Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 4:3 - ಪರಿಶುದ್ದ ಬೈಬಲ್‌

3 ನಿನ್ನ ತುಟಿಗಳು ರೇಷ್ಮೆಯ ಕೆಂಪುದಾರದಂತಿವೆ. ನಿನ್ನ ಬಾಯಿ ಸುಂದರವಾಗಿದೆ. ಮುಸುಕಿನೊಳಗಿರುವ ನಿನ್ನ ಕೆನ್ನೆಗಳು ದಾಳಿಂಬೆ ಹಣ್ಣಿನ ಎರಡು ಹೋಳುಗಳಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಿನ್ನ ತುಟಿಗಳು ಕೆಂಪು ದಾರದಂತಿವೆ. ನಿನ್ನ ಬಾಯಿ ರಮ್ಯ. ಮುಸುಕಿನೊಳಗಿನ ನಿನ್ನ ಕೆನ್ನೆಯು ಹೋಳು ಮಾಡಿದ ದಾಳಿಂಬೆಯ ತಿರುಳಿನಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಿನ್ನ ತುಟಿ ನಯವಾದ ಕೆಂಪುಪಟ್ಟಿ ಬಿಚ್ಚಿದಾಗ ನೀನೆಷ್ಟು ಸುರೂಪಿಣಿ! ಮಸುಕಿನಲ್ಲಿನ ನಿನ್ನ ಕೆನ್ನೆ, ಹೋಳಾಗಿಸಿದ ದಾಳಿಂಬೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಿನ್ನ ತುಟಿಗಳು ಕೆಂಪು ದಾರದಂತಿವೆ. ನಿನ್ನ ಬಾಯಿ ರಮ್ಯ, ಮುಸುಕಿನೊಳಗಿನ ನಿನ್ನ ಕೆನ್ನೆಯು ದಾಳಿಂಬರದ ತಿರುಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಿನ್ನ ತುಟಿ ಕೆಂಪು ದಾರದ ಹಾಗೆ ಇವೆ. ನಿನ್ನ ಮಾತು ರಮ್ಯ. ಮುಸುಕಿನೊಳಗಿನ ನಿನ್ನ ಕೆನ್ನೆ ವಿಭಾಗಿಸಿದ ದಾಳಿಂಬೆಯ ಹಣ್ಣಿನ ಹಾಗೆ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 4:3
29 ತಿಳಿವುಗಳ ಹೋಲಿಕೆ  

ಮುಸುಕಿನೊಳಗಿರುವ ನಿನ್ನ ಕೆನ್ನೆಗಳು ದಾಳಿಂಬೆ ಹಣ್ಣಿನ ಎರಡು ಹೋಳುಗಳಂತಿವೆ.


ಹೌದು, ಜೆರುಸಲೇಮಿನ ಸ್ತ್ರೀಯರೇ, ನನ್ನ ಪ್ರಿಯನು ಅತ್ಯಂತ ಮನೋಹರನು; ಅವನ ನುಡಿ ಬಹು ಇಂಪು. ಅವನೇ ನನ್ನ ಪ್ರಿಯನು; ಅವನೇ ನನ್ನ ಕಾಂತನು.


ನಮ್ಮನ್ನು ಇಳಿಸುವುದಕ್ಕಾಗಿ ನೀನು ಉಪಯೋಗಿಸಿದ ಈ ಕೆಂಪು ಹಗ್ಗವನ್ನು ನಾವು ಈ ದೇಶಕ್ಕೆ ಹಿಂತಿರುಗಿ ಬರುವಾಗ ನೀನು ಕಿಟಕಿಗೆ ಕಟ್ಟಿರಬೇಕು. ನಿನ್ನ ತಂದೆತಾಯಿಗಳು, ನಿನ್ನ ಸಹೋದರ ಸಹೋದರಿಯರು ಮತ್ತು ನಿನ್ನ ಕುಟುಂಬ ವರ್ಗದವರು ನಿನ್ನ ಸಂಗಡ ಈ ಮನೆಯಲ್ಲಿರಬೇಕು.


ಮೊದಲನೆಯದಾಗಿ, ಮೋಶೆಯು ಧರ್ಮಶಾಸ್ತ್ರದ ಪ್ರತಿಯೊಂದು ಆಜ್ಞೆಯನ್ನೂ ಜನರಿಗೆಲ್ಲ ತಿಳಿಸಿದನು. ನಂತರ ಅವನು ಕರುಗಳ ರಕ್ತವನ್ನು ತೆಗೆದುಕೊಂಡು ಅದನ್ನು ನೀರಿನೊಂದಿಗೆ ಬೆರೆಸಿದನು. ಬಳಿಕ ನೀರು ಮತ್ತು ರಕ್ತವನ್ನು ಧರ್ಮಶಾಸ್ತ್ರದ ಮೇಲೆ ಮತ್ತು ಜನರೆಲ್ಲರ ಮೇಲೆ ಚಿಮುಕಿಸಲು ಕೆಂಪು ಉಣ್ಣೆಯನ್ನೂ ಹಿಸ್ಸೋಪ್ ಗಿಡದ ಕವಲನ್ನು ಉಪಯೋಗಿಸಿದನು.


ನೀವು ಮಾತನಾಡುವಾಗಲೆಲ್ಲಾ ದಯೆಯುಳ್ಳವರಾಗಿಯೂ ಜ್ಞಾನವುಳ್ಳವರಾಗಿಯೂ ಮಾತನಾಡಿರಿ. ಆಗ ಪ್ರತಿಯೊಬ್ಬರಿಗೂ ಯೋಗ್ಯವಾದ ರೀತಿಯಲ್ಲಿ ಉತ್ತರಿಸಲು ಶಕ್ತರಾಗುವಿರಿ.


ನಿಮ್ಮ ಬಾಯಿಂದ ಕೆಟ್ಟ ಮಾತುಗಳು ಬಾರದಿರಲಿ. ಭಕ್ತಿಯನ್ನು ವೃದ್ಧಿಮಾಡುವಂಥ ಕಾಲೋಚಿತವಾದ ಮಾತು ಇದ್ದರೆ ಕೇಳುವವರ ಹಿತಕ್ಕಾಗಿ ಅದನ್ನು ಆಡಿರಿ.


ಜನರೆಲ್ಲರೂ ಯೇಸುವನ್ನು ಹೊಗಳತೊಡಗಿದರು. ಅವರು ಆತನ ಇಂಪಾದ ಮಾತುಗಳಿಗೆ ಆಶ್ಚರ್ಯಪಟ್ಟು, “ಇವನು ಈ ರೀತಿ ಮಾತಾಡಲು ಹೇಗೆ ಸಾಧ್ಯ? ಇವನು ಯೋಸೇಫನ ಮಗನಲ್ಲವೇ?” ಎಂದು ಮಾತಾಡಿಕೊಂಡರು.


ಒಳ್ಳೆಯವನು ತನ್ನ ಹೃದಯದಲ್ಲಿ ಒಳ್ಳೆಯವುಗಳನ್ನು ಇಟ್ಟುಕೊಂಡಿರುತ್ತಾನೆ. ಆದ್ದರಿಂದ ಅವನು ತನ್ನ ಹೃದಯದಿಂದ ಬರುವ ಒಳ್ಳೆಯವುಗಳನ್ನೇ ಮಾತಾಡುತ್ತಾನೆ. ಆದರೆ ದುಷ್ಟನು ತನ್ನ ಹೃದಯದಲ್ಲಿ ಕೆಟ್ಟವುಗಳನ್ನು ಶೇಖರಿಸಿಕೊಂಡಿರುತ್ತಾನೆ. ಆದ್ದರಿಂದ ಅವನು ತನ್ನ ಹೃದಯದಿಂದ ಬರುವ ಕೆಟ್ಟವುಗಳನ್ನೇ ಮಾತಾಡುತ್ತಾನೆ.


ಹೀಗಿರಲು, ನಿನ್ನ ಕಾರ್ಯಗಳನ್ನೆಲ್ಲಾ ನಾನು ಕ್ಷಮಿಸುವಾಗ, ನೀನು ಅವುಗಳನ್ನು ಜ್ಞಾಪಿಸಿಕೊಂಡು ನಾಚಿಕೆಪಡುವೆ. ಅಹಂಕಾರದಿಂದ ಮಾತನಾಡಲು ಮತ್ತೊಮ್ಮೆ ಬಾಯಿ ತೆರೆಯಲಾಗದಂತೆ ನೀನು ಬಹಳವಾಗಿ ಅವಮಾನಿತಳಾಗುವೆ.” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.


ನಿನ್ನ ಬಾಯಿ ಉತ್ತಮವಾದ ದ್ರಾಕ್ಷಾರಸದಂತಿರಲಿ. ನನ್ನ ಪ್ರಿಯೆಗಾಗಿ ಈ ದ್ರಾಕ್ಷಾರಸವು ಮೆಲ್ಲನೆ ಇಳಿದುಹೋಗುವುದು. ನಿದ್ರಿಸುವವರ ತುಟಿಗಳಲ್ಲಿ ಅದು ಸರಾಗವಾಗಿ ಹರಿದುಹೋಗುವುದು.


ಅವನ ಕೆನ್ನೆಗಳು ಸುಗಂಧಸಸ್ಯಗಳ ದಿಬ್ಬಗಳಂತೆಯೂ ಸುವಾಸನೆಯುಳ್ಳ ಹೂವುಗಳಂತೆಯೂ ಇವೆ. ಅವನ ತುಟಿಗಳು ಕೆಂದಾವರೆಗಳಂತಿವೆ; ಅವನ ತುಟಿಗಳಲ್ಲಿ ಗೋಲರಸವು ತೊಟ್ಟಿಕ್ಕುತ್ತದೆ.


ನನ್ನ ವಧುವೇ, ನಿನ್ನ ತುಟಿಗಳು ಜೇನುಗರೆಯುತ್ತವೆ; ಹಾಲೂ ಜೇನೂ ನಿನ್ನ ನಾಲಿಗೆಯೊಳಗಿವೆ. ನಿನ್ನ ಬಟ್ಟೆಗಳು ಪರಿಮಳದ್ರವ್ಯದಂತೆ ಸುವಾಸನೆಭರಿತವಾಗಿವೆ.


ಆಕೆಯು ಜ್ಞಾನದಿಂದ ಮಾತಾಡುವಳು; ಪ್ರೀತಿಯಿಂದ ಸದುಪದೇಶ ಮಾಡುವಳು.


ಬುದ್ಧಿವಂತನು ವಿವೇಕದಿಂದ ಮಾತಾಡುತ್ತಾನೆ. ಆದರೆ ಬುದ್ಧಿಹೀನನಿಗೆ ಹೊಡೆತ ಬೀಳುವುದು.


ನನ್ನ ತುಟಿಗಳು ನಿನ್ನ ಜ್ಞಾನದ ನಿರ್ಧಾರಗಳ ಕುರಿತು ವರ್ಣಿಸುತ್ತವೆ.


ನೀನು ಎಲ್ಲರಿಗಿಂತಲೂ ಅತಿಸುಂದರನಾಗಿರುವೆ. ನಿನ್ನ ಮಾತುಗಳು ಮನೋಹರವಾಗಿವೆ. ದೇವರ ಆಶೀರ್ವಾದವು ನಿನ್ನ ಮೇಲೆ ಸದಾಕಾಲವಿರುವುದು.


ನೀತಿವಂತನು ಒಳ್ಳೆಯ ಬುದ್ಧಿವಾದ ಹೇಳುವನು. ಅವನ ತೀರ್ಮಾನಗಳು ನ್ಯಾಯಬದ್ಧವಾಗಿರುತ್ತವೆ.


ಚಾಚಿ ಹೀಗೆ ಪ್ರಾರ್ಥಿಸಿದೆನು: “ನನ್ನ ದೇವರೇ, ನಿನ್ನ ಕಡೆಗೆ ಮುಖವೆತ್ತಲು ನನಗೆ ನಾಚಿಕೆಯಾಗುತ್ತದೆ; ಯಾಕೆಂದರೆ ನಮ್ಮ ಪಾಪಗಳು ನಮ್ಮ ತಲೆಮೀರಿ ಬೆಳೆದಿದೆ. ನಮ್ಮ ಅಪರಾಧಗಳ ರಾಶಿಯು ಪರಲೋಕದವರೆಗೂ ಏರಿಹೋಗಿದೆ.


ಯಾಜಕನು ದೇವದಾರು ಮರದ ಕಟ್ಟಿಗೆಯನ್ನೂ ಹಿಸ್ಸೋಪ್ ಗಿಡದ ಎಳೆಕೊಂಬೆಯನ್ನೂ ಕೆಂಪು ದಾರವನ್ನೂ ತೆಗೆದುಕೊಂಡು, ಉರಿಯುತ್ತಿರುವ ಆ ಹಸುವಿನ ಮೇಲೆ ಎಸೆಯಬೇಕು.


ಬಳಿಕ ಅವುಗಳ ಮೇಲೆ ಕೆಂಪುಬಟ್ಟೆಯನ್ನು ಹಾಸಿ, ಶ್ರೇಷ್ಠವಾದ ತೊಗಲಿನಿಂದ ಮಾಡಿದ ಹೊದಿಕೆಯನ್ನು ಅದಕ್ಕೆ ಹೊದಿಸಬೇಕು. ಬಳಿಕ ಹೊರುವ ಕೋಲುಗಳನ್ನು ಮೇಜಿನ ಬಳೆಗಳಲ್ಲಿ ಸೇರಿಸಬೇಕು.


ಯಾಜಕನು ಸಜೀವವಾದ ಎರಡನೆಯ ಪಕ್ಷಿಯನ್ನು, ದೇವದಾರು ಮರದ ತುಂಡನ್ನು, ಕೆಂಪುಬಣ್ಣದ ಬಟ್ಟೆಯ ತುಂಡನ್ನು ಮತ್ತು ಹಿಸ್ಸೋಪ್ ಗಿಡವನ್ನು ತೆಗೆದುಕೊಳ್ಳಬೇಕು. ಸೆಲೇ ನೀರಿನ ಮೇಲೆ ವಧಿಸಲ್ಪಟ್ಟ ಪಕ್ಷಿಯ ರಕ್ತದಲ್ಲಿ ಜೀವಂತವಾಗಿರುವ ಪಕ್ಷಿಯನ್ನು ಮತ್ತು ಇತರ ವಸ್ತುಗಳನ್ನು ಅದ್ದಬೇಕು.


ಆ ವ್ಯಕ್ತಿಯು ಆರೋಗ್ಯವಂತನಾಗಿದ್ದರೆ, ಆಗ ಯಾಜಕನು ಈ ಸಂಗತಿಗಳನ್ನು ಮಾಡುವುದಕ್ಕೆ ಅವನಿಗೆ ಹೇಳುವನು. ಆ ವ್ಯಕ್ತಿಯು ಎರಡು ಜೀವಂತವಾದ ಶುದ್ಧ ಪಕ್ಷಿಗಳನ್ನು ತರಬೇಕು. ಅಲ್ಲದೆ, ಅವನು ದೇವದಾರುಮರದ ತುಂಡನ್ನು, ಕೆಂಪು ಬಣ್ಣದ ಬಟ್ಟೆಯ ತುಂಡನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತರಬೇಕು.


ನೀನು ನನಗೆ ತುಂಬ ಕರುಣೆ ತೋರಿದೆ. ನೀನು ನನಗೆ ಅನೇಕ ಒಳ್ಳೆಯ ಕಾರ್ಯಗಳನ್ನು ಮಾಡಿದೆ. ಮೊದಲನೆ ಸಲ ನಾನು ಜೋರ್ಡನ್ ನದಿಯನ್ನು ದಾಟಿ ಪ್ರಯಾಣ ಮಾಡಿದಾಗ, ಕೇವಲ ನನ್ನ ಊರುಗೋಲೇ ಹೊರತು ಬೇರೇನೂ ನನಗಿರಲಿಲ್ಲ. ಆದರೆ ಈಗ ಎರಡು ಗುಂಪುಗಳಿಗೆ ಬೇಕಾದ ವಸ್ತುಗಳನ್ನು ನಾನು ಪಡೆದಿದ್ದೇನೆ.


ಜೆರುಸಲೇಮಿನ ಸ್ತ್ರೀಯರೇ, ನಾನು ಕೇದಾರಿನ ಗುಡಾರಗಳಂತೆ ಕಪ್ಪಾಗಿದ್ದರೂ ಸೊಲೊಮೋನನ ಪರದೆಗಳಂತೆ ಸುಂದರಳಾಗಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು