Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 13:7 - ಪರಿಶುದ್ದ ಬೈಬಲ್‌

7 ದೇವರ ಪರಿಶುದ್ಧ ಜನರ ವಿರುದ್ಧ ಯುದ್ಧಮಾಡಿ, ಅವರನ್ನು ಸೋಲಿಸುವ ಶಕ್ತಿಯನ್ನು ಮೃಗಕ್ಕೆ ನೀಡಲಾಯಿತು. ಸಕಲ ಕುಲ, ಪ್ರಜೆ, ಭಾಷೆ ಮತ್ತು ಜನಾಂಗಗಳ ಮೇಲಿನ ಅಧಿಕಾರವನ್ನು ಆ ಮೃಗಕ್ಕೆ ಕೊಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇದಲ್ಲದೆ ದೇವಜನರ ಮೇಲೆ ಯುದ್ಧ ಮಾಡಿ ಅವರನ್ನು ಜಯಿಸುವುದಕ್ಕೆ ಅದಕ್ಕೆ ಅಧಿಕಾರ ಕೊಡಲ್ಪಟ್ಟಿತು ಮತ್ತು ಸಕಲ ಕುಲ, ಜನ, ಭಾಷೆ, ಜನಾಂಗಗಳ ಮೇಲೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇದಲ್ಲದೆ, ದೇವಜನರ ವಿರುದ್ಧ ಯುದ್ಧಮಾಡಿ, ಜಯಗಳಿಸುವಂತೆ ಅದಕ್ಕೆ ಅವಕಾಶವನ್ನು ಕೊಡಲಾಯಿತು. ಸಕಲ ದೇಶ, ಭಾಷೆ, ಕುಲ, ಗೋತ್ರಗಳ ಮೇಲೆ ಅದಕ್ಕೆ ಅಧಿಕಾರವನ್ನು ನೀಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇದಲ್ಲದೆ ದೇವಜನರ ಮೇಲೆ ಯುದ್ಧಮಾಡಿ ಅವರನ್ನು ಜಯಿಸುವದಕ್ಕೆ ಅದಕ್ಕೆ ಅಧಿಕಾರ ಕೊಡಲ್ಪಟ್ಟಿತು. ಮತ್ತು ಸಕಲ ಕುಲ ಪ್ರಜೆ ಭಾಷೆ ಜನಾಂಗಗಳ ಮೇಲೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಇದಲ್ಲದೆ ಅದಕ್ಕೆ ಪರಿಶುದ್ಧರ ಮೇಲೆ ಯುದ್ಧಮಾಡಿ, ಅವರನ್ನು ಜಯಿಸುವುದಕ್ಕೆ ಬಲವು ಕೊಡಲಾಯಿತು ಮತ್ತು ಸಕಲ ಕುಲ, ಪ್ರಜೆ, ಭಾಷೆ, ರಾಷ್ಟ್ರಗಳ ಮೇಲೆ ಅದಕ್ಕೆ ಅಧಿಕಾರವು ಸಹ ಕೊಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ದೆವಾಚ್ಯಾ ಲೊಕಾಂಚ್ಯಾ ವಿರೊದ್ ಝಗ್ಡುಕ್ ತೆಕಾ ಅದಿಕಾರ್ ದಿಲ್ಲೊ ಹೊತ್ತೊ, ಸಗ್ಳ್ಯಾ ಕುಳಿಯಾಂಚ್ಯಾ, ದೆಶಾಂಚ್ಯಾ, ಘರಾನ್ಯಾಚ್ಯಾ, ಅನಿ ಬಾಶಾಂಚ್ಯಾ ಲೊಕಾಂಚ್ಯಾ ವರ್ತಿ ತೆಕಾ ಅದಿಕಾರ್ ದಿಲ್ಲೊ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 13:7
20 ತಿಳಿವುಗಳ ಹೋಲಿಕೆ  

ನಾನು ನೋಡುತ್ತಿದ್ದಂತೆಯೇ ಈ ಚಿಕ್ಕ ಕೊಂಬು ದೇವಭಕ್ತರ ಮೇಲೆ ಬಿದ್ದು ಅವರೊಂದಿಗೆ ಯುದ್ಧಮಾಡುತ್ತಿತ್ತು. ಆ ಕೊಂಬು ಅವರ ಕೊಲೆ ಮಾಡುತ್ತಿತ್ತು.


ಈ ಇಬ್ಬರು ಸಾಕ್ಷಿಗಳು ತಮ್ಮ ಸಂದೇಶವನ್ನು ಹೇಳಿ ಮುಗಿಸಿದ ನಂತರ, ತಳವಿಲ್ಲದ ಕೂಪದಿಂದ ಮೇಲಕ್ಕೆ ಬರುವ ಮೃಗವು ಅವರ ವಿರುದ್ಧ ಹೋರಾಟ ಮಾಡುತ್ತದೆ. ಈ ಮೃಗವು ಅವರನ್ನು ಸೋಲಿಸಿ, ಕೊಂದು ಹಾಕುತ್ತದೆ.


ಆಗ ಘಟ ಸರ್ಪವು ಆ ಸ್ತ್ರೀಯ ಮೇಲೆ ಬಹಳ ಕೋಪಗೊಂಡು ಆಕೆಯ ಇತರ ಮಕ್ಕಳೆಲ್ಲರ ಮೇಲೆ ಅಂದರೆ ದೇವರ ಆಜ್ಞೆಗಳನ್ನು ಅನುಸರಿಸುವವರ ಮತ್ತು ಯೇಸುವಿನ ಕುರಿತು ಸಾಕ್ಷಿ ಹೇಳುವವರ ಮೇಲೆ ಹೋರಾಟ ಮಾಡಲು ಹೋಯಿತು.


ಈ ಪುರಾತನ ರಾಜನು ಮಹೋನ್ನತನಾದ ದೇವರ ವಿರುದ್ಧ ಮಾತನಾಡುವನು. ಆ ರಾಜನು ದೇವರ ಪರಮ ಭಕ್ತರಿಗೆ ತೊಂದರೆ ಕೊಡುವನು ಮತ್ತು ಕೊಲೆ ಮಾಡುವನು. ಆ ರಾಜನು ರೂಢಿಯಲ್ಲಿದ್ದ ಧರ್ಮವಿಧಿಗಳನ್ನು ಮಾರ್ಪಡಿಸುವ ಪ್ರಯತ್ನ ಮಾಡುವನು. ಆ ಭಕ್ತರು ಒಂದು ಕಾಲ, ಎರಡು ಕಾಲ, ಅರ್ಧಕಾಲ ಅವನ ಕೈವಶವಾಗಿರುವರು.


“ದರ್ಶನದಲ್ಲಿ ಕಾಣಿಸಿಕೊಂಡ ಮನುಷ್ಯನು, ದಾನಿಯೇಲನೇ, ಆಗ ದೇವದೂತನಾದ ಮಿಕಾಯೇಲನು ಏಳುವನು. ಮಿಕಾಯೇಲನು ಯೆಹೂದ್ಯರಾದ ನಿಮ್ಮ ಹಿತಾಸಕ್ತಿಗಳನ್ನು ನೋಡಿಕೊಳ್ಳುವನು. ಮಹಾಸಂಕಟದ ಕಾಲ ಬರುವದು. ಭೂಮಿಯ ಮೇಲೆ ರಾಷ್ಟ್ರಗಳು ಹುಟ್ಟಿದಂದಿನಿಂದ ಸಂಭವಿಸದಂತಹ ಸಂಕಟಗಳು ಸಂಭವಿಸುವವು. ಆದರೆ ದಾನಿಯೇಲನೇ, ನಿಮ್ಮ ಜನಗಳಲ್ಲಿ ಯಾರ ಹೆಸರುಗಳು ‘ಜೀವಬಾಧ್ಯರ ಗ್ರಂಥದಲ್ಲಿ’ ಬರೆಯಲ್ಪಟ್ಟಿದೆಯೋ ಅವರೆಲ್ಲರನ್ನು ರಕ್ಷಿಸಲಾಗುವುದು.


ನಂತರ ದೇವದೂತನು ನನಗೆ ಹೀಗೆ ಹೇಳಿದನು: “ಆ ವೇಶ್ಯೆಯು ಕುಳಿತುಕೊಳ್ಳುವ ನೀರುಗಳನ್ನು ನೀನು ನೋಡಿದೆ. ಈ ನೀರುಗಳು ಈ ಲೋಕದ ಅನೇಕ ಜನರನ್ನೂ ವಿವಿಧ ಜನಾಂಗಗಳನ್ನೂ ಪ್ರಜೆಗಳನ್ನೂ ಭಾಷೆಗಳನ್ನೂ ಸೂಚಿಸು ತ್ತವೆ.


ಲೋಕದ ಜನರು ಕೋಪಗೊಂಡಿದ್ದರು. ಆದರೆ ಇದು ನಿನ್ನ ಕೋಪದ ಸಮಯ. ಸತ್ತವರಿಗೆ ತೀರ್ಪು ನೀಡುವ ಸಮಯವಿದು. ನಿನ್ನ ಸೇವಕರಾದ ಪ್ರವಾದಿಗಳಿಗೂ ನಿನ್ನ ಪರಿಶುದ್ಧ ಜನರಿಗೂ ನಿನ್ನನ್ನು ಗೌರವಿಸುವ ದೊಡ್ಡವರಿಗೂ ಚಿಕ್ಕವರಿಗೂ ಪ್ರತಿಫಲ ನೀಡುವ ಸಮಯವಿದು. ಲೋಕನಾಶಕರನ್ನು ನಾಶಪಡಿಸುವ ಸಮಯವಿದು.”


ಯೇಸು “ನನ್ನ ಮೇಲೆ ನಿನಗಿರುವ ಅಧಿಕಾರವೆಂದರೆ ದೇವರು ನಿನಗೆ ಕೊಟ್ಟಿರುವ ಅಧಿಕಾರವೊಂದೇ. ಆದ್ದರಿಂದ ನನ್ನನ್ನು ನಿನ್ನ ಕೈಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪದೋಷವಿರುವುದು” ಎಂದು ಉತ್ತರಕೊಟ್ಟನು.


ಆಗ ಅವನು ನನಗೆ, “ನೀನು ಮತ್ತೆ ಅನೇಕ ಜನಾಂಗಗಳ, ಪ್ರಜೆಗಳ, ಭಾಷೆಗಳ ಮತ್ತು ರಾಜರುಗಳ ವಿಷಯದಲ್ಲಿ ಪ್ರವಾದನೆ ಮಾಡಬೇಕು” ಎಂದು ತಿಳಿಸಿದನು.


ಅವರೆಲ್ಲರೂ ಕುರಿಮರಿಗೋಸ್ಕರ ಒಂದು ಹೊಸ ಹಾಡನ್ನು ಹಾಡಿದರು: “ನೀನು ಕೊಲ್ಲಲ್ಪಟ್ಟವನಾದ್ದರಿಂದ, ಸುರುಳಿಯನ್ನು ತೆಗೆದುಕೊಂಡು, ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯನಾಗಿರುವೆ. ನೀನು ನಿನ್ನ ರಕ್ತದಿಂದ (ಮರಣದಿಂದ) ಸಕಲ ಕುಲ, ಭಾಷೆ, ಜನಾಂಗಗಳಿಂದ ಜನರನ್ನು ದೇವರಿಗಾಗಿ ಕೊಂಡುಕೊಂಡಿರುವೆ.


“ಈ ರಾಜ್ಯಗಳೆಲ್ಲವನ್ನೂ ಇವುಗಳ ಸರ್ವಾಧಿಕಾರವನ್ನೂ ವೈಭವವನ್ನೂ ನಿನಗೆ ಕೊಡುತ್ತೇನೆ. ಇವುಗಳೆಲ್ಲಾ ನನ್ನ ಅಧೀನದಲ್ಲಿವೆ. ನಾನು ಯಾರಿಗೆ ಬೇಕಾದರೂ ಇವುಗಳನ್ನು ಕೊಡಬಲ್ಲೆ.


ಆದರೆ, ನನ್ನ ಶಕ್ತಿಯನ್ನು ನಿನಗೆ ತೋರಿಸಬೇಕೆಂದೂ ಲೋಕದ ಜನರೆಲ್ಲರು ನನ್ನ ಬಗ್ಗೆ ತಿಳಿದುಕೊಳ್ಳಬೇಕೆಂದೂ ನಾನು ನಿನ್ನನ್ನು ಇನ್ನೂ ಉಳಿಸಿದ್ದೇನೆ.


ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.


“ಆದರೆ ದೇವರು ಏನು ಹೇಳುತ್ತಾನೆಂದು ಕೇಳಿದೆಯಾ? ಬಹುಕಾಲದ ಹಿಂದೆ ನಾನು ಯೋಜನೆಯನ್ನು ಮಾಡಿದ್ದೆನು. ಪ್ರಾಚೀನ ಕಾಲದಿಂದ ಅದರ ವಿಷಯವಾಗಿ ಆಲೋಚನೆ ಮಾಡಿದ್ದೆನು. ಈಗ ಅದು ನೆರವೇರುವಂತೆ ಮಾಡಿದ್ದೇನೆ. ಬಲಿಷ್ಠವಾದ ನಗರಗಳನ್ನು ನಾಶಮಾಡಿ ಅವುಗಳನ್ನು ಕಲ್ಲಿನ ರಾಶಿಗಳನ್ನಾಗಿ ಮಾಡಲು ನಿನ್ನನ್ನು ಬಿಟ್ಟಿರುತ್ತೇನೆ.


ಕೊಡಲಿಯು ಅದನ್ನು ಉಪಯೋಗಿಸುವವನಿಗಿಂತ ಉತ್ತಮವಲ್ಲ. ಗರಗಸವು ಅದನ್ನು ಉಪಯೋಗಿಸುವವನಿಗಿಂತ ಉತ್ತಮವಲ್ಲ. ಆದರೆ ಅಶ್ಶೂರವು ತಾನು ದೇವರಿಗಿಂತಲೂ ಶಕ್ತಿಶಾಲಿ, ಸಾಮರ್ಥ್ಯವುಳ್ಳವನು ಎಂದು ನೆನಸುತ್ತಾನೆ. ಬೆತ್ತವು, ತನ್ನನ್ನು ಎತ್ತಿಹಿಡಿದು ಬೇರೆಯವರನ್ನು ಶಿಕ್ಷಿಸುವವನಿಗಿಂತ ತಾನು ಬಲಿಷ್ಠನೂ ಪ್ರಮುಖನೂ ಎಂದು ಹೇಳುವಂತಿದೆ ಇದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು