Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 13:10 - ಪರಿಶುದ್ದ ಬೈಬಲ್‌

10 ಸೆರೆ ಒಯ್ಯುವವನು ಸೆರೆ ಒಯ್ಯಲ್ಪಡುವನು. ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಕೊಲ್ಲಲ್ಪಡುವನು. ಆದ್ದರಿಂದ ದೇವರ ಪರಿಶುದ್ಧ ಜನರು ತಾಳ್ಮೆಯನ್ನೂ ನಂಬಿಕೆಯನ್ನೂ ಹೊಂದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಸೆರೆಹಿಡಿಯುವವನು ತಾನೇ ಸೆರೆಗೆ ಹೋಗುವನು, ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಸಾಯುವನು. ಇದರಲ್ಲಿ ದೇವಜನರಿಗೆ ತಾಳ್ಮೆಯೂ ನಂಬಿಕೆಯೂ ಅಗತ್ಯವಾಗಿರಬೇಕಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸೆರೆಹಿಡಿಯುವವನು ತಾನೇ ಸೆರೆಗೆ ಹೋಗುವನು; ಖಡ್ಗದಿಂದ ಹತಿಸುವವನು ಖಡ್ಗದಿಂದಲೇ ಹತನಾಗಬೇಕು. ಆದ್ದರಿಂದ ದೇವಜನರು ಸಹನೆಯಿಂದಲೂ ವಿಶ್ವಾಸದಿಂದಲೂ ನಡೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಸೆರೆಹಿಡಿಯುವವನು ತಾನೇ ಸೆರೆಯಾಗಿ ಹೋಗುವನು. ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಕೊಲೆಯಾಗುವನು.” ಇದರಲ್ಲಿ ದೇವಜನರ ಸೈರಣೆಯೂ ನಂಬಿಕೆಯೂ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಜೆ ಕೊನಾಕ್‍ ದರುನ್ ಘೆವ್ನ್ ಜಾವ್ನ್ ಹೊತಾ ಮನುನ್ ಹಾಯ್ ತೆಂಕಾ ಖರ್‍ಯಾನಿಚ್ ದರುನ್ ಘೆವ್ನ್ ಜಾವ್ನ್ ಹೊತಾ; ಜೆ ಕೊನಾಕ್ ಮೊಟ್ಯಾ ಚಾಕ್ವಾನಿ ಜಿವಾನಿ ಮಾರ್ತಲೆ ಮನುನ್ ಹಾಯ್, ತೆಂಕಾ ಖರ್‍ಯಾನಿಚ್ ಮೊಟ್ಯಾ ಚಾಕ್ವಾನಿ ಜಿವಾನಿ ಮಾರುನ್ ಹೊತಾ. ಹಿತ್ತೆ ದೆವಾಚ್ಯಾ ಲೊಕಾಕ್ನಿ ಖರೆಚ್ ಸೊಸುನ್ ಘೆವ್ಕ್ ಅನಿ ವಿಶ್ವಾಸ್, ರ್‍ಹಾವ್ಕ್ ಬಲ್ವಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 13:10
29 ತಿಳಿವುಗಳ ಹೋಲಿಕೆ  

‘ನಾವು ಎಲ್ಲಿಗೆ ಹೋಗಬೇಕು’ ಎಂದು ಅವರು ಕೇಳಬಹುದು. ಯೆಹೋವನು ಹೀಗೆ ಹೇಳಿದ್ದಾನೆ ಎಂದು ನೀನು ಅವರಿಗೆ ಹೇಳು. “‘ಕೆಲವು ಜನರು ಮರಣಹೊಂದಬೇಕೆಂದು ನಾನು ಗೊತ್ತುಮಾಡಿದ್ದೇನೆ. ಅವರು ಮರಣಹೊಂದುತ್ತಾರೆ. ಕೆಲವು ಜನರು ಖಡ್ಗಗಳಿಂದ ಕೊಲ್ಲಲ್ಪಡಬೇಕೆಂದು ನಾನು ಗೊತ್ತುಮಾಡಿದ್ದೇನೆ. ಅವರು ಖಡ್ಗಗಳಿಗೆ ಬಲಿಯಾಗುತ್ತಾರೆ. ಕೆಲವು ಜನರು ಹೊಟ್ಟೆಗೆ ಅನ್ನವಿಲ್ಲದೆ ಸಾಯಬೇಕು ಎಂದು ನಾನು ಗೊತ್ತುಮಾಡಿದ್ದೇನೆ. ಅವರು ಹಸಿವಿನಿಂದ ಸಾಯುತ್ತಾರೆ. ಕೆಲವು ಜನರನ್ನು ಶತ್ರುಗಳು ಸೆರೆಹಿಡಿದು ಪರದೇಶಕ್ಕೆ ತೆಗೆದುಕೊಂಡು ಹೋಗಲಿ ಎಂದು ಗೊತ್ತುಮಾಡಿದ್ದೇನೆ. ಅವರು ಪರದೇಶದಲ್ಲಿ ಸೆರೆಯಾಳುಗಳಾಗಿ ಇರುವರು.


ಈ ಪರಿಸ್ಥಿತಿಯಲ್ಲಿ, ದೇವರ ಪರಿಶುದ್ಧ ಜನರು ತಾಳ್ಮೆಯಿಂದಿರಬೇಕು. ಅವರು ದೇವರ ಆಜ್ಞೆಗಳಿಗೆ ವಿಧೇಯರಾಗಿರಬೇಕು ಮತ್ತು ಯೇಸುವಿನಲ್ಲಿ ನಂಬಿಕೆಯನ್ನಿಟ್ಟಿರಬೇಕು.


ನೀನು ನನ್ನ ಆಜ್ಞೆಯನ್ನು ಸಹನೆಯಿಂದ ಮತ್ತು ತಾಳ್ಮೆಯಿಂದ ಅನುಸರಿಸಿದೆ. ಆದ್ದರಿಂದ ಈ ಲೋಕಕ್ಕೆಲ್ಲಾ ಉಂಟಾಗುವ ಕಡುಶೋಧನೆಯಿಂದ ನಾನು ನಿನ್ನನ್ನು ತಪ್ಪಿಸುತ್ತೇನೆ. ಭೂನಿವಾಸಿಗಳೆಲ್ಲರನ್ನು ಈ ಶೋಧನೆಯು ಪರಿಶೋಧಿಸುತ್ತದೆ.


ನೀವು ನಿಮ್ಮ ನಂಬಿಕೆಯಲ್ಲಿ ದೃಢವಾಗಿದ್ದರೆ ನಿಮ್ಮನ್ನು ರಕ್ಷಿಸಿಕೊಳ್ಳುವಿರಿ.


ನೀವು ಯುದ್ಧಮಾಡಿ ಇತರರಿಂದ ಸುಲಿದುಕೊಳ್ಳುತ್ತೀರಿ. ಆದರೆ ಅವರು ನಿಮ್ಮಿಂದ ಏನೂ ಕದ್ದುಕೊಳ್ಳಲಿಲ್ಲ. ನೀವು ಜನರಿಗೆ ವಿರುದ್ಧವಾಗಿ ತಿರುಗುತ್ತೀರಿ. ಆದರೆ ಅವರು ನಿಮಗೆ ವಿರುದ್ಧವಾಗಲಿಲ್ಲ. ಆದ್ದರಿಂದ ನೀವು ಕದ್ದುಕೊಳ್ಳುವದನ್ನು ಬಿಟ್ಟಾಗ ಇತರರು ನಿಮ್ಮದನ್ನು ಕದ್ದುಕೊಳ್ಳುತ್ತಾರೆ. ನೀವು ಇತರರಿಗೆ ಹಾನಿ ಮಾಡುವದನ್ನು ನಿಲ್ಲಿಸಿದಾಗ ಇತರರು ನಿಮಗೆ ಹಾನಿ ಮಾಡುವರು. ಆಗ ನೀವು ಹೀಗೆ ಹೇಳುವಿರಿ:


ನೀವು ಸೋಮಾರಿಗಳಾಗಿರಬೇಕೆಂಬುದು ನಮ್ಮ ಅಪೇಕ್ಷೆಯಲ್ಲ. ದೇವರ ವಾಗ್ದಾನದ ಫಲಗಳನ್ನು ಪಡೆಯುವ ಜನರಂತೆ ನೀವಿರಬೇಕೆಂಬುದು ನಮ್ಮ ಅಪೇಕ್ಷೆ. ಆ ಜನರಿಗೆ ನಂಬಿಕೆ ಮತ್ತು ತಾಳ್ಮೆಯಿದ್ದುದರಿಂದ ಅವರು ದೇವರ ವಾಗ್ದಾನದಂತೆ ಫಲವನ್ನು ಪಡೆದರು.


“ನೀನು ಮಾಡುತ್ತಿರುವುದು ನನಗೆ ತಿಳಿದಿದೆ. ನೀನು ಕಷ್ಟಪಟ್ಟು ಕೆಲಸಮಾಡುತ್ತಾ ತಾಳ್ಮೆಯಿಂದಿರುವೆ. ನೀನು ಕೆಟ್ಟ ಜನರನ್ನು ಸಹಿಸಿಕೊಳ್ಳುವುದಿಲ್ಲ ಎಂಬುದು ನನಗೆ ತಿಳಿದಿದೆ. ಅಪೊಸ್ತಲರಾಗಿಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು ಪರೀಕ್ಷಿಸಿ, ಅವರು ಸುಳ್ಳುಗಾರರೆಂಬುದನ್ನು ಕಂಡುಹಿಡಿದಿರುವೆ.


ಯೇಸು ಅವನಿಗೆ, “ನಿನ್ನ ಖಡ್ಗವನ್ನು ಒರೆಗೆ ಹಾಕು. ಕತ್ತಿಯನ್ನು ಬಳಸುವ ಜನರು ಕತ್ತಿಯಿಂದಲೇ ಸಾಯುತ್ತಾರೆ.


ನೆಬೂಕದ್ನೆಚ್ಚರನು ಇಲ್ಲಿಗೆ ಬಂದು ಈಜಿಪ್ಟಿನ ಮೇಲೆ ಧಾಳಿ ಮಾಡುವನು. ಕೊಲ್ಲಬೇಕೆಂದು ಗೊತ್ತುಮಾಡಿದವರನ್ನು ಕೊಂದುಹಾಕುವನು; ಸೆರೆಹಿಡಿಯಬೇಕೆಂದು ಗೊತ್ತು ಮಾಡಿಕೊಂಡವರನ್ನು ಸೆರೆಹಿಡಿಯುವನು; ಖಡ್ಗದಿಂದ ಕೊಲೆಯಾಗಬೇಕೆಂದು ಗೊತ್ತುಪಡಿಸಿದವರ ಸಲುವಾಗಿ ಅವನು ಖಡ್ಗವನ್ನು ತರುವನು.


ಆ ಜನರು ನಿನ್ನ ಪರಿಶುದ್ಧ ಜನರ ಮತ್ತು ನಿನ್ನ ಪ್ರವಾದಿಗಳ ರಕ್ತವನ್ನು ಸುರಿಸಿದರು. ಈಗ ನೀನು ಅವರಿಗೆ ಕುಡಿಯಲು ರಕ್ತವನ್ನೇ ನೀಡಿರುವೆ. ಅವರು ಇದಕ್ಕೆ ಪಾತ್ರರಾಗಿದ್ದಾರೆ.”


ಯೋಹಾನನೆಂಬ ನಾನು ಕ್ರಿಸ್ತನಲ್ಲಿ ನಿಮ್ಮ ಸಹೋದರನಾಗಿದ್ದೇನೆ. ನಾವೆಲ್ಲರೂ ಒಟ್ಟಾಗಿ ಯೇಸುವಿನ ನಿಮಿತ್ತ ಸಂಕಟಗಳಲ್ಲಿಯೂ ರಾಜ್ಯದಲ್ಲಿಯೂ ತಾಳ್ಮೆಯಲ್ಲಿಯೂ ಪಾಲುಗಾರರಾಗಿದ್ದೇವೆ. ನಾನು ದೇವರ ಸಂದೇಶಕ್ಕೂ ಯೇಸುವಿನ ಸತ್ಯಕ್ಕೂ ನಂಬಿಗಸ್ತನಾಗಿದ್ದುದರಿಂದ ಪತ್ಮೊಸ್ ದ್ವೀಪದಲ್ಲಿದ್ದೆನು.


ಭವಿಷ್ಯದ ಒಂದು ವಿಶೇಷ ಸಮಯದ ಕುರಿತಾಗಿ ಈ ಸಂದೇಶ. ಈ ಸಂದೇಶವು ಅಂತ್ಯದ ವಿಷಯವಾಗಿ ಇದೆ. ಇದು ಖಂಡಿತವಾಗಿಯೂ ನೆರವೇರುತ್ತದೆ. ಆ ಸಮಯವು ಎಂದಿಗೂ ಬರುವುದಿಲ್ಲ ಎಂಬಂತೆ ಕಾಣಬಹುದು. ಆದರೆ ತಾಳ್ಮೆಯಿಂದಿರು; ಅದನ್ನು ನಿರೀಕ್ಷಿಸುತ್ತಾ ಇರು. ಆ ಸಮಯವು ಬರುವದು. ಅದು ತಡವಾಗುವುದಿಲ್ಲ.


ತನ್ನ ರಕ್ಷಣೆಗಾಗಿ ಯೆಹೋವನಿಗಾಗಿಯೇ ಮೌನದಿಂದ ಕಾಯುವುದು ಮನುಷ್ಯನಿಗೆ ಒಳ್ಳೆಯದು.


ಆದ್ದರಿಂದ ನೀನು ಸ್ವೀಕರಿಸಿಕೊಂಡ ಮತ್ತು ಕೇಳಿದ ಉಪದೇಶವನ್ನು ಮರೆಯದೆ ಅದಕ್ಕೆ ವಿಧೇಯನಾಗಿರು. ನಿನ್ನ ಹೃದಯವನ್ನೂ ಜೀವಿತವನ್ನೂ ಪರಿವರ್ತಿಸಿಕೊ! ಎಚ್ಚರಗೊಳ್ಳು! ಇಲ್ಲವಾದರೆ, ನಾನು ಕಳ್ಳನಂತೆ ನಿನ್ನ ಬಳಿಗೆ ಬಂದು ಆಶ್ಚರ್ಯಗೊಳಿಸುತ್ತೇನೆ. ನಾನು ಯಾವಾಗ ಬರುತ್ತೇನೆ ಎಂಬುದು ನಿನಗೆ ಗೊತ್ತಿರುವುದಿಲ್ಲ.


“ನೀನು ಮಾಡುವ ಕಾರ್ಯಗಳು ನನಗೆ ತಿಳಿದಿವೆ. ನಿನ್ನ ಪ್ರೀತಿ, ನಂಬಿಕೆ, ಸೇವೆ ಮತ್ತು ತಾಳ್ಮೆಗಳು ನನಗೆ ತಿಳಿದಿವೆ. ಈಗ ನೀನು ಮೊದಲಿಗಿಂತ ಹೆಚ್ಚಿಗೆ ಮಾಡುತ್ತಿರುವುದನ್ನೂ ಬಲ್ಲೆನು.


ಆತನ ಮಹಿಮಾಶಕ್ತಿಯಿಂದ ಪರಿಪೂರ್ಣ ಬಲ ಹೊಂದಿ ಆನಂದಪೂರ್ವಕವಾದ ತಾಳ್ಮೆಯನ್ನು, ದೀರ್ಘಶಾಂತಿಯನ್ನು ಯಾವಾಗಲೂ ತೋರಿಸುವವರಾಗಿರಬೇಕೆಂತಲೂ ನಾವು ಪ್ರಾರ್ಥಿಸುತ್ತಿದ್ದೇವೆ.


ಆ ಜನಾಂಗಗಳವರು ಇಸ್ರೇಲರನ್ನು ಇಸ್ರೇಲ್ ದೇಶಕ್ಕೆ ನಡಿಸುವರು. ಆ ಪರಜನಾಂಗಗಳ ಗಂಡಸರು ಹೆಂಗಸರು ಇಸ್ರೇಲರ ಗುಲಾಮರಾಗಿರುವರು. ಹಿಂದಿನ ದಿವಸಗಳಲ್ಲಿ ಆ ಜನರು ಇಸ್ರೇಲರನ್ನು ಬಲವಂತದಿಂದ ತಮ್ಮ ಗುಲಾಮರನ್ನಾಗಿ ಮಾಡಿದರು. ಆದರೆ ಈಗ ಇಸ್ರೇಲರು ಆ ಜನಾಂಗಗಳನ್ನು ಸೋಲಿಸಿ ಅವರನ್ನು ಆಳುವರು.


ನೀವು ಬೇರೆಯವರಿಗೆ ತೀರ್ಪು ಮಾಡಿದರೆ, ಅದೇ ಪ್ರಕಾರ ನಿಮಗೂ ತೀರ್ಪಾಗುವುದು. ನೀವು ಬೇರೆಯವರನ್ನು ಕ್ಷಮಿಸಿದರೆ ನಿಮಗೂ ಕ್ಷಮೆ ದೊರೆಯುವುದು.


ಇಗೋ, ಈ ಲೋಕದ ಜನರು ಮಾಡಿದ ಪಾಪಕೃತ್ಯಗಳಿಗೆ ನ್ಯಾಯತೀರಿಸಲು ಯೆಹೋವನು ತನ್ನ ಸ್ಥಳದಿಂದ ಎದ್ದಿದ್ದಾನೆ. ಭೂಮಿಯು ತನ್ನಲ್ಲಿರುವ ರಕ್ತವನ್ನು ತೋರಿಸುವದು. ಭೂಮಿಯು ಇನ್ನುಮುಂದೆ ಸತ್ತವರನ್ನು ಮರೆಮಾಡುವುದಿಲ್ಲ.


ಲೋಕದ ಜನರು ಕೋಪಗೊಂಡಿದ್ದರು. ಆದರೆ ಇದು ನಿನ್ನ ಕೋಪದ ಸಮಯ. ಸತ್ತವರಿಗೆ ತೀರ್ಪು ನೀಡುವ ಸಮಯವಿದು. ನಿನ್ನ ಸೇವಕರಾದ ಪ್ರವಾದಿಗಳಿಗೂ ನಿನ್ನ ಪರಿಶುದ್ಧ ಜನರಿಗೂ ನಿನ್ನನ್ನು ಗೌರವಿಸುವ ದೊಡ್ಡವರಿಗೂ ಚಿಕ್ಕವರಿಗೂ ಪ್ರತಿಫಲ ನೀಡುವ ಸಮಯವಿದು. ಲೋಕನಾಶಕರನ್ನು ನಾಶಪಡಿಸುವ ಸಮಯವಿದು.”


ನೀನು ನೋಡಿದ ಆ ಮೃಗವು ಒಂದು ಕಾಲದಲ್ಲಿ ಜೀವಿಸಿತ್ತು. ಆದರೆ ಈಗ ಆ ಮೃಗವು ಜೀವಂತವಾಗಿಲ್ಲ. ಆದರೆ ಆ ಮೃಗವು ತಳವಿಲ್ಲದ ಕೂಪದಿಂದ ಜೀವಂತವಾಗಿ ಮೇಲೆದ್ದುಬಂದು ನಾಶವಾಗು ವುದು. ಲೋಕದಲ್ಲಿ ಜೀವಿಸುತ್ತಿರುವ ಜನರು ಆ ಮೃಗವನ್ನು ನೋಡಿ, ಅದು ಒಂದು ಕಾಲದಲ್ಲಿ ಜೀವಂತವಾಗಿತ್ತು, ಈಗ ಇಲ್ಲ, ಆದರೆ ಮತ್ತೆ ಬರುವುದು ಎಂಬುದನ್ನು ತಿಳಿದು ಅವರು ಆಶ್ಚರ್ಯಪಡುವರು. ಲೋಕವು ಸೃಷ್ಟಿಯಾದಂದಿನಿಂದ ಜೀವಬಾಧ್ಯರ ಪುಸ್ತಕದಲ್ಲಿ ಈ ಜನರ ಹೆಸರುಗಳನ್ನು ಬರೆದೇ ಇಲ್ಲ.


ಒಂದುಕಾಲದಲ್ಲಿ ಜೀವಿಸಿದ್ದು, ಆದರೆ ಈಗ ಜೀವಿಸಿಲ್ಲದ ಈ ಮೃಗವು ಎಂಟನೆಯ ರಾಜ. ಈ ಎಂಟನೆಯ ರಾಜನೂ ಮೊದಲ ಏಳು ರಾಜರುಗಳ ಗುಂಪಿಗೆ ಸೇರಿದವನು. ಅವನೂ ನಾಶವಾಗುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು