Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 6:11 - ಪರಿಶುದ್ದ ಬೈಬಲ್‌

11 ಕಣಿವೆಯ ಸಸ್ಯಗಳು ಹಣ್ಣುಬಿಟ್ಟಿವೆಯೋ ದ್ರಾಕ್ಷಿಬಳ್ಳಿಗಳು ಚಿಗುರಿದೆಯೋ ದಾಳಿಂಬರಗಳು ಹೂ ಬಿಟ್ಟಿವೆಯೋ ಎಂದು ನೋಡಲು ಬಾದಾಮಿ ಮರಗಳ ತೋಟಕ್ಕೆ ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ದ್ರಾಕ್ಷಿಯು ಚಿಗುರಿದೆಯೋ, ದಾಳಿಂಬೆ ಗಿಡಗಳು ಹೂಬಿಟ್ಟಿವೆಯೋ ಎಂದು ತಗ್ಗಿನಲ್ಲಿ ಬೆಳೆದ ಸಸ್ಯಗಳನ್ನು ನೋಡಲು ಬಾದಾಮಿಯ ತೋಟಕ್ಕೆ ನಾನು ಹೋಗಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ದ್ರಾಕ್ಷಾಬಳ್ಳಿ ಚಿಗುರಿದೆಯೋ ದಾಳಿಂಬೆಗಿಡ ಹೂಬಿಟ್ಟಿದೆಯೋ ಎಂದು ನೋಡಲಿಕೆ ಕಣಿವೆಯಲ್ಲಿರುವ ಕುಸುಮಗಳನು ಕಾಣಲಿಕೆ ನಾ ನಡೆದೆ ಬಾದಾಮಿಯ ತೋಟಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ದ್ರಾಕ್ಷೆಯು ಚಿಗುರಿದೆಯೋ, ದಾಳಿಂಬರಗಳು ಹೂಬಿಟ್ಟಿವೆಯೋ ಎಂದು ತಗ್ಗಿನ ಸಸ್ಯಗಳನ್ನು ನೋಡಲು ಬಾದಾವಿುಯ ತೋಟಕ್ಕೆ ನಾನು ಹೋಗಿದ್ದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ದ್ರಾಕ್ಷಿಬಳ್ಳಿಯು ಚಿಗುರಿದೆಯೋ, ದಾಳಿಂಬೆ ಗಿಡ ಹೂಬಿಟ್ಟಿದೆಯೋ ಎಂದು ಕಣಿವೆಯಲ್ಲಿನ ಫಲಗಳನ್ನು ನೋಡಲು ನಾನು ಬಾದಾಮಿಯ ತೋಟಕ್ಕೆ ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 6:11
14 ತಿಳಿವುಗಳ ಹೋಲಿಕೆ  

ನಾವು ಹೊತ್ತಾರೆಯಲ್ಲಿ ಎದ್ದು ದ್ರಾಕ್ಷಾತೋಟಗಳಿಗೆ ಹೋಗೋಣ. ದ್ರಾಕ್ಷೆಯು ಚಿಗುರಿದೆಯೋ ಅದರ ಹೂವು ಅರಳಿದೆಯೋ ದಾಳಿಂಬೆ ಹಣ್ಣುಗಳು ಮಾಗಿವಿಯೋ ನೋಡೋಣ. ನನ್ನ ಪ್ರೀತಿಯನ್ನು ನಿನಗೆ ಅಲ್ಲಿ ಸಲ್ಲಿಸುವೆನು.


ಕೆಲವು ದಿನಗಳಾದ ಮೇಲೆ ಪೌಲನು ಬಾರ್ನಬನಿಗೆ, “ನಾವು ಅನೇಕ ಪಟ್ಟಣಗಳಲ್ಲಿ ಪ್ರಭುವಿನ ಸಂದೇಶವನ್ನು ತಿಳಿಸಿದೆವು. ಆ ಪಟ್ಟಣಗಳಲ್ಲಿರುವ ನಮ್ಮ ಸಹೋದರ ಸಹೋದರಿಯರನ್ನು ಸಂದರ್ಶಿಸಿ ಅವರು ಹೇಗಿದ್ದಾರೆಂದು ನೋಡಿಕೊಂಡು ಬರೋಣ” ಎಂದು ಹೇಳಿದನು.


ಆತನು ಎಲೆಗಳಿದ್ದ ಒಂದು ಅಂಜೂರದ ಮರವನ್ನು ನೋಡಿದನು. ಆದ್ದರಿಂದ ಆ ಮರದಲ್ಲಿ ಅಂಜೂರದ ಹಣ್ಣೇನಾದರೂ ಸಿಕ್ಕಬಹುದೆಂದು ಅದರ ಬಳಿಗೆ ಹೋದನು. ಆದರೆ ಆತನು ಆ ಮರದಲ್ಲಿ ಅಂಜೂರದ ಹಣ್ಣುಗಳನ್ನು ಕಾಣಲಿಲ್ಲ. ಅಲ್ಲಿ ಎಲೆಗಳು ಮಾತ್ರ ಇದ್ದವು. ಏಕೆಂದರೆ ಅದು ಅಂಜೂರ ಹಣ್ಣಿನ ಕಾಲವಾಗಿರಲಿಲ್ಲ.


ನನ್ನ ಪ್ರಿಯನು ತನ್ನ ತೋಟದಲ್ಲಿರುವ ಸುಗಂಧಸಸ್ಯಗಳ ದಿಬ್ಬಗಳಿಗೆ ಹೋಗಿದ್ದಾನೆ; ತೋಟಗಳಲ್ಲಿ ಮಂದೆಯನ್ನು ಮೇಯಿಸುವುದಕ್ಕೂ ನೆಲದಾವರೆಗಳನ್ನು ಕೊಯ್ಯುವುದಕ್ಕೂ ಹೋಗಿದ್ದಾನೆ.


ನನ್ನ ಪ್ರಿಯೇ, ನನ್ನ ವಧುವೇ, ನನ್ನ ತೋಟವನ್ನು ಪ್ರವೇಶಿಸಿದ್ದೇನೆ. ನನ್ನ ಸುಗಂಧದ್ರವ್ಯದೊಡನೆ ಗೋಲರಸವನ್ನು ಶೇಖರಿಸಿದ್ದೇನೆ. ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿದ್ದೇನೆ. ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿದ್ದೇನೆ. ಸ್ನೇಹಿತರೇ, ತಿನ್ನಿರಿ, ಕುಡಿಯಿರಿ! ಪ್ರೀತಿಯಿಂದ ಮತ್ತರಾಗಿ!


ದೇವರಾದ ಯೆಹೋವನು ಆ ತೋಟದಲ್ಲಿ ಸುಂದರವಾದ ಪ್ರತಿಯೊಂದು ಮರವನ್ನು ಮತ್ತು ಊಟಕ್ಕೆ ಬೇಕಾದ ಒಳ್ಳೆಯ ಹಣ್ಣುಗಳನ್ನು ಬಿಡುವ ಪ್ರತಿಯೊಂದು ಮರವನ್ನು ಬೆಳೆಸಿದನು. ಇದಲ್ಲದೆ ತೋಟದ ಮಧ್ಯಭಾಗದಲ್ಲಿ ಜೀವದಾಯಕ ಮರವನ್ನೂ ಅಲ್ಲದೆ ಒಳ್ಳೆಯದರ ಮತ್ತು ಕೆಟ್ಟದ್ದರ ಬಗ್ಗೆ ಜ್ಞಾನ ಕೊಡುವ ಮರವನ್ನೂ ಬೆಳೆಸಿದನು.


“ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ; ನಾನು ನಿಮ್ಮನ್ನು ಆರಿಸಿಕೊಂಡೆನು. ನೀವು ಹೊರಟುಹೋಗಿ ಫಲಕೊಡಬೇಕು. ಇದೇ ನಾನು ನಿಮಗೆ ಕೊಟ್ಟಿರುವ ಕೆಲಸ. ಈ ಫಲವು ನಿಮ್ಮ ಜೀವನದಲ್ಲಿ ಶಾಶ್ವತವಾಗಿರಲಿ ಎಂಬುದೇ ನನ್ನ ಬಯಕೆ. ಹೀಗಿರಲಾಗಿ, ನೀವು ನನ್ನ ಹೆಸರಿನಲ್ಲಿ ಏನು ಕೇಳಿಕೊಂಡರೂ ತಂದೆಯು ಅದನ್ನು ನಿಮಗೆ ಕೊಡುವನು.


ಅವನು ತನ್ನ ತೋಟವನ್ನು ನೋಡಿಕೊಳ್ಳುವುದಕ್ಕಾಗಿ ಒಬ್ಬ ತೋಟಗಾರನನ್ನೂ ನೇಮಿಸಿದ್ದನು. ಅವನು ತನ್ನ ಆ ಸೇವಕನಿಗೆ, ‘ಈ ಮರವು ಹಣ್ಣು ಬಿಡಬಹುದೆಂದು ನಾನು ಮೂರು ವರ್ಷದಿಂದ ಕಾಯುತ್ತಿದ್ದೇನೆ. ಆದರೆ ಇದು ಹಣ್ಣನ್ನು ಬಿಡಲೇ ಇಲ್ಲ. ಇದನ್ನು ಕತ್ತರಿಸಿಹಾಕು! ಇದು ಭೂಮಿಯ ಸಾರವನ್ನೇಕೆ ವ್ಯರ್ಥಗೊಳಿಸಬೇಕು?’ ಎಂದು ಹೇಳಿದನು.


ಆ ದ್ರಾಕ್ಷಾಲತೆಯ ಮೇಲೆ ಮೂರು ಕವಲುಗಳಿದ್ದವು. ಆ ಕವಲುಗಳು ಚಿಗುರುತ್ತಲೇ ಹೂವುಗಳನ್ನು ಬಿಟ್ಟವು; ಆ ಹೂವುಗಳು ಹಣ್ಣುಗಳಾದವು.


ನಾನು ಅದನ್ನು ಗ್ರಹಿಸಿಕೊಳ್ಳುವುದಕ್ಕಿಂತ ಮೊದಲೇ, ನನ್ನ ಮನಸ್ಸು ದೇಶದ ಪ್ರಧಾನರ ರಥಗಳ ನಡುವೆ ನನ್ನನ್ನು ಕುಳ್ಳರಿಸಿತು.


ಕಾಮಜನಕ ಸಸಿಗಳು ಸುವಾಸನೆ ಬೀರುತ್ತವೆ. ನನ್ನ ಪ್ರಿಯನೇ, ನಾನು ನಿನಗೋಸ್ಕರ ಉಳಿಸಿದ ರುಚಿಕರವಾದ ಬಗೆಬಗೆಯ ಹೊಸ ಮತ್ತು ಹಳೆ ಹಣ್ಣುಗಳು ನಮ್ಮ ಬಾಗಿಲ ಬಳಿಯಲ್ಲಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು