Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 11:5 - ಪರಿಶುದ್ದ ಬೈಬಲ್‌

5 ಈ ಸಾಕ್ಷಿಗಳಿಗೆ ಯಾರಾದರೂ ಕೇಡು ಮಾಡಲು ಪ್ರಯತ್ನಿಸಿದರೆ, ಸಾಕ್ಷಿಗಳ ಬಾಯಿಂದ ಬೆಂಕಿಯು ಹೊರಬಂದು ಅವರ ಶತ್ರುವನ್ನು ಅಂದರೆ ಅವರಿಗೆ ತೊಂದರೆ ಮಾಡಲು ಪ್ರಯತ್ನಿಸಿದ್ದವರನ್ನೆಲ್ಲ ಸಾಯಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇವರಿಗೆ ಯಾವನಾದರೂ ಕೇಡನ್ನುಂಟುಮಾಡಬೇಕೆಂದಿದ್ದರೆ ಇವರ ಬಾಯೊಳಗಿಂದ ಬೆಂಕಿಯು ಹೊರಟು ಇವರ ಶತ್ರುಗಳನ್ನು ದಹಿಸಿಬಿಡುವುದು. ಇವರಿಗೆ ಕೇಡನ್ನು ಉಂಟುಮಾಡಬಯಸುವವರಿಗೆ ಆ ರೀತಿಯಾಗಿ ಹತರಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಯಾವನಾದರು ಇವರಿಗೆ ಕೇಡು ಬಗೆದರೆ ಇವರ ಬಾಯಿಯಿಂದ ಬೆಂಕಿ ಹೊರಟು ಇವರ ಶತ್ರುಗಳನ್ನು ದಹಿಸಿಬಿಡುತ್ತದೆ. ಇವರಿಗೆ ಕೇಡು ಬಗೆಯಬೇಕೆಂದಿರುವವನು ಹೀಗೆಯೇ ಹತನಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇವರಿಗೆ ಯಾವನಾದರೂ ಕೇಡನ್ನುಂಟುಮಾಡಬೇಕೆಂದಿದ್ದರೆ ಇವರ ಬಾಯೊಳಗಿಂದ ಬೆಂಕಿ ಹೊರಟು ಇವರ ಶತ್ರುಗಳನ್ನು ದಹಿಸಿಬಿಡುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇವರಿಗೆ ಯಾವನಾದರೂ ಕೇಡನ್ನುಂಟುಮಾಡಬಯಸಿದರೆ, ಇವರ ಬಾಯೊಳಗಿಂದ ಬೆಂಕಿ ಹೊರಟು, ಇವರ ಶತ್ರುಗಳನ್ನು ದಹಿಸಿಬಿಡುವುದು. ಇವರಿಗೆ ಯಾವನಾದರೂ ಕೇಡನ್ನುಂಟುಮಾಡಬಯಸಿದರೆ, ಅವನಿಗೂ ಅದೇ ರೀತಿಯಾಗಿ ಕೊಲೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಕೊನ್‍ಬಿ ತೆಂಕಾ ಧಕ್ಕೊ ಕರುಕ್ ಬಗಟ್ಲ್ಯಾರ್, ತೆಂಚ್ಯಾ ತೊಂಡಾನಿತ್ನಾ ಆಗ್ ಭಾಯ್ರ್ ಯೆವ್ನ್ ತೆಂಚ್ಯಾ ದುಸ್ಮಾನಾಕ್ನಿ ನಾಸ್ ಕರುನ್ ಸೊಡ್ತಾ; ಅಸೆ ತೆಂಕಾ ಧಕ್ಕೊ ಕರುಕ್ ಬಗಟಲ್ಲ್ಯಾಕ್ನಿ ಜಿವಾನಿಚ್ ಮಾರುನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 11:5
13 ತಿಳಿವುಗಳ ಹೋಲಿಕೆ  

ಯೆಹೋವನೇ, ಸರ್ವಶಕ್ತನಾದ ದೇವರು. ಆತನು ಹೀಗೆನ್ನುತ್ತಾನೆ: “ನಾನು ಶಿಕ್ಷಿಸುವದಿಲ್ಲವೆಂದು ಆ ಜನರು ಹೇಳಿದರು. ಆದ್ದರಿಂದ ಯೆರೆಮೀಯನೇ, ನಾನು ನಿನಗೆ ಹೇಳುವ ಮಾತುಗಳು ಬೆಂಕಿಯಂತೆ ಇರುವವು. ಅವರು ಸೌದೆಯಂತೆ ಆಗುವರು. ಬೆಂಕಿಯು ಎಲ್ಲಾ ಸೌದೆಯನ್ನು ಸುಟ್ಟುಬಿಡುವದು.”


ನಾನು ಪ್ರವಾದಿಗಳ ಮೂಲಕ ಜನರಿಗೆ ಕಟ್ಟಳೆಗಳನ್ನು ವಿಧಿಸಿದೆನು. ನನ್ನ ಅಪ್ಪಣೆಯ ಮೇರೆಗೆ ಜನರು ಕೊಲ್ಲಲ್ಪಟ್ಟರು.


ಆತನು ಬಡಜನರಿಗೆ ಅನ್ಯಾಯಮಾಡದೆ ನ್ಯಾಯವಾದ ತೀರ್ಪನ್ನು ಕೊಡುವನು, ದೇಶದ ಬಡಜನರಿಗೋಸ್ಕರವಾಗಿ ಮಾಡುವ ಆಲೋಚನೆಯನ್ನು ಪಕ್ಷಪಾತವಿಲ್ಲದೆ ಮಾಡುವನು. ಆತನು ಜನರಿಗೆ ಶಿಕ್ಷೆ ಕೊಡಬೇಕೆಂದು ತೀರ್ಮಾನಿಸಿದರೆ ಅದನ್ನು ಆಜ್ಞಾಪಿಸಿ ಶಿಕ್ಷಿಸುವನು. ದುಷ್ಟರಿಗೆ ಮರಣದಂಡನೆಯಾಗಬೇಕೆಂದು ಆತನು ತೀರ್ಮಾನಿಸಿದರೆ, ಆತನು ಆಜ್ಞಾಪಿಸಿ ಕೊಲ್ಲಿಸುವನು. ನ್ಯಾಯವೇ ಆತನಿಗೆ ನಡುಕಟ್ಟು, ಒಳ್ಳೆಯತನವೇ ಆತನಿಗೆ ಸೊಂಟಪಟ್ಟಿಯಾಗಿವೆ.


ಇದು ಸರ್ವಶಕ್ತನಾದ ಯೆಹೋವನ ನುಡಿ. “ನಿಮ್ಮ ವಸ್ತುಗಳನ್ನು ಕದ್ದುಕೊಂಡ ಜನಾಂಗಗಳಿಗೆ ಆತನು ನನ್ನನ್ನು ಕಳುಹಿಸಿದನು. ನಿಮಗೆ ಗೌರವವನ್ನು ತರುವುದಕ್ಕಾಗಿ ಆತನು ನನ್ನನ್ನು ಕಳುಹಿಸಿದನು. ಯಾಕೆಂದರೆ, ನಿಮಗೆ ಹಾನಿ ಮಾಡಿದರೆ ಅದು ದೇವರ ಕಣ್ಣುಗುಡ್ಡೆಗೆ ಹಾನಿ ಮಾಡಿದಂತೆ.


ಕಿತ್ತುಹಾಕಲು, ಕೆಡವಲು, ನಾಶಪಡಿಸಲು, ಹಾಳುಮಾಡಲು, ಕಟ್ಟಲು, ನೆಡಲು, ಜನಾಂಗಗಳ ಮೇಲೂ ರಾಜ್ಯಗಳ ಮೇಲೂ ನಿನ್ನನ್ನು ಈ ದಿನ ನೇಮಿಸಿದ್ದೇನೆ” ಅಂದನು.


ಆತನ ಮೂಗಿನಿಂದ ಹೊಗೆಯು ಬಂದಿತು; ಆತನ ಬಾಯಿಂದ ಅಗ್ನಿಜ್ವಾಲೆಯೂ ಬೆಂಕಿಯ ಕಿಡಿಗಳೂ ಬಂದವು.


ಪ್ರವಾದಿಗಳು ನನ್ನ ಸೇವಕರು. ನಿಮ್ಮ ಪೂರ್ವಿಕರಿಗೆ ನ್ಯಾಯಪ್ರಮಾಣಗಳನ್ನು ಬೋಧಿಸಲು ನಾನು ಅವರನ್ನು ಉಪಯೋಗಿಸಿದೆನು. ನಿಮ್ಮ ಪೂರ್ವಿಕರು ಕಟ್ಟಕಡೆಗೆ ಪಾಠವನ್ನು ಕಲಿತರು. ಅವರು, ‘ಸರ್ವಶಕ್ತನಾದ ಯೆಹೋವನು ತಾನು ಹೇಳಿದ್ದನ್ನು ನೆರವೇರಿಸಿದನು. ನಮ್ಮ ದುಷ್ಕೃತ್ಯಗಳಿಗಾಗಿ ನಮ್ಮನ್ನು ಶಿಕ್ಷಿಸಿದನು’ ಎಂದು ಹೇಳಿದರು ಮತ್ತು ದೇವರ ಕಡೆಗೆ ತಿರುಗಿದರು.”


ನಾನು ನೋಡಿದ ದರ್ಶನವು ಕೆಬಾರ್ ಕಾಲುವೆಯ ಬಳಿ ಕಂಡ ದರ್ಶನದಂತಿತ್ತು. ನಾನು ಸಾಷ್ಟಾಂಗವೆರಗಿದೆನು.


ನಾನು ದರ್ಶನದಲ್ಲಿ ಕುದುರೆಗಳನ್ನೂ ಕುದುರೆಗಳ ಮೇಲಿದ್ದ ಸವಾರರನ್ನೂ ನೋಡಿದೆನು. ಅವರು ಹೀಗೆ ಕಾಣುತ್ತಿದ್ದರು: ಅವರು ಬೆಂಕಿಯಂತೆ ಕೆಂಪಾದ, ಕಪ್ಪಾದ, ನೀಲಿಯ ಮತ್ತು ಗಂಧಕದಂತೆ ಹಳದಿಯಾದ ಕವಚಗಳನ್ನು ಹೊಂದಿದ್ದರು. ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತೆ ಕಾಣುತ್ತಿದ್ದವು. ಕುದುರೆಗಳ ಬಾಯಿಂದ ಬೆಂಕಿ, ಹೊಗೆ ಮತ್ತು ಗಂಧಕಗಳು ಬರುತ್ತಿದ್ದವು.


ಈ ಎರಡನೆಯ ಮೃಗವು ಮಹಾ ಅದ್ಭುತಗಳನ್ನು ಮಾಡುತ್ತದೆ. ಅದು ಜನರ ಕಣ್ಣೆದುರಿನಲ್ಲಿಯೇ ಬೆಂಕಿಯನ್ನು ಆಕಾಶದಿಂದ ಭೂಮಿಗೆ ಸುರಿಸುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು