Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 5:10 - ಪರಿಶುದ್ದ ಬೈಬಲ್‌

10 ನನ್ನ ಪ್ರಿಯನದು ಹೊಳಪಾದ ಕಂದುಬಣ್ಣ. ಹತ್ತು ಸಾವಿರ ಪುರುಷರಲ್ಲಿ ಅವನೇ ಆಕರ್ಷಕ ಪುರುಷ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನನ್ನ ನಲ್ಲನು ತೇಜೋಮಯವಾದ ಕೆಂಪು ಬಣ್ಣವುಳ್ಳವನು; ಅವನು ಹತ್ತು ಸಾವಿರ ಜನರಲ್ಲಿ ಧ್ವಜಪ್ರಾಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನನ್ನ ನಲ್ಲ, ತೇಜೋಮಯ, ರಕ್ತವರ್ಣ ಹತ್ತುಸಾವಿರ ಜನರಲ್ಲಿ ಶ್ರೇಷ್ಠ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನನ್ನ ನಲ್ಲನು ಬಿಳುಪು ಕೆಂಪು ಬಣ್ಣವುಳ್ಳವನು; ಅವನು ಹತ್ತುಸಾವಿರ ಜನರಲ್ಲಿ ಧ್ವಜಪ್ರಾಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನನ್ನ ಪ್ರಿಯನು, ತೇಜೋಮಯನು, ಕೆಂಪೂ ಬಣ್ಣವುಳ್ಳವನು. ಹತ್ತು ಸಾವಿರ ಜನರಲ್ಲಿ ಶ್ರೇಷ್ಠನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 5:10
14 ತಿಳಿವುಗಳ ಹೋಲಿಕೆ  

ನೀನು ಎಲ್ಲರಿಗಿಂತಲೂ ಅತಿಸುಂದರನಾಗಿರುವೆ. ನಿನ್ನ ಮಾತುಗಳು ಮನೋಹರವಾಗಿವೆ. ದೇವರ ಆಶೀರ್ವಾದವು ನಿನ್ನ ಮೇಲೆ ಸದಾಕಾಲವಿರುವುದು.


ನಾನು ನಿನ್ನ ಹೆಸರನ್ನು ಯಾವಾಗಲೂ ಪ್ರಖ್ಯಾತಿಪಡಿಸುವೆನು; ಜನಾಂಗಗಳು ನಿನ್ನನ್ನು ಸದಾಕಾಲ ಕೊಂಡಾಡುವರು.


ಯೇಸುವೇ ನಮಗೆ ಬೇಕಾಗಿದ್ದ ಪ್ರಧಾನ ಯಾಜಕನು. ಆತನು ಪಾಪರಹಿತನೂ ಪರಿಶುದ್ಧನೂ ನಿಷ್ಕಳಂಕನೂ ಪಾಪಿಗಳ ಪ್ರಭಾವಕ್ಕೆ ಒಳಗಾಗದವನೂ ಆಕಾಶಮಂಡಲಕ್ಕಿಂತ ಉನ್ನತನೂ ಆಗಿದ್ದಾನೆ.


ಸಮಸ್ತವನ್ನು ಸೃಷ್ಟಿಸಿದಾತನು ದೇವರೇ. ಸಮಸ್ತವು ಆತನ ಮಹಿಮೆಗಾಗಿಯೇ ಸೃಷ್ಟಿಯಾಯಿತು. ದೇವರು ತನ್ನವರೇ ಆದ ಅನೇಕ ಜನರನ್ನು ಹೊಂದಿಕೊಂಡು ಅವರೊಂದಿಗೆ ತನ್ನ ಮಹಿಮೆಯನ್ನು ಹಂಚಿಕೊಳ್ಳಲು ಬಯಸಿದನು. ಆದ್ದರಿಂದ ಆತನು ಅವರನ್ನು ರಕ್ಷಣೆಗೆ ನಡೆಸಲು ಪರಿಪೂರ್ಣನಾದ ಒಬ್ಬಾತನನ್ನು ನಿರ್ಮಿಸಿದನು. ಆತನೇ ಯೇಸು. ದೇವರು ಆತನನ್ನು ಬಾಧೆಗಳ ಮೂಲಕವೇ ಪರಿಪೂರ್ಣನಾದ ರಕ್ಷಕನನ್ನಾಗಿ ಮಾಡಿದನು.


ಕ್ರಿಸ್ತನು ದೇಹಕ್ಕೆ (ಸಭೆಯ) ಶಿರಸ್ಸಾಗಿದ್ದಾನೆ. ಪ್ರತಿಯೊಂದೂ ಆತನಿಂದಲೇ ಬರುತ್ತದೆ. ಮರಣದಿಂದ ಪ್ರಥಮವಾಗಿ ಎದ್ದುಬಂದವನು ಆತನೇ. ಆದ್ದರಿಂದ ಎಲ್ಲಾದರಲ್ಲಿಯೂ ಯೇಸುವೇ ಅತ್ಯಂತ ಪ್ರಾಮುಖ್ಯನಾಗಿದ್ದಾನೆ.


ಅವರು ನಮ್ಮ ಪಿತೃಗಳ ಸಂತಾನಗಳಿಗೆ ಸೇರಿದವರಾಗಿದ್ದಾರೆ; ಕ್ರಿಸ್ತನು ಶಾರೀರಿಕವಾಗಿ ಇವರ ವಂಶದಲ್ಲಿಯೇ ಹುಟ್ಟಿದನು. ಕ್ರಿಸ್ತನು ಸಕಲಕ್ಕೂ ಒಡೆಯನಾಗಿದ್ದಾನೆ. ಆತನಿಗೆ ಎಂದೆಂದಿಗೂ ಸ್ತೋತ್ರವಾಗಲಿ! ಆಮೆನ್.


ನಾನು ಶಾರೋನಿನಲ್ಲಿರುವ ಗುಲಾಬಿ; ತಗ್ಗುಗಳಲ್ಲಿರುವ ತಾವರೆ.


ಇಷಯನು ಕಿರಿಯ ಮಗನನ್ನು ಕರೆತರಲು ಒಬ್ಬನನ್ನು ಕಳುಹಿಸಿದನು. ಇವನಾದರೋ ಕೆಂಬಣ್ಣದವನೂ ಸುಂದರನೇತ್ರನೂ ನೋಟಕ್ಕೆ ರಮಣೀಯನೂ ಆಗಿದ್ದನು. ಯೆಹೋವನು ಸಮುವೇಲನಿಗೆ, “ಮೇಲೆದ್ದು ನಿಲ್ಲು, ಅವನನ್ನು ಅಭಿಷೇಕಿಸು. ಇವನನ್ನೇ ನಾನು ಆರಿಸಿದ್ದು” ಎಂದು ಆಜ್ಞಾಪಿಸಿದನು.


ನಮ್ಮ ವೈರಿಗಳ ಬಂಡೆಯು ನಮ್ಮ ಬಂಡೆಯಂತೆ ಬಲಶಾಲಿಯಲ್ಲ. ವೈರಿಗಳಿಗೂ ಇದು ಗೊತ್ತಿದೆ.


ಅವರಲ್ಲಿ ಕೆಲವರಿಗೆ ನಾನು ಗುರುತು ಹಾಕುವೆನು. ನಾನು ಅವರನ್ನು ರಕ್ಷಿಸುವೆನು. ರಕ್ಷಿಸಲ್ಪಟ್ಟ ಕೆಲವರನ್ನು ನಾನು ತಾರ್ಷೀಷ್, ಲಿಬ್ಯ, ಲೂದ್, ತೂಬಾಲ್, ಗ್ರೀಸ್ ಮತ್ತು ದೂರದೇಶಗಳಿಗೆ ಕಳುಹಿಸುವೆನು. ಅಲ್ಲಿಯ ಜನರು ನನ್ನ ಬೋಧನೆಯನ್ನು ಎಂದೂ ಕೇಳಿರಲಿಲ್ಲ. ಅವರು ನನ್ನ ಮಹಿಮೆಯನ್ನು ಎಂದೂ ಕಂಡಿರಲಿಲ್ಲ. ಆದ್ದರಿಂದ ರಕ್ಷಿಸಲ್ಪಟ್ಟ ಜನರು ನನ್ನ ಮಹಿಮೆಯನ್ನು ಅವರಿಗೆ ತಿಳಿಸುವರು.


ಆಗ ಪಶ್ಚಿಮದಲ್ಲಿರುವ ಜನರು ಯೆಹೋವನ ನಾಮಕ್ಕೆ ಭಯಪಟ್ಟು ಗೌರವಿಸುವರು. ಪೂರ್ವದಲ್ಲಿದ್ದ ಜನರು ಆತನ ಮಹಿಮೆಯನ್ನು ಭಯಭಕ್ತಿಯಿಂದ ಕಾಣುವರು. ಬಿರುಗಾಳಿಯಿಂದ ರಭಸವಾಗಿ ಹರಿದುಬರುವ ಹೊಳೆಯಂತೆ ಯೆಹೋವನು ಬೇಗನೆ ಬರುವನು.


ಆಮೇಲೆ ಆ ಬೆಂಕಿಯು ದೊಡ್ಡದೊಡ್ಡ ಮರಗಳನ್ನು ಮತ್ತು ದ್ರಾಕ್ಷಿತೋಟಗಳನ್ನು ಸುಟ್ಟುಹಾಕುವದು. ಕೊನೆಗೆ ಜನರನ್ನು ಮೊದಲುಗೊಂಡು ಪ್ರತಿಯೊಂದೂ ನಾಶವಾಗುವುದು. ದೇವರು ಅಶ್ಶೂರವನ್ನು ನಾಶಮಾಡುವಾಗ ಹಾಗೆಯೇ ಆಗುವದು. ಅಶ್ಶೂರವು ಗೆದ್ದಲುಹುಳ ತಿಂದ ಮರದ ದಿಮ್ಮಿಯಂತಿರುವದು.


ಯೆಹೂದದ ಕೆಲವು ಜನರು ದೇವರಿಗೆ ವಿಶೇಷವಾದ ರೀತಿಯಲ್ಲಿ ಸಮರ್ಪಿತರಾಗಿದ್ದರು. ಅವರು ಬಹಳ ಶುದ್ಧರಾಗಿದ್ದರು. ಅವರು ಹಿಮಕ್ಕಿಂತಲೂ ಹಾಲಿಗಿಂತಲೂ ಬಿಳುಪಾಗಿದ್ದರು. ಅವರ ದೇಹಗಳು ಹವಳದಂತೆ ಕೆಂಪಾಗಿದ್ದವು. ಅವರ ಗಡ್ಡಗಳು ಇಂದ್ರನೀಲಮಣಿಯಂತಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು