Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 4:12 - ಪರಿಶುದ್ದ ಬೈಬಲ್‌

12 ನನ್ನ ಪ್ರಿಯಳೇ, ನನ್ನ ವಧುವೇ, ನೀನು ಕದಹಾಕಿದ ತೋಟದಂತಿರುವೆ; ಬೇಲಿಯೊಳಗಿರುವ ಬುಗ್ಗೆಯಂತಿರುವೆ; ಮುಚ್ಚಿ ಮುದ್ರಿಸಿದ ಚಿಲುಮೆಯಂತಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನನ್ನ ಪ್ರಿಯಳು, ನನ್ನ ಮದಲಗಿತ್ತಿಯು, ಸುಭದ್ರವಾದ ಉದ್ಯಾನ, ಬೇಲಿಯೊಳಗೆ ಮುಚ್ಚಿ ಮುದ್ರಿಸಿದ ಚಿಲುಮೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನನ್ನ ಪ್ರಿಯಳು, ನನ್ನ ಮದಲಗಿತ್ತಿ ಸುಭದ್ರವಾದ ಉದ್ಯಾನವನ ಬೇಲಿಯೊಳಗಿನ ಬುಗ್ಗೆ ಮುಚ್ಚಿ ಮುದ್ರಿಸಿದ ಚಿಲುಮೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನನ್ನ ಪ್ರಿಯಳು, ನನ್ನ ಮದಲಗಿತ್ತಿಯು, ಅಗುಳಿ ಹಾಕಿದ ಉದ್ಯಾನ, ಬೇಲಿಯೊಳಗಿನ ಬುಗ್ಗೆ, ಮುಚ್ಚಿ ಮುದ್ರಿಸಿದ ಬಾವಿ ಆಗಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನನ್ನ ಪ್ರಿಯಳೇ, ನನ್ನ ವಧುವೇ, ನೀನು ಭದ್ರ ತೋಟವೂ ಬೇಲಿಯೊಳಗಿನ ಬುಗ್ಗೆಯೂ ಮುದ್ರಿಸಿದ ಬಾವಿಯೂ ಆಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 4:12
17 ತಿಳಿವುಗಳ ಹೋಲಿಕೆ  

ಪರಿಶುದ್ಧವಾಗಿಲ್ಲದ ಯಾವುದೂ ನಗರವನ್ನು ಪ್ರವೇಶಿಸುವುದೇ ಇಲ್ಲ. ಅವಮಾನಕರವಾದ ಕಾರ್ಯಗಳನ್ನು ಮಾಡುವವನಾಗಲಿ ಸುಳ್ಳು ಹೇಳುವವನಾಗಲಿ ನಗರವನ್ನು ಎಂದಿಗೂ ಪ್ರವೇಶಿಸುವುದಿಲ್ಲ. ಕುರಿಮರಿಯಾದಾತನು ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರುಗಳನ್ನು ಬರೆದಿರುವನೋ ಅವರು ಮಾತ್ರ ಆ ನಗರವನ್ನು ಪ್ರವೇಶಿಸುವರು.


“ಆಹಾರವು ಹೊಟ್ಟೆಗೋಸ್ಕರವಿದೆ, ಹೊಟ್ಟೆಯು ಆಹಾರಕ್ಕೋಸ್ಕರವಿದೆ.” ಹೌದು, ದೇವರು ಅವೆರಡನ್ನು ನಾಶಮಾಡುವನು. ದೇಹವಿರುವುದು ಲೈಂಗಿಕ ಪಾಪಮಾಡುವುದಕ್ಕಾಗಿಯಲ್ಲ. ದೇಹವು ಪ್ರಭುವಿಗೋಸ್ಕರವಿದೆ, ಪ್ರಭುವು ದೇಹಕ್ಕೋಸ್ಕರವಿದ್ದಾನೆ.


“ನಮ್ಮ ದೇವರ ಸೇವೆಮಾಡುವ ಜನರ ಹಣೆಯ ಮೇಲೆ ಮುದ್ರೆ ಒತ್ತುವ ತನಕ ಭೂಮಿಗಾಗಲಿ ಸಮುದ್ರಕ್ಕಾಗಲಿ ಮರಗಳಿಗಾಗಲಿ ತೊಂದರೆಯನ್ನು ಮಾಡಬೇಡಿ” ಎಂದು ಕೂಗಿ ಹೇಳಿದನು.


ಅವನು ತನ್ನ ಹೆಂಡತಿಯನ್ನು ಮತ್ತು ಪ್ರಭುವನ್ನು ಮೆಚ್ಚಿಸುವುದರ ಬಗ್ಗೆ ಆಲೋಚಿಸಬೇಕಾಗುತ್ತದೆ. ಮದುವೆಯಾಗಿಲ್ಲದ ಸ್ತ್ರೀಯಾಗಲಿ ಹುಡುಗಿಯಾಗಲಿ ಪ್ರಭುವಿನ ಸೇವೆಯಲ್ಲಿ ನಿರತಳಾಗಿರುತ್ತಾಳೆ. ಆಕೆ ತನ್ನ ದೇಹ ಮತ್ತು ಆತ್ಮಗಳನ್ನು ಸಂಪೂರ್ಣವಾಗಿ ಪ್ರಭುವಿಗೆ ಕೊಡಲು ಬಯಸುತ್ತಾಳೆ. ಆದರೆ ಮದುವೆಯಾದ ಸ್ತ್ರೀಯು ಈ ಲೋಕದ ಕಾರ್ಯಗಳಲ್ಲಿ ನಿರತಳಾಗಿರುತ್ತಾಳೆ. ಆಕೆ ತನ್ನ ಗಂಡನನ್ನು ಮೆಚ್ಚಿಸಲು ಪ್ರಯತ್ನಿಸುತ್ತಿರುತ್ತಾಳೆ.


ಪವಿತ್ರಾತ್ಮನನ್ನು ದುಃಖಪಡಿಸಬೇಡಿ. ನೀವು ದೇವರಿಗೆ ಸೇರಿದವರೆಂಬುದಕ್ಕೆ ಆತನೇ ದೇವರ ಪ್ರಮಾಣವಾಗಿದ್ದಾನೆ. ಸೂಕ್ತ ಸಮಯದಲ್ಲಿ ನಿಮ್ಮನ್ನು ಬಿಡುಗಡೆ ಮಾಡುತ್ತೇನೆ ಎಂಬುದನ್ನು ತೋರಿಸುವುದಕ್ಕಾಗಿಯೇ ದೇವರು ನಿಮಗೆ ಆತನನ್ನು ಕೊಟ್ಟನು.


ಇದು ನಿಮಗೂ ಅನ್ವಯಿಸುತ್ತದೆ. ನೀವು ಸತ್ಯ ಬೋಧನೆಯ ಬಗ್ಗೆ ಅಂದರೆ ನಿಮ್ಮ ರಕ್ಷಣೆಯ ಕುರಿತಾದ ಸುವಾರ್ತೆಯ ಬಗ್ಗೆ ಕೇಳಿದಾಗ ಕ್ರಿಸ್ತನಲ್ಲಿ ನಂಬಿಕೆಯಿಟ್ಟಿರಿ. ದೇವರು ತನ್ನ ವಾಗ್ದಾನಕ್ಕನುಸಾರವಾಗಿ ನಿಮಗೆ ಪವಿತ್ರಾತ್ಮನನ್ನು ದಯಪಾಲಿಸುವುದರ ಮೂಲಕ ನಿಮ್ಮ ಮೇಲೆ ತನ್ನ ವಿಶೇಷವಾದ ಮುದ್ರೆಯನ್ನು ಹಾಕಿದನು.


ನಾವು ಆತನವರೆಂಬುದನ್ನು ತೋರಿಸುವುದಕ್ಕಾಗಿ ಆತನು ನಮ್ಮ ಮೇಲೆ ಮುದ್ರೆಯನ್ನು ಹಾಕಿದ್ದಾನೆ. ಆತನು ತನ್ನ ಪವಿತ್ರಾತ್ಮನನ್ನು ನಮ್ಮ ಹೃದಯಗಳಲ್ಲಿ ನೆಲೆಗೊಳಿಸಿದ್ದಾನೆ. ಆತನು ನಮಗೆ ಮಾಡಿದ ವಾಗ್ದಾನವನ್ನು ನೆರವೇರಿಸುತ್ತಾನೆ ಎಂಬುದಕ್ಕೆ ಪವಿತ್ರಾತ್ಮನೇ ನಮಗೆ ಆಧಾರವಾಗಿದ್ದಾನೆ.


ಯೆಹೋವನ ವಿಷಯವಾಗಿ ನಾವು ಕಲಿಯೋಣ. ಆತನನ್ನು ಅರಿತುಕೊಳ್ಳಲು ಅತಿಯಾಗಿ ಪ್ರಯತ್ನಿಸೋಣ. ಸೂರ್ಯೋದಯ ಆಗುತ್ತದೆಯೆಂಬುದು ನಮಗೆ ಗೊತ್ತಿರುವಂತೆಯೇ ಆತನು ಬರುವುದೂ ನಮಗೆ ಗೊತ್ತಿದೆ. ವಸಂತಕಾಲದ ಮಳೆಯಂತೆ ಯೆಹೋವನು ಬರುವನು.”


ಇಸ್ರೇಲಿನ ಜನರು ಚೀಯೋನ್ ಶಿಖರಕ್ಕೆ ಬರುವರು; ಸಂತೋಷದಿಂದ ನಲಿದಾಡುವರು. ದೇವರು ಅವರಿಗೆ ಅನುಗ್ರಹಿಸುವ ಎಲ್ಲಾ ಶ್ರೇಷ್ಠವಾದ ವಸ್ತುಗಳಿಂದ ಸಂತೋಷಚಿತ್ತರಾದ ಅವರ ಮುಖಗಳು ಪ್ರಕಾಶಮಾನವಾಗುವವು. ಯೆಹೋವನು ಅವರಿಗೆ ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ, ಕುರಿಮರಿಗಳು ಮತ್ತು ಹಸುಗಳನ್ನು ದಯಪಾಲಿಸುವನು. ಅವರು ಸಾಕಷ್ಟು ನೀರಿರುವ ತೋಟದಂತೆ ಲವಲವಿಕೆಯಿಂದ ಇರುವರು. ಇಸ್ರೇಲರು ಇನ್ನು ಯಾವ ತೊಂದರೆಗೂ ಒಳಗಾಗುವುದಿಲ್ಲ.


ಯೆಹೋವನು ಯಾವಾಗಲೂ ನಿಮ್ಮನ್ನು ನಡೆಸುವನು. ಒಣನೆಲದಲ್ಲಿ ನಿಮ್ಮ ಆತ್ಮಗಳನ್ನು ತೃಪ್ತಿಪಡಿಸುವನು. ನಿಮ್ಮ ಎಲುಬುಗಳಿಗೆ ಬಲವನ್ನು ಕೊಡುವನು. ನೀರಿನಿಂದ ತೇವವಾಗಿರುವ ತೋಟದಂತೆ ನೀವು ಇರುವಿರಿ. ನಿತ್ಯವೂ ನೀರಿರುವ ಬುಗ್ಗೆಯಂತೆ ನೀವಿರುವಿರಿ.


ಕಣಿವೆಯ ಸಸ್ಯಗಳು ಹಣ್ಣುಬಿಟ್ಟಿವೆಯೋ ದ್ರಾಕ್ಷಿಬಳ್ಳಿಗಳು ಚಿಗುರಿದೆಯೋ ದಾಳಿಂಬರಗಳು ಹೂ ಬಿಟ್ಟಿವೆಯೋ ಎಂದು ನೋಡಲು ಬಾದಾಮಿ ಮರಗಳ ತೋಟಕ್ಕೆ ಹೋದೆನು.


ನನ್ನ ಪ್ರಿಯನು ತನ್ನ ತೋಟದಲ್ಲಿರುವ ಸುಗಂಧಸಸ್ಯಗಳ ದಿಬ್ಬಗಳಿಗೆ ಹೋಗಿದ್ದಾನೆ; ತೋಟಗಳಲ್ಲಿ ಮಂದೆಯನ್ನು ಮೇಯಿಸುವುದಕ್ಕೂ ನೆಲದಾವರೆಗಳನ್ನು ಕೊಯ್ಯುವುದಕ್ಕೂ ಹೋಗಿದ್ದಾನೆ.


ಕುರಿಮಂದೆಗಳೆಲ್ಲ ಒಟ್ಟಿಗೆ ಸೇರಿದ ಮೇಲೆ, ಕುರುಬರು ಬಾವಿಯ ಮೇಲಿನ ಕಲ್ಲನ್ನು ಉರುಳಿಸುತ್ತಿದ್ದರು. ಆಮೇಲೆ ಎಲ್ಲಾ ಕುರಿಗಳು ಬಾವಿಯ ನೀರನ್ನು ಕುಡಿಯುತ್ತಿದ್ದವು. ಕುರಿಗಳು ನೀರು ಕುಡಿದಾದ ಮೇಲೆ ಕುರುಬರು ಕಲ್ಲನ್ನು ಮತ್ತೆ ಮುಚ್ಚುತ್ತಿದ್ದರು.


ನನ್ನ ಪ್ರಿಯಳೇ, ನನ್ನ ವಧುವೇ, ನೀನು ನನ್ನ ಹೃದಯವನ್ನು ಅಪಹರಿಸಿರುವೆ. ನಿನ್ನ ನೋಟದಿಂದಲೂ ನಿನ್ನ ಮುತ್ತಿನಹಾರದಿಂದಲೂ ನನ್ನ ಹೃದಯವನ್ನು ವಶಪಡಿಸಿಕೊಂಡಿದ್ದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು