Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 11:13 - ಪರಿಶುದ್ದ ಬೈಬಲ್‌

13 ಆ ಸಮಯದಲ್ಲಿ ಮಹಾಭೂಕಂಪವಾಯಿತು. ಆ ನಗರದ ಹತ್ತನೆಯ ಒಂದು ಭಾಗ ನಾಶವಾಯಿತು. ಭೂಕಂಪದಲ್ಲಿ ಏಳು ಸಾವಿರ ಜನರು ನಾಶವಾದರು. ಸಾಯದೆ ಉಳಿದಿದ್ದ ಜನರು ಬಹು ಭಯಗೊಂಡು ಪರಲೋಕದ ದೇವರನ್ನು ಘನಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದೇ ಗಳಿಗೆಯಲ್ಲಿ ಮಹಾ ಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದಂಶವು ಬಿದ್ದುಹೋಯಿತು. ಆ ಭೂಕಂಪದಿಂದ ಏಳು ಸಾವಿರ ಮಂದಿ ಸತ್ತು ಹೋದರು. ಉಳಿದವರು ಭಯಗ್ರಸ್ತರಾಗಿ ಪರಲೋಕದ ದೇವರನ್ನು ಘನಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅದೇ ಗಳಿಗೆಯಲ್ಲಿ ಒಂದು ಭೀಕರ ಭೂಕಂಪವಾಯಿತು. ನಗರದ ಹತ್ತನೆಯ ಒಂದು ಭಾಗ ನಾಶವಾಯಿತು. ಏಳು ಸಾವಿರ ಜನರು ಆ ಭೂಕಂಪದಲ್ಲಿ ಹತರಾದರು. ಉಳಿದವರು ಭಯಭೀತರಾಗಿ ಸ್ವರ್ಗದಲ್ಲಿರುವ ದೇವರ ಮಹಿಮೆಯನ್ನು ಸ್ತುತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅದೇ ಗಳಿಗೆಯಲ್ಲಿ ಮಹಾಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದಂಶವು ಬಿದ್ದುಹೋಯಿತು; ಆ ಭೂಕಂಪದಿಂದ ಏಳು ಸಾವಿರ ಮಂದಿ ಸತ್ತುಹೋದರು. ಉಳಿದವರು ಭಯಗ್ರಸ್ತರಾಗಿ ಪರಲೋಕ ದೇವರನ್ನು ಘನಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅದೇ ಗಳಿಗೆಯಲ್ಲಿ, ಮಹಾ ಭೂಕಂಪ ಉಂಟಾಗಿ ಆ ಪಟ್ಟಣದ ಹತ್ತರಲ್ಲೊಂದು ಭಾಗವು ಬಿದ್ದುಹೋಯಿತು. ಆ ಭೂಕಂಪದಲ್ಲಿ ಏಳು ಸಾವಿರ ಮಂದಿ ಸತ್ತುಹೋದರು. ಉಳಿದವರು ಭಯಗ್ರಸ್ತರಾಗಿ ಪರಲೋಕದ ದೇವರಿಗೆ ಮಹಿಮೆಯನ್ನು ಸಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತನ್ನಾ ತಾಬೊಡ್ತೊಬ್ ಎಕ್ ಭಯಂಕರ್ ಭುಕಂಪ್ ಹೊಲೊ, ಶಾರಾತ್ಲೊ ಧಾತ್ಲೊ ಎಕ್ ವಾಟೊ ನಾಸ್ ಹೊವ್ನ್ ಗೆಲೊ, ಅನಿ ಸಾತ್ ಹಜಾರ್ ಲೊಕಾ ಮರುನ್ ಗೆಲಿ ಹುರಲ್ಲಿ ಲೊಕಾ ಭಿಯಾಲಿ, ಅನಿ ತೆನಿ ಸರ್ಗಾಚ್ಯಾ ದೆವಾಚ್ಯಾ ಮೊಟೆಪಾನಾಕ್ ಹೊಗಳ್ಳ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 11:13
21 ತಿಳಿವುಗಳ ಹೋಲಿಕೆ  

ಆ ದೇವದೂತನು ಗಟ್ಟಿಯಾದ ಧ್ವನಿಯಲ್ಲಿ, “ದೇವರಿಗೆ ಭಯಪಡಿರಿ. ಆತನನ್ನು ಸ್ತುತಿಸಿರಿ. ಜನರಿಗೆಲ್ಲ ದೇವರು ತೀರ್ಪು ನೀಡುವ ಸಮಯವು ಹತ್ತಿರ ಬಂದಿದೆ. ದೇವರನ್ನು ಆರಾಧಿಸಿರಿ. ಪರಲೋಕವನ್ನೂ ಭೂಮಿಯನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಸೃಷ್ಟಿಸಿದವನು ಆತನೇ” ಎಂದು ಹೇಳಿದನು.


ಆ ಕುರಿಮರಿಯು ಆರನೆಯ ಮುದ್ರೆಯನ್ನು ತೆರೆಯುವುದನ್ನು ನಾನು ನೋಡುತ್ತಲೇ ಇದ್ದೆನು. ಆಗ ಮಹಾಭೂಕಂಪವಾಯಿತು. ಸೂರ್ಯನು ಕಪ್ಪು ಕಂಬಳಿಯಂತೆ ಕಪ್ಪಾದನು. ಪೂರ್ಣಚಂದ್ರನು ರಕ್ತದಂತೆ ಕೆಂಪಾದನು.


ಆಗ ಯೆಹೋಶುವನು ಆಕಾನನಿಗೆ, “ನನ್ನ ಮಗನೇ, ಇಸ್ರೇಲಿನ ದೇವರಾದ ಯೆಹೋವನನ್ನು ಸನ್ಮಾನಿಸು; ಆತನಿಗೆ ಸ್ತೋತ್ರಸಲ್ಲಿಸು. ನಿನ್ನ ಪಾಪಗಳನ್ನು ಆತನಿಗೆ ಅರಿಕೆಮಾಡು. ನೀನು ಮಾಡಿದ್ದನ್ನು ನನಗೆ ಹೇಳು; ನನ್ನಿಂದ ಏನನ್ನೂ ಮುಚ್ಚಿಡಬೇಡ” ಎಂದನು.


ಪ್ರಭುವೇ, ಜನರೆಲ್ಲರೂ ನಿನಗೆ ಭಯಗೊಳ್ಳುತ್ತಾರೆ; ಜನರೆಲ್ಲರೂ ನಿನ್ನ ಹೆಸರನ್ನು ಸ್ತುತಿಸುತ್ತಾರೆ. ನೀನು ಮಾತ್ರ ಪರಿಶುದ್ಧನಾದವನು. ನೀನು ಯೋಗ್ಯವಾದ ಕಾರ್ಯಗಳನ್ನು ಮಾಡುತ್ತೀ ಎಂಬುದು ಸ್ಪಷ್ಟವಾಗಿರುವುದರಿಂದ ಜನರೆಲ್ಲರೂ ನಿನ್ನ ಸನ್ನಿಧಿಗೆ ಬಂದು ನಿನ್ನನ್ನು ಆರಾಧಿಸುತ್ತಾರೆ.”


ನಂತರ ಪರಲೋಕದಲ್ಲಿರುವ ದೇವರ ಆಲಯವು ತೆರೆಯಿತು. ದೇವರು ತನ್ನ ಜನರಿಗೆ ಅನುಗ್ರಹಿಸಿದ ಒಡಂಬಡಿಕೆಯನ್ನು ಇಟ್ಟಿದ್ದ ಪೆಟ್ಟಿಗೆಯು ಆತನ ಆಲಯದಲ್ಲಿ ಕಾಣಿಸಿತು. ಆಗ ಮಿಂಚುಗಳು ಹೊಳೆದವು, ಶಬ್ದಗಳಾದವು, ಗುಡುಗುಗಳಾದವು, ಭೂಕಂಪಗಳಾದವು ಮತ್ತು ಆಲಿಕಲ್ಲಿನ ಮಳೆಯೂ ಸುರಿಯಿತು.


ಆದರೆ ಮೂರುವರೆ ದಿನಗಳ ನಂತರ ದೇವರು ಆ ಇಬ್ಬರು ಪ್ರವಾದಿಗಳೊಳಗೆ ಮತ್ತೆ ಜೀವ ಪ್ರವೇಶಿಸುವಂತೆ ಮಾಡಿದನು. ಆಗ ಅವರು ತಮ್ಮ ಕಾಲೂರಿ ನಿಂತುಕೊಂಡರು. ಅವರನ್ನು ನೋಡಿದ ಜನರೆಲ್ಲರೂ ಭಯಗ್ರಸ್ತರಾದರು.


ಆಗ ದೇವದೂತನು ಧೂಪವಿದ್ದ ಪಾತ್ರೆಯನ್ನು ಯಜ್ಞವೇದಿಕೆಯ ಬೆಂಕಿಯಿಂದ ತುಂಬಿಸಿ ಅದನ್ನು ಭೂಮಿಯ ಮೇಲೆ ಎಸೆದನು. ಆಗ ಮಿಂಚು ಗುಡುಗುಗಳೂ ಮತ್ತಿತರ ಧ್ವನಿಗಳೂ ಭೂಕಂಪಗಳೂ ಉಂಟಾದವು.


ನಿಮ್ಮ ದೇವರಾದ ಯೆಹೋವನು ಅಂಧಕಾರವನ್ನು ಉಂಟುಮಾಡುವ ಮೊದಲೇ ಆತನನ್ನು ಗೌರವಿಸಿರಿ, ಕಗ್ಗತ್ತಲಿನ ಬೆಟ್ಟಗಳ ಮೇಲೆ ನೀವು ಬೀಳುವ ಮೊದಲೇ ಆತನನ್ನು ಸ್ತುತಿಸಿರಿ. ಯೆಹೂದದ ಜನರಾದ ನೀವು ಬೆಳಕನ್ನು ನಿರೀಕ್ಷಿಸುತ್ತಿದ್ದೀರಿ. ಆದರೆ ಯೆಹೋವನು ಬೆಳಕನ್ನು ಗಾಢಾಂಧಕಾರವನ್ನಾಗಿ ಪರಿವರ್ತಿಸುವನು.


ನಾವೆಲ್ಲರೂ ಆನಂದಿಸೋಣ ಮತ್ತು ಸಂತಸಪಡೋಣ! ದೇವರನ್ನು ಮಹಿಮೆಪಡಿಸೋಣ! ಕುರಿಮರಿಯಾದಾತನ (ಯೇಸು) ವಿವಾಹಕಾಲ ಬಂದಿರುವುದರಿಂದ ದೇವರನ್ನು ಘನಪಡಿಸೋಣ. ಕುರಿಮರಿಯಾದಾತನ ವಧು (ಸಭೆ) ತನ್ನನ್ನು ಸಿದ್ಧಪಡಿಸಿಕೊಂಡಿದ್ದಾಳೆ.


ಹೀಗೆ ನಿಮ್ಮ ದೇಶವನ್ನು ನಾಶಗೊಳಿಸುತ್ತಿರುವ ಗಡ್ಡೆಗಳ, ಇಲಿಗಳ ಮಾದರಿಗಳನ್ನು ಮಾಡಿಸಿರಿ. ಇಸ್ರೇಲರ ದೇವರಿಗೆ ಚಿನ್ನದ ಆ ಮಾದರಿಗಳನ್ನು ಕಾಣಿಕೆಯಾಗಿ ಸಲ್ಲಿಸಿರಿ. ಆಗ ಇಸ್ರೇಲರ ದೇವರು ನಿಮ್ಮನ್ನೂ ನಿಮ್ಮ ದೇವರುಗಳನ್ನೂ ನಿಮ್ಮ ದೇಶವನ್ನೂ ಶಿಕ್ಷಿಸುವುದನ್ನು ನಿಲ್ಲಿಸಬಹುದು.


“ನಿಮ್ಮ ಸಭೆಗೆ ಸೇರಿದ ಸಾರ್ದಿಸಿನ ಕೆಲವರು ಇನ್ನೂ ಪರಿಶುದ್ಧರಾಗಿದ್ದಾರೆ. ಅವರು ತಮ್ಮ ಬಟ್ಟೆಗಳನ್ನು ಕೊಳಕು ಮಾಡಿಕೊಂಡಿಲ್ಲ. ಅವರು ನನ್ನೊಂದಿಗೆ ನಡೆಯುವರು. ಅವರು ಯೋಗ್ಯರಾಗಿರುವುದರಿಂದ ಬಿಳಿವಸ್ತ್ರಗಳನ್ನು ಧರಿಸುತ್ತಾರೆ.


ಕೆಲವು ದಿನಗಳಾದ ಮೇಲೆ ವಿಶ್ವಾಸಿಗಳು ಸಭೆ ಸೇರಿದ್ದರು. (ಅಲ್ಲಿ ಸುಮಾರು ನೂರಿಪ್ಪತ್ತು ಮಂದಿ ಇದ್ದರು.) ಪೇತ್ರನು ಎದ್ದುನಿಂತುಕೊಂಡು ಹೀಗೆಂದನು:


ನನ್ನ ನಾಮವನ್ನು ಘನಪಡಿಸದೆ ಹೋದರೆ ಕೆಟ್ಟ ವಿಷಯಗಳು ನಿಮಗೆ ಪ್ರಾಪ್ತಿಯಾಗುವವು. ನೀವು ಆಶೀರ್ವದಿಸುವಿರಿ. ಆದರೆ ಅದು ಶಾಪವಾಗುವದು. ಕೆಟ್ಟ ವಿಷಯಗಳು ನೆರವೇರುವಂತೆ ನಾನು ಮಾಡುವೆನು. ಯಾಕೆಂದರೆ ನೀವು ನನ್ನ ಹೆಸರನ್ನು ಘನಪಡಿಸುವದಿಲ್ಲ.” ಇದನ್ನು ಸರ್ವಶಕ್ತನಾದ ಯೆಹೋವನು ನುಡಿದಿದ್ದಾನೆ.


ಸರ್ವಶಕ್ತನಾದ ಯೆಹೋವನು ನಿಮ್ಮನ್ನು ಗುಡುಗು, ಮಹಾಶಬ್ದ, ಬಿರುಗಾಳಿ, ಚಂಡಮಾರುತ, ದಹಿಸುವ ಅಗ್ನಿಜ್ವಾಲೆ ಇವುಗಳಿಂದ ಶಿಕ್ಷಿಸಿದನು.


ಯೆಹೂದ್ಯನಾಯಕರು ಕುರುಡನಾಗಿದ್ದ ಆ ಮನುಷ್ಯನನ್ನು ಒಳಗೆ ಕರೆದು, “ನೀನು ದೇವರನ್ನು ಮಹಿಮೆಪಡಿಸಬೇಕು. ಈ ಮನುಷ್ಯನು (ಯೇಸು) ಪಾಪಿಯೆಂದು ನಮಗೆ ಗೊತ್ತಿದೆ” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು