Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 5:7 - ಪರಿಶುದ್ದ ಬೈಬಲ್‌

7 ನಗರದಲ್ಲಿ ಗಸ್ತು ತಿರುಗುವ ಕಾವಲುಗಾರರು ನನ್ನನ್ನು ಕಂಡು ಹೊಡೆದು ಗಾಯಮಾಡಿದರು. ಕೋಟೆಯ ಕಾವಲುಗಾರರು ನನ್ನ ಮೇಲ್ಹೋದಿಕೆಯನ್ನು ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಊರಲ್ಲಿ ಸುತ್ತುತ್ತಿರುವ ಕಾವಲುಗಾರರು ನನ್ನನ್ನು ಕಂಡುಹಿಡಿದು, ಹೊಡೆದು ಗಾಯಪಡಿಸಿದರು, ಪೌಳಿಯ ಕಾವಲುಗಾರರು ಮೇಲೊದಿಕೆಯನ್ನು ನನ್ನಿಂದ ಕಿತ್ತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸುತ್ತುತ್ತಿದ್ದರು ಬೀದಿಗಳಲಿ ಪಹರೆಯವರು ನನ್ನನ್ನು ಕಂಡುಹಿಡಿದರು, ಹೊಡೆದು ಗಾಯಗೊಳಿಸಿದರು. ಕಿತ್ತುಕೊಂಡರು ಮೇಲುಹೊದಿಕೆಯನು ಆ ಪೌಳಿಗೋಡೆಯ ಕಾವಲುಗಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಊರಲ್ಲಿ ಸುತ್ತುತ್ತಿರುವ ಕಾವಲುಗಾರರು ನನ್ನನ್ನು ಕಂಡು ಹಿಡಿದು ಹೊಡೆದು ಗಾಯಪಡಿಸಿದರು; ಪವುಳಿಯ ಕಾವಲುಗಾರರು ಮೇಲುಹೊದಿಕೆಯನ್ನು ನನ್ನಿಂದ ಕಿತ್ತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಪಟ್ಟಣದಲ್ಲಿ ಸಂಚರಿಸುವ ಕಾವಲುಗಾರರು ನನ್ನನ್ನು ಕಂಡುಹಿಡಿದರು. ನನ್ನನ್ನು ಹೊಡೆದು, ಗಾಯ ಮಾಡಿದರು. ಗೋಡೆಗಳನ್ನು ಕಾಯುವವರು ನನ್ನ ಮುಸುಕನ್ನು ಕಸಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 5:7
25 ತಿಳಿವುಗಳ ಹೋಲಿಕೆ  

ನಗರದಲ್ಲಿ ಗಸ್ತು ತಿರುಗುವ ಕಾವಲುಗಾರರನ್ನು ಕಂಡು, “ನನ್ನ ಪ್ರಿಯನನ್ನು ನೋಡಿದಿರಾ?” ಎಂದು ಕೇಳಿದೆನು.


ನಾವು ಯಾವಗಲೂ ಯೇಸುವನ್ನು ಮಾದರಿಯಾಗಿ ಇಟ್ಟುಕೊಂಡಿರಬೇಕು. ನಮ್ಮ ನಂಬಿಕೆಯನ್ನು ಹುಟ್ಟಿಸುವವನೂ ಪೂರೈಸುವವನೂ ಆತನೇ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅವಮಾನವನ್ನು ಅಲಕ್ಷ್ಯಮಾಡಿ ಶಿಲುಬೆಯ ಮರಣವನ್ನು ಸಹಿಸಿಕೊಂಡನು. ಈಗ ಆತನು ದೇವರ ಸಿಂಹಾಸನದ ಬಲಭಾಗದಲ್ಲಿ ಕುಳಿತಿರುವನು.


ಯೆಹೂದ್ಯ ಧರ್ಮದಲ್ಲಿ ಬಹಳ ಆಸಕ್ತಿಯುಳ್ಳವನಾಗಿದ್ದು ಕ್ರೈಸ್ತಸಭೆಯನ್ನು (ವಿಶ್ವಾಸಿಗಳನ್ನು) ಹಿಂಸಿಸಿದೆನು. ಮೋಶೆಯ ಧರ್ಮಶಾಸ್ತ್ರಕ್ಕೆ ಯಾವಾಗಲೂ ವಿಧೇಯನಾಗಿದ್ದುದರಿಂದ ಯಾರೂ ನನ್ನ ವಿಷಯದಲ್ಲಿ ತಪ್ಪನ್ನು ಕಂಡುಹಿಡಿಯಲಾಗಲಿಲ್ಲ.


ಅವರು ನಿಜ ಅಪೊಸ್ತಲರಲ್ಲ. ಅವರು ಮೋಸಗಾರರಾದ ಕೆಲಸಗಾರರು. ತಾವು ಕ್ರಿಸ್ತನ ಅಪೊಸ್ತಲರಲ್ಲದಿದ್ದರೂ ಜನರು ತಮ್ಮನ್ನು ಕ್ರಿಸ್ತನ ಅಪೊಸ್ತಲರೆಂದು ತಿಳಿದುಕೊಳ್ಳುವಂತೆ ನಟಿಸುತ್ತಾರೆ.


ಜನರು ನಿಮ್ಮನ್ನು ತಮ್ಮ ಸಭಾಮಂದಿರಗಳಿಂದ ಬಹಿಷ್ಕರಿಸುವರು. ಹೌದು, ನಿಮ್ಮನ್ನು ಕೊಂದರೆ ದೇವರ ಸೇವೆ ಮಾಡಿದಂತಾಗುವುದು ಎಂದು ಜನರು ಯೋಚಿಸುವ ಕಾಲ ಬರಲಿದೆ.


“ನೀವು ಮನುಷ್ಯಕುಮಾರನಿಗೆ ಸೇರಿದವರಾಗಿರುವುದರಿಂದ ಜನರು ನಿಮ್ಮನ್ನು ದ್ವೇಷಿಸಿದರೆ, ತುಚ್ಛೀಕರಿಸಿದರೆ, ಅವಮಾನ ಮಾಡಿದರೆ, ನಿಮ್ಮನ್ನು ಕೆಟ್ಟವರೆಂದು ಹೇಳಿದರೆ ನೀವು ಧನ್ಯರು.


“ಮೋಶೆಯ ಧರ್ಮಶಾಸ್ತ್ರ ಹೇಳುವುದನ್ನು ನಿಮಗೆ ತಿಳಿಸಲು ಧರ್ಮೋಪದೇಶಕರಿಗೂ ಫರಿಸಾಯರಿಗೂ ಅಧಿಕಾರವಿದೆ.


ನಾನು ಪ್ರವಾದಿಗಳ ಮೂಲಕ ಜನರಿಗೆ ಕಟ್ಟಳೆಗಳನ್ನು ವಿಧಿಸಿದೆನು. ನನ್ನ ಅಪ್ಪಣೆಯ ಮೇರೆಗೆ ಜನರು ಕೊಲ್ಲಲ್ಪಟ್ಟರು.


ಜೆರುಸಲೇಮೇ, ನಿನ್ನ ಗೋಡೆಯ ಮೇಲೆ ನಾನು ಕಾವಲುಗಾರರನ್ನು ಇಟ್ಟಿರುತ್ತೇನೆ. ಆ ಕಾವಲುಗಾರರು ಮೌನವಾಗಿರುವದಿಲ್ಲ. ಅವರು ಹಗಲಿರುಳು ಪ್ರಾರ್ಥಿಸುತ್ತಾ ಇರುವರು. ಕಾವಲುಗಾರರೇ, ನೀವು ಯೆಹೋವನಿಗೆ ಪ್ರಾರ್ಥಿಸುತ್ತಾ ಇರಬೇಕು. ಆತನ ವಾಗ್ದಾನಗಳನ್ನು ನೀವು ಆತನ ನೆನಪಿಗೆ ತರಬೇಕು. ಪ್ರಾರ್ಥಿಸುವುದನ್ನು ಎಂದಿಗೂ ನಿಲ್ಲಿಸಬೇಡಿ.


ಸೊಲೊಮೋನನಿಗೆ ಬಾಲ್ಹಾಮೋನಿನಲ್ಲಿ ದ್ರಾಕ್ಷಿತೋಟವಿತ್ತು. ಅವನು ಅದನ್ನು ರೈತರಿಗೆ ಒಪ್ಪಿಸಿದನು. ಪ್ರತಿಯೊಬ್ಬನು ಹಣ್ಣಿಗಾಗಿ ಒಂದು ಸಾವಿರ ಬೆಳ್ಳಿನಾಣ್ಯಗಳನ್ನು ಕೊಡಬೇಕಿತ್ತು.


ನೀತಿವಂತನು ನನ್ನನ್ನು ಸರಿಪಡಿಸಿದರೆ ಅದು ನನಗೇ ಒಳ್ಳೆಯದು. ನಿನ್ನ ಭಕ್ತರು ನನ್ನನ್ನು ಗದರಿಸಿದರೆ ಅದು ನನಗೇ ಒಳ್ಳೆಯದು. ಆದರೆ ಕೆಟ್ಟವರ ಕೆಟ್ಟಕೃತ್ಯಗಳ ವಿರೋಧವಾಗಿ ನಾನು ಯಾವಾಗಲೂ ಪ್ರಾರ್ಥಿಸುತ್ತೇನೆ.


ನಾನು ನನ್ನ ಪ್ರಿಯನಿಗಾಗಿ ಬಾಗಿಲನ್ನು ತೆರೆಯುವಷ್ಟರಲ್ಲಿ ನನ್ನ ಪ್ರಿಯನು ಹೊರಟುಹೋಗಿದ್ದನು! ಅವನು ಇಲ್ಲದಿರುವುದನ್ನು ಕಂಡು ನನ್ನ ಹೃದಯವು ಕುಸಿದುಹೋಯಿತು. ನಾನು ಅವನಿಗಾಗಿ ಹುಡುಕಿದರೂ ಅವನು ಸಿಕ್ಕಲಿಲ್ಲ. ನಾನು ಅವನಿಗಾಗಿ ಕೂಗಿದರೂ ಅವನು ಉತ್ತರಿಸಲಿಲ್ಲ.


ಜೆರುಸಲೇಮಿನ ಸ್ತ್ರೀಯರೇ, ನೀವು ನನ್ನ ಪ್ರಿಯನನ್ನು ಕಂಡರೆ, ಅವನಿಗೆ ನಾನು ಅನುರಾಗದಿಂದ ಅಸ್ವಸ್ಥಳಾಗಿದ್ದೇನೆಂದು ತಿಳಿಸಿರಿ.


ಕೈಗನ್ನಡಿಗಳನ್ನು, ಪೋಷಾಕುಗಳನ್ನು, ಮುಂಡಾಸಗಳನ್ನು ಮತ್ತು ಉದ್ದವಾದ ಶಾಲುಗಳನ್ನು ಅವರಿಂದ ತೆಗೆದುಬಿಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು