Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 8:12 - ಪರಿಶುದ್ದ ಬೈಬಲ್‌

12 ಆದರೆ ನನ್ನ ಸ್ವಂತ ದ್ರಾಕ್ಷಿತೋಟವು ನನ್ನೆದುರಿನಲ್ಲಿದೆ. ಸೊಲೊಮೋನನೇ, ಆ ಸಾವಿರ ಬೆಳ್ಳಿನಾಣ್ಯಗಳು ನಿನಗಿರಲಿ. ತೋಟವನ್ನು ನೋಡಿಕೊಳ್ಳುವವರಿಗೆ ಇನ್ನೂರು ಬೆಳ್ಳಿನಾಣ್ಯಗಳಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಸೊಲೊಮೋನನೇ, ಆ ಸಾವಿರ ಬೆಳ್ಳಿ ನಾಣ್ಯ ನಿನಗಿರಲಿ, ಅದರ ಮೇಲ್ವಿಚಾರಕರಿಗೆ ಇನ್ನೂರು ನಾಣ್ಯ ಸೇರಲಿ; ನನ್ನದೇ ಆಗಿರುವ ನನ್ನ ತೋಟವು ನನ್ನ ವಶದಲ್ಲಿಯೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸೊಲೊಮೋನನೇ, ಆ ಸಾವಿರ ಬೆಳ್ಳಿನಾಣ್ಯ ನಿನಗೇ ಇರಲಿ ಮೇಲ್ವಿಚಾರಕರಿಗೆ ಇನ್ನೂರು ನಾಣ್ಯ ಸೇರಲಿ. ಆದರೆ ನನ್ನ ದ್ರಾಕ್ಷಾತೋಟ ನನ್ನ ವಶದಲೇ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಸೊಲೊಮೋನನೇ, ಆ ಸಾವಿರ ರೂಪಾಯಿ ನಿನಗಿರಲಿ, ಫಲವನ್ನು ನೋಡಿಕೊಳ್ಳುವವರಿಗೆ ಇನ್ನೂರು ರೂಪಾಯಿ ಸೇರಲಿ; ನನ್ನದೇ ಆಗಿರುವ ನನ್ನ ತೋಟವು ನನ್ನ ವಶದಲ್ಲಿಯೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಸೊಲೊಮೋನನೇ, ಆ ಸಾವಿರ ಬೆಳ್ಳಿ ನಾಣ್ಯಗಳು ನಿನಗೇ ಇರಲಿ. ತೋಟದ ಫಲವನ್ನು ಕಾಪಾಡುವವರಿಗೆ ಇನ್ನೂರು ಬೆಳ್ಳಿನಾಣ್ಯಗಳು ಸೇರಲಿ. ಆದರೆ ನನ್ನ ದ್ರಾಕ್ಷಿತೋಟ ನನಗೇ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 8:12
14 ತಿಳಿವುಗಳ ಹೋಲಿಕೆ  

ಸೂರ್ಯನ ತಾಪಕ್ಕೆ ನಾನೆಷ್ಟು ಕಪ್ಪಾಗಿದ್ದೇನೆಂದು ನೋಡಬೇಡಿರಿ. ನನ್ನ ಸಹೋದರರು ನನ್ನ ಮೇಲೆ ಕೋಪಗೊಂಡು ದ್ರಾಕ್ಷಿತೋಟಗಳನ್ನು ನೋಡಿಕೊಳ್ಳಲು ನನ್ನನ್ನು ನೇಮಿಸಿದರು. ಆದರೆ ನಾನು ನನ್ನ ತೋಟವನ್ನು ಕಾಯಲಿಲ್ಲ.


ನಮ್ಮ ಪ್ರಭುವಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ ನಾವು ಹೊಗಳಿಕೊಳ್ಳುವ ನಮ್ಮ ನಿರೀಕ್ಷೆ, ನಮ್ಮ ಸಂತೋಷ, ನಮ್ಮ ಕಿರೀಟ ನೀವೇ ಆಗಿದ್ದೀರಿ.


ಜೀವಿಸುವವರು ಇನ್ನು ಮೇಲೆ ತಮಗೋಸ್ಕರ ಜೀವಿಸಬಾರದೆಂದು ಕ್ರಿಸ್ತನು ಎಲ್ಲಾ ಜನರಿಗಾಗಿ ಸತ್ತನು. ಆ ಜನರು ತನಗೋಸ್ಕರ ಜೀವಿಸಲೆಂದು ಆತನು ಅವರಿಗೋಸ್ಕರ ಸತ್ತನು ಮತ್ತು ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದನು.


ನೀವು ದೇವರಿಂದ ಕ್ರಯಕ್ಕೆ ಕೊಳ್ಳಲ್ಪಟ್ಟವರು. ಆದ್ದರಿಂದ ನಿಮ್ಮ ದೇಹಗಳಿಂದ ದೇವರನ್ನು ಘನಪಡಿಸಿರಿ.


ಆದ್ದರಿಂದ ನಿಮ್ಮ ವಿಷಯದಲ್ಲಿಯೂ ಪವಿತ್ರಾತ್ಮನು ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿಯೂ ಎಚ್ಚರಿಕೆಯಿಂದಿರಿ. ದೇವರು ತನ್ನ ಸ್ವಂತ ರಕ್ತದಿಂದ ಕೊಂಡುಕೊಂಡಿರುವ ಸಭೆಗೆ ನೀವು ಕುರುಬರಾಗಿದ್ದೀರಿ.


ನಿನ್ನ ಆಲೋಚನೆಗಳ ವಿಷಯದಲ್ಲಿ ಎಚ್ಚರಿಕೆಯಿಂದಿರು. ನಿನ್ನ ನಡತೆಯು ನಿನ್ನ ಆಲೋಚನೆಗಳ ಮೇಲೆ ಆಧಾರಗೊಂಡಿದೆ.


ಅಂಜೂರದ ಮರಗಳನ್ನು ನೋಡಿಕೊಳ್ಳುವವನು ಅವುಗಳ ಹಣ್ಣನ್ನು ತಿನ್ನುವನು; ಯಜಮಾನನನ್ನು ನೋಡಿಕೊಳ್ಳುವವನು ಪ್ರತಿಫಲವನ್ನು ಹೊಂದುವನು.


ನನ್ನ ಪ್ರಿಯನೇ, ಕಾಡುಮರಗಳ ನಡುವೆ ಇರುವ ಒಂದು ಸೇಬಿನ ಮರದಂತೆ ನೀನು ಯುವಕರಲ್ಲೆಲ್ಲಾ ಶ್ರೇಷ್ಠನು. ನಾನು ಅವನ ನೆರಳಲ್ಲಿ ಕುಳಿತುಕೊಂಡು ಸಂತೋಷಿಸಿದೆ; ಅವನ ಫಲವು ನನ್ನ ನಾಲಿಗೆಗೆ ಸಿಹಿಯಾಗಿತ್ತು.


ಸೊಲೊಮೋನನಿಗೆ ಬಾಲ್ಹಾಮೋನಿನಲ್ಲಿ ದ್ರಾಕ್ಷಿತೋಟವಿತ್ತು. ಅವನು ಅದನ್ನು ರೈತರಿಗೆ ಒಪ್ಪಿಸಿದನು. ಪ್ರತಿಯೊಬ್ಬನು ಹಣ್ಣಿಗಾಗಿ ಒಂದು ಸಾವಿರ ಬೆಳ್ಳಿನಾಣ್ಯಗಳನ್ನು ಕೊಡಬೇಕಿತ್ತು.


ಉದ್ಯಾನವನಗಳಲ್ಲಿ ವಾಸಿಸುವವಳೇ, ಗೆಳೆಯರು ನಿನ್ನ ಸ್ವರ ಕೇಳಬೇಕೆಂದಿದ್ದಾರೆ, ನನಗೂ ಸಹ ಕೇಳಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು