Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 12:1 - ಪರಿಶುದ್ದ ಬೈಬಲ್‌

1 ಆಗ ಪರಲೋಕದಲ್ಲಿ ಮಹಾ ಅದ್ಭುತವು ಕಾಣಿಸಿತು. ಸೂರ್ಯನನ್ನು ಧರಿಸಿದ್ದ ಒಬ್ಬ ಸ್ತ್ರೀ ಅಲ್ಲಿದ್ದಳು. ಆಕೆಯ ಪಾದದ ಕೆಳಗೆ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳುಳ್ಳ ಒಂದು ಕಿರೀಟವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಪರಲೋಕದಲ್ಲಿ ಒಂದು ಮಹಾ ಚಿಹ್ನೆಯು ಕಾಣಿಸಿತು. ಸ್ತ್ರೀಯೊಬ್ಬಳು ಸೂರ್ಯಭೂಶಿತಳಾಗಿದ್ದಳು. ಆಕೆಯ ಪಾದದಡಿಯಲ್ಲಿ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳಿಂದ ಮಾಡಿದ್ದ ಒಂದು ಕಿರೀಟವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆಕಾಶದಲ್ಲಿ ಚಿಹ್ನೆಯೊಂದು ಕಾಣಿಸಿಕೊಂಡಿತು. ಮಹಿಳೆಯೊಬ್ಬಳು ಸೂರ್ಯಭೂಷಿತಳಾಗಿದ್ದಳು. ಆಕೆಯ ಪಾದದಡಿ ಚಂದ್ರನಿದ್ದನು. ತಲೆಯ ಮೇಲೆ ಹನ್ನೆರಡು ನಕ್ಷತ್ರ ಖಚಿತವಾದ ಕಿರೀಟವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಪರಲೋಕದಲ್ಲಿ ಒಂದು ಮಹಾಲಕ್ಷಣವು ಕಾಣಿಸಿತು. ಅದೇನಂದರೆ, ಸೂರ್ಯನನ್ನು ಧರಿಸಿಕೊಂಡಿದ್ದ ಒಬ್ಬ ಸ್ತ್ರೀಯಿದ್ದಳು; ಆಕೆಯ ಕಾಲುಗಳ ಕೆಳಗೆ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳುಳ್ಳ ಒಂದು ಕಿರೀಟವಿತ್ತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಪರಲೋಕದಲ್ಲಿ ಒಂದು ಮಹಾ ಸೂಚನೆಯು ಕಾಣಿಸಿತು: ಒಬ್ಬ ಸ್ತ್ರೀಯು ಸೂರ್ಯನನ್ನು ಧರಿಸಿಕೊಂಡಿದ್ದಳು, ಆಕೆಯ ಪಾದಗಳ ಕೆಳಗೆ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳುಳ್ಳ ಒಂದು ಕಿರೀಟವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತನ್ನಾ ಮಳ್ಬಾ ವರ್ತಿ ಎಕ್ ಮೊಟಿ ವಳಕ್ ದಿಸ್ಲಿ, ಎಕ್ ಬಾಯ್ಕೊಮನುಸ್ ಹೊತ್ತಿ ತೆನಿ ದಿಸ್ ನೆಸಲ್ಲಿನ್, ಅನಿ ಬಾರಾ ಚಿಕ್ಕಿಯಾಂಚೊ ಮುಕುಟ್ ತಿಚ್ಯಾ ಟಕ್ಲ್ಯಾ ವರ್ತಿ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 12:1
35 ತಿಳಿವುಗಳ ಹೋಲಿಕೆ  

“ಸೂರ್ಯ, ಚಂದ್ರ ಮತ್ತು ನಕ್ಷತ್ರಗಳಲ್ಲಿ ವಿಚಿತ್ರವಾದ ಸೂಚನೆಗಳು ಕಾಣಿಸಿಕೊಳ್ಳುವವು. ಮೊರೆಯುವ ತೆರೆಗಳ ಹಾಗೂ ಭೋರ್ಗರೆಯುವ ಸಮುದ್ರದ ನಿಮಿತ್ತ ಭೂಮಿಯಲ್ಲಿ ಜನಾಂಗಗಳು ದಿಕ್ಕುತೋಚದೆ ತತ್ತರಿಸಿ ಹೋಗುವವು.


ನಾನು ಕ್ರಿಸ್ತನಿಗೂ ಸಭೆಗೂ ಇರುವ ಸಂಬಂಧವನ್ನು ಕುರಿತು ಮಾತಾಡುತ್ತಿದ್ದೇನೆ. ರಹಸ್ಯವಾದ ಈ ಸತ್ಯವು ಬಹು ಮುಖ್ಯವಾದದ್ದು.


ಯೆಹೋವನು ನಿನ್ನಲ್ಲಿ ಬಹಳವಾಗಿ ಹೆಚ್ಚಳಪಡುವನು. ನೀನು ಆತನ ಕೈಯಲ್ಲಿ ಒಂದು ಸುಂದರವಾದ ಕಿರೀಟದಂತಿರುವೆ.


ನಕ್ಷತ್ರಗಳು ಆಕಾಶದಿಂದ ಬೀಳುವವು ಮತ್ತು ಆಕಾಶದಲ್ಲಿರುವ ಶಕ್ತಿಗಳು ನಡುಗುವವು.’


ಸೂರ್ಯೋದಯದಂತೆ ಪ್ರಕಾಶಿಸುತ್ತಿರುವ ಈ ಯುವತಿ ಯಾರು? ಚಂದ್ರನಂತೆ ಸೌಮ್ಯಳೂ ಸೂರ್ಯನಂತೆ ಶುಭ್ರಳೂ ಜಯಧ್ವಜವೆತ್ತಿರುವ ಸೈನ್ಯದಂತೆ ಪ್ರಭಾವವುಳ್ಳವಳೂ ಆಗಿರುವ ಇವಳಾರು?


ಭೀಕರ ಭೂಕಂಪಗಳಾಗುವವು. ಕ್ಷಾಮಗಳೂ ಉಪದ್ರವಗಳೂ ತಲೆದೋರುವವು. ಭಯಂಕರ ಘಟನೆಗಳೂ ಆಕಾಶದಲ್ಲಿ ಅಪೂರ್ವ ಸೂಚನೆಗಳೂ ಕಾಣಿಸಿಕೊಳ್ಳುವವು.


ನೀನು ಬೆಳಕನ್ನು ನಿಲುವಂಗಿಯಂತೆ ಧರಿಸಿಕೊಂಡಿರುವೆ ನೀನು ಆಕಾಶಮಂಡಲವನ್ನು ಪರದೆಯಂತೆ ಹರಡಿರುವೆ.


ಯೆಹೋವ ದೇವರು ನಮ್ಮ ಸಂರಕ್ಷಕನೂ ಮಹಿಮಾ ಪೂರ್ಣನಾದ ರಾಜನೂ ಆಗಿದ್ದಾನೆ. ಯೆಹೋವನು ನಮಗೆ ದಯೆಯನ್ನೂ ಘನತೆಯನ್ನೂ ಅನುಗ್ರಹಿಸುವನು. ಆತನು ಎಲ್ಲಾ ಒಳ್ಳೆಯವುಗಳನ್ನು ತನ್ನ ಭಕ್ತರಿಗೆ ಕೊಡುವನು.


ಒಂದು ಸಾರಿ ಬಾಬಿಲೋನಿನವರು ಹಿಜ್ಕೀಯನ ಬಳಿಗೆ ದೂತರನ್ನು ಕಳುಹಿಸಿದರು. ಅವರು ದೇಶದಲ್ಲಿ ಆದ ಅದ್ಭುತ ವಿಷಯದ ಬಗ್ಗೆ ವಿಚಾರಿಸಿದರು. ಅವರು ಹಿಜ್ಕೀಯನ ಬಳಿಗೆ ಬಂದಾಗ ದೇವರು ಅವನನ್ನು ಪರೀಕ್ಷಿಸುವುದಕ್ಕಾಗಿಯೂ ಅವನ ಹೃದಯದಲ್ಲಿದ್ದ ಪ್ರತಿಯೊಂದು ಆಲೋಚನೆಯನ್ನು ತಿಳಿದುಕೊಳ್ಳುವುದಕ್ಕಾಗಿಯೂ ಅವನನ್ನು ತೊರೆದುಬಿಟ್ಟನು.


ನಗರದ ಮೇಲೆ ಸೂರ್ಯನಾಗಲಿ ಚಂದ್ರನಾಗಲಿ ಪ್ರಕಾಶಿಸುವ ಅಗತ್ಯವಿರಲಿಲ್ಲ. ದೇವರ ಪ್ರಭಾವವೇ ಆ ನಗರಕ್ಕೆ ಬೆಳಕನ್ನು ನೀಡುತ್ತಿತ್ತು. ಕುರಿಮರಿಯಾದಾತನು ನಗರಕ್ಕೆ ದೀಪವಾಗಿದ್ದನು.


ನಂತರ ಪರಲೋಕದಲ್ಲಿ ಮತ್ತೊಂದು ಅದ್ಭುತವನ್ನು ನಾನು ನೋಡಿದೆನು. ಅದು ಮಹಾ ಆಶ್ಚರ್ಯಕರವಾಗಿತ್ತು. ಏಳು ಉಪದ್ರವಗಳನ್ನು ತರುವ ಏಳು ಮಂದಿ ದೇವದೂತರು ಅಲ್ಲಿದ್ದರು. ದೇವರ ಕೋಪವು ಈ ಉಪದ್ರವಗಳೊಂದಿಗೆ ಮುಗಿಯುತ್ತಿದ್ದುದರಿಂದ ಇವು ಕಡೆಯ ಉಪದ್ರವಗಳಾಗಿದ್ದವು.


ಆಗ ಪರಲೋಕದಲ್ಲಿ ಮತ್ತೊಂದು ಅದ್ಭುತವು ಕಾಣಿಸಿತು: ಕೆಂಪಾದ ಮಹಾ ಘಟಸರ್ಪವೊಂದು ಅಲ್ಲಿತ್ತು. ಆ ಘಟಸರ್ಪಕ್ಕೆ ಏಳು ತಲೆಗಳಿದ್ದು, ಪ್ರತಿಯೊಂದು ತಲೆಯ ಮೇಲೂ ಏಳು ಕಿರೀಟಗಳಿದ್ದವು. ಆ ಸರ್ಪಕ್ಕೆ ಹತ್ತು ಕೊಂಬುಗಳಿದ್ದವು.


ನಂತರ ಪರಲೋಕದಲ್ಲಿರುವ ದೇವರ ಆಲಯವು ತೆರೆಯಿತು. ದೇವರು ತನ್ನ ಜನರಿಗೆ ಅನುಗ್ರಹಿಸಿದ ಒಡಂಬಡಿಕೆಯನ್ನು ಇಟ್ಟಿದ್ದ ಪೆಟ್ಟಿಗೆಯು ಆತನ ಆಲಯದಲ್ಲಿ ಕಾಣಿಸಿತು. ಆಗ ಮಿಂಚುಗಳು ಹೊಳೆದವು, ಶಬ್ದಗಳಾದವು, ಗುಡುಗುಗಳಾದವು, ಭೂಕಂಪಗಳಾದವು ಮತ್ತು ಆಲಿಕಲ್ಲಿನ ಮಳೆಯೂ ಸುರಿಯಿತು.


ನಾನು ಆಕಾಶದಲ್ಲಿ ಅದ್ಭುತಕಾರ್ಯಗಳನ್ನು ತೋರಿಸುವೆನು. ಭೂಮಿಯ ಮೇಲೆ ಸೂಚಕಕಾರ್ಯಗಳನ್ನು ಮಾಡುವೆನು. ರಕ್ತ, ಬೆಂಕಿ ಮತ್ತು ಕಪ್ಪೊಗೆಗಳು ಅಲ್ಲಿರುವವು.


“ಆಗ ಮನುಷ್ಯಕುಮಾರನ ಆಗಮನದ ಸೂಚನೆಯು ಆಕಾಶದಲ್ಲಿ ಕಾಣಿಸಿಕೊಳ್ಳುವುದು. ಲೋಕದ ಜನರೆಲ್ಲಾ ಗೋಳಾಡುವರು. ಆಕಾಶದಲ್ಲಿ ಮೇಘಗಳ ಮೇಲೆ ಆತನು ಬರುವುದನ್ನು ಜನರೆಲ್ಲರೂ ನೋಡುವರು. ಆತನು ಶಕ್ತಿಸಾಮರ್ಥ್ಯದಿಂದಲೂ ಮಹಿಮೆಯಿಂದಲೂ ಬರುವನು.


ಆ ಸಮಯಗಳಲ್ಲಿ ದೇವರಾದ ಯೆಹೋವನು, ಕುರುಬನು ತನ್ನ ಕುರಿಗಳನ್ನು ಸಂರಕ್ಷಿಸುವ ರೀತಿಯಲ್ಲಿ ತನ್ನ ಜನರನ್ನು ರಕ್ಷಿಸುವನು. ಅವರು ಆತನಿಗೆ ಅಮೂಲ್ಯರಾಗಿರುವರು. ಆತನ ಕೈಯಲ್ಲಿ ಹೊಳೆಯುವ ಆಭರಣದಂತಿರುವರು.


ಯೆಹೋವನು ನನ್ನನ್ನು ಸಂತೋಷಭರಿತನನ್ನಾಗಿ ಮಾಡುತ್ತಾನೆ. ನನ್ನ ಸಂಪೂರ್ಣ ವ್ಯಕ್ತಿತ್ವವು ನನ್ನ ದೇವರಲ್ಲಿ ಸಂತೋಷಿಸುತ್ತದೆ. ಯೆಹೋವನು ರಕ್ಷಣೆಯೆಂಬ ವಸ್ತ್ರವನ್ನು ನನಗೆ ತೊಡಿಸಿದ್ದಾನೆ. ಮದುವೆಯಲ್ಲಿ ಮದುಮಗನು ಧರಿಸಿಕೊಳ್ಳುವ ಬಟ್ಟೆಯಂತೆ ಅದು ನಯವಾಗಿದೆ. ಯೆಹೋವನು ನನಗೆ ನೀತಿಯೆಂಬ ನಿಲುವಂಗಿಯನ್ನು ತೊಡಿಸಿರುತ್ತಾನೆ. ಅದು ಮದುಮಗಳು ಮದುವೆಯಲ್ಲಿ ಧರಿಸಿಕೊಳ್ಳುವ ಬಟ್ಟೆಯಂತಿದೆ.


“ನನ್ನನ್ನು ಹಿಂಬಾಲಿಸುವವರ ಮೇಲೆ ಸೂರ್ಯನ ಪ್ರಕಾಶದಂತೆ ಶುಭವು ಪ್ರಕಾಶಿಸುವದು. ಸೂರ್ಯನ ಕಿರಣಗಳಂತೆ ಅದು ಗುಣಪಡಿಸುವ ಶಕ್ತಿಯನ್ನು ಹೊಂದುವದು. ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಸ್ವತಂತ್ರರಾಗಿಯೂ ಸಂತೋಷವಾಗಿಯೂ ಇರುವಿರಿ.


ಅಂಥ ವಿಷಯಗಳ ಬಗ್ಗೆ ನಾನು ಹೆಚ್ಚಳಪಡುವುದೇ ಇಲ್ಲ. ನಾನು ಹೆಮ್ಮೆಪಡಲು ನನಗಿರುವ ಒಂದೇ ಕಾರಣವೇನೆಂದರೆ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಶಿಲುಬೆಯೊಂದೇ. ಶಿಲುಬೆಯ ಮೇಲೆ ಯೇಸುವಿಗಾದ ಮರಣದ ಮೂಲಕ ಲೋಕವು ನನ್ನ ಪಾಲಿಗೆ ಸತ್ತುಹೋಯಿತು. ನಾನು ಸಹ ಲೋಕದ ಪಾಲಿಗೆ ಸತ್ತುಹೋದೆನು.


ಆಗ ಕೆಲವು ಫರಿಸಾಯರು ಮತ್ತು ಧರ್ಮೋಪದೇಶಕರು ಯೇಸುವಿಗೆ, “ಬೋಧಕನೇ, ನೀನು ಹೇಳಿದ್ದನ್ನು ನಿರೂಪಿಸುವುದಕ್ಕಾಗಿ ಒಂದು ಸೂಚಕಕಾರ್ಯವನ್ನು ಮಾಡು” ಎಂದು ಹೇಳಿದರು.


ಆ ನಗರದ ಗೋಡೆಗಳನ್ನು ಹನ್ನೆರಡು ಅಡಿಪಾಯದ ಕಲ್ಲುಗಳ ಮೇಲೆ ಕಟ್ಟಲಾಗಿತ್ತು. ಆ ಕಲ್ಲುಗಳ ಮೇಲೆ ಕುರಿಮರಿಯಾದಾತನ ಹನ್ನರೆಡು ಮಂದಿ ಅಪೊಸ್ತಲರ ಹೆಸರುಗಳನ್ನು ಬರೆಯಲಾಗಿತ್ತು.


ನನ್ನ ಬಲಗೈಯಲ್ಲಿ ನೀನು ನೋಡಿದ ಏಳು ನಕ್ಷತ್ರಗಳ ಮತ್ತು ನೀನು ಕಂಡ ಏಳು ಬಂಗಾರದ ದೀಪಸ್ತಂಭಗಳ ಗೂಢಾರ್ಥವು ಹೀಗಿದೆ: ಏಳು ನಕ್ಷತ್ರಗಳೆಂದರೆ ಏಳು ಸಭೆಗಳ ದೂತರು. ಏಳು ದೀಪಸ್ತಂಭಗಳೆಂದರೆ ಏಳು ಸಭೆಗಳು.” ಎಂದು ಹೇಳಿದನು.


ನಿಮ್ಮ ವಿಷಯದಲ್ಲಿ ನಾನು ಚಿಂತಿಸುತ್ತೇನೆ. ಈ ಚಿಂತೆಯು ದೇವರಿಂದ ಬಂದದ್ದು. ನಿಮ್ಮನ್ನು ಕ್ರಿಸ್ತನಿಗೆ ಕೊಡುವುದಾಗಿ ನಾನು ವಾಗ್ದಾನ ಮಾಡಿದೆನು. ಕ್ರಿಸ್ತನೊಬ್ಬನೇ ನಿಮ್ಮ ಪತಿಯಾಗಿರಬೇಕು. ನಾನು ನಿಮ್ಮನ್ನು ಕ್ರಿಸ್ತನಿಗೆ ಆತನ ಶುದ್ಧ ವಧುವನ್ನಾಗಿ ಕೊಡಲು ಅಪೇಕ್ಷಿಸುತ್ತೇನೆ.


ನಂಬಿಕೆಯ ಮೂಲಕವಾಗಿ ಅಂದರೆ ಯೇಸು ಕ್ರಿಸ್ತನಲ್ಲಿ ನಂಬಿಕೆ ಇಡುವ ಎಲ್ಲಾ ಜನರನ್ನು ದೇವರು ನೀತಿವಂತರನ್ನಾಗಿ ಮಾಡುತ್ತಾನೆ. ಆತನಿಗೆ ಎಲ್ಲಾ ಜನರು ಒಂದೇ.


ಮದುಮಗಳು ಮದುಮಗನಿಗೆ ಮಾತ್ರ ಸೇರಿದವಳಾಗಿದ್ದಾಳೆ. ಮದುಮಗನಿಗೆ ಸಹಾಯಮಾಡುವ ಸ್ನೇಹಿತನು ಮದುಮಗನ ಬರುವಿಕೆಗಾಗಿ ಕಾಯುತ್ತಿರುತ್ತಾನೆ ಮತ್ತು ಆತನ ಕರೆಗಾಗಿ ಆಲಿಸುತ್ತಿರುತ್ತಾನೆ. ಮದುಮಗನ ಸ್ವರವನ್ನು ಕೇಳುವಾಗ ಈ ಸ್ನೇಹಿತನು ಬಹು ಸಂತೋಷಪಡುವನು. ಅದೇ ಸಂತೋಷ ನನಗಿದೆ. ನನ್ನ ಪೂರ್ಣಾನಂದದ ಸಮಯವು ಇದೇ ಆಗಿದೆ.


ಪ್ರಭುವಾದ ಯೇಸು ಕ್ರಿಸ್ತನನ್ನೇ ಧರಿಸಿಕೊಳ್ಳಿರಿ. ನಿಮ್ಮ ಪಾಪಸ್ವಭಾವವನ್ನು ಹೇಗೆ ತೃಪ್ತಿಗೊಳಿಸಬೇಕೆಂದಾಗಲಿ ಕೆಟ್ಟಕಾರ್ಯಗಳನ್ನು ಮಾಡಬೇಕೆಂಬ ಬಯಕೆಯನ್ನು ಹೇಗೆ ಪೂರೈಸಿಕೊಳ್ಳಬೇಕೆಂದಾಗಲಿ ಆಲೋಚಿಸಬೇಡಿ.


ಆದರೆ ಪರಲೋಕದಲ್ಲಿರುವ ಜೆರುಸಲೇಮ್ ಸ್ವತಂತ್ರಳಾದ ಸ್ತ್ರೀಯಂತಿದೆ. ಇದೇ ನಮ್ಮ ತಾಯಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು