Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 1:2 - ಪರಿಶುದ್ದ ಬೈಬಲ್‌

2 ಯೋಹಾನನು ತಾನು ಕಂಡದ್ದೆಲ್ಲವನ್ನು ತಿಳಿಸಿದನು. ಇದು ಯೇಸು ಕ್ರಿಸ್ತನು ಅವನಿಗೆ ಹೇಳಿದ ಸತ್ಯ. ಇದು ದೇವರಿಂದ ಬಂದ ಸಂದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೋಹಾನನು ದೇವರ ವಾಕ್ಯದ ಕುರಿತಾಗಿಯೂ ಯೇಸು ಕ್ರಿಸ್ತನು ಹೇಳಿದ ಸಾಕ್ಷಿಯ ವಿಷಯವಾಗಿಯೂ ತಾನು ಕಂಡದ್ದನ್ನೆಲ್ಲಾ ತಿಳಿಸುವವನಾಗಿ ಸಾಕ್ಷಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಯೊವಾನ್ನನು ದೇವರ ಸಂದೇಶಕ್ಕೂ ಕ್ರಿಸ್ತೇಸು ತಿಳಿಸಿದ ಸತ್ಯಕ್ಕೂ ಸಾಕ್ಷಾತ್ ಸಾಕ್ಷಿಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೋಹಾನನು ತಾನು ಕಂಡದ್ದನ್ನೆಲ್ಲಾ ತಿಳಿಸುವವನಾಗಿ ದೇವರ ವಾಕ್ಯದ ವಿಷಯವಾಗಿಯೂ ಯೇಸು ಕ್ರಿಸ್ತನು ಹೇಳಿದ ಸಾಕ್ಷಿಯ ವಿಷಯವಾಗಿಯೂ ಸಾಕ್ಷಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೋಹಾನನು ತಾನು ಕಂಡ ಎಲ್ಲಾ ಸಂಗತಿಗಳನ್ನು ಅಂದರೆ ದೇವರ ವಾಕ್ಯದ ವಿಷಯವಾಗಿಯೂ ಕ್ರಿಸ್ತ ಯೇಸುವಿನ ವಿಷಯವಾಗಿಯೂ ತಿಳಿಸಿ ಸಾಕ್ಷಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಅನಿ ಜುವಾಂವಾಕ್ ಅಪ್ನಿ ಕಾಯ್-ಕಾಯ್ ಬಗಟ್ಲ್ಯಾನಾಯ್ ತೆ ಸಗ್ಳೆ ಸಾಂಗಟ್ಲ್ಯಾನಾಯ್. ಹಿ ಎಕ್ ದೆವಾಕ್ನಾ ಯೆಲ್ಲಿ ಖಬರ್ ಅನಿ ಜೆಜು ಕ್ರಿಸ್ತಾನ್ ದಾಕ್ವುನ್ ದಿಲ್ಲಿ ಖರಿ ಸಂಗತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 1:2
22 ತಿಳಿವುಗಳ ಹೋಲಿಕೆ  

ಕ್ರಿಸ್ತನ ವಿಷಯವಾದ ಸತ್ಯವು ನಿಮ್ಮಲ್ಲಿ ನಿರೂಪಿಸಲ್ಪಟ್ಟಿದೆ.


ಆಗ ಘಟ ಸರ್ಪವು ಆ ಸ್ತ್ರೀಯ ಮೇಲೆ ಬಹಳ ಕೋಪಗೊಂಡು ಆಕೆಯ ಇತರ ಮಕ್ಕಳೆಲ್ಲರ ಮೇಲೆ ಅಂದರೆ ದೇವರ ಆಜ್ಞೆಗಳನ್ನು ಅನುಸರಿಸುವವರ ಮತ್ತು ಯೇಸುವಿನ ಕುರಿತು ಸಾಕ್ಷಿ ಹೇಳುವವರ ಮೇಲೆ ಹೋರಾಟ ಮಾಡಲು ಹೋಯಿತು.


ಈ ಲೋಕವು ಆರಂಭವಾಗುವುದಕ್ಕಿಂತ ಮುಂಚಿನಿಂದಲೂ ಇದ್ದ ಜೀವವಾಕ್ಯದ ಕುರಿತಾಗಿ ನಾವು ನಿಮಗೆ ಬರೆಯುತ್ತಿದ್ದೇವೆ: ಅದನ್ನು ಕಿವಿಯಾರೆ ಕೇಳಿದೆವು; ಕಣ್ಣಾರೆ ನೋಡಿದೆವು, ಮನಸ್ಸಿಟ್ಟು ಗಮನಿಸಿದೆವು, ಕೈಗಳಿಂದ ಮುಟ್ಟಿ ನೋಡಿದೆವು.


ಈ ಸಂಗತಿಗಳನ್ನು ಈಗ ಬರೆದಿರುವವನು ಮತ್ತು ಇವುಗಳ ವಿಷಯವಾಗಿ ಈಗ ಸಾಕ್ಷಿ ಹೇಳಿರುವ ಶಿಷ್ಯನು ಅವನೇ. ಅವನು ಹೇಳುವುದು ಸತ್ಯವೆಂದು ನಮಗೆ ಗೊತ್ತಿದೆ.


(ಇದನ್ನು ಕಂಡವನೇ ಇದರ ಬಗ್ಗೆ ಹೇಳಿದ್ದಾನೆ. ನೀವು ಸಹ ನಂಬಬೇಕೆಂದು ಅವನು ಇದನ್ನು ತಿಳಿಸಿದ್ದಾನೆ. ಅವನು ಹೇಳುವ ಸಂಗತಿಗಳು ಸತ್ಯವಾಗಿವೆ. ತಾನು ಹೇಳುತ್ತಿರುವುದು ಸತ್ಯವೆಂದು ಅವನಿಗೆ ಗೊತ್ತಿದೆ.)


ಆದ್ದರಿಂದ ನೀನು ನೋಡಿದ ಸಂಗತಿಗಳನ್ನು ಬರೆ. ಈಗ ಸಂಭವಿಸುವ ಸಂಗತಿಗಳನ್ನು ಮತ್ತು ಮುಂದೆ ಸಂಭವಿಸಬೇಕಾದ ಸಂಗತಿಗಳನ್ನು ಬರೆ.


ಯೋಹಾನನೆಂಬ ನಾನು ಕ್ರಿಸ್ತನಲ್ಲಿ ನಿಮ್ಮ ಸಹೋದರನಾಗಿದ್ದೇನೆ. ನಾವೆಲ್ಲರೂ ಒಟ್ಟಾಗಿ ಯೇಸುವಿನ ನಿಮಿತ್ತ ಸಂಕಟಗಳಲ್ಲಿಯೂ ರಾಜ್ಯದಲ್ಲಿಯೂ ತಾಳ್ಮೆಯಲ್ಲಿಯೂ ಪಾಲುಗಾರರಾಗಿದ್ದೇವೆ. ನಾನು ದೇವರ ಸಂದೇಶಕ್ಕೂ ಯೇಸುವಿನ ಸತ್ಯಕ್ಕೂ ನಂಬಿಗಸ್ತನಾಗಿದ್ದುದರಿಂದ ಪತ್ಮೊಸ್ ದ್ವೀಪದಲ್ಲಿದ್ದೆನು.


ಎದ್ದೇಳು! ನಿನ್ನನ್ನು ನನ್ನ ಸೇವಕನನ್ನಾಗಿಯೂ ಸಾಕ್ಷಿಯನ್ನಾಗಿಯೂ ಆರಿಸಿಕೊಂಡಿದ್ದೇನೆ. ಈ ಹೊತ್ತು ನಾನು ನಿನಗೆ ಕಾಣಿಸಿಕೊಂಡದ್ದರ ವಿಷಯವಾಗಿಯೂ ನಾನು ನಿನಗೆ ಕೊಡಲಿರುವ ದರ್ಶನಗಳ ವಿಷಯವಾಗಿಯೂ ನೀನು ಜನರಿಗೆ ಸಾಕ್ಷಿಯಾಗಿರುವೆ. ಇದಕ್ಕಾಗಿಯೇ ಈ ಹೊತ್ತು ನಾನು ನಿನಗೆ ಕಾಣಿಸಿಕೊಂಡೆನು.


ಯೇಸು ಲಾಜರನಿಗೆ ಸಮಾಧಿಯೊಳಗಿಂದ ಬರುವಂತೆ ಹೇಳಿ ಅವನನ್ನು ಜೀವಂತವಾಗಿ ಎಬ್ಬಿಸಿದಾಗ ಅನೇಕ ಜನರು ಯೇಸುವಿನ ಸಂಗಡ ಇದ್ದರು. ಯೇಸು ಮಾಡಿದ ಈ ಕಾರ್ಯದ ಬಗ್ಗೆ ಅವರು ಇತರರಿಗೆ ಹೇಳುತ್ತಿದ್ದರು.


ಕುರಿಮರಿಯು ಐದನೆಯ ಮುದ್ರೆಯನ್ನು ತೆರೆಯಿತು. ಆಗ ಯಜ್ಞವೇದಿಕೆಯ ಕೆಳಗೆ ಕೆಲವು ಆತ್ಮಗಳಿರುವುದನ್ನು ನಾನು ನೋಡಿದೆನು. ದೇವರ ಸಂದೇಶಕ್ಕೂ ತಾವು ಸ್ವೀಕರಿಸಿ ಕೊಂಡ ಸತ್ಯಕ್ಕೂ ನಂಬಿಗಸ್ತರಾಗಿದ್ದ ಕಾರಣ ಕೊಲ್ಲಲ್ಪಟ್ಟವರ ಆತ್ಮಗಳೇ ಅವು.


ದೇವರು ತನ್ನ ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿದ್ದನ್ನು ನಾವು ನೋಡಿದ್ದೇವೆ. ನಾವು ಈಗ ಜನರಿಗೆ ಹೇಳುತ್ತಿರುವುದು ಅದನ್ನೇ.


ಪ್ರಿಯ ಸಹೋದರ ಸಹೋದರಿಯರೇ, ನಾನು ನಿಮ್ಮ ಬಳಿಗೆ ಬಂದಿದ್ದಾಗ, ನಾನು ನಿಮಗೆ ದೇವರ ಸತ್ಯವನ್ನು ತಿಳಿಸಿದೆನು. ಆದರೆ ನಾನು ನಾಜೂಕಾದ ಪದಗಳನ್ನಾಗಲಿ ಮಹಾ ಜ್ಞಾನವನ್ನಾಗಲಿ ಉಪಯೋಗಿಸಲಿಲ್ಲ.


ನಾವಂತೂ ಸುಮ್ಮನಿರಲಾರೆವು. ನಾವು ಕಂಡ ಮತ್ತು ಕೇಳಿದ ಸಂಗತಿಗಳ ಬಗ್ಗೆ ಜನರಿಗೆ ಹೇಳಲೇಬೇಕು” ಎಂದು ಉತ್ತರಕೊಟ್ಟರು.


ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ನಮಗೆ ಗೊತ್ತಿರುವುದರ ಬಗ್ಗೆ ನಾವು ಮಾತಾಡುತ್ತೇವೆ. ನಾವು ಕಂಡದ್ದರ ಬಗ್ಗೆ ನಾವು ಸಾಕ್ಷಿ ಕೊಡುತ್ತೇವೆ. ಆದರೆ ನಾವು ಹೇಳುವುದನ್ನು ನೀವು ಸ್ವೀಕರಿಸಿಕೊಳ್ಳುವುದಿಲ್ಲ.


ಇದಲ್ಲದೆ ಯೋಹಾನನು ಸಾಕ್ಷಿಕೊಟ್ಟು ಹೇಳಿದ್ದೇನೆಂದರೆ, “ಆತನು ಯಾರೆಂದು ನನಗೂ ಗೊತ್ತಿರಲಿಲ್ಲ. ಆದರೆ ಜನರಿಗೆ ದೀಕ್ಷಾಸ್ನಾನ ಕೊಡಲು ನನ್ನನ್ನು ಕಳುಹಿಸಿದಾತನು ನನಗೆ, ‘ಪವಿತ್ರಾತ್ಮನು ಇಳಿದುಬಂದು ಒಬ್ಬ ವ್ಯಕ್ತಿಯ ಮೇಲೆ ನೆಲಸುವುದನ್ನು ನೀನು ನೋಡುವೆ. ಪವಿತ್ರಾತ್ಮನಿಂದ ದೀಕ್ಷಾಸ್ನಾನ ಕೊಡುವವನು ಆ ವ್ಯಕ್ತಿಯೇ’ ಎಂದು ಹೇಳಿದ್ದನು. ಇದು ನೆರವೇರುವುದನ್ನು ನಾನು ಕಣ್ಣಾರೆ ಕಂಡಿದ್ದೇನೆ. ಪವಿತ್ರಾತ್ಮನು ಪರಲೋಕದಿಂದ ಪಾರಿವಾಳದ ರೂಪದಲ್ಲಿ ಇಳಿದುಬಂದು ಆತನ (ಯೇಸುವಿನ) ಮೇಲೆ ನೆಲಸುವುದನ್ನು ನಾನು ನೋಡಿದೆನು.


ನಮ್ಮ ಸಹೋದರರು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ವಾಕ್ಯದ ಬಲದಿಂದಲೂ ಅವನನ್ನು ಸೋಲಿಸಿದರು. ಅವರು ತಮ್ಮ ಜೀವಗಳನ್ನು ಪ್ರೀತಿಸಲಿಲ್ಲ. ಅವರು ಮರಣಕ್ಕೆ ಭಯಪಡಲಿಲ್ಲ.


ದೇಮೇತ್ರಿಯನ ಬಗ್ಗೆ ಜನರೆಲ್ಲರೂ ಒಳ್ಳೆಯ ಸಂಗತಿಗಳನ್ನು ಹೇಳುತ್ತಾರೆ. ಅವರು ಹೇಳುವುದನ್ನು ಸತ್ಯವೂ ಅಂಗೀಕರಿಸುತ್ತದೆ. ಅವನನ್ನು ಕುರಿತು ನಾವೂ ಸಹ ಒಳ್ಳೆಯದನ್ನು ಹೇಳುತ್ತೇವೆ. ನಾವು ಹೇಳುವುದು ನಿಜವೆಂಬುದು ನಿನಗೆ ತಿಳಿದಿದೆ.


ನೀನು ಕಂಡ ಮತ್ತು ಕೇಳಿದ ಸಂಗತಿಗಳ ಬಗ್ಗೆ ಎಲ್ಲಾ ಜನರಿಗೆ ಸಾಕ್ಷಿಯಾಗಿರುವೆ.


ಆ ಧ್ವನಿಯು, “ನೀನು ನೋಡುವುದನ್ನೆಲ್ಲ ಒಂದು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ ಮತ್ತು ಲವೊದಿಕೀಯ ಎಂಬ ಏಳು ಸಭೆಗಳಿಗೆ ಕಳುಹಿಸು” ಎಂದು ಹೇಳಿತು.


ನಂತರ ನಾನು ಕೆಲವು ಸಿಂಹಾಸನಗಳನ್ನು ಮತ್ತು ಅವುಗಳ ಮೇಲೆ ಜನರು ಕುಳಿತಿರುವುದನ್ನು ನೋಡಿದೆನು. ಈ ಜನರು ತೀರ್ಪು ನೀಡುವ ಅಧಿಕಾರವನ್ನು ಹೊಂದಿದ್ದರು. ಯೇಸುವಿನ ಸತ್ಯಕ್ಕೆ ಮತ್ತು ದೇವರ ಸಂದೇಶಕ್ಕೆ ನಂಬಿಗಸ್ತರಾಗಿದ್ದರ ನಿಮಿತ್ತವಾಗಿ ಕೊಲ್ಲಲ್ಪಟ್ಟವರ ಜೀವಾತ್ಮಗಳನ್ನು ನಾನು ನೋಡಿದೆನು. ಆ ಜನರು ಮೃಗವನ್ನಾಗಲಿ ಅದರ ವಿಗ್ರಹವನ್ನಾಗಲಿ ಆರಾಧಿಸಿರಲಿಲ್ಲ. ಅವರು ತಮ್ಮ ಹಣೆಯ ಮೇಲಾಗಲಿ ಕೈಗಳ ಮೇಲಾಗಲಿ ಮೃಗದ ಗುರುತನ್ನು ಹಾಕಿಸಿಕೊಂಡಿರಲಿಲ್ಲ. ಆ ಜನರು ಮತ್ತೆ ಜೀವವನ್ನು ಪಡೆದು ಕ್ರಿಸ್ತನೊಂದಿಗೆ ಒಂದುಸಾವಿರ ವರ್ಷ ಆಳಿದರು.


ಪ್ರಭು ಯೇಸುವಿನ ಕೃಪೆಯು ಎಲ್ಲಾ ಜನರೊಂದಿಗಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು