Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 13:13 - ಪರಿಶುದ್ದ ಬೈಬಲ್‌

13 ಈ ಎರಡನೆಯ ಮೃಗವು ಮಹಾ ಅದ್ಭುತಗಳನ್ನು ಮಾಡುತ್ತದೆ. ಅದು ಜನರ ಕಣ್ಣೆದುರಿನಲ್ಲಿಯೇ ಬೆಂಕಿಯನ್ನು ಆಕಾಶದಿಂದ ಭೂಮಿಗೆ ಸುರಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇದು ಜನರ ಮುಂದೆ ಬೆಂಕಿ ಆಕಾಶದಿಂದ ಭೂಮಿಗೆ ಇಳಿದುಬರುವಂತಹ ಅದ್ಭುತಕಾರ್ಯಗಳನ್ನು ಮಾಡುತ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಎರಡನೆಯ ಮೃಗವು ದೊಡ್ಡ ದೊಡ್ಡ ಪವಾಡಗಳನ್ನೆಸಗಿತು. ಜನರ ಮುಂದೆಯೇ ಬೆಂಕಿ ಆಕಾಶದಿಂದ ಹೊರಟು ಭೂಮಿಗೆ ಬೀಳುವಂತೆ ಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇದು ಮಹತ್ತಾದ ಸೂಚಕಕಾರ್ಯಗಳನ್ನು ನಡಿಸುತ್ತದೆ; ಜನರ ಮುಂದೆ ಬೆಂಕಿಯು ಆಕಾಶದಿಂದ ಭೂವಿುಗೆ ಇಳಿದುಬರುವಂತೆಯಾದರೂ ಮಾಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಎರಡನೆಯ ಮೃಗವೂ ಮಹಾಸೂಚಕಕಾರ್ಯಗಳನ್ನು ನಡೆಸಿತು ಮತ್ತು ಜನರ ಮುಂದೆ ಬೆಂಕಿ ಆಕಾಶದಿಂದ ಭೂಮಿಗೆ ಬೀಳುವಂತೆ ಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತನ್ನಾ ದೊನ್ವೆಚ್ಯಾ ಜನಾವರಾನ್ ಮೊಟೆ ಅಜಾಪ್ ಕರ್ಲ್ಯಾನ್; ತೆನಿ ಸರ್‍ಗಾ ವೈನಾ ಸಗ್ಳ್ಯಾಂಚ್ಯಾ ಇದ್ರಾಕುಚ್ ಆಗ್ ಜಿಮ್ನಿ ವರ್ತಿ ಉತ್ರುನ್ ಯೆಯ್ ಸರ್ಕೆ ಕರ್ಲ್ಯಾನ್;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 13:13
20 ತಿಳಿವುಗಳ ಹೋಲಿಕೆ  

ಸುಳ್ಳುಕ್ರಿಸ್ತರು ಮತ್ತು ಸುಳ್ಳುಪ್ರವಾದಿಗಳು ಬಂದು ದೇವರು ಆರಿಸಿಕೊಂಡಿರುವ ಜನರನ್ನು ಮೋಸಗೊಳಿಸುವುದಕ್ಕಾಗಿ ಮಹತ್ಕಾರ್ಯಗಳನ್ನು ಮತ್ತು ಅದ್ಭುತಕಾರ್ಯಗಳನ್ನು ಮಾಡುವರು.


ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.


ಈ ಅಶುದ್ಧಾತ್ಮಗಳು ಸೈತಾನನ ಆತ್ಮಗಳಾಗಿವೆ. ಅವುಗಳಿಗೆ ಮಹಾ ಅದ್ಭುತಗಳನ್ನು ಮಾಡಲು ಶಕ್ತಿಯಿದೆ. ಈ ಅಶುದ್ಧಾತ್ಮಗಳು ಸರ್ವಶಕ್ತನಾದ ದೇವರ ಮಹಾದಿನದಂದು ನಡೆಯುವ ಯುದ್ಧಕ್ಕೆ, ಲೋಕದಲ್ಲೆಲ್ಲಾ ಇರುವ ರಾಜರನ್ನು ಒಟ್ಟುಗೂಡಿಸಲು ಹೊರಗೆ ಹೋಗುತ್ತವೆ.


ಸೈತಾನನ ಸೈನ್ಯವು ಭೂಮಿಯಲ್ಲೆಲ್ಲಾ ಶಿಸ್ತಿನಿಂದ ನಡೆದಾಡಿ ದೇವಜನರ ಶಿಬಿರದ ಸುತ್ತಲೂ ದೇವರ ಪ್ರಿಯ ನಗರದ ಸುತ್ತಲೂ ಒಟ್ಟುಗೂಡಿದರು. ಆದರೆ ಪರಲೋಕದಿಂದ ಇಳಿದು ಬಂದ ಬೆಂಕಿಯು ಸೈತಾನನ ಸೈನ್ಯವನ್ನು ನಾಶಗೊಳಿಸಿತು.


ಕೂಡಲೇ ಯೆಹೋವನ ಕಡೆಯಿಂದ ಬೆಂಕಿಬಿದ್ದು ಯಜ್ಞಗಳನ್ನು, ಸೌದೆಯನ್ನು, ಕಲ್ಲುಗಳನ್ನು ಮತ್ತು ಯಜ್ಞವೇದಿಕೆಯ ಸುತ್ತಲಿನ ಮಣ್ಣನ್ನೆಲ್ಲ ದಹಿಸಿತು. ಆ ಹಳ್ಳದಲ್ಲಿದ್ದ ನೀರನ್ನೆಲ್ಲ ಬೆಂಕಿಯು ದಹಿಸಿ ಒಣಗಿಸಿತು.


ದೇವರು ಆರಿಸಿಕೊಂಡ ಜನರನ್ನು ಮೋಸಗೊಳಿಸುವುದಕ್ಕಾಗಿ ಸುಳ್ಳುಕ್ರಿಸ್ತರು ಮತ್ತು ಸುಳ್ಳುಪ್ರವಾದಿಗಳು ಬಂದು ಮಹಾಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡುತ್ತಾರೆ.


ಈ ಸಾಕ್ಷಿಗಳಿಗೆ ಯಾರಾದರೂ ಕೇಡು ಮಾಡಲು ಪ್ರಯತ್ನಿಸಿದರೆ, ಸಾಕ್ಷಿಗಳ ಬಾಯಿಂದ ಬೆಂಕಿಯು ಹೊರಬಂದು ಅವರ ಶತ್ರುವನ್ನು ಅಂದರೆ ಅವರಿಗೆ ತೊಂದರೆ ಮಾಡಲು ಪ್ರಯತ್ನಿಸಿದ್ದವರನ್ನೆಲ್ಲ ಸಾಯಿಸುತ್ತದೆ.


ಯನ್ನ ಮತ್ತು ಯಂಬ್ರರನ್ನು ನೆನಪುಮಾಡಿಕೊ. ಅವರು ಮೋಶೆಯನ್ನು ವಿರೋಧಿಸಿದರು. ಈ ಜನರೂ ಅವರಂತೆಯೇ. ಅವರು ಸತ್ಯವನ್ನು ವಿರೋಧಿಸುತ್ತಾರೆ. ಆ ಜನರ ಆಲೋಚನೆಗಳೆಲ್ಲ ಗಲಿಬಿಲಿಗೊಂಡಿವೆ. ಅವರು ನಂಬಿಕೆಯನ್ನು ಅನುಸರಿಸುವ ತಮ್ಮ ಪ್ರಯತ್ನದಲ್ಲಿ ಸೋತುಹೋಗಿದ್ದಾರೆ.


ಫರಿಸಾಯರು ಮತ್ತು ಸದ್ದುಕಾಯರು ಯೇಸುವಿನ ಬಳಿಗೆ ಬಂದರು. ಅವರು ಯೇಸುವನ್ನು ಪರೀಕ್ಷಿಸಲು, “ನೀನು ದೇವರಿಂದ ಬಂದವನೆಂಬುದನ್ನು ನಿರೂಪಿಸಲು ಒಂದು ಅದ್ಭುತಕಾರ್ಯವನ್ನು ಮಾಡಿ ತೋರಿಸು” ಎಂದು ಕೇಳಿದರು.


ಅಲ್ಲದೆ ಯೆಹೋವನಿಂದ ಬೆಂಕಿಯು ಹೊರಟುಬಂದು ಧೂಪವನ್ನು ಅರ್ಪಿಸುತ್ತಿದ್ದ ಇನ್ನೂರೈವತ್ತು ಮಂದಿಯನ್ನು ದಹಿಸಿಬಿಟ್ಟಿತು.


ಮೋಶೆಯ ಈ ಕಾರ್ಯವನ್ನು ವಿಫಲಗೊಳಿಸಲು ಮಾಂತ್ರಿಕರಿಗೆ ಸಾಧ್ಯವಾಗಲಿಲ್ಲ. ಯಾಕೆಂದರೆ ಈಜಿಪ್ಟಿನ ಎಲ್ಲಾ ಜನರಂತೆ ಮಾಂತ್ರಿಕರ ಮೇಲೆಯೂ ಹುಣ್ಣುಗಳಾದವು.


ಮಾಂತ್ರಿಕರು ತಮ್ಮ ಮಂತ್ರವಿದ್ಯೆಯಿಂದ ಅದೇರೀತಿ ಮಾಡಿ ಈಜಿಪ್ಟ್ ದೇಶದ ಮೇಲೆ ಕಪ್ಪೆಗಳನ್ನು ಬರಮಾಡಿದರು.


ಮಾಂತ್ರಿಕರು ತಮ್ಮ ಮಂತ್ರವಿದ್ಯೆಯಿಂದ ಅದೇ ರೀತಿ ಮಾಡಿದರು. ಆದ್ದರಿಂದ ಫರೋಹನು ಮೋಶೆ ಆರೋನರ ಮಾತನ್ನು ಕೇಳಲಿಲ್ಲ. ಯೆಹೋವನು ಹೇಳಿದಂತೆಯೇ ಇದಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು