ಟೋ ಒಳ್ಳೆಯದಾಗಿತ್ತು! ಆದರೆ ನೀನು ಅದನ್ನು ತಿಳಿಯಲಾರೆ, ಏಕೆಂದರೆ ಅದು ನಿನಗೆ ಮರೆಯಾಗಿದೆ.


“ಅಂಜೂರದ ಮರವು ನಮಗೆ ಒಂದು ಪಾಠವನ್ನು ಕಲಿಸುತ್ತದೆ. ಅಂಜೂರದ ಮರದ ಕೊಂಬೆಗಳು ಹಸುರಾಗಿ ಎಳೆಯದಾಗಿದ್ದು ಹೊಸ ಎಲೆಗಳು ಬೆಳೆಯುವುದಕ್ಕೆ ಪ್ರಾರಂಭಿಸಿದಾಗ, ಬೇಸಿಗೆಯು ಹತ್ತಿರವಾಯಿತೆಂದು ನೀವು ತಿಳಿದುಕೊಳ್ಳುತ್ತೀರಿ.


ಉಗ್ರಾಣದಲ್ಲಿ ಗೋಧಿಯ ಕಾಳು ಏನಾದರೂ ಉಳಿದಿದೆಯೋ? ಇಲ್ಲ! ದ್ರಾಕ್ಷಿಬಳ್ಳಿಗಳನ್ನು, ಅಂಜೂರದ ಮರಗಳನ್ನು, ದಾಳಿಂಬದ ಮರಗಳನ್ನು, ಆಲೀವ್ ಮರಗಳನ್ನು ನೋಡಿರಿ. ಅವು ಹಣ್ಣುಗಳನ್ನು ಬಿಡುತ್ತವೋ? ಇಲ್ಲ. ಆದರೆ ಈ ದಿನದಿಂದ ನಾನು ನಿಮ್ಮನ್ನು ಆಶೀರ್ವದಿಸುತ್ತೇನೆ!”


ಅವನ ಕೊಂಬೆಗಳು ಬೆಳೆದು ಹರಡಿಕೊಳ್ಳುತ್ತವೆ; ಅವನು ಅಂದವಾದ ಆಲೀವ್ ಮರದಂತಿರುವನು. ಲೆಬನೋನಿನ ದೇವದಾರು ಮರಗಳ ಸುವಾಸನೆಯಂತೆ ಅವನು ಗಮಗಮಿಸುವನು.


ಆಗ ಭಯಂಕರವಾದ ಒಂದು ಘಟನೆಯು ನಡೆಯುವದು. ಅದು ಪುಷ್ಪಗಳು ಅರಳುವ ಕಾಲದ ನಂತರ ನಡೆಯುವದು. ಹೊಸ ದ್ರಾಕ್ಷಾಲತೆಗಳು ಚಿಗುರುತ್ತಾ ಬೆಳೆಯುವವು. ಆದರೆ ಅವು ಫಲಕೊಡುವದಕ್ಕಿಂತ ಮೊದಲೇ ಶತ್ರುಗಳು ಬಂದು ಬಳ್ಳಿಗಳನ್ನು ಕೊಯ್ದುಹಾಕುವರು. ಬಳ್ಳಿಗಳನ್ನು ನಾಶಮಾಡಿ ವೈರಿಗಳು ಅವುಗಳನ್ನು ದೂರ ಬಿಸಾಡಿಬಿಡುವರು.


ನಾನು ಖರ್ಜೂರದ ಮರವನ್ನು ಹತ್ತುವೆನು. ನಾನು ಅದರ ಕೊಂಬೆಗಳನ್ನು ಹಿಡಿದುಕೊಳ್ಳುವೆನು. ನಿನ್ನ ಸ್ತನಗಳು ದ್ರಾಕ್ಷಿಯ ಗೊಂಚಲುಗಳಂತಿರಲಿ. ನಿನ್ನ ಉಸಿರಿನ ವಾಸನೆಯು ಸೇಬು ಹಣ್ಣುಗಳಂತಿರಲಿ.


ಕಣಿವೆಯ ಸಸ್ಯಗಳು ಹಣ್ಣುಬಿಟ್ಟಿವೆಯೋ ದ್ರಾಕ್ಷಿಬಳ್ಳಿಗಳು ಚಿಗುರಿದೆಯೋ ದಾಳಿಂಬರಗಳು ಹೂ ಬಿಟ್ಟಿವೆಯೋ ಎಂದು ನೋಡಲು ಬಾದಾಮಿ ಮರಗಳ ತೋಟಕ್ಕೆ ಹೋದೆನು.


ನನ್ನ ಪ್ರಿಯೆ, ನೀನು ರೂಪವತಿ! ನೀನು ಸುಂದರಿ! ನಿನ್ನ ಕಣ್ಣುಗಳು ಪಾರಿವಾಳಗಳಂತೆ ಕೋಮಲ.


ದ್ರಾಕ್ಷಿತೋಟಗಳನ್ನು ಹಾಳುಮಾಡುವ ನರಿಗಳನ್ನೂ ನರಿಮರಿಗಳನ್ನೂ ಹಿಡಿಯಿರಿ! ನಮ್ಮ ದ್ರಾಕ್ಷಿತೋಟಗಳು ಈಗ ಹೂಬಿಡುತ್ತಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು