Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 12:8 - ಪರಿಶುದ್ದ ಬೈಬಲ್‌

8 ಆದರೆ ಆ ಘಟಸರ್ಪವೂ ಅದರ ದೂತರೂ ಸೋತುಹೋಗಿ ಪರಲೋಕದಲ್ಲಿ ತಮ್ಮ ಸ್ಥಾನಗಳನ್ನು ಕಳೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದರೆ ಘಟಸರ್ಪಕ್ಕೆ ಸಾಕಷ್ಟು ಸಾಮರ್ಥ್ಯವಿಲ್ಲದ್ದರಿಂದ ಅದು ಸೋಲನ್ನಪ್ಪಿತು. ಹೀಗೆ ಪರಲೋಕದಲ್ಲಿ ಅವರಿಗೂ ಸ್ಥಳವಿಲ್ಲದಂತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆದರೆ ಜಯಗಳಿಸುವಷ್ಟು ಸಾಮರ್ಥ್ಯ ಘಟಸರ್ಪಕ್ಕಿರದೆ ಅದು ಸೋಲನ್ನಪ್ಪಿತು. ಹೀಗೆ ಸ್ವರ್ಗದಲ್ಲಿ ಅದಕ್ಕೂ ಅದರ ದೂತರಿಗೂ ಸ್ಥಳವಿಲ್ಲದಂತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಮತ್ತು ಪರಲೋಕದೊಳಗೆ ಅವರಿಗೆ ಸ್ಥಾನವು ತಪ್ಪಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರಿಗೆ ಸಾಕಷ್ಟು ಸಾಮರ್ಥ್ಯವಿಲ್ಲದ್ದರಿಂದ, ಪರಲೋಕದೊಳಗೆ ಅವರಿಗಿರುವ ಸ್ಥಾನವನ್ನು ಕಳೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಖರೆ ತೊ ಭಯಾನಕ್ ಸಾಪ್ ಹಾರ್‍ತಾ, ಅನಿ ಅನಿಫಿಡೆ ತೆಕಾ ಅನಿ ತ್ಯೆಚ್ಯಾ ದುತಾಕ್ನಿ ಸರ್‍ಗಾ ವರ್ತಿ ಜಾಗೊ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 12:8
18 ತಿಳಿವುಗಳ ಹೋಲಿಕೆ  

ಇನ್ನು ಸ್ವಲ್ಪ ಕಾಲದೊಳಗೆ ದುಷ್ಟರು ಇರುವುದೇ ಇಲ್ಲ. ನೀನು ಅವರಿಗಾಗಿ ಹುಡುಕಿದರೂ ಅವರು ಸಿಕ್ಕುವುದಿಲ್ಲ!


ನಮ್ಮ ಸಹೋದರರು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ವಾಕ್ಯದ ಬಲದಿಂದಲೂ ಅವನನ್ನು ಸೋಲಿಸಿದರು. ಅವರು ತಮ್ಮ ಜೀವಗಳನ್ನು ಪ್ರೀತಿಸಲಿಲ್ಲ. ಅವರು ಮರಣಕ್ಕೆ ಭಯಪಡಲಿಲ್ಲ.


ಆ ಜನರೆಲ್ಲಾ ನಿನ್ನ ವಿರುದ್ಧ ಹೋರಾಡುವರು, ಆದರೆ ಅವರು ನಿನ್ನನ್ನು ಸೋಲಿಸಲಾಗುವುದಿಲ್ಲ. ಏಕೆಂದರೆ ನಾನೇ ನಿನ್ನೊಂದಿಗೆ ಇರುವೆನು. ನಾನೇ ನಿನ್ನನ್ನು ರಕ್ಷಿಸುವೆನು.” ಇದು ಯೆಹೋವನಾದ ನನ್ನ ಮಾತು.


ದೇವದೂತರು ಅಧಿಕಾರವನ್ನು ಹೊಂದಿದ್ದರೂ ಅದನ್ನು ಉಳಿಸಿಕೊಳ್ಳಲಾರದೆ ಸ್ವಂತ ವಾಸಸ್ಥಾನವನ್ನು ಬಿಟ್ಟುಹೋದದ್ದನ್ನು ನೆನಸಿಕೊಳ್ಳಿರಿ. ಆದ್ದರಿಂದ ಪ್ರಭುವು ಈ ದೇವದೂತರನ್ನು ಅಂಧಕಾರದಲ್ಲಿಟ್ಟನು. ಅವರನ್ನು ಶಾಶ್ವತವಾದ ಬೇಡಿಗಳಿಂದ ಬಂಧಿಸಲಾಯಿತು. ಮಹಾದಿನದಂದು ಅವರಿಗೆ ತೀರ್ಪು ನೀಡುವುದಕ್ಕಾಗಿ ಆತನು ಅವರನ್ನು ಅಲ್ಲಿಟ್ಟಿದ್ದಾನೆ.


ಆದ್ದರಿಂದ ನಾನು ನಿನಗೆ ಹೇಳುವುದೇನೆಂದರೆ, ನೀನೇ ಪೇತ್ರ. ನಾನು ಈ ಬಂಡೆಯ ಮೇಲೆ ನನ್ನ ಸಭೆಯನ್ನು ಕಟ್ಟುತ್ತೇನೆ. ಪಾತಾಳಲೋಕದ ಬಲವು ನನ್ನ ಸಭೆಯನ್ನು ಸೋಲಿಸಲಾರದು.


ನೀವು ನನಗೆ ಅಂಜುವುದಿಲ್ಲವೇ?” ಇದು ಯೆಹೋವನ ಸಂದೇಶ: “ನೀವು ನನ್ನ ಎದುರಿಗೆ ಭಯದಿಂದ ನಡುಗುವುದಿಲ್ಲವೇ? ಸಾಗರಗಳಿಗೆ ಗಡಿಯಂತೆ ದಡವನ್ನು ನಿರ್ಮಿಸಿದವನು ನಾನೇ. ಸಮುದ್ರವು ನಿರಂತರವಾಗಿ ತನ್ನ ಸೀಮೆಯಲ್ಲಿಯೇ ಹರಿಯಬೇಕೆಂದು ಹಾಗೆ ಮಾಡಿದೆ. ತೆರೆಗಳು ದಡವನ್ನು ಅಪ್ಪಳಿಸಬಹುದು ಆದರೆ ಅವುಗಳು ಅದನ್ನು ನಾಶಮಾಡಲಾರವು. ತೆರೆಗಳು ಬರುವಾಗ ಭೋರ್ಗರೆಯಬಹುದು, ಆದರೆ ದಡವನ್ನು ದಾಟಿಹೋಗಲಾರವು.


ನನ್ನ ಜೀವಮಾನವೆಲ್ಲಾ ನನಗೆ ಅನೇಕ ಶತ್ರುಗಳಿದ್ದರು. ಆದರೆ ಅವರೆಂದೂ ಗೆಲ್ಲಲಿಲ್ಲ.


ಆಗ ವೈರಿಯು, “ನಾನು ಅವನನ್ನು ಸೋಲಿಸಿದೆ!” ಎಂದು ಹೇಳುತ್ತಾ ನನ್ನ ಬೀಳುವಿಕೆಯನ್ನು ಕಂಡು ಸಂತೋಷಪಡುವನು.


ಅವನನ್ನು ಕಂಡ ಜನರು, ಅವನನ್ನು ಮತ್ತೆ ನೋಡುವುದಿಲ್ಲ, ಅವನ ಕುಟುಂಬವು ಅವನನ್ನು ಮತ್ತೆಂದಿಗೂ ನೋಡುವುದಿಲ್ಲ.


ಆದರೆ ಆ ತೋಟವು, ‘ನಾನು ನಿನ್ನನ್ನು ಮೊದಲು ನೋಡಿಯೇ ಇಲ್ಲ’ ಎಂದು ಹೇಳುತ್ತದೆ.


ಅವನು ತನ್ನ ಮನೆಗೆ ಮತ್ತೆಂದಿಗೂ ಹಿಂತಿರುಗಿ ಬರುವುದಿಲ್ಲ. ಇನ್ನು ಮೇಲೆ ಅವನ ಸ್ಥಳವು ಅವನನ್ನು ತಿಳಿದಿರುವುದಿಲ್ಲ.


ನಂತರ ಪರಲೋಕದಲ್ಲಿ ಒಂದು ಯುದ್ಧವಾಯಿತು. ಮಿಕಾಯೇಲನು ಮತ್ತು ಅವನ ಸಹದೂತರು ಆ ಘಟಸರ್ಪದ ವಿರುದ್ಧ ಹೋರಾಡಿದರು. ಆ ಘಟಸರ್ಪ ಮತ್ತು ಅದರ ದೂತರೂ ಹೋರಾಡಿದರು.


ಆ ಘಟಸರ್ಪವನ್ನು ಪರಲೋಕದಿಂದ (ಆ ಘಟಸರ್ಪಕ್ಕೆ ಸೈತಾನನೆಂತಲೂ ಪಿಶಾಚನೆಂತಲೂ ಹೆಸರಿದೆ. ಅದು ಲೋಕವನ್ನೆಲ್ಲಾ ತಪ್ಪು ಮಾರ್ಗಕ್ಕೆ ಎಳೆಯುತ್ತಿತ್ತು.) ಅದರ ದೂತರೊಂದಿಗೆ ಭೂಮಿಯ ಮೇಲೆ ಎಸೆಯಲಾಯಿತು.


ಬಳಿಕ ನಾನು ಒಂದು ದೊಡ್ಡ ಬಿಳಿ ಸಿಂಹಾಸನವನ್ನೂ ಆ ಸಿಂಹಾಸನದ ಮೇಲೆ ಕುಳಿತಿದ್ದಾತನನ್ನೂ ನೋಡಿದೆನು. ಭೂಮಿ ಮತ್ತು ಆಕಾಶಗಳು ಆತನ ಬಳಿಯಿಂದ ಓಡಿಹೋಗಿ ಅದೃಶ್ಯವಾದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು