Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 1:18 - ಪರಿಶುದ್ದ ಬೈಬಲ್‌

18 ನಾನೇ ಜೀವಿಸುವಾತನು. ನಾನು ಸತ್ತೆನು, ಆದರೆ ಇಗೋ ನೋಡು, ನಾನು ಯುಗಯುಗಾಂತರಗಳಲ್ಲಿಯೂ ಜೀವಿಸುವವನಾಗಿದ್ದೇನೆ. ಮರಣದ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಸದಾ ಜೀವಿಸುವವನೂ ಆಗಿದ್ದೇನೆ. ಸತ್ತವನಾಗಿದ್ದೆನು, ಆದರೆ ಇಗೋ ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಸದಾ ಜೀವಿಸುವವನೂ ಆಗಿ ಇದ್ದೇನೆ. ಮರಣಹೊಂದಿದೆ ನಿಜ. ಆದರೆ ಇಗೋ ನೋಡು, ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಮೃತ್ಯುಲೋಕದ ಬೀಗದ ಕೈಗಳು ನನ್ನಲ್ಲಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಸತ್ತವನಾದೆನು, ಮತ್ತು ಇಗೋ ಯುಗಯುಗಾಂತರಗಳಲ್ಲಿಯೂ ಬದುಕುವವನಾಗಿದ್ದೇನೆ; ಮರಣದ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಅವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಸದಾ ಜೀವಿಸುವವನೂ ಆಗಿದ್ದೇನೆ. ಮರಣ ಹೊಂದಿದ್ದೆನು, ಇಗೋ, ಯುಗಯುಗಾಂತರಗಳಲ್ಲಿಯೂ ನಾನು ಬದುಕುವವನಾಗಿದ್ದೇನೆ. ಮರಣದ ಮತ್ತು ಪಾತಾಳದ ಬೀಗದ ಕೈಗಳು ನನ್ನ ಬಳಿ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಮಿಯಾ ಝಿತ್ತೊ ಹಾಂವ್! ಮಿಯಾ ಮರಲ್ಲೊ, ಖರೆ ಅತ್ತಾ ಮಿಯಾ ಸದಾ ಸರ್ವತಾಕ್ ಝಿತ್ತೊ ಹಾಂವ್. ಮರ್ನಾಚೊ ಅನಿ ಪಾತಾಳಾಚೊ ಅಧಿಕಾರ್ ಮಾಜ್ಯಾ ಹಾತಿತ್ ಹಾಯ್

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 1:18
32 ತಿಳಿವುಗಳ ಹೋಲಿಕೆ  

ಕ್ರಿಸ್ತನು ಸತ್ತವರೊಳಗಿಂದ ಜೀವಂತನಾಗಿ ಎದ್ದುಬಂದನು. ಆತನು ಮತ್ತೆ ಸಾಯಲು ಸಾಧ್ಯವಿಲ್ಲವೆಂಬುದು ನಮಗೆ ತಿಳಿದಿದೆ. ಈಗ ಮರಣಕ್ಕೆ ಆತನ ಮೇಲೆ ಯಾವ ಅಧಿಕಾರವೂ ಇಲ್ಲ.


ಆದ್ದರಿಂದಲೇ ತನ್ನ ಮೂಲಕ ದೇವರ ಬಳಿಗೆ ಬರುವ ಜನರನ್ನು ಯೇಸು ಯಾವಾಗಲೂ ರಕ್ಷಿಸಬಲ್ಲನು. ಏಕೆಂದರೆ ಆತನು ಸದಾಕಾಲ ಜೀವಿಸುವವನಾಗಿದ್ದಾನೆ ಮತ್ತು ಜನರು ದೇವರ ಸನ್ನಿಧಿಗೆ ಬಂದಾಗ ಜನರಿಗೆ ಸಹಾಯ ಮಾಡಲು ಸಿದ್ಧನಾಗಿದ್ದಾನೆ.


ಆತನೇ ನಮ್ಮ ದೇವರು. ನಮ್ಮನ್ನು ರಕ್ಷಿಸುವ ದೇವರು ಆತನೇ. ನಮ್ಮ ದೇವರಾದ ಯೆಹೋವನು ನಮ್ಮನ್ನು ಮರಣದಿಂದ ರಕ್ಷಿಸುವನು.


“ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ಪವಿತ್ರನೂ ಸತ್ಯವಂತನೂ ಆಗಿರುವಾತನು ನೀಡುವ ಸಂದೇಶವಿದು: ದಾವೀದನ ಬೀಗದ ಕೈ ನನ್ನಲ್ಲಿದೆ. ನಾನು ತೆರೆದದ್ದನ್ನು ಯಾರೂ ಮುಚ್ಚಲಾರರು; ಮುಚ್ಚಿದ್ದನ್ನು ಯಾರೂ ತೆರೆಯಲಾರರು.


“ದಾವೀದನ ಮನೆಯ ಬೀಗದ ಕೈಯನ್ನು ಅವನ ಕುತ್ತಿಗೆಯಲ್ಲಿರಿಸುವೆನು. ಅವನು ಬಾಗಿಲನ್ನು ತೆರೆದರೆ ಅದು ತೆರೆದೇ ಇರುವದು. ಅದನ್ನು ಯಾರೂ ಮುಚ್ಚಲಾರರು. ಅವನು ಬಾಗಿಲನ್ನು ಮುಚ್ಚಿದರೆ ಅದು ಮುಚ್ಚಿಯೇ ಇರುವದು. ಅದನ್ನು ತೆರೆಯಲು ಯಾರಿಂದಲೂ ಆಗುವದಿಲ್ಲ.


ನಾವು ಯಾವಗಲೂ ಯೇಸುವನ್ನು ಮಾದರಿಯಾಗಿ ಇಟ್ಟುಕೊಂಡಿರಬೇಕು. ನಮ್ಮ ನಂಬಿಕೆಯನ್ನು ಹುಟ್ಟಿಸುವವನೂ ಪೂರೈಸುವವನೂ ಆತನೇ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅವಮಾನವನ್ನು ಅಲಕ್ಷ್ಯಮಾಡಿ ಶಿಲುಬೆಯ ಮರಣವನ್ನು ಸಹಿಸಿಕೊಂಡನು. ಈಗ ಆತನು ದೇವರ ಸಿಂಹಾಸನದ ಬಲಭಾಗದಲ್ಲಿ ಕುಳಿತಿರುವನು.


ಪರಲೋಕರಾಜ್ಯದ ಬೀಗದ ಕೈಗಳನ್ನು ನಾನು ನಿನಗೆ ಕೊಡುತ್ತೇನೆ. ನೀನು ಭೂಲೋಕದಲ್ಲಿ ನೀಡುವ ನ್ಯಾಯತೀರ್ಪು ದೇವರ ನ್ಯಾಯತೀರ್ಪಾಗಿರುತ್ತದೆ. ನೀನು ಭೂಲೋಕದಲ್ಲಿ ನೀಡುವ ಕ್ಷಮೆಯು ದೇವರ ಕ್ಷಮೆಯಾಗಿರುತ್ತದೆ” ಎಂದು ಉತ್ತರಿಸಿದನು.


ಆಮೇಲೆ ಮೃತ್ಯುವನ್ನೂ ಪಾತಾಳವನ್ನೂ ಬೆಂಕಿಯ ಕೆರೆಗೆ ಎಸೆಯಲಾಯಿತು. ಈ ಬೆಂಕಿಯ ಕೆರೆಯು ಎರಡನೆಯ ಮರಣ.


ದೇವರ ಮಹಿಮೆಯು ಆತನಲ್ಲಿ ತೋರಿಬಂದಿತು. ಆತನು ದೇವರ ಸ್ವಭಾವದ ಪ್ರತಿರೂಪವಾಗಿದ್ದಾನೆ. ಆತನು ತನ್ನ ಶಕ್ತಿಯ ಆಜ್ಞೆಯಿಂದ ಪರಿಪಾಲಿಸುತ್ತಿದ್ದಾನೆ. ಆತನು ಜನರನ್ನು ಅವರ ಪಾಪಗಳಿಂದ ಶುದ್ಧಿಮಾಡಿ, ಸ್ವರ್ಗದಲ್ಲಿ ಮಹತ್ವವುಳ್ಳ ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ಆದ್ದರಿಂದ ಈಗ ನನ್ನೊಳಗೆ ಜೀವಿಸುತ್ತಿರುವವನು ನಿಜವಾಗಿಯೂ ನಾನಲ್ಲ, ಕ್ರಿಸ್ತನೇ ನನ್ನೊಳಗೆ ಜೀವಿಸುತ್ತಿದ್ದಾನೆ. ನಾನಿನ್ನೂ ದೇಹಾರೂಢನಾಗಿದ್ದೇನೆ. ಆದರೆ ನಾನು ಜೀವಿಸುತ್ತಿರುವುದು ದೇವರ ಮಗನ ಮೇಲೆ ನನಗಿರುವ ನಂಬಿಕೆಯಿಂದಲೇ. ನನ್ನನ್ನು ಪ್ರೀತಿಸಿದಾತನು ಯೇಸುವೇ ಮತ್ತು ನನ್ನನ್ನು ರಕ್ಷಿಸುವುದಕ್ಕಾಗಿ ಆತನು ತನ್ನನ್ನೇ ಕೊಟ್ಟುಬಿಟ್ಟನು.


ಈ ಜೀವಿಗಳು, ಸಿಂಹಾಸನದ ಮೇಲೆ ಕುಳಿತಿರುವಾತನಿಗೆ ಪ್ರಭಾವ, ಗೌರವ ಮತ್ತು ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದವು. ಯುಗಯುಗಾಂತರಗಳಲ್ಲಿಯೂ ಜೀವಿಸುವವನು ಆತನೇ.


ಆತನು ಯಾಜಕನಾದದ್ದು ವಂಶಾನುಗತವಾಗಿ ಬಂದ ನಿಯಮಗಳ ಮತ್ತು ಶಾಸ್ತ್ರಗಳ ಪ್ರಕಾರವಲ್ಲ. ಆತನು ನಾಶವಾಗದ ತನ್ನ ಜೀವಶಕ್ತಿಯಿಂದ ಯಾಜಕನಾದನು.


ಕ್ರಿಸ್ತನು ಶಿಲುಬೆಯ ಮೇಲೆ ಕೊಲ್ಲಲ್ಪಟ್ಟಾಗ ಬಲಹೀನನಾಗಿದ್ದನು ಎಂಬುದೇನೊ ನಿಜ. ಆದರೆ ಈಗ ಆತನು ದೇವರ ಶಕ್ತಿಯಿಂದ ಜೀವಿಸುತ್ತಿದ್ದಾನೆ. ಅಲ್ಲದೆ ನಾವು ಕ್ರಿಸ್ತನಲ್ಲಿ ಬಲಹೀನರೆಂಬುದೂ ನಿಜ. ಆದರೆ ನಾವು ನಿಮಗೋಸ್ಕರವಾಗಿ ಕ್ರಿಸ್ತನಲ್ಲಿ ದೇವರ ಶಕ್ತಿಯಿಂದ ಜೀವಿಸುತ್ತೇವೆ.


ಜೀವಸ್ವರೂಪನಾದ ಒಬ್ಬನು ನನ್ನ ಪರವಾಗಿ ವಾದಿಸುತ್ತಾನೆಂದು ನನಗೆ ಗೊತ್ತಿದೆ; ಕೊನೆಯಲ್ಲಿ, ಆತನು ಭೂಮಿಯ ಮೇಲೆ ನಿಂತುಕೊಂಡು ನನಗೋಸ್ಕರ ವಾದಿಸುವನು.


ಐದನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಒಂದು ನಕ್ಷತ್ರವು ಆಕಾಶದಿಂದ ಭೂಮಿಯ ಮೇಲೆ ಬಿದ್ದದ್ದನ್ನು ನಾನು ನೋಡಿದೆನು. ಆ ನಕ್ಷತ್ರಕ್ಕೆ ತಳವಿಲ್ಲದ ಆಳವಾದ ಕೂಪಕ್ಕೆ ಹೋಗುವ ಬೀಗದ ಕೈ ಕೊಡಲ್ಪಟ್ಟಿತು.


ಇನ್ನು ಸ್ವಲ್ಪ ಕಾಲವಾದ ಮೇಲೆ ಈ ಲೋಕದ ಜನರು ನನ್ನನ್ನು ಇನ್ನೆಂದಿಗೂ ಕಾಣುವುದಿಲ್ಲ. ಆದರೆ ನೀವು ನನ್ನನ್ನು ನೋಡುವಿರಿ. ನಾನು ಜೀವಿಸುವುದರಿಂದ ನೀವೂ ಜೀವಿಸುವಿರಿ.


ನಿಮ್ಮ ಹಳೆಯ ಸ್ವಭಾವ ಸತ್ತುಹೋಗಿದೆ, ನಿಮ್ಮ ಹೊಸ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿದೆ.


ಯೆಹೋವನು ಜೀವಸ್ವರೂಪನಾಗಿದ್ದಾನೆ. ನನ್ನ ಬಂಡೆಯಾಗಿರುವ ಆತನನ್ನು ಸ್ತುತಿಸುವೆನು. ನನ್ನನ್ನು ರಕ್ಷಿಸುವ ದೇವರು ಮಹೋನ್ನತನಾಗಿದ್ದಾನೆ.


ಆ ನಾಲ್ಕು ಜೀವಿಗಳು “ಆಮೆನ್!” ಎಂದು ಹೇಳಿದವು. ಹಿರಿಯರು ಮೊಣಕಾಲೂರಿ ಆರಾಧಿಸಿದರು.


ಯೆಹೋವನು ಜನರಿಗೆ ಸಾವನ್ನೂ ತರುವನು. ಅಂತೆಯೇ ಅವರಿಗೆ ಜೀವವನ್ನೂ ದಯಪಾಲಿಸುವನು. ಆತನು ಅವರಿಗೆ ಮರುಜೀವವನ್ನು ದಯಪಾಲಿಸಬಲ್ಲನು. ಯೆಹೋವನು ಜನರನ್ನು ಮರಣ ಸ್ಥಳವಾದ ಪಾತಾಳಕ್ಕೆ ತಳ್ಳುವನು.


ಯೋಬನೇ, ಪಾತಾಳದ ದ್ವಾರಗಳನ್ನಾಗಲಿ ಘೋರಾಂಧಕಾರದ ಬಾಗಿಲುಗಳನ್ನಾಗಲಿ ನೀನು ಎಂದಾದರೂ ನೋಡಿರುವಿಯಾ?


“ಕಪೆರ್ನೌಮೇ, ನೀನು ಪರಲೋಕಕ್ಕೆ ಎತ್ತಲ್ಪಡುವುದಾಗಿ ಯೋಚಿಸುವಿಯೋ? ಇಲ್ಲ! ನೀನು ಪಾತಾಳಕ್ಕೆ ಇಳಿಯುವೆ. ನಾನು ನಿನ್ನಲ್ಲಿ ಅನೇಕ ಅದ್ಭುತಕಾರ್ಯಗಳನ್ನು ನಡೆಸಿದೆ. ಸೊದೋಮಿನಲ್ಲಿ ಆ ಅದ್ಭುತಕಾರ್ಯಗಳನ್ನು ನಡೆಸಿದ್ದರೆ ಆ ಜನರು ಪಾಪಮಾಡುವುದನ್ನು ನಿಲ್ಲಿಸಿಬಿಡುತ್ತಿದ್ದರು ಮತ್ತು ಇಂದಿನವರೆಗೂ ಅದು ಪಟ್ಟಣವಾಗಿಯೇ ಉಳಿದಿರುತ್ತಿತ್ತು.


ಆ ಸ್ತ್ರೀಯರು ಬಹಳವಾಗಿ ಹೆದರಿ ತಮ್ಮ ಮುಖಗಳನ್ನು ನೆಲದ ಕಡೆಗೆ ಬಗ್ಗಿಸಿಕೊಂಡು ನಿಂತರು. ಆ ಮನುಷ್ಯರು, “ಬದುಕಿರುವ ವ್ಯಕ್ತಿಯನ್ನು ಇಲ್ಲಿ ಹುಡುಕುವುದೇಕೆ? ಇದು ಸತ್ತ ಜನರನ್ನು ಇಡುವ ಸ್ಥಳ!


ಯೇಸು ಆಕೆಗೆ, “ನಾನೇ ಪುನರುತ್ಥಾನ. ನಾನೇ ಜೀವ. ನನ್ನನ್ನು ನಂಬುವವನು ತಾನು ಸತ್ತನಂತರವೂ ಮತ್ತೆ ಜೀವವನ್ನು ಹೊಂದುವನು.


“ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ಆದಿಯೂ ಅಂತ್ಯವೂ ಆಗಿರುವಾತನು ನಿನಗೆ ಇವುಗಳನ್ನು ಹೇಳುತ್ತಾನೆ. ಸತ್ತು ಜೀವಂತವಾಗಿ ಎದ್ದುಬಂದಾತನು ಆತನೇ.


ನಾನು ನೋಡಿದಾಗ, ನನ್ನ ಮುಂದೆ ಒಂದು ಬೂದುಬಣ್ಣದ ಕುದುರೆಯಿರುವುದು ನನಗೆ ಕಾಣಿಸಿತು. ಆ ಕುದುರೆಯ ಮೇಲೆ ಕುಳಿತಿದ್ದ ಸವಾರನೇ ಮೃತ್ಯು. ಅವನ ಹಿಂದೆ ಪಾತಾಳ ಎಂಬುವನು ಬಂದನು. ಅವರಿಗೆ ಭೂಮಿಯ ಕಾಲುಭಾಗದ ಮೇಲೆ ಅಧಿಕಾರವನ್ನು ನೀಡಲಾಯಿತು. ಕತ್ತಿಯಿಂದಲೂ ಬರಗಾಲದಿಂದಲೂ ರೋಗಗಳಿಂದಲೂ ಮತ್ತು ಲೋಕದ ಮೇಲಿರುವ ಕಾಡುಮೃಗಗಳಿಂದಲೂ ಜನರನ್ನು ಕೊಲ್ಲುವ ಅಧಿಕಾರವನ್ನು ಅವರಿಗೆ ನೀಡಲಾಯಿತು.


ಆ ದೇವದೂತನು ಯುಗ ಯುಗಾಂತರಗಳಲ್ಲಿಯೂ ನೆಲೆಸಿರುವಾತನ ಮತ್ತು ಆಕಾಶವನ್ನು ಮತ್ತು ಅದರಲ್ಲಿರುವ ಸಮಸ್ತವನ್ನು, ಭೂಮಿಯನ್ನು ಮತ್ತು ಅದರಲ್ಲಿರುವ ಸಮಸ್ತವನ್ನು, ಸಮುದ್ರವನ್ನು ಮತ್ತು ಅದರಲ್ಲಿರುವ ಸಮಸ್ತವನ್ನು ಸೃಷ್ಟಿಸ್ಟಿದಾತನ ಶಕ್ತಿಯಿಂದ ಹೀಗೆ ವಾಗ್ದಾನವನ್ನು ಮಾಡಿದನು: “ಇನ್ನು ಕಾಯುವ ಅಗತ್ಯವಿಲ್ಲ;


ನಾಲ್ಕು ಜೀವಿಗಳಲ್ಲಿ ಒಂದು ಜೀವಿ ಈ ಏಳು ದೇವದೂತರಿಗೆ ಏಳು ಚಿನ್ನದ ಪಾತ್ರೆಗಳನ್ನು ನೀಡಿತು. ಈ ಪಾತ್ರೆಗಳು ಯುಗಯುಗಾಂತರಗಳಲ್ಲಿಯೂ ಜೀವಿಸುವ ದೇವರ ಕೋಪದಿಂದ ತುಂಬಿದ್ದವು.


ಸಮುದ್ರವು ತನ್ನಲ್ಲಿ ಸತ್ತಿದ್ದ ಜನರನ್ನು ಒಪ್ಪಿಸಿತು. ಮೃತ್ಯುವೂ ಪಾತಾಳವೂ ತನ್ನಲ್ಲಿದ್ದ ಸತ್ತ ಜನರನ್ನು ಒಪ್ಪಿಸಿದವು. ಪ್ರತಿಯೊಬ್ಬ ವ್ಯಕ್ತಿಗೂ ಅವನ ಕಾರ್ಯಗಳಿಗನುಸಾರವಾಗಿ ತೀರ್ಪು ನೀಡಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು