Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 10:4 - ಪರಿಶುದ್ದ ಬೈಬಲ್‌

4 ಅದನ್ನು ನಾನು ಬರೆಯಬೇಕೆಂದಿದ್ದಾಗ ಪರಲೋಕದಿಂದ ಬಂದ ಒಂದು ಧ್ವನಿಯು ನನಗೆ, “ಏಳು ಗುಡುಗುಗಳು ಹೇಳಿದ್ದನ್ನು ನೀನು ಬರೆಯಬೇಡ. ಅವುಗಳನ್ನು ರಹಸ್ಯವಾಗಿಟ್ಟಿರು” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆ ಏಳು ಗುಡುಗುಗಳು ನುಡಿದಾಗ ನಾನು ಬರೆಯಬೇಕೆಂದಿದ್ದೆನು. ಆದರೆ, “ಆ ಏಳು ಗುಡುಗುಗಳು ನುಡಿದಿದ್ದನ್ನು ನೀನು ಬರೆಯದೆ ಗುಪ್ತವಾಗಿಡು” ಎಂದು ಹೇಳುವ ದೈವವಾಣಿಯನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಏಳು ಗುಡುಗುಗಳು ನುಡಿದುದನ್ನು ಕೂಡಲೇ ನಾನು ಬರೆಯಬೇಕೆಂದಿದ್ದೆ. ಆಗ ಸ್ವರ್ಗದಿಂದ ಬಂದ ಒಂದು ಧ್ವನಿ, “ಆ ಏಳು ಗುಡುಗುಗಳು ನುಡಿದುದನ್ನು ರಹಸ್ಯವಾಗಿ ಇಡು. ಅವುಗಳನ್ನು ಬರೆಯಬೇಡ,” ಎಂದು ನನಗೆ ಆಜ್ಞಾಪಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಕೂಗಿದಾಗ ಏಳು ಗುಡುಗುಗಳು ಒಂದೊಂದಾಗಿ ಧ್ವನಿಕೊಟ್ಟವು. ಆ ಏಳು ಗುಡುಗುಗಳು ನುಡಿದಾಗ ನಾನು ಬರೆಯಬೇಕೆಂದಿದ್ದೆನು. ಆದರೆ - ಆ ಏಳು ಗುಡುಗುಗಳು ನುಡಿದದ್ದನ್ನು ನೀನು ಬರೆಯದೆ ಗುಪ್ತವಾಗಿಡು ಎಂದು ಹೇಳುವ ಆಕಾಶವಾಣಿಯನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಏಳು ಗುಡುಗುಗಳು ಮಾತನಾಡಿದಾಗ, ನಾನು ಬರೆಯಬೇಕೆಂದಿದ್ದೆನು. ಆದರೆ ಪರಲೋಕದಿಂದ ಬಂದ ಶಬ್ದವು, “ನೀನು ಆ ಏಳು ಗುಡುಗುಗಳು ಹೇಳಿರುವುದನ್ನು ಮುದ್ರೆಹಾಕಿ ಮುಚ್ಚಿಡು. ಅದನ್ನು ಬರೆಯಬೇಡ,” ಎಂದು ಹೇಳುವುದನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತೆನಿ ಬೊಲಲ್ಲ್ಯಾ ತನ್ನಾ ತಾಬೊಡ್ತೊಬ್ ಮಿಯಾ ಲಿವ್ನಾರ್ ಹೊತ್ತೊ. ಖರೆ ಸರ್‍ಗಾ ವೈನಾ ಬೊಲ್ತಲೊ ಎಕ್ ಧನ್ ಮಾಕಾ ಆಯ್ಕೊ ಯೆಲೊ,“ಸಾತ್ ಗುಡ್ಗುಡ್ಯಾನಿ ಸಾಂಗಲ್ಲೆ ಘುಟಾನ್ ಥವ್; ತೆ ಲಿವ್ನ್ ಘೆವ್‍ನಕೊ!”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 10:4
13 ತಿಳಿವುಗಳ ಹೋಲಿಕೆ  

“ದಾನಿಯೇಲನೇ, ನೀನು ಈ ಸಂದೇಶವನ್ನು ರಹಸ್ಯವಾಗಿಡು. ಇದನ್ನು ಬರೆದ ಪುಸ್ತಕಕ್ಕೆ ಮುದ್ರೆಹಾಕು. ಅಂತ್ಯಕಾಲದವರೆಗೆ ನೀನು ಇದನ್ನು ರಹಸ್ಯವಾಗಿ ಇಡಬೇಕು. ನಿಜವಾದ ಜ್ಞಾನಕ್ಕಾಗಿ ಬಹುಜನರು ಅತ್ತಿತ್ತ ಸಂಚರಿಸುವರು. ನಿಜವಾದ ಜ್ಞಾನ ಬೆಳೆಯುವದು.”


“ಆಗಿನ ಕಾಲದ ಮತ್ತು ಪರಿಸ್ಥಿತಿಯ ಬಗ್ಗೆ ಕಂಡ ದರ್ಶನಗಳು ನಿಜವಾಗುವವು. ಈ ದರ್ಶನ ಗುಟ್ಟಾಗಿರಲಿ. ಅದೆಲ್ಲ ನಡೆಯಬೇಕಾದರೆ ಇನ್ನೂ ಬಹಳ ಕಾಲಬೇಕು” ಎಂದು ಹೇಳಿದನು.


ಅದಕ್ಕೆ ಆತನು, “ದಾನಿಯೇಲನೇ, ನಿನ್ನ ಜೀವನ ಸಾಗಲಿ. ಈ ಸಂದೇಶವು ರಹಸ್ಯವಾದದ್ದು. ಅಂತ್ಯಕಾಲ ಬರುವವರೆಗೆ ಇದು ರಹಸ್ಯವಾಗಿ ಉಳಿಯುವದು.


ಬಳಿಕ ದೇವದೂತನು ನನಗೆ, “ಈ ಪುಸ್ತಕದಲ್ಲಿರುವ ಪ್ರವಾದನೆಯ ವಾಕ್ಯಗಳನ್ನು ರಹಸ್ಯವಾಗಿಡಬೇಡ. ಇವುಗಳೆಲ್ಲವೂ ಸಂಭವಿಸುವ ಕಾಲ ಸಮೀಪಿಸಿದೆ.


“ಯೆಹೋವನು ಕೆಲವು ಸಂಗತಿಗಳನ್ನು ಗುಪ್ತವಾಗಿಟ್ಟಿದ್ದಾನೆ. ಅದು ಆತನಿಗೆ ಮಾತ್ರ ತಿಳಿದದೆ. ಆದರೆ ಪ್ರಕಟಿಸಲ್ಪಟ್ಟಿರುವ ಸಂಗತಿಗಳನ್ನು ನಾವು ಮತ್ತು ನಮ್ಮ ಸಂತತಿಗಳವರು ಮಾತ್ರ ತಿಳಿದಿದ್ದೇವೆ. ಆ ಬೋಧನೆಗೆ ನಾವು ನಿತ್ಯಕಾಲಕ್ಕೂ ವಿಧೇಯರಾಗುವಂತೆ ಹೇಳಿದ್ದಾನೆ. ಆತನಿಗೆ ವಿಧೇಯರಾಗುವುದು ನಮ್ಮ ಕರ್ತವ್ಯ.


ಆ ಧ್ವನಿಯು, “ನೀನು ನೋಡುವುದನ್ನೆಲ್ಲ ಒಂದು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ ಮತ್ತು ಲವೊದಿಕೀಯ ಎಂಬ ಏಳು ಸಭೆಗಳಿಗೆ ಕಳುಹಿಸು” ಎಂದು ಹೇಳಿತು.


ನಾನು ಖಂಡಿತವಾಗಿ ಹೇಳುತ್ತೇನೆ, ಈ ಸಂಗತಿಗಳು ನೆರವೇರುವವು. ಆದರೆ ನೀವು ನನ್ನನ್ನು ಅರ್ಥಮಾಡಿಕೊಳ್ಳುವುದಿಲ್ಲ. ನನ್ನ ಮಾತುಗಳು ಒಂದು ಪುಸ್ತಕದಲ್ಲಿ ಬರೆದು ಮುಚ್ಚಿ ಅದಕ್ಕೆ ಮುದ್ರೆಹಾಕಿ ಇರಿಸಿದಂತಿರುವದು.


ಯೆಹೋವನು, “ಒಡಂಬಡಿಕೆ ಮಾಡಿಕೊಂಡು ಅದಕ್ಕೆ ಮುದ್ರೆಹಾಕು. ಮುಂದಿನ ಪೀಳಿಗೆಗಾಗಿ ನನ್ನ ಬೋಧನೆಯನ್ನು ಜೋಪಾನವಾಗಿರಿಸು. ನನ್ನ ಹಿಂಬಾಲಕರ ಕಣ್ಣೆದುರಿನಲ್ಲೇ ಹೀಗೆ ಮಾಡು” ಎಂದು ಹೇಳಿದನು.


ಯೆಹೋವನು ಹೇಳಿದ್ದೇನೆಂದರೆ, “ಒಂದು ದೊಡ್ಡ ಸುರುಳಿಯನ್ನು ತಂದು ಅದರ ಮೇಲೆ ಹೀಗೆ ಲೇಖನಿಯಿಂದ ಬರೆ: ‘ಮಹೇರ್ ಶಾಲಾಲ್ ಹಾಷ್ ಬಜ್‌.’” (ಇದರರ್ಥ: “ಕೊಳ್ಳೆಗೆ ಅವಸರ, ಸೂರೆಗೆ ಆತುರ.”)


ಆದ್ದರಿಂದ ನೀನು ನೋಡಿದ ಸಂಗತಿಗಳನ್ನು ಬರೆ. ಈಗ ಸಂಭವಿಸುವ ಸಂಗತಿಗಳನ್ನು ಮತ್ತು ಮುಂದೆ ಸಂಭವಿಸಬೇಕಾದ ಸಂಗತಿಗಳನ್ನು ಬರೆ.


ಬಳಿಕ ಪರಲೋಕದಿಂದ ಮತ್ತೆ ಅದೇ ಧ್ವನಿಯನ್ನು ನಾನು ಕೇಳಿದೆನು. ಆ ಧ್ವನಿಯು ನನಗೆ, “ಹೋಗು, ದೇವದೂತನ ಕೈಯಲ್ಲಿರುವ ಬಿಚ್ಚಿದ ಸುರುಳಿಯನ್ನು ತೆಗೆದುಕೊ. ಆ ದೇವದೂತನು ಸಮುದ್ರದ ಮೇಲೆ ಮತ್ತು ಭೂಮಿಯ ಮೇಲೆ ನಿಂತಿದ್ದಾನೆ” ಎಂದು ಹೇಳಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು